Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 24:14 - ಕನ್ನಡ ಸತ್ಯವೇದವು C.L. Bible (BSI)

14 ಇಸ್ರಯೇಲರ ಅರಸರೇ, ಯಾರನ್ನು ಹಿಂದಟ್ಟಿ ಹೊರಟಿದ್ದೀರಿ? ಯಾರನ್ನು ಹಿಡಿಯಬೇಕೆಂದಿರುತ್ತೀರಿ? ಸತ್ತ ನಾಯಿಯನ್ನೇ? ಒಂದು ಬಡ ಸೊಳ್ಳೆಯನ್ನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇಸ್ರಾಯೇಲರ ಅರಸನೇ ಯಾರನ್ನು ಹಿಂಬಾಲಿಸಿ ಹೊರಟಿರುವೇ? ಯಾರನ್ನು ಹಿಡಿಯಬೇಕೆಂದಿರುತ್ತೀ? ಸತ್ತ ನಾಯಿಯನ್ನೋ? ಒಂದು ಬಡ ನೊಣವನ್ನೋ?.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇಸ್ರಾಯೇಲ್ಯರ ಅರಸೇ, ಯಾರನ್ನು ಹಿಂದಟ್ಟ ಹೊರಟಿದ್ದೀ? ಯಾರನ್ನು ಹಿಡಿಯಬೇಕೆಂದಿರುತ್ತೀ? ಸತ್ತ ನಾಯಿಯನ್ನೇ, ಒಂದು ಬಡ ಸೊಳ್ಳೆಯನ್ನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನೀನು ಯಾರನ್ನು ಅಟ್ಟಿಸಿಕೊಂಡು ಹೋಗುತ್ತಿರುವೆ? ಇಸ್ರೇಲರ ರಾಜನಾದ ನೀನು ಯಾರೊಂದಿಗೆ ಹೋರಾಡಬೇಕೆಂದಿರುವೆ? ನಿನಗೆ ಕೇಡು ಮಾಡಬಹುದಾದವನನ್ನು ನೀನು ಅಟ್ಟಿಸಿಕೊಂಡು ಹೋಗುತ್ತಿಲ್ಲ! ನೀನು ಸತ್ತ ನಾಯಿಯನ್ನೋ ಇಲ್ಲವೆ ಚಿಟ್ಟೆಯನ್ನೋ ಅಟ್ಟಿಸಿಕೊಂಡು ಹೋಗುತ್ತಿರುವೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ಇಸ್ರಾಯೇಲಿನ ಅರಸನು ಯಾರನ್ನು ಹಿಂದಟ್ಟಿ ಹೊರಟನು? ಯಾರನ್ನು ಹಿಂದಟ್ಟುತ್ತೀ? ಸತ್ತ ನಾಯಿಯನ್ನೇ? ಒಂದು ನೊಣವನ್ನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 24:14
9 ತಿಳಿವುಗಳ ಹೋಲಿಕೆ  

ಸರ್ವೇಶ್ವರನ ಸಾನ್ನಿಧ್ಯವಿಲ್ಲದಿರುವ ಈ ದೇಶದಲ್ಲಿ ನಾನು ರಕ್ತ ಚೆಲ್ಲಿ ಸಾಯುವಂಥಾಗದಿರಲಿ. ಅಕಟಾ, ಗುಡ್ಡಗಳಲ್ಲಿ ಕೌಜುಗವನ್ನು ಹಿಡಿಯಹೊರಟ ಬೇಟೆಗಾರನೋ ಎಂಬಂತೆ ಇಸ್ರಯೇಲರ ಅರಸ ಹೊರಟುಬಂದು ನನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾರಲ್ಲಾ!” ಎಂದನು.


ಮೆಫೀಬೋಶೆತನು ಇದನ್ನು ಕೇಳಿ ಅರಸನಿಗೆ ಸಾಷ್ಟಾಂಗ ನಮಸ್ಕಾರ ಮಾಡಿ, “ಸತ್ತ ನಾಯಿಯಂತಿರುವ ನನ್ನನ್ನು ತಾವು ಗಮನಿಸಲು ನಿಮ್ಮ ಗುಲಾಮನಾದ ನಾನು ಅಪಾತ್ರನೇ!” ಎಂದನು.


“ನೀನು ಕೋಲುಹಿಡಿದು ನನ್ನ ಬಳಿಗೆ ಬರಲು ನಾನು ನಾಯಿಯೆಂದು ತಿಳಿದುಕೊಂಡೆಯಾ?” ಎಂದು ಹೇಳಿ ಅವನನ್ನು ತನ್ನ ದೇವರ ಹೆಸರಿನಲ್ಲಿ ಶಪಿಸಿದನು.


ಆಗ ಅವನ ಹೆಂಡತಿ ಈಜೆಬೆಲಳು, “ಇಸ್ರಯೇಲರ ಅರಸರಾದ ನೀವು ಹೀಗೆ ವರ್ತಿಸುವುದೇ! ಎದ್ದು ಊಟಮಾಡಿ, ಸಂತೋಷದಿಂದಿರಿ; ನಾನು ನಿಮಗೆ ಜೆಸ್ರೀಲಿನವನಾದ ನಾಬೋತನ ದ್ರಾಕ್ಷೀತೋಟವನ್ನು ಕೊಡುತ್ತೇನೆ,” ಎಂದು ನುಡಿದಳು.


ಆಗ ಚೆರೂಯಳ ಮಗ ಅಬೀಷೈಯು ಅರಸನಿಗೆ, “ಈ ಸತ್ತನಾಯಿ ಅರಸನಾದ ನನ್ನ ಒಡೆಯರನ್ನು ಶಪಿಸುವುದೇನು? ಅಪ್ಪಣೆಯಾಗಲಿ, ನಾನು ಅವನಿರುವಲ್ಲಿಗೇ ಹೋಗಿ, ಅವನ ತಲೆ ಹಾರಿಸಿಕೊಂಡು ಬರುತ್ತೇನೆ,” ಎಂದನು.


ಅಬ್ನೇರನು ಈ ಮಾತನ್ನು ಕೇಳಿ ಕೋಪಗೊಂಡು ಈಷ್ಬೋಶೆತನಿಗೆ, “ಈವರೆಗೆ ನಾನು ನಿನ್ನ ತಂದೆ ಸೌಲನ ಕುಟುಂಬಕ್ಕೂ ಅವನ ಬಂಧುಮಿತ್ರರಿಗೂ ಪ್ರಾಮಾಣಿಕನಾಗಿ ನಡೆದುಕೊಂಡೆನಲ್ಲವೇ? ನಿನ್ನನ್ನು ದಾವೀದನ ಕೈಗೆ ಒಪ್ಪಿಸಿಕೊಡಲಿಲ್ಲ. ಆದರೂ ಈಗ ಈ ಹೆಂಗಸಿನ ಕಾರಣ ನನ್ನಲ್ಲಿ ತಪ್ಪುಹಿಡಿಯುವುದಕ್ಕೆ ನಾನೇನು ಯೆಹೂದ ನಾಯಿಯ ತಲೆಯೋ?


ಅನಂತರ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವುದಕ್ಕೆ ಹೋದಾಗ ಸೌಲನ ಮಗಳಾದ ಮೀಕಲಳು ಅವನೆದುರಿಗೆ ಬಂದಳು. “ಈ ದಿನ ಇಸ್ರಯೇಲರ ಅರಸರು ಎಂಥ ಅಗೌರವದಿಂದ ನಡೆದುಕೊಂಡರು! ಹುಚ್ಚರಲ್ಲಿ ಒಬ್ಬರಂತೆ ತಮ್ಮ ಜನಸಾಮಾನ್ಯರಾದ ದಾಸಿಯರ ಮುಂದೆ ಬೆತ್ತಲೆಯಾಗಿದ್ದರಲ್ಲಾ!” ಎಂದಳು.


ಇದಕ್ಕೆ ಬದಲಾಗಿ ನೀನು ಅಧರ್ಮದ ಬೀಜವನ್ನು ಬಿತ್ತಿರುವೆ, ಅನ್ಯಾಯದ ಬೆಳೆಯನ್ನು ಕೊಯ್ದಿರುವೆ. ಅಸತ್ಯದ ಫಲವನ್ನು ಉಂಡಿರುವೆ. ನಿನ್ನ ಭುಜಬಲದಲ್ಲೂ ಸಮರಶೂರರಲ್ಲೂ ಭರವಸೆಯಿಟ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು