Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 25:11 - ಕನ್ನಡ ಸತ್ಯವೇದವು C.L. Bible (BSI)

11 ಉಣ್ಣೆ ಕತ್ತರಿಸುವವರಿಗಾಗಿ ನಾನು ಸಿದ್ಧಮಾಡಿಸಿದ ಮಾಂಸವನ್ನೂ ಆಹಾರಪಾನಗಳನ್ನೂ ಎತ್ತಿ ಎಲ್ಲಿಂದಲೋ ಬಂದವರಿಗೆ ಕೊಡಲಾಗದು,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಉಣ್ಣೆಕತ್ತರಿಸುವವರಿಗೋಸ್ಕರ ನಾನು ಸಿದ್ಧ ಮಾಡಿಸಿರುವ ಮಾಂಸವನ್ನು ಆಹಾರಪಾನಗಳನ್ನೂ, ಎಲ್ಲಿಂದಲೋ ಬಂದವರಿಗೆ ಕೊಟ್ಟುಬಿಡಬೇಕೋ?” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಉಣ್ಣೆ ಕತ್ತರಿಸುವವರಿಗೋಸ್ಕರ ನಾನು ಸಿದ್ಧಮಾಡಿಸಿದ ಮಾಂಸವನ್ನೂ ಆಹಾರಪಾನಗಳನ್ನೂ ಎತ್ತಿ ಎಲ್ಲಿಂದಲೋ ಬಂದವರಿಗೆ ಕೊಟ್ಟುಬಿಡಬೇಕೋ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನನ್ನ ಬಳಿ ನೀರು ಮತ್ತು ರೊಟ್ಟಿಗಳಿವೆ. ನನ್ನ ಕುರಿಗಳಿಂದ ತುಪ್ಪಟವನ್ನು ಕತ್ತರಿಸುತ್ತಿರುವ ಸೇವಕರಿಗೋಸ್ಕರ ಮಾಂಸವೂ ನನ್ನಲ್ಲಿದೆ. ಆದರೆ ನನಗೆ ಗೊತ್ತಿಲ್ಲದ ಜನರಿಗೆ ನಾನು ಕೊಡುವುದೇ ಇಲ್ಲ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಾನು ನನ್ನ ರೊಟ್ಟಿಯನ್ನೂ ನೀರನ್ನೂ ಉಣ್ಣೆ ಕತ್ತರಿಸುವವರಿಗೋಸ್ಕರ ನಾನು ಸಿದ್ಧಮಾಡಿಸಿದ ಮಾಂಸವನ್ನು ತೆಗೆದು, ಎಲ್ಲಿಯವರೆಂದು ನಾನರಿಯದ ಮನುಷ್ಯರಿಗೆ ಕೊಡುವೆನೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 25:11
16 ತಿಳಿವುಗಳ ಹೋಲಿಕೆ  

ಆದರೆ ಸುಖೋತಿನ ಮುಖಂಡರು ಅವನಿಗೆ, “ನಾವು ನಿನ್ನ ಸೈನಿಕರಿಗೆ ರೊಟ್ಟಿಕೊಡುವುದಕ್ಕೆ ಜೆಬಹ ಮತ್ತು ಚಲ್ಮುನ್ನ ಎಂಬರವರನ್ನು ಕೈಕಟ್ಟಿ ವಶಮಾಡಿಕೊಂಡಿದ್ದೀಯೋ?”, ಎಂದು ತಿರಸ್ಕರಿಸಿದರು.


ಎಂದೇ ಸಮಯಸಂದರ್ಭಗಳು ಇರುವಾಗಲೇ ಸರ್ವರಿಗೂ ಉಪಕಾರಮಾಡೋಣ. ಅದರಲ್ಲೂ ಮುಖ್ಯವಾಗಿ, ಒಂದೇ ಕುಟುಂಬದವರಂತೆ ಇರುವ ಕ್ರೈಸ್ತವಿಶ್ವಾಸಿಗಳಿಗೆ ಉಪಕಾರ ಮಾಡೋಣ.


ಗೊಣಗುಟ್ಟದೆ ಒಬ್ಬರಿಗೊಬ್ಬರು ಅತಿಥಿಸತ್ಕಾರ ಮಾಡಿ.


ಪ್ರಖ್ಯಾತರಾಗಿದ್ದರೂ ಖ್ಯಾತರಹಿತರಾಗಿದ್ದೇವೆ. ಬದುಕಿದ್ದರೂ ಸತ್ತವರೆನಿಸಿಕೊಂಡಿದ್ದೇವೆ. ಶಿಕ್ಷೆಗೆ ಗುರಿಯಾಗಿದ್ದರೂ ಇನ್ನೂ ಕೊಲೆಗೆ ಈಡಾಗದೆ ಇದ್ದೇವೆ.


ಅನಾಥರೊಂದಿಗೆ ಅನ್ನವನು ಹಂಚಿಕೊಳ್ಳದೆ ತುತ್ತನ್ನೆಲ್ಲಾ ನಾನೇ ಒಂಟಿಯಾಗಿ ಉಂಡೆನೆ?


ಅವನ ಹೆಂಡತಿಯ ಹೆಸರು ಅಬೀಗೈಲ್. ಆಕೆ ಬಹು ಬುದ್ಧಿವಂತೆ ಹಾಗು ಸುಂದರಿ. ಕಾಲೇಬನ ವಂಶದವನಾದ ಆ ಮನುಷ್ಯನಾದರೊ ನಿಷ್ಠುರನು ಹಾಗು ದುಷ್ಕರ್ಮಿ. ಅವನು ಬಹು ಧನವಂತನೂ ಆಗಿದ್ದ. ಅವನಿಗೆ ಮೂರು ಸಾವಿರ ಕುರಿಗಳೂ ಸಾವಿರ ಆಡುಗಳೂ ಇದ್ದವು. ಅವನು ಒಮ್ಮೆ ಕರ್ಮೆಲಿನಲ್ಲಿ ಕುರಿಗಳ ಉಣ್ಣೆಯನ್ನು ಕತ್ತರಿಸುತ್ತಿದ್ದನು.


ಇಸ್ರಯೇಲರಲ್ಲಿ ‘ಕೆಟ್ಟವರಿಂದಲೇ ಕೇಡು’ ಎಂಬುದಾಗಿ ಹಿರಿಯರಿಂದ ಬಂದ ಗಾದೆಯುಂಟು. ನಾನು ನಿಮಗೆ ವಿರೋಧವಾಗಿ ಕೈಯೆತ್ತುವುದಿಲ್ಲ.


‘ಈ ಭಾಗ್ಯ ನಮ್ಮ ಸಾಮರ್ಥ್ಯ ಸಾಹಸಗಳಿಂದಲೇ ನಮಗೆ ಲಭಿಸಿತು’ ಎಂದುಕೊಂಡೀರಿ ಎಚ್ಚರಿಕೆ!


ಅನಂತರ ಅವನು ಸುಖೋತಿನವರ ಬಳಿಗೆ ಹೋಗಿ ಅವರಿಗೆ, “’ದಣಿದಿರುವ ನಿನ್ನ ಸೈನಿಕರಿಗಾಗಿ ನಾವು ರೊಟ್ಟಿ ಕೊಡುವುದಕ್ಕೆ ಜೆಬಹ ಮತ್ತು ಚಲ್ಮುನ್ನ ಎಂಬವರನ್ನು ಕೈಕಟ್ಟಿ ಸ್ವಾಧೀನ ಮಾಡಿಕೊಂಡಿದ್ದೀಯೋ?,’ ಎಂದು ನನ್ನನ್ನು ನಿಂದಿಸಿದಿರಲ್ಲವೆ;


ನಿನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವ ಕೆಲಸ ನಡೆಯುತ್ತಿದೆಯೆಂಬ ಸುದ್ದಿಯನ್ನು ಕೇಳಿದ್ದೇನೆ. ನಿನ್ನ ಕುರುಬರು ನಮ್ಮೊಡನೆ ಕರ್ಮೆಲಿನಲ್ಲಿದ್ದ ಕಾಲವೆಲ್ಲಾ ನಾವು ಅವರನ್ನು ತೊಂದರೆಪಡಿಸಲಿಲ್ಲ; ಅವರಿಗೇನೂ ನಷ್ಟಮಾಡಲಿಲ್ಲ.


ಆ ಸೇವಕರು ಹಿಂದಿರುಗಿ ತಮ್ಮ ದಾರಿಹಿಡಿದು ದಾವೀದನ ಬಳಿಗೆ ಬಂದು ಅವನಿಗೆ ಎಲ್ಲವನ್ನು ತಿಳಿಸಿದರು.


ಅವನು ಅಲ್ಲಿಂದ ಪೆನೂವೇಲಿಗೆ ಬಂದು ಅಲ್ಲಿನ ಜನರನ್ನು ಅದೇ ಪ್ರಕಾರ ಬಿನ್ನವಿಸಲು ಅವರೂ ಸುಖೋತಿನವರಂತೆಯೇ ತಾತ್ಸಾತ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು