Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 26:15 - ಕನ್ನಡ ಸತ್ಯವೇದವು C.L. Bible (BSI)

15 ದಾವೀದನು ಅಬ್ನೇರನಿಗೆ, “ನೀನು ಶೂರನಲ್ಲವೇ? ಇಸ್ರಯೇಲರಲ್ಲಿ ನಿನಗೆ ಸಮನಾರು? ನೀನು ನಿನ್ನ ಒಡೆಯನಾದ ಅರಸನನ್ನು ಏಕೆ ಕಾಯಲಿಲ್ಲ? ಜನರಲ್ಲಿ ಒಬ್ಬನು ಒಳಗೆ ಹೊಕ್ಕು ನಿನ್ನ ಒಡೆಯನಾದ ಅರಸನನ್ನು ಕೊಲ್ಲಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ದಾವೀದನು ಅಬ್ನೇರನಿಗೆ, “ನೀನು ಶೂರನಲ್ಲವೋ? ಇಸ್ರಾಯೇಲರಲ್ಲಿ ನಿನಗೆ ಸಮಾನನಾದವನು ಯಾರು? ನೀನು ನಿನ್ನ ಒಡೆಯನಾದ ಅರಸನನ್ನು ಯಾಕೆ ಕಾಯಲಿಲ್ಲ. ಜನರಲ್ಲೊಬ್ಬನು ಒಳಕ್ಕೆ ಹೊಕ್ಕು ನಿನ್ನ ಒಡೆಯನಾದ ಅರಸನನ್ನು ಕೊಲ್ಲಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ದಾವೀದನು ಅಬ್ನೇರನಿಗೆ - ನೀನು ಶೂರನಲ್ಲವೋ? ಇಸ್ರಾಯೇಲ್ಯರಲ್ಲಿ ನಿನಗೆ ಸಮಾನರಾರು! ನೀನು ನಿನ್ನ ಒಡೆಯನಾದ ಅರಸನನ್ನು ಯಾಕೆ ಕಾಯಲಿಲ್ಲ? ಜನರಲ್ಲೊಬ್ಬನು ಒಳಗೆ ಹೊಕ್ಕು ನಿನ್ನ ಒಡೆಯನಾದ ಅರಸನನ್ನು ಕೊಲ್ಲಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ದಾವೀದನು, “ನೀನು ಶೂರನಲ್ಲವೇ? ಇಸ್ರೇಲಿನಲ್ಲಿನ ಇತರ ಶೂರರಿಗಿಂತಲೂ ನೀನು ಉತ್ತಮನಲ್ಲವೇ? ಹೀಗಿರುವಾಗ ನೀನು ನಿನ್ನ ಒಡೆಯನಾದ ರಾಜನನ್ನು ಏಕೆ ರಕ್ಷಿಸಲಿಲ್ಲ? ಒಬ್ಬ ಸಾಮಾನ್ಯ ಮನುಷ್ಯನು ನಿಮ್ಮ ಪಾಳೆಯಕ್ಕೆ ಬಂದಿದ್ದರೂ ನಿಮ್ಮ ಒಡೆಯನಾದ ರಾಜನನ್ನು ಕೊಲ್ಲುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ದಾವೀದನು ಅಬ್ನೇರನಿಗೆ, “ನೀನು ಪರಾಕ್ರಮಶಾಲಿಯಲ್ಲವೇ? ಇಸ್ರಾಯೇಲಿನಲ್ಲಿ ನಿನಗೆ ಸಮಾನನಾದವನು ಯಾರು? ಆದರೆ ನೀನು ನಿನ್ನ ಒಡೆಯನಾದ ಅರಸನನ್ನು ಕಾಯದೆ ಹೋದದ್ದೇನು? ಜನರಲ್ಲಿ ಒಬ್ಬನು ನಿನ್ನ ಒಡೆಯನಾದ ಅರಸನನ್ನು ಸಂಹರಿಸುವುದಕ್ಕೆ ಬಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 26:15
5 ತಿಳಿವುಗಳ ಹೋಲಿಕೆ  

ಅಲ್ಲಿಂದ, “ಅಬ್ನೇರನೇ, ನನ್ನ ಮಾತು ಕೇಳಿಸುತ್ತಿದ್ದೇಯೋ?” ಎಂದು ನೇರನ ಮಗನಾದ ಅಬ್ನೇರನಿಗೂ ಸೈನಿಕರಿಗೂ ಕೇಳಿಸುವಂತೆ ಕೂಗಿದನು. ಅಬ್ನೇರನು, “ಅರಸನನ್ನು ಕೂಗುವ ನೀನಾರು?” ಎಂದು ಕೇಳಿದನು.


ನೀನು ಹೀಗೆ ಮಾಡುವುದು ಸರಿಯಲ್ಲ. ಸರ್ವೇಶ್ವರನಾಣೆ, ಅವರ ಅಭಿಷಿಕ್ತನಾಗಿರುವ ನಿಮ್ಮ ಒಡೆಯನನ್ನು ಕಾಯದಿರುವ ನೀವು ಮರಣಕ್ಕೆ ಪಾತ್ರರೆಂಬುದೇನೋ ನಿಜ. ಅರಸನ ತಲೆಯ ಬಳಿಯಲ್ಲಿದ್ದ ಭರ್ಜಿ, ತಂಬಿಗೆ ಏನಾದವೋ, ನೋಡು,” ಎಂದು ಕೂಗಿ ಹೇಳಿದನು.


ಅರಸನು ತನ್ನ ಸೇವಕರಿಗೆ, “ಈ ದಿನ ಇಸ್ರಯೇಲರಲ್ಲಿ ಹತನಾದವನು ಒಬ್ಬ ಶ್ರೇಷ್ಠನಾಯಕ ಹಾಗು ಮಹಾಪುರುಷ ಆಗಿದ್ದನೆಂಬುದು ನಿಮಗೆ ಗೊತ್ತಿದೆ.


ಇದನ್ನು ಕೇಳಿದ ಬೇಲ್ತೆಶಚ್ಚರನೆಂದು ಹೆಸರುಗೊಂಡಿದ್ದ ದಾನಿಯೇಲನು ತುಸು ಹೊತ್ತು ಸ್ತಬ್ದನಾದ. ಅವನ ಬುದ್ಧಿಗೆ ಹೊಳೆದ ವಿಷಯ ಅವನಲ್ಲಿ ದಿಗಿಲನ್ನು ಉಂಟುಮಾಡಿತು. ರಾಜನು ಇದನ್ನು ಅರಿತು, “ಬೇಲ್ತೆಶಚ್ಚರನೇ, ನನ್ನ ಕನಸಾಗಲಿ, ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ,” ಎಂದು ಧೈರ್ಯಹೇಳಿದ. ಆಗ ಬೇಲ್ತೆಶಚ್ಚರನು: "ನನ್ನೊಡೆಯಾ, ಈ ಕನಸು ನಿನ್ನ ವೈರಿಗಳಿಗೆ ಬರಲಿ! ಅದರ ಅರ್ಥ ನಿನ್ನ ವಿರೋಧಿಗಳಿಗೆ ತಗಲಲಿ!


ಅನಂತರ ಆ ಮೂವರು ಶಿಷ್ಯರ ಬಳಿಗೆ ಬಂದು, ಅವರು ನಿದ್ರಿಸುತ್ತಿರುವುದನ್ನು ಕಂಡರು. ಪೇತ್ರನನ್ನು ಉದ್ದೇಶಿಸಿ, “ಏನಿದು, ಒಂದು ಗಂಟೆಯಾದರೂ ನನ್ನೊಡನೆ ಎಚ್ಚರವಾಗಿರಲು ನಿಮ್ಮಿಂದ ಆಗದೇ ಹೋಯಿತೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು