Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 21:8 - ಕನ್ನಡ ಸತ್ಯವೇದವು C.L. Bible (BSI)

8 ದಾವೀದನು ಅಹೀಮೆಲೆಕನನ್ನು, “ಅರಸನ ಕಾರ್ಯ ತುರ್ತಾದದ್ದು. ಆದ್ದರಿಂದ ಕತ್ತಿಯನ್ನಾಗಲಿ ಬೇರೆ ಆಯುಧವನ್ನಾಗಲಿ ತೆಗೆದುಕೊಂಡು ಬರಲು ಆಗಲಿಲ್ಲ. ನಿನ್ನ ಬಳಿಯಲ್ಲಿ ಭರ್ಜಿಯಾಗಲಿ, ಕತ್ತಿಯಾಗಲಿ ಇಲ್ಲವೇ?’ ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ದಾವೀದನು ಅಹೀಮೆಲೆಕನನ್ನು, “ಅರಸನ ಕಾರ್ಯವು ತುರ್ತಾದ್ದರಿಂದ ಕತ್ತಿಯನ್ನಾಗಲಿ, ಬೇರೆ ಆಯುಧವನ್ನಾಗಲಿ ತೆಗೆದುಕೊಂಡು ಬರಲಿಲ್ಲ, ನಿನ್ನ ಬಳಿಯಲ್ಲಿ ಬರ್ಜಿಯಾಗಲಿ ಕತ್ತಿಯಾಗಲಿ ಇಲ್ಲವೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ದಾವೀದನು ಅಹೀಮೆಲೆಕನನ್ನು - ಅರಸನ ಕಾರ್ಯವು ಅವಸರವಾಗಿದ್ದದರಿಂದ ಕತ್ತಿಯನ್ನಾಗಲಿ ಬೇರೆ ಆಯುಧವನ್ನಾಗಲಿ ತೆಗೆದುಕೊಂಡು ಬರಲು ಆಗಲಿಲ್ಲ; ನಿನ್ನ ಬಳಿಯಲ್ಲಿ ಬರ್ಜಿಯಾಗಲಿ ಕತ್ತಿಯಾಗಲಿ ಇಲ್ಲವೋ ಎಂದು ಕೇಳಲು ಅವನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ದಾವೀದನು ಅಹೀಮೆಲೆಕನಿಗೆ, “ನಿನ್ನ ಹತ್ತಿರ ಖಡ್ಗವಾಗಲಿ ಭರ್ಜಿಯಾಗಲಿ ಇದೆಯೇ? ರಾಜನ ಕಾರ್ಯಭಾರವು ಬಹುಮುಖ್ಯವಾದುದು. ನಾನು ಬೇಗ ಹೋಗಬೇಕಾಗಿದೆ. ನಾನು ಕತ್ತಿಯನ್ನಾಗಲೀ ಇತರ ಆಯುಧವನ್ನಾಗಲೀ ತರಲಿಲ್ಲ” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ದಾವೀದನು ಅಹೀಮೆಲೆಕನಿಗೆ, “ಇಲ್ಲಿ ನಿನ್ನ ಕೈ ವಶದಲ್ಲಿ ಈಟಿಯಾದರೂ, ಖಡ್ಗವಾದರೂ ಇಲ್ಲವೋ? ಏಕೆಂದರೆ ಅರಸನ ಕಾರ್ಯವು ಅವಸರವಾದುದರಿಂದ ನಾನು ನನ್ನ ಖಡ್ಗವನ್ನಾದರೂ, ಆಯುಧಗಳನ್ನಾದರೂ ತೆಗೆದುಕೊಂಡು ಬರಲಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 21:8
6 ತಿಳಿವುಗಳ ಹೋಲಿಕೆ  

ಅದೇ ದಿನ ಸೌಲನ ಪಶುಪಾಲರಲ್ಲಿ ಮುಖ್ಯಸ್ಥನಾದ ದೋಯೇಗನೆಂಬ ಎದೋಮ್ಯನು ಸರ್ವೇಶ್ವರನ ಆಲಯದಲ್ಲಿ ತಂಗಬೇಕಾಗಿತ್ತು.


ಅವನು, “ನೀವು ಏಲಾ ತಗ್ಗಿನಲ್ಲಿ ಕೊಂದುಹಾಕಿದ ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯನ್ನು ಬಟ್ಟೆಯಲ್ಲಿ ಸುತ್ತಿ ಏಫೋದಿನ ಹಿಂದೆ ಇಡಲಾಗಿದೆ; ಬೇಕಾದರೆ ಅದನ್ನು ತೆಗೆದುಕೊಳ್ಳಿ. ಅದರ ಹೊರತು ನನ್ನ ಬಳಿ ಬೇರೊಂದಿಲ್ಲ,” ಎಂದು ಉತ್ತರಕೊಟ್ಟನು. ದಾವೀದನು, “ಅದಕ್ಕೆ ಸಮಾನವಾದದ್ದು ಮತ್ತೊಂದಿಲ್ಲ, ಅದನ್ನೇ ಕೊಡು,” ಎಂದು ಹೇಳಿ ತೆಗೆದುಕೊಂಡನು.


ಆಗ ಸೌಲನ ಸೇವಕರ ಬಳಿಯಲ್ಲಿ ನಿಂತಿದ್ದ ಎದೋಮ್ಯನಾದ ದೋಯೇಗನು, “ಆ ಜೆಸ್ಸೆಯನ ಮಗ ನೋಬದಲ್ಲಿರುವ ಅಹೀಟೂಬನ ಮಗನಾದ ಅಹೀಮೆಲೆಕನ ಬಳಿಗೆ ಬಂದದ್ದನ್ನು ನಾನು ನೋಡಿದೆ.


ದಾವೀದನು, “ಎದೋಮ್ಯನಾದ ದೋಯೇಗನನ್ನು ನಾನು ಅಲ್ಲಿ ಕಂಡಾಗಲೇ ಇವನು ಸೌಲನಿಗೆ ಹೇಗೂ ಈ ಸಂಗತಿಯನ್ನು ತಿಳಿಸುವನೆಂದು ನೆನೆಸಿಕೊಂಡೆ; ನಿನ್ನ ಸಂಬಂಧಿಕರ ವಧೆಗೆ ನಾನೇ ಕಾರಣನಾದೆನಲ್ಲಾ!


ಅರಸನ ಈ ರಾಜಾಜ್ಞೆ ಶೂಷನ್ ನಗರದಲ್ಲಿ ಪ್ರಕಟವಾದ ಕೂಡಲೆ ಅದರಿಂದ ಪ್ರೇರಿತರಾದ ಅಂಚೆಯವರು ಅರಮನೆಯ ಸವಾರಿ ಕುದುರೆಗಳನ್ನೇರಿ ಅತಿಶೀಘ್ರವಾಗಿ ಧಾವಿಸಿದರು.


ಹಣದ ಚೀಲವನ್ನಾಗಲಿ, ಜೋಳಿಗೆಯನ್ನಾಗಲಿ, ಪಾದರಕ್ಷೆಗಳನ್ನಾಗಲಿ ತೆಗೆದುಕೊಂಡು ಹೋಗದಿರಿ. ದಾರಿಯಲ್ಲಿ ಯಾರಿಗೂ ವಂದನೋಪಚಾರಗಳನ್ನು ಮಾಡಿಕೊಂಡಿರಬೇಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು