Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 25:27 - ಕನ್ನಡ ಸತ್ಯವೇದವು C.L. Bible (BSI)

27 ನಿಮ್ಮ ದಾಸಿ ತಂದ ಈ ಕಾಣಿಕೆಯನ್ನು ಅಂಗೀಕರಿಸಿರಿ. ಅದು ತಮ್ಮ ಸೇವಕರಿಗೆ ಸಲ್ಲಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನಿನ್ನ ದಾಸಿಯು ತಂದ ಈ ಕಾಣಿಕೆಯನ್ನು ಸ್ವಾಮಿಯು ತಮ್ಮ ಸೇವಕರಿಗೆ ಸಲ್ಲಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ನಿನ್ನ ದಾಸಿಯು ತಂದ ಈ ಕಾಣಿಕೆಯು ಸ್ವಾವಿುಯ ಸೇವಕರಿಗೆ ಸಲ್ಲಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಈಗ ನಾನು ನಿನಗಾಗಿ ಈ ಕೊಡುಗೆಗಳನ್ನು ತಂದಿದ್ದೇನೆ. ನಿನ್ನನ್ನು ಹಿಂಬಾಲಿಸುತ್ತಿರುವ ನಿನ್ನ ಸೇವಕರಿಗೆ ದಯವಿಟ್ಟು ಇವುಗಳನ್ನು ಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಈಗ ನಿನ್ನ ದಾಸಿಯು ನನ್ನ ಒಡೆಯನಿಗೆ ತೆಗೆದುಕೊಂಡು ಬಂದ ಈ ಕಾಣಿಕೆಯು ನನ್ನ ಒಡೆಯನ ಹೆಜ್ಜೆಯಲ್ಲಿ ನಡೆಯುವವರಿಗೆ ಸಲ್ಲಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 25:27
8 ತಿಳಿವುಗಳ ಹೋಲಿಕೆ  

ದಾವೀದನು ಚಿಕ್ಲಗಿಗೆ ಬಂದನಂತರ ತನ್ನ ಸ್ನೇಹಿತರಾದ ಯೆಹೂದ ಹಿರಿಯರಿಗೆ ಕೊಳ್ಳೆಯ ಒಂದು ಭಾಗವನ್ನು ಕಳುಹಿಸಿದನು. “ಇಗೋ, ಸರ್ವೇಶ್ವರ ಶತ್ರುಗಳನ್ನು ಸೂರೆಮಾಡಿ ತಂದವುಗಳಲ್ಲಿ ಇದು ನಿಮಗೆ ಬಹುಮಾನವಾಗಿರಲಿ,” ಎಂದು ಹೇಳಿದನು.


ದೇವರ ಕೃಪೆಯಿಂದ ನನಗೆ ಬೇಕಾದುದೆಲ್ಲ ಇದೆ; ಆದಕಾರಣ ನಾನು ಸಮರ್ಪಿಸುವ ಕಾಣಿಕೆಯನ್ನು ತಾವು ದಯವಿಟ್ಟು ಅಂಗೀಕರಿಸಬೇಕು,” ಎಂದು ಹೇಳಿ ಒತ್ತಾಯಪಡಿಸಿದ್ದರಿಂದ ಏಸಾವನು ಆ ಕಾಣಿಕೆಯನ್ನು ತೆಗೆದುಕೊಂಡನು.


ಅನಂತರ ನಾಮಾನನು ತನ್ನ ಪರಿವಾರದವರೊಡನೆ ಹಿಂದಿರುಗಿ ದೈವಪುರುಷನ ಬಳಿಗೆ ಹೋಗಿ ಅವನ ಮುಂದೆ ನಿಂತನು. “ಇಸ್ರಯೇಲ್ ನಾಡಿನಲ್ಲಿರುವ ದೇವರ ಹೊರತು, ಲೋಕದಲ್ಲಿ ಬೇರೆ ದೇವರು ಇಲ್ಲವೇ ಇಲ್ಲವೆಂಬುದು ಈಗ ನನಗೆ ಗೊತ್ತಾಯಿತು; ತಾವು ದಯವಿಟ್ಟು ಈ ಕಾಣಿಕೆಯನ್ನು ಅಂಗೀಕರಿಸಬೇಕು,” ಎಂದು ಹೇಳಿದನು.


ಆದ್ದರಿಂದಲೇ, ನೀವು ವಾಗ್ದಾನಮಾಡಿದ ಕೊಡುಗೆಯನ್ನು ಸಂಗ್ರಹಿಸುವ ಏರ್ಪಾಡನ್ನು ಮಾಡುವಂತೆ ಈ ಸಹೋದರರನ್ನು ನಮಗೆ ಮುಂಚಿತವಾಗಿಯೇ ನಿಮ್ಮ ಬಳಿಗೆ ಕಳುಹಿಸುವುದು ಉಚಿತವೆಂದು ನನಗೆ ತೋಚಿತು. ಹೀಗೆ ಈ ಕೊಡುಗೆ ಬಲಾತ್ಕಾರವಾದ ವಸೂಲಿ ಆಗಿರದೆ ಮನಃಪೂರ್ವಕವಾಗಿ ಕೊಟ್ಟ ನಿಧಿ ಆಗಿರುತ್ತದೆ.


ಅರಸನು ಚೀಬನನ್ನು ನೋಡಿ, “ಇವುಗಳನ್ನು ಏಕೆ ತಂದೆ?” ಎಂದು ಕೇಳಿದನು. ಅವನು, “ಕತ್ತೆಗಳನ್ನು ಅರಸರ ಮನೆಯವರು ಸವಾರಿಮಾಡಲೆಂದು, ಹಣ್ಣು ರೊಟ್ಟಿಗಳನ್ನು ಆಳುಗಳು ತಿನ್ನಲೆಂದೂ ಹಾಗು ದ್ರಾಕ್ಷಾರಸವನ್ನು ಅರಣ್ಯದಲ್ಲಿ ದಣಿದವರು ಕುಡಿಯಲೆಂದು ತಂದಿದ್ದೇನೆ,” ಎಂದು ಉತ್ತರಕೊಟ್ಟನು.


ಅಲ್ಲದೆ ಬೇಗನೆ ಒಂದು ಕತ್ತೆಯನ್ನು ಹತ್ತಿ ತನ್ನ ಐದುಮಂದಿ ದಾಸಿಯರ ಸಹಿತವಾಗಿ ದಾವೀದನ ಸೇವಕರ ಜೊತೆಯಲ್ಲೆ ಹೊರಟುಹೋಗಿ ಅವನ ಹೆಂಡತಿಯಾದಳು.


ಬಾರಾಕನು ಜೆಬುಲೂನ್ಯರನ್ನೂ, ನಫ್ತಾಲ್ಯರನ್ನೂ ಕೆದೆಷಿಗೆ ಕರೆಸಿದನು. ಅವರಲ್ಲಿ ಹತ್ತುಸಾವಿರ ಮಂದಿ ಅವನ ಹೆಜ್ಜೆಹಿಡಿದು ಯುದ್ಧಕ್ಕೆ ಹೋದರು. ದೆಬೋರಳೂ ಹೋದಳು.


ಕಾಣಿಕೆ ತರುವವನಿಗೆ ಬಾಗಿಲು ತೆರೆಯುತ್ತದೆ; ಶ್ರೀಮಂತನ ಸಾನ್ನಿಧ್ಯಕ್ಕೂ ಅದು ನಡೆಸುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು