Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 25:21 - ಕನ್ನಡ ಸತ್ಯವೇದವು C.L. Bible (BSI)

21 ಅಷ್ಟರಲ್ಲಿ ದಾವೀದನು, “ನಾನು ಅಡವಿಯಲ್ಲಿ ಈ ಮನುಷ್ಯನ ಆಸ್ತಿಯಲ್ಲಿ ಏನೂ ನಷ್ಟವಾಗದಂತೆ ಕಾಪಾಡಿದ್ದು ವ್ಯರ್ಥ ಆಯಿತು. ಅವನು ಉಪಕಾರಕ್ಕೆ ಅಪಕಾರ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅಷ್ಟರಲ್ಲಿ ದಾವೀದನು, “ನಾನು ಮರುಭೂಮಿಯಲ್ಲಿ ಈ ಮನುಷ್ಯನ ಆಸ್ತಿಯಲ್ಲಿ ಏನೂ ನಷ್ಟವಾಗದಂತೆ ಕಾಪಾಡಿದ್ದು ವ್ಯರ್ಥವಾಯಿತು. ಅವನು ಉಪಕಾರಕ್ಕೆ ಅಪಕಾರ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅಷ್ಟರಲ್ಲಿ ದಾವೀದನು - ನಾನು ಅಡವಿಯಲ್ಲಿ ಈ ಮನುಷ್ಯನ ಆಸ್ತಿಯಲ್ಲಿ ಏನೂ ನಷ್ಟವಾಗದಂತೆ ಕಾಪಾಡಿದ್ದು ವ್ಯರ್ಥವಾಯಿತು. ಅವನು ಉಪಕಾರಕ್ಕೆ ಅಪಕಾರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅಬೀಗೈಲಳನ್ನು ಸಂಧಿಸುವುದಕ್ಕೆ ಮುಂಚೆ ದಾವೀದನು, “ನಾಬಾಲನ ಆಸ್ತಿಯನ್ನು ನಾನು ಅರಣ್ಯದಲ್ಲಿ ಕಾಪಾಡಿದೆನು. ಅವನ ಕುರಿಗಳಲ್ಲಿ ಒಂದೂ ತಪ್ಪಿಸಿಕೊಳ್ಳದಂತೆ ನಾನು ನೋಡಿಕೊಂಡೆನು. ನಾನು ಅವನಿಂದ ಏನನ್ನೂ ಅಪೇಕ್ಷಿಸದೆ ಇದನ್ನೆಲ್ಲ ಮಾಡಿದೆ! ನಾನು ಅವನಿಗೆ ಒಳ್ಳೆಯದನ್ನು ಮಾಡಿದೆ; ಆದರೆ ಅವನು ನನಗೆ ಕೆಟ್ಟವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅಷ್ಟರಲ್ಲಿ ದಾವೀದನು ತನ್ನ ಜನರಿಗೆ, “ಅಡವಿಯಲ್ಲಿದ್ದ ಇವನ ಆಸ್ತಿಯಲ್ಲಿ ಏನೂ ನಷ್ಟವಾಗದಂತೆ ನಾನು ಕಾಪಾಡಿದ್ದು ವ್ಯರ್ಥವಾಯಿತು. ಅವನು ನಾನು ಮಾಡಿದ ಉಪಕಾರಕ್ಕೆ ಅಪಕಾರ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 25:21
19 ತಿಳಿವುಗಳ ಹೋಲಿಕೆ  

ಯಾರು ಉಪಕಾರಕ್ಕೆ ಅಪಕಾರ ಮಾಡುತ್ತಾರೊ ಅಂಥವರ ಮನೆಯಿಂದ ಕೇಡು ತೊಲಗದು.


ಎಲ್ಲ ವಿಧವಾದ ದ್ವೇಷ-ದೂಷಣೆ, ಕೋಪ-ಕ್ರೋಧ ಮತ್ತು ಕೆಡುಕುತನವನ್ನು ನಿಮ್ಮಿಂದ ದೂರಮಾಡಿರಿ.


ಕೋಪಮಾಡಬೇಕಾಗಿ ಬಂದರೂ ಪಾಪಮಾಡಬೇಡಿರಿ; ಸೂರ್ಯನು ಮುಳುಗುವ ಮುನ್ನ ನಿಮ್ಮ ಕೋಪವು ಇಳಿಯಲಿ.


ಕೇಡಿಗೆ ಸೋಲದೆ, ಒಳಿತಿನಿಂದ ಕೇಡನ್ನು ಸೋಲಿಸು.


ಕೆಟ್ಟದ್ದನ್ನು ಮಾಡಿ ಶಿಕ್ಷೆಯನ್ನು ಅನುಭವಿಸುವುದಕ್ಕಿಂತ ದೇವರ ಚಿತ್ತವಾದರೆ, ಒಳ್ಳೆಯದನ್ನು ಮಾಡಿ ಶಿಕ್ಷೆಯನ್ನು ಅನುಭವಿಸುವುದೇ ಲೇಸು.


ಕೆಡುಕಿಗೆ ಪ್ರತಿಯಾಗಿ ಕೆಡುಕು ಮಾಡದೆ ಎಚ್ಚರದಿಂದಿರಿ. ಯಾವಾಗಲೂ ಒಬ್ಬರಿಗೊಬ್ಬರು ಮಾತ್ರವಲ್ಲದೆ ಎಲ್ಲರಿಗೂ ಹಿತವನ್ನೇ ಮಾಡಿರಿ.


ಮುಯ್ಯಿಗೆ ಮುಯ್ಯಿ ತೀರಿಸಬೇಡಿರಿ; ಶಾಪಕ್ಕೆ ಪ್ರತಿಶಾಪ ಹಾಕದೆ ಆಶೀರ್ವಾದ ಮಾಡಿರಿ. ಹೀಗೆ ಮಾಡಿದರೆ ದೇವರ ಆಶೀರ್ವಾದವನ್ನು ಬಾಧ್ಯವಾಗಿ ಪಡೆಯುವಿರಿ.


ಮಾಡಿದ ಮೇಲಿಗೆ ಕೇಡಿನ ಪ್ರತಿಫಲವೆ? ನನ್ನ ಪ್ರಾಣ ಹಿಡಿಯಲು ಗುಂಡಿಯನ್ನು ತೋಡಿದ್ದಾರೆ. ಅವರ ಮೇಲೆ ನಿಮಗಿದ್ದ ಕೋಪಾವೇಶವನ್ನು ಶಮನಗೊಳಿಸಲು ನಿಮ್ಮ ಮುಂದೆ ನಿಂತು ನಾನು ವಿನಂತಿಸಿದ್ದನ್ನು ನೆನಪಿಗೆ ತಂದುಕೊಳ್ಳಿ.


ಎಸಗಿಹರು ಉಪಕಾರಕೆ ಪ್ರತಿಯಾಗಿ ಅಪಕಾರ I ಎದುರಿಸುತಿಹರೀಗ ನಾ ಹಿಡಿದಿರುವ ಸನ್ಮಾರ್ಗ II


ಅಡಗಿಸು ಕೋಪವನು; ವರ್ಜಿಸು ಕ್ರೋಧವನು I ಕಿಡಿಕಿಡಿಯಾಗಬೇಡ, ತರುವುದದು ಕೇಡನು II


ಎಸಗುತಿಹರು ಉಪಕಾರಕೆ ಅಪಕಾರ I ಮಾಡಿಹರೆನ್ನನು ನಿರ್ಗತಿಕ ಪಿಂಜಾರ II


ಮೂರ್ಖರ ಮಕ್ಕಳು, ನೀಚ ಜಾತಿಯವರು ನಾಡಿನಿಂದ ಹೊರದೂಡಲ್ಪಟ್ಟವರು ಅವರಾಗಿದ್ದರು.


ಆಗ ದಾವೀದನು ತನ್ನ ಜನರಿಗೆ, “ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಳ್ಳಿ,” ಎಂದು ಆಜ್ಞಾಪಿಸಿದನು; ಅವರೆಲ್ಲರೂ ಕಟ್ಟಿಕೊಂಡರು. ದಾವೀದನೂ ಕಟ್ಟಿಕೊಂಡನು. ಹೆಚ್ಚುಕಡಿಮೆ ನಾನೂರುಮಂದಿ ದಾವೀದನ ಜೊತೆಯಲ್ಲಿ ಹೋದರು; ಇನ್ನೂರುಮಂದಿ ಸಾಮಾಗ್ರಿಗಳನ್ನು ಕಾಯುತ್ತಾ ಅಲ್ಲೇ ಇದ್ದರು.


ಅವರು ಪಟ್ಟಣಗಳನ್ನು ಬಿಟ್ಟು ಸ್ವಲ್ಪದೂರ ಹೋಗುವಷ್ಟರಲ್ಲಿ, ಜೋಸೆಫನು ತನ್ನ ಗೃಹನಿರ್ವಾಹಕನಿಗೆ, ‘ನೀನೆದ್ದು ಆ ಜನರನ್ನು ಹಿಂದಟ್ಟಿ ಹೋಗಿ ಹಿಡಿ. ಅವರಿಗೆ, ‘ನೀವು ಉಪಕಾರಕ್ಕೆ ಪ್ರತಿಯಾಗಿ ಏಕೆ ಅಪಕಾರ ಮಾಡಿದಿರಿ?


ನಿನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವ ಕೆಲಸ ನಡೆಯುತ್ತಿದೆಯೆಂಬ ಸುದ್ದಿಯನ್ನು ಕೇಳಿದ್ದೇನೆ. ನಿನ್ನ ಕುರುಬರು ನಮ್ಮೊಡನೆ ಕರ್ಮೆಲಿನಲ್ಲಿದ್ದ ಕಾಲವೆಲ್ಲಾ ನಾವು ಅವರನ್ನು ತೊಂದರೆಪಡಿಸಲಿಲ್ಲ; ಅವರಿಗೇನೂ ನಷ್ಟಮಾಡಲಿಲ್ಲ.


ಆ ಜನರು ನಮಗೆ ಬಹಳ ಉಪಕಾರ ಮಾಡಿದವರು; ನಾವು ಅವರೊಡನೆ ಅಡವಿಯಲ್ಲಿದ್ದ ಕಾಲವೆಲ್ಲಾ ಏನೂ ತೊಂದರೆಪಡಲಿಲ್ಲ, ನಷ್ಟಹೊಂದಲಿಲ್ಲ.


ಆಕೆ ಕತ್ತೆಯ ಮೇಲೆ ಕೂತು ಗುಡ್ಡದ ಮರೆಯಲ್ಲಿ ಹೋಗುತ್ತಿರುವಾಗ ದಾವೀದನೂ ಅವನ ಜನರೂ ಆ ಕಡೆಯಿಂದ ಗುಡ್ಡ ಇಳಿದು ಬಂದರು. ಆಕೆ ಅವರನ್ನು ಎದುರುಗೊಂಡಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು