Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 23:12 - ಕನ್ನಡ ಸತ್ಯವೇದವು C.L. Bible (BSI)

12 ದಾವೀದನು ಪುನಃ ಸರ್ವೇಶ್ವರನನ್ನು, ಕೆಯೀಲಾದವರು ನನ್ನನ್ನೂ ನನ್ನ ಜನರನ್ನೂ ಸೌಲನ ಕೈಗೆ ಒಪ್ಪಿಸುವರೇ?” ಎಂದು ಕೇಳಿದಾಗ ಅವರು, “ಒಪ್ಪಿಸಿಕೊಡುವರು,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ದಾವೀದನು ತಿರುಗಿ ಯೆಹೋವನನ್ನು, “ಕೆಯೀಲದವರು ನನ್ನನ್ನೂ, ನನ್ನ ಜನರನ್ನೂ ಸೌಲನ ಕೈಗೆ ಒಪ್ಪಿಸುವರೋ” ಎಂದು ಕೇಳಿದಾಗ ಆತನು, “ಒಪ್ಪಿಸಿಕೊಡುವರು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ದಾವೀದನು ತಿರಿಗಿ ಯೆಹೋವನನ್ನು - ಕೆಯೀಲದವರು ನನ್ನನ್ನೂ ನನ್ನ ಜನರನ್ನೂ ಸೌಲನ ಕೈಗೆ ಒಪ್ಪಿಸುವರೋ ಎಂದು ಕೇಳಿದಾಗ ಆತನು - ಒಪ್ಪಿಸಿಕೊಡುವರು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅನಂತರ ದಾವೀದನು, “ಕೆಯೀಲಾದ ಜನರು ನನ್ನನ್ನೂ ನನ್ನ ಜನರನ್ನೂ ಸೌಲನಿಗೆ ಒಪ್ಪಿಸುತ್ತಾರೆಯೇ?” ಎಂದು ಕೇಳಿದನು. ಯೆಹೋವನು, “ಅವರು ಒಪ್ಪಿಸುತ್ತಾರೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅನಂತರ ದಾವೀದನು, “ಕೆಯೀಲಾ ಪಟ್ಟಣದವರು ನನ್ನನ್ನೂ, ನನ್ನ ಜನರನ್ನೂ ಸೌಲನ ಕೈಯಲ್ಲಿ ಒಪ್ಪಿಸಿಕೊಡುವರೋ?” ಎಂದು ಕೇಳಿದನು. ಯೆಹೋವ ದೇವರು, “ಅವರು ಒಪ್ಪಿಸಿಕೊಡುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 23:12
12 ತಿಳಿವುಗಳ ಹೋಲಿಕೆ  

ವಿರೋಧಿಗಳ ವಶಕ್ಕೆ ಎನ್ನನು ನೀ ಬಿಟ್ಟುಬಿಡಲಿಲ್ಲ I ನಿರಾತಂಕದೆಡೆಯಲಿ ನನ್ನ ನಿಲ್ಲಿಸಿದೆಯಲ್ಲಾ II


ಅರಸರು ಕುತೂಹಲದಂತೆ ನಮ್ಮ ಜೊತೆಯಲ್ಲಿ ಬರೋಣವಾಗಲಿ; ಅವನನ್ನು ತಮ್ಮ ಕೈಗೆ ಒಪ್ಪಿಸುವ ಕೆಲಸ ನಮ್ಮದು,” ಎಂದು ಹೇಳಿದರು.


ಎನ್ನ ಮನಕ್ಕೆ ಶಾಂತಿ ದೇವನಿಂದಲೆ I ನನ್ನ ಜೀವೋದ್ಧಾರ ಆತನಿಂದಲೆ II


ನಾವು ಯಾರಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ, ಅವರ ಕಣ್ಣಿಗೆ ಮುಚ್ಚುಮರೆಯಾದುದು ಯಾವುದೂ ಇಲ್ಲ. ಅವರ ದೃಷ್ಟಿಗೆ ಎಲ್ಲವೂ ಬಟ್ಟಬಯಲು.


ತಮ್ಮ ಆಲೋಚನೆಯನ್ನು ಸರ್ವೇಶ್ವರ ಸ್ವಾಮಿಯಿಂದ ಬಚ್ಚಿಡುವುದಕ್ಕಾಗಿ ಒಳಸಂಚುಮಾಡುವವರಿಗೆ ಧಿಕ್ಕಾರ ! ಇವರು, “ನಮ್ಮನ್ನು ಯಾರು ನೋಡಿಯಾರು? ನಮ್ಮನ್ನು ಯಾರು ಗಮನಿಸಿಯಾರು?” ಎಂದುಕೊಂಡು ಕತ್ತಲಲ್ಲೇ ತಮ್ಮ ಕೃತ್ಯಗಳನ್ನು ನಡೆಸುತ್ತಾರೆ.


ದಾವೀದನು ಕೆಯೀಲಾದಲ್ಲಿದ್ದಾನೆಂಬ ಸಮಾಚಾರ ಸೌಲನಿಗೆ ಮುಟ್ಟಿತು. ಆಗ ಅವನು, “ದೇವರು ದಾವೀದನನ್ನು ನನ್ನ ಕೈಗೆ ಒಪ್ಪಿಸಿದ್ದಾರೆ. ಅವನು ಅಗುಳಿಕದಗಳಿಂದ ಭದ್ರವಾಗಿರುವ ಕೋಟೆಯನ್ನು ಪ್ರವೇಶಿಸಿದ್ದಾನಲ್ಲವೆ? ಅವನು ಅಲ್ಲಿಂದ ತಪ್ಪಿಸಿಕೊಳ್ಳಲಾರನು,” ಎಂದುಕೊಂಡನು.


ಮನುಜರಲಿ ಭರವಸೆಯಿಡುವುದಕ್ಕಿಂತ I ಪ್ರಭುವನು ಆಶ್ರಯಿಸಿಕೊಳ್ಳುವುದು ಹಿತ II


“ನೀವು ನಮಗೆ ವಿರೋಧವಾಗಿ ಯುದ್ಧಕ್ಕೆ ಬಂದದ್ದೇಕೆ?” ಎಂದು ಯೆಹೂದ್ಯರು ಅವರನ್ನು ಕೇಳಿದರು. ಅವರು, “ಸಂಸೋನನನ್ನು ಹಿಡಿದು, ಬಂಧಿಸಿ, ಅವನು ನಮಗೆ ಮಾಡಿದಂತೆಯೇ ಅವನಿಗೂ ಮಾಡಬೇಕೆಂದು ಬಂದೆವು,” ಎಂದು ಉತ್ತರಕೊಟ್ಟರು.


ನಾನು ಕೇಳಿದ ಸುದ್ದಿಯಂತೆ ಅವನು ನಿಜವಾಗಿ ಬರುವನೇ? ಕೆಯೀಲಾ ಪುರಜನರು ನನ್ನನ್ನು ಅವನ ಕೈಗೆ ಒಪ್ಪಿಸುವರೇ? ಇಸ್ರಯೇಲ ದೇವರಾದ ಸರ್ವೇಶ್ವರಾ, ಈ ವಿಷಯದಲ್ಲಿ ಉತ್ತರ ದಯಪಾಲಿಸಿ,” ಎಂದು ಪ್ರಾರ್ಥಿಸಿದನು. ಸೌಲನು ಬರುವನೆಂಬುದಾಗಿ ಸರ್ವೇಶ್ವರನಿಂದ ಉತ್ತರ ಸಿಕ್ಕಿತು.


ಸರ್ವೇಶ್ವರ ಸ್ವಾಮಿ ತಿಳಿಸಿದ್ದರಿಂದಲೇ ಶತ್ರುಗಳು ನನಗೆ ವಿರುದ್ಧ ಹೂಡಿದ್ದ ಕುತಂತ್ರವು ನನಗೆ ಗೊತ್ತಾಯಿತು. ಅವರ ಕೃತ್ಯಗಳನ್ನು ನನಗೆ ತೋರಿಸಲಾಯಿತು.


ಬೆಳಿಗ್ಗೆ ಸ್ಮರಿಸಮಾಡು ನಿನ್ನಚಲ ಪ್ರೀತಿಯನು I ನಿನ್ನಲ್ಲಿಯೆ ಇಟ್ಟಿರುವೆನು ನನ್ನ ನಂಬಿಕೆಯನು I ತೋರಿಸು ನನಗೆ ನಾ ಹಿಡಿಯಬೇಕಾದ ಮಾರ್ಗವನು I ನಿನ್ನ ಕಡೆಗೆ ಎತ್ತಿರುವೆನು ನನ್ನ ಹೃನ್ಮನಗಳನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು