Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 23:9 - ಕನ್ನಡ ಸತ್ಯವೇದವು C.L. Bible (BSI)

9 ಸೌಲನು ತನಗೆ ಕೇಡುಮಾಡಬೇಕೆಂದಿದ್ದಾನೆಂದು ದಾವೀದನು ತಿಳಿದು ಯಾಜಕನಾದ ಎಬ್ಯಾತಾರನಿಗೆ, “ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ,” ಎಂದು ಹೇಳಿ ತರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಸೌಲನು ತನಗೆ ಕೇಡುಮಾಡಬೇಕೆಂದಿದ್ದಾನೆ ಎಂಬುದನ್ನು ದಾವೀದನು ತಿಳಿದು ಯಾಜಕನಾದ ಎಬ್ಯಾತಾರನಿಗೆ, “ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಸೌಲನು ತನಗೆ ಕೇಡುಮಾಡಬೇಕೆಂದಿದ್ದಾನೆಂದು ದಾವೀದನು ತಿಳಿದು ಯಾಜಕನಾದ ಎಬ್ಯಾತಾರನಿಗೆ - ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ ಎಂದು ಹೇಳಿ ತರಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಸೌಲನು ತನ್ನ ವಿರುದ್ಧವಾಗಿ ಉಪಾಯಗಳನ್ನು ಮಾಡುತ್ತಿದ್ದಾನೆಂಬುದು ದಾವೀದನಿಗೆ ತಿಳಿಯಿತು. ಆಗ ದಾವೀದನು ಯಾಜಕನಾದ ಎಬ್ಯಾತಾರನಿಗೆ, “ಎಫೋದನ್ನು ತೆಗೆದುಕೊಂಡು ಬಾ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಸೌಲನು ತನಗೆ ಕೇಡನ್ನು ಮಾಡಲು ಗುಟ್ಟಾಗಿ ಯೋಚಿಸುತ್ತಿದ್ದಾನೆಂದು ದಾವೀದನು ತಿಳಿದಿದ್ದರಿಂದ ಯಾಜಕನಾದ ಅಬಿಯಾತರನಿಗೆ, “ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 23:9
15 ತಿಳಿವುಗಳ ಹೋಲಿಕೆ  

ಆದರೂ ಅವನು ತನ್ನ ದೇವರಾದ ಸರ್ವೇಶ್ವರನಲ್ಲಿ ಧೈರ್ಯ ತಂದುಕೊಂಡನು. ಅಹೀಮೆಲೆಕನ ಮಗನಾದ ಎಬ್ಯಾತಾರನಿಗೆ, “ದಯವಿಟ್ಟು ‘ಏಫೋದ’ನ್ನು ಇಲ್ಲಿಗೆ ತೆಗೆದುಕೊಂಡು ಬಾ,” ಎಂದು ಹೇಳಿದನು. ಅವನು ತಂದನು.


ದಾವೀದನ ಬಳಿಗೆ ಓಡಿಬಂದಿದ್ದ ಅಹೀಮೆಲೆಕನ ಮಗನಾದ ಎಬ್ಯಾತಾರನು ಕೆಯೀಲಕ್ಕೆ ಬರುವಾಗ ‘ಏಫೋದ’ನ್ನು ತಂದಿದ್ದನು.


ದೈವೇಚ್ಛೆಯನ್ನು ತಿಳಿದುಕೊಳ್ಳಲು ಅವನು ಮಹಾಯಾಜಕ ಎಲ್ಲಾಜಾರನ ಹತ್ತಿರ ಬರಬೇಕು. ಎಲ್ಲಾಜಾರನು ಸರ್ವೇಶ್ವರನ ಸನ್ನಿಧಿಯಲ್ಲಿ ‘ಊರಿಮ್’ ಎಂಬ ವಸ್ತುವಿನ ಮೂಲಕ ಅವನ ಪರವಾಗಿ ವಿಚಾರಿಸುವನು, ಯೆಹೋಶುವನು ಮತ್ತು ಇಸ್ರಾಯೇಲ್ ಸಮಾಜದವರೆಲ್ಲರು ಅವನ ಮಾತಿನಂತೆ ಹೊರಡಬೇಕು ಹಾಗು ಹಿಂದಿರುಗಬೇಕು,” ಎಂದು ಆಜ್ಞಾಪಿಸಿದರು.


ಇದನ್ನರಿತುಕೊಂಡ ಪ್ರೇಷಿತರು ಅಲ್ಲಿಂದ ಪಲಾಯನ ಮಾಡಿ ಲುಕವೋನಿಯದ ಪಟ್ಟಣಗಳಾದ ಲುಸ್ತ್ರ ಮತ್ತು ದೆರ್ಬೆಗೂ ಅದರ ಸುತ್ತಮುತ್ತಲ ಪ್ರದೇಶಗಳಿಗೂ ಹೊರಟುಹೋದರು.


ಅದು ಸೌಲನಿಗೆ ತಿಳಿದುಬಂದಿತು. ಅವರು ಅವನನ್ನು ಕೊಲ್ಲಲು ಹಗಲಿರುಳು ಪಟ್ಟಣದ ದ್ವಾರಗಳನ್ನು ಕಾಯುತ್ತಿದ್ದರು.


“ನನ್ನನ್ನು ಬೇಡಿಕೊ, ನಾನು ನಿನಗೆ ಸದುತ್ತರವನ್ನು ದಯಪಾಲಿಸುವೆನು. ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.


ಅಹೀಟೂಬನ ಮಗನಾದ ಅಹೀಮೆಲೆಕನ ಮಕ್ಕಳಲ್ಲೊಬ್ಬನಾದ ಏಬ್ಯಾತಾರನೆಂಬವನು ತಪ್ಪಿಸಿಕೊಂಡು ದಾವೀದನ ಬಳಿಗೆ ಓಡಿಬಂದನು.


ಅನಂತರ ಸೌಲನು ಅಹೀಯನಿಗೆ, “’ಏಫೋದ’ನ್ನು ತೆಗೆದುಕೊಂಡು ಬಾ,” ಎಂದು ಆಜ್ಞಾಪಿಸಿದನು. (ಆ ದಿನದಂದು ಅಹೀಯನು ಇಸ್ರಯೇಲರ ಮುಂದೆ ಏಫೋದನ್ನು ಹೊತ್ತು ನಡೆಯುತ್ತಿದ್ದನು).


ಕೆಯೀಲಾದಲ್ಲಿದ್ದ ದಾವೀದನನ್ನೂ ಅವನ ಜನರನ್ನೂ ಹಿಡಿಯುವುದಕ್ಕಾಗಿ ಸೈನ್ಯವನ್ನು ಕೂಡಿಸಿದನು.


“ಇಸ್ರಯೇಲ್ ದೇವರಾದ ಸರ್ವೇಶ್ವರಾ, ಸೌಲನು ಕೆಯೀಲಾಕ್ಕೆ ಬಂದು ನನ್ನ ನಿಮಿತ್ತ ಪಟ್ಟಣವನ್ನು ಹಾಳುಮಾಡಬೇಕೆಂದಿದ್ದಾನೆ ಎಂದು ನಿಮ್ಮ ದಾಸನಾದ ನನಗೆ ಸುದ್ದಿಬಂದಿದೆ.


ಬಳಿಕ ಅರಸ ಸೊಲೊಮೋನನು ಯಾಜಕನಾದ ಎಬ್ಯಾತಾರನಿಗೆ, “ನೀನು ಅಣತೋತಿನಲ್ಲಿರುವ ನಿನ್ನ ಮನೆಗೆ ಹೋಗು; ನೀನು ಮರಣಕ್ಕೆ ಪಾತ್ರನು. ಆದರೆ ನೀನು ಸ್ವಾಮಿ ಸರ್ವೇಶ್ವರನ ಮಂಜೂಷವನ್ನು ಹೊತ್ತುಕೊಂಡು ನನ್ನ ತಂದೆ ದಾವೀದನೊಡನೆ ಸಂಚರಿಸುತ್ತಾ ಅವರ ಕಷ್ಟ-ದುಃಖಗಳಲ್ಲಿ ಪಾಲುಗಾರನಾಗಿದ್ದುದರಿಂದ


ಹೀಗಿರಲು, ಅನೇಕ ದಿನಗಳವರೆಗೆ ಇಸ್ರಯೇಲಿನಲ್ಲಿ ರಾಜಯುವರಾಜರುಗಳು ಆಳ್ವಿಕೆ ನಡೆಸುವುದಿಲ್ಲ. ಬಲಿಯರ್ಪಣೆಗಳು ಇರುವುದಿಲ್ಲ. ವಿಗ್ರಹವೇದಿಕೆಗಳು ಅವರ ಮಧ್ಯೆ ಕಂಡುಬರುವುದಿಲ್ಲ, ಮಾಟಮಂತ್ರ ನಡೆಯುವುದಿಲ್ಲ.


ಅವರು, “ಆ ವ್ಯಕ್ತಿ ಇಲ್ಲಿಗೆ ಬರುವನೋ?” ಎಂದು ಸರ್ವೇಶ್ವರನನ್ನು ವಿಚಾರಿಸಿದಾಗ, “ಬಂದಿದ್ದಾನೆ; ಇಗೋ, ಸರಕು ಸಾಮಾನುಗಳ ನಡುವೆ ಅಡಗಿಕೊಂಡಿದ್ದಾನೆ,” ಎಂದು ಉತ್ತರ ಬಂದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು