Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 25:31 - ಕನ್ನಡ ಸತ್ಯವೇದವು C.L. Bible (BSI)

31 ಆಗ ನಿರಪರಾಧಿಯ ರಕ್ತವನ್ನು ಸುರಿಸಿ ಸೇಡುತೀರಿಸಿಕೊಂಡದ್ದಕ್ಕಾಗಿ ವಿಷಾದ, ಪಶ್ಚಾತ್ತಾಪಗಳಿಗೆ ಕಾರಣವಿರುವುದಿಲ್ಲ. ಸರ್ವೇಶ್ವರ ನಿಮ್ಮನ್ನು ಮಹಾಪದವಿಗೆ ಏರಿಸುವಾಗ ನಿಮ್ಮ ದಾಸಿಯಾದ ನನ್ನನ್ನು ಮರೆತುಬಿಡಬೇಡಿ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ನಿರಪರಾಧಿಯ ರಕ್ತವನ್ನು ಸುರಿಸಿ ಮುಯ್ಯಿ ತೀರಿಸಿದ್ದರಿಂದ ಉಂಟಾಗುವ ಪಶ್ಚಾತ್ತಾಪ ಮನೋವ್ಯಥೆಗಳಿಗೆ ಕಾರಣವಿರುವುದಿಲ್ಲ. ಆತನೇ ನಿನ್ನನ್ನು ಮಹಾ ಪದವಿಗೆ ತರುವಾಗ ನಿನ್ನ ದಾಸಿಯಾದ ನನ್ನನ್ನು ಮರೆತುಬಿಡಬೇಡ” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ನಿರಪರಾಧಿಯ ರಕ್ತವನ್ನು ಸುರಿಸಿ ಮುಯ್ಯಿತೀರಿಸಿದ್ದರಿಂದುಂಟಾಗುವ ಪಶ್ಚಾತ್ತಾಪ ಮನೋವ್ಯಥೆಗಳಿಗೆ ಕಾರಣವಿರುವದಿಲ್ಲ. ಆತನು ನಿನ್ನನ್ನು ಮಹಾಪದವಿಗೆ ತರುವಾಗ ನಿನ್ನ ದಾಸಿಯಾದ ನನ್ನನ್ನು ಮರೆತುಬಿಡಬೇಡ ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ನಿರಪರಾಧಿಗಳ ರಕ್ತವನ್ನು ಸುರಿಸಿದ ಅಪರಾಧಕ್ಕೆ ನೀನು ಗುರಿಯಾಗುವುದಿಲ್ಲ; ನೀನು ಆ ಬಲೆಗೂ ಬೀಳುವುದಿಲ್ಲ. ನೀನು ಆ ಮಹಾಪದವಿಗೆ ಬಂದಾಗ ನನ್ನನ್ನು ಮರೆತುಬಿಡಬೇಡ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ನೀನು ಸುಮ್ಮನೆ ನಿರಪರಾಧಿಯ ರಕ್ತವನ್ನು ಸುರಿಸಿ ಮುಯ್ಯಿಗೆ ಮುಯ್ಯಿ ತೀರಿಸಿಕೊಂಡದ್ದರಿಂದ ಉಂಟಾಗುವ ಪಶ್ಚಾತ್ತಾಪ ಮನೋವ್ಯಥೆಗಳಿಗೆ ಕಾರಣವಿರುವದಿಲ್ಲ. ಆದರೆ ನನ್ನ ಒಡೆಯನನ್ನು ಯೆಹೋವ ದೇವರು ಚೆನ್ನಾಗಿ ನಡೆಸಿದಾಗ, ನಿನ್ನ ದಾಸಿಯನ್ನು ಜ್ಞಾಪಕಮಾಡಿಕೊಳ್ಳಬೇಕು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 25:31
13 ತಿಳಿವುಗಳ ಹೋಲಿಕೆ  

ಆದರೆ ನೀನು ಸುಖದಿಂದಿರುವಾಗ ನನ್ನನ್ನು ಮರೆಯದೆ ನನಗೊಂದು ಉಪಕಾರ ಮಾಡು. ಫರೋಹನಿಗೆ ನನ್ನ ವಿಷಯ ತಿಳಿಸಿ ನನ್ನನ್ನು ಈ ಸೆರೆಯಿಂದ ಬಿಡುಗಡೆಮಾಡು.


ಪ್ರಿಯರೇ, ಮುಯ್ಯಿಗೆ ಮುಯ್ಯಿ ತೀರಿಸಬೇಡಿ. ಅದನ್ನು ದೇವರಿಗೇ ಬಿಟ್ಟುಬಿಡಿ. ಏಕೆಂದರೆ, “ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ಎಲ್ಲರಿಗೂ ತಕ್ಕ ಪ್ರತಿಫಲವನ್ನು ಕೊಡುವವನು ನಾನೇ,” ಎಂಬ ಪ್ರಭುವಿನ ವಾಕ್ಯ ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ಲೋಕದ ಜನರೊಡನೆ, ವಿಶೇಷವಾಗಿ ನಿಮ್ಮೊಡನೆ ವ್ಯವಹರಿಸುವಾಗ ನಾವು ಕೇವಲ ಮಾನವ ಜ್ಞಾನವನ್ನಾಶ್ರಯಿಸದೆ ದೇವರ ಅನುಗ್ರಹವನ್ನೇ ಆಶ್ರಯಿಸಿ ನಡೆದುಕೊಂಡೆವು. ದೇವದತ್ತವಾದ ನಿಷ್ಕಪಟ ಮನಸ್ಸಿನಿಂದಲೂ ಪರಿಶುದ್ಧತೆಯಿಂದಲೂ ವರ್ತಿಸಿದೆವು. ಇದಕ್ಕೆ ನಮ್ಮ ಮನಸ್ಸೇ ಸಾಕ್ಷಿ. ಇದಕ್ಕಾಗಿ ನಾವು ಹೆಮ್ಮೆಪಡುತ್ತೇವೆ.


ಮಾಂಸವನ್ನು ತಿನ್ನುವುದಾಗಲಿ, ದ್ರಾಕ್ಷಾರಸವನ್ನು ಕುಡಿಯುವುದಾಗಲಿ, ಅಥವಾ ಇನ್ನಾವುದೇ ಆಗಲಿ, ನಿನ್ನ ಸಹೋದರನಿಗೆ ಪಾಪಕ್ಕೆ ಕಾರಣವಾಗುವುದಾದರೆ ಅದನ್ನು ಬಿಟ್ಟುಬಿಡುವುದೇ ಲೇಸು.


ಬಳಿಕ ಅವನು, “ಸ್ವಾಮಿ ಯೇಸುವೇ, ನೀವು ರಾಜ್ಯಾಧಿಕಾರದೊಡನೆ ಬರುವಾಗ ನನ್ನನ್ನು ಜ್ಞಾಪಿಸಿಕೊಳ್ಳಿ,” ಎಂದು ಬೇಡಿಕೊಂಡನು.


ಹೇ ಪ್ರಭು, ಮುಯ್ಯಿತೀರಿಸುವ ದೇವಾ I ಮುಯ್ಯಿತೀರಿಸಲು ಎದ್ದುಬಾರಯ್ಯಾ II


ನನ್ನ ಶತ್ರುಗಳಿಗೆ ವಿಧಿಸುವನಾ ದೇವ ಪ್ರತಿದಂಡನೆ ಜನಾಂಗಗಳನು ಅಧೀನಪಡಿಸುವನಾತ ನನಗೆ.


ಸರ್ವೇಶ್ವರ ಪ್ರತಿಯೊಬ್ಬನಿಗೂ ಅವನವನ ನೀತಿಸತ್ಯತೆಗಳಿಗೆ ಅನುಸಾರ ಫಲವನ್ನು ಕೊಡುವರು. ಅವರು ಈ ದಿನ ನಿಮ್ಮನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದರೂ ನೀವು ಸರ್ವೇಶ್ವರನ ಅಭಿಷಿಕ್ತರೆಂದು ನಾನು ನಿಮ್ಮ ಮೇಲೆ ಕೈಹಾಕಲಿಲ್ಲ.


ಅವರು ಕರ್ಮೆಲಿನಲ್ಲಿದ್ದ ಅಬೀಗೈಲಳ ಬಳಿಗೆ ಹೋಗಿ ಆಕೆಗೆ, “ದಾವೀದ ಅವರು ನಿನ್ನನ್ನು ತಮಗೆ ಹೆಂಡತಿಯಾಗುವುದಕ್ಕೆ ಕರೆದುಕೊಂಡು ಬರಬೇಕೆಂದು ನಮ್ಮನ್ನು ಕಳುಹಿಸಿದ್ದಾರೆ,” ಎಂದರು.


ಸ್ವಹಸ್ತದಿಂದ ಸೇಡುತೀರಿಸಿ ರಕ್ತಾಪರಾಧಕ್ಕೆ ಗುರಿಯಾಗದಂತೆ ನನ್ನನ್ನು ತಡೆದ ನೀನೂ ನಿನ್ನ ಜಾಣ್ಮೆಯೂ ಸ್ತುತ್ಯರ್ಹವೇ ಸರಿ.


ಸರ್ವೇಶ್ವರ ನ್ಯಾಯಾಧಿಪತಿಯಾಗಿ ನಮ್ಮಿಬ್ಬರ ವ್ಯಾಜ್ಯವನ್ನು ತೀರಿಸಲಿ; ಅವರೇ ನೋಡಿ ನನ್ನ ಪರವಾಗಿ ವಾದಿಸಿ ನನ್ನನ್ನು ನಿಮ್ಮ ಕೈಯಿಂದ ತಪ್ಪಿಸಲಿ,” ಎಂದು ಹೇಳಿದನು.


ಸರ್ವೇಶ್ವರ ನನ್ನ ಒಡೆಯರಾದ ನಿಮಗೆ ವಾಗ್ದಾನಮಾಡಿದ ಎಲ್ಲಾ ಸೌಭಾಗ್ಯವನ್ನು ದಯಪಾಲಿಸಿ, ನಿಮ್ಮನ್ನು ಇಸ್ರಯೇಲಿನ ಅರಸರನ್ನಾಗಿ ಮಾಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು