Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 21:9 - ಕನ್ನಡ ಸತ್ಯವೇದವು C.L. Bible (BSI)

9 ಅವನು, “ನೀವು ಏಲಾ ತಗ್ಗಿನಲ್ಲಿ ಕೊಂದುಹಾಕಿದ ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯನ್ನು ಬಟ್ಟೆಯಲ್ಲಿ ಸುತ್ತಿ ಏಫೋದಿನ ಹಿಂದೆ ಇಡಲಾಗಿದೆ; ಬೇಕಾದರೆ ಅದನ್ನು ತೆಗೆದುಕೊಳ್ಳಿ. ಅದರ ಹೊರತು ನನ್ನ ಬಳಿ ಬೇರೊಂದಿಲ್ಲ,” ಎಂದು ಉತ್ತರಕೊಟ್ಟನು. ದಾವೀದನು, “ಅದಕ್ಕೆ ಸಮಾನವಾದದ್ದು ಮತ್ತೊಂದಿಲ್ಲ, ಅದನ್ನೇ ಕೊಡು,” ಎಂದು ಹೇಳಿ ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವನು, “ನೀನು ಏಲಾ ತಗ್ಗಿನಲ್ಲಿ ಕೊಂದು ಹಾಕಿದ ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯು ಒಂದು ಬಟ್ಟೆಯಲ್ಲಿ ಸುತ್ತಲ್ಪಟ್ಟು, ಏಫೋದಿನ ಹಿಂದೆ ಇಡಲ್ಪಟ್ಟಿದೆ. ಬೇಕಾದರೆ ಅದನ್ನು ತೆಗೆದುಕೊ. ಅದರ ಹೊರತು ನನ್ನ ಬಳಿಯಲ್ಲಿ ಬೇರೊಂದಿಲ್ಲ” ಎಂದು ಉತ್ತರಕೊಟ್ಟನು. ದಾವೀದನು, “ಅದಕ್ಕೆ ಸಮಾನವಾದದ್ದು ಮತ್ತೊಂದಿಲ್ಲ. ಅದನ್ನೇ ಕೊಡು” ಎಂದು ಹೇಳಿ ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀನು ಏಲಾ ತಗ್ಗಿನಲ್ಲಿ ಕೊಂದುಹಾಕಿದ ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯು ಒಂದು ಬಟ್ಟೆಯಲ್ಲಿ ಸುತ್ತಲ್ಪಟ್ಟು ಏಫೋದಿನ ಹಿಂದೆ ಇಡಲ್ಪಟ್ಟಿದೆ; ಬೇಕಾದರೆ ಅದನ್ನು ತೆಗೆದುಕೋ. ಅದರ ಹೊರತು ನನ್ನ ಬಳಿಯಲ್ಲಿ ಬೇರೊಂದಿಲ್ಲ ಎಂದು ಉತ್ತರಕೊಟ್ಟನು. ದಾವೀದನು - ಅದಕ್ಕೆ ಸಮಾನವಾದದ್ದು ಮತ್ತೊಂದಿಲ್ಲ, ಅದನ್ನೇ ಕೊಡು ಎಂದು ಹೇಳಿ ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯಾಜಕನು, “ಇಲ್ಲಿರುವುದು ಫಿಲಿಷ್ಟಿಯನಾದ ಗೊಲ್ಯಾತನ ಖಡ್ಗವೊಂದೇ. ಏಲಾ ಕಣಿವೆಯಲ್ಲಿ ನೀನು ಅವನನ್ನು ಕೊಂದು ಅವನಿಂದ ನೀನು ಕಿತ್ತುಕೊಂಡ ಖಡ್ಗವೇ ಅದು. ಆ ಖಡ್ಗವನ್ನು ಬಟ್ಟೆಯಲ್ಲಿ ಸುತ್ತಿ ಎಫೋದಿನ ಹಿಂಭಾಗದಲ್ಲಿ ಇಟ್ಟಿದೆ. ನಿನಗೆ ಬೇಕಿದ್ದರೆ ಅದನ್ನು ತೆಗೆದುಕೋ” ಎಂದು ಉತ್ತರಿಸಿದನು. ದಾವೀದನು, “ಅದನ್ನು ನನಗೆ ಕೊಡು. ಗೊಲ್ಯಾತನ ಖಡ್ಗಕ್ಕೆ ಸಮನಾದ ಬೇರೊಂದು ಖಡ್ಗವಿಲ್ಲ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅದಕ್ಕೆ ಯಾಜಕನು, “ನೀನು ಏಲಾ ತಗ್ಗಿನಲ್ಲಿ ಸಂಹರಿಸಿದ ಫಿಲಿಷ್ಟಿಯನಾದ ಗೊಲ್ಯಾತನ ಖಡ್ಗವನ್ನು ಏಫೋದಿನ ಹಿಂದೆ ಒಂದು ಬಟ್ಟೆಯಲ್ಲಿ ಸುತ್ತಿ ಇಟ್ಟಿದೆ. ಅದನ್ನು ನೀನು ತೆಗೆದುಕೋ. ಏಕೆಂದರೆ ಅದು ಒಂದೇ ಅಲ್ಲದೆ ಇಲ್ಲಿ ಬೇರೊಂದು ಇಲ್ಲ,” ಎಂದನು. ಅದಕ್ಕೆ ದಾವೀದನು, “ಅದರಂಥದ್ದು ಮತ್ತೊಂದಿಲ್ಲ, ಅದನ್ನೇ ಕೊಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 21:9
6 ತಿಳಿವುಗಳ ಹೋಲಿಕೆ  

ಈ ಫಿಲಿಷ್ಟಿಯರೊಡನೆ ಯುದ್ಧಮಾಡಲು ಸೌಲನೂ ಇಸ್ರಯೇಲರೂ ತಮ್ಮ ಸೈನ್ಯವನ್ನು ಜಮಾಯಿಸಿಕೊಂಡು ಏಲಾ ಕಣಿವೆಯಲ್ಲಿ ಪಾಳೆಯಮಾಡಿಕೊಂಡು ವ್ಯೂಹಕಟ್ಟಿದರು.


ಅವನ ಆಯುಧಗಳನ್ನು ಅಷ್ಟೋರೆತ್ ದೇವತೆಯ ಗುಡಿಯಲ್ಲಿಟ್ಟರು. ಅವನ ಶವವನ್ನು ಬೇತ್ ಷೆಯಾನಿನ ಕೋಟೆ ಗೋಡೆಗೆ ನೇತುಹಾಕಿದರು.


ದಾವೀದನು ಅಹೀಮೆಲೆಕನನ್ನು, “ಅರಸನ ಕಾರ್ಯ ತುರ್ತಾದದ್ದು. ಆದ್ದರಿಂದ ಕತ್ತಿಯನ್ನಾಗಲಿ ಬೇರೆ ಆಯುಧವನ್ನಾಗಲಿ ತೆಗೆದುಕೊಂಡು ಬರಲು ಆಗಲಿಲ್ಲ. ನಿನ್ನ ಬಳಿಯಲ್ಲಿ ಭರ್ಜಿಯಾಗಲಿ, ಕತ್ತಿಯಾಗಲಿ ಇಲ್ಲವೇ?’ ಎಂದು ಕೇಳಿದನು.


ಆ ಯಾಜಕ ಇವನಿಗೆ ಸರ್ವೇಶ್ವರನ ಚಿತ್ತವನ್ನು ತಿಳಿಸಿ, ಆಹಾರವನ್ನೂ ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯನ್ನೂ ಕೊಟ್ಟನು,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು