Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 26:23 - ಕನ್ನಡ ಸತ್ಯವೇದವು C.L. Bible (BSI)

23 ಸರ್ವೇಶ್ವರ ಪ್ರತಿಯೊಬ್ಬನಿಗೂ ಅವನವನ ನೀತಿಸತ್ಯತೆಗಳಿಗೆ ಅನುಸಾರ ಫಲವನ್ನು ಕೊಡುವರು. ಅವರು ಈ ದಿನ ನಿಮ್ಮನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದರೂ ನೀವು ಸರ್ವೇಶ್ವರನ ಅಭಿಷಿಕ್ತರೆಂದು ನಾನು ನಿಮ್ಮ ಮೇಲೆ ಕೈಹಾಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯೆಹೋವನು ಪ್ರತಿಯೊಬ್ಬನಿಗೂ ಅವನವನ ನೀತಿಸತ್ಯತೆಗಳಿಗೆ ಅನುಸಾರವಾಗಿ ಪ್ರತಿಫಲವನ್ನು ಕೊಡುವನು. ಆತನು ಈ ಹೊತ್ತು ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದರೂ, ನೀನು ಯೆಹೋವನ ಅಭಿಷಿಕ್ತನೆಂದು ನಾನು ನಿನ್ನ ಮೇಲೆ ಕೈಹಾಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಯೆಹೋವನು ಪ್ರತಿಯೊಬ್ಬನಿಗೂ ಅವನವನ ನೀತಿಸತ್ಯತೆಗಳಿಗನುಸಾರವಾದ ಫಲವನ್ನು ಕೊಡುವನು. ಆತನು ಈಹೊತ್ತು ನಿನ್ನನ್ನು ನನ್ನ ಕೈಗೆ ಒಪ್ಪಿಸಿ ಕೊಟ್ಟಿದ್ದರೂ ನೀನು ಯೆಹೋವನ ಅಭಿಷಿಕ್ತನೆಂದು ನಾನು ನಿನ್ನ ಮೇಲೆ ಕೈಹಾಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಪ್ರತಿಯೊಬ್ಬನಿಗೂ ಅವನ ಕಾರ್ಯಗಳಿಗೆ ಮತ್ತು ನಂಬಿಗಸ್ತಿಕೆಗೆ ತಕ್ಕಂತೆ ಯೆಹೋವನು ಪ್ರತಿಫಲ ಕೊಡುವನು. ಇಂದು ಯೆಹೋವನು ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದರೂ ಯೆಹೋವನಿಂದ ಅಭಿಷೇಕಿಸಲ್ಪಟ್ಟ ರಾಜನಾಗಿರುವ ನಿನಗೆ ನಾನು ಕೇಡನ್ನು ಮಾಡುವುದಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದರೆ ಯೆಹೋವ ದೇವರು ಪ್ರತಿಯೊಬ್ಬನಿಗೆ ಅವನ ನೀತಿಗೂ, ಅವನ ನಂಬಿಗಸ್ತಿಕೆಗೂ ತಕ್ಕ ಫಲವನ್ನು ಕೊಡಲಿ. ಯೆಹೋವ ದೇವರು ಈ ಹೊತ್ತು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟರು. ಆದರೆ ನಾನು ಯೆಹೋವ ದೇವರ ಅಭಿಷಿಕ್ತನ ಮೇಲೆ ನನ್ನ ಕೈ ಚಾಚಲು ಮನಸ್ಸಿಲ್ಲದೆ ಇದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 26:23
16 ತಿಳಿವುಗಳ ಹೋಲಿಕೆ  

ನಿನ್ನ ಪ್ರೀತಿ ಹೇ ಪ್ರಭು, ಅಚಲ ಹಿಮಾಚಲ I ಸರ್ವರಿಗು ನೀಡುವೆ ಕೃತ್ಯಕೆ ತಕ್ಕ ಫಲ II


ನನ್ನ ದೇವರೇ, ಇದನ್ನು ನನ್ನ ಹಿತಕ್ಕಾಗಿ ಸ್ಮರಿಸಿಕೊಳ್ಳಿ. ನಾನು ನನ್ನ ದೇವರ ಆಲಯದ ಮತ್ತು ಅದರ ಸೇವೆಯ ಸಂಬಂಧವಾಗಿ ಮಾಡಿದ ಭಕ್ತಿಕಾರ್ಯಗಳನ್ನು ನಿಮ್ಮ ನೆನಪಿನಿಂದ ಅಳಿಸಿಬಿಡಬೇಡಿ.


ಪರಲೋಕದಲ್ಲಿರುವ ನೀವು ಅದನ್ನು ಕೇಳಿ ನಿಮ್ಮ ದಾಸರಾದ ಭಕ್ತರ ವ್ಯಾಜ್ಯವನ್ನು ತೀರಿಸಿರಿ; ದುಷ್ಟನನ್ನು ಖಂಡಿಸಿ ಅವನ ತಪ್ಪನ್ನು ಅವನ ತಲೆಯ ಮೇಲೆಯೇ ಹೊರಿಸಿರಿ; ಅವನು ಅಪರಾಧಿಯೆಂದು ತೋರಿಸಿಕೊಡಿ; ನೀತಿವಂತನಿಗೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದು ತೋರಿಸಿಕೊಡಿ..


ತಮ್ಮ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತದಂತೆ ಸರ್ವೇಶ್ವರನೇ ನನ್ನನ್ನು ತಡೆಯಲಿ. ಈಗ ಬಾ, ಅವನ ತಲೆಯ ಬಳಿಯಲ್ಲಿರುವ ಭರ್ಜಿಯನ್ನೂ ತಂಬಿಗೆಯನ್ನೂ ತೆಗೆದುಕೊಂಡು ಹೋಗೋಣ,” ಎಂದು ಹೇಳಿದನು.


ಆದರೆ ದಾವೀದನು, “ಅವನನ್ನು ಕೊಲ್ಲಬೇಡ; ಸರ್ವೇಶ್ವರನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತುವ ಯಾವನೂ ನಿರಪರಾಧಿ ಎಂದು ಎಣಿಸಲ್ಪಡನು,” ಎಂದನು.


ಸರ್ವೇಶ್ವರನೇ ನಮ್ಮ ಉಭಯರ ವ್ಯಾಜ್ಯವನ್ನು ತೀರಿಸಲಿ; ಅವರೇ ನನಗಾಗಿ ನಿಮಗೆ ಮುಯ್ಯಿಸಲ್ಲಿಸಲಿ; ನಾನಂತೂ ನಿಮಗೆ ವಿರೋಧವಾಗಿ ಕೈಯೆತ್ತುವುದಿಲ್ಲ.


ಸರ್ವೇಶ್ವರ ನನ್ನನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟರೂ ನೀನು ನನ್ನನ್ನು ಕೊಲ್ಲಲಿಲ್ಲ. ಇದರಿಂದ ನೀನು ನನಗೆ ಹಿತವನ್ನೇ ಮಾಡುವಂಥವನೆಂಬುದು ಈ ದಿನ ಖಚಿತವಾಯಿತು.


ಯಾವನಾದರೂ ತನ್ನ ಕೈಗೆ ಸಿಕ್ಕಿದ ವೈರಿಯನ್ನು ಸುಕ್ಷೇಮದಿಂದ ಕಳುಹಿಸಿಬಿಡುತ್ತಾನೆಯೇ? ನೀನು ಈ ದಿನ ನನಗೆ ಮಾಡಿದ ಉಪಕಾರಕ್ಕಾಗಿ ಸರ್ವೇಶ್ವರ ನಿನಗೆ ಪ್ರತ್ಯುಪಕಾರಮಾಡಲಿ.


ದಾವೀದನು, “ಅರಸರೇ, ಇಗೋ, ನಿಮ್ಮ ಭರ್ಜಿ ಇಲ್ಲಿದೆ; ಸೇವಕರಲ್ಲೊಬ್ಬನು ಬಂದು ತೆಗೆದುಕೊಂಡು ಹೋಗಲಿ.


ನನಗೊಳಿತು ಮಾಡಿದನಾತ ಸನ್ನಡತೆಗೆ ತಕ್ಕಂತೆ ಪ್ರತಿಫಲವನಿತ್ತನು ನನ್ನ ಹಸ್ತಶುದ್ಧತೆಗೆ ತಕ್ಕ ಹಾಗೆ.


ನೀವು ನನ್ನ ತಂದೆ; ಇಗೋ ನೋಡಿ! ನನ್ನ ಕೈಯಲ್ಲಿ ನಿಮ್ಮ ನಿಲುವಂಗಿಯ ತುಂಡು ಇದೆ; ನಾನು ನಿಮ್ಮನ್ನು ಕೊಲ್ಲದೆ ನಿಮ್ಮ ನಿಲುವಂಗಿಯ ಮೂಲೆಯನ್ನು ಕತ್ತರಿಸಿಕೊಂಡೆನಷ್ಟೆ. ಇದರಿಂದ ನನ್ನಲ್ಲಿ ಯಾವ ದೋಷವೂ ಅಪರಾಧವೂ ಇರುವುದಿಲ್ಲ; ನಾನು ನಿಮಗೆ ವಿರೋಧವಾಗಿ ದ್ರೋಹಮಾಡಲಿಲ್ಲ ಎಂದು ತಿಳಿದುಕೊಳ್ಳಿ; ಆದರೂ ನೀವು ನನ್ನ ಪ್ರಾಣಕ್ಕೆ ಹೊಂಚು ಹಾಕುತ್ತಿರುವಿರಲ್ಲವೆ?


ನಾ ನೀತಿವಂತ, ನಿರಪರಾಧಿಯೆಂದರಿತು ನನಗಿತ್ತನಾ ಸರ್ವೇಶ್ವರ ತಕ್ಕ ಪ್ರತಿಫಲವನು.


ದೇವರು ನರನಿಗೆ ಅವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲವನ್ನೀಯುತ್ತಾನೆ ಪ್ರತಿಯೊಬ್ಬನು ಅವನವನ ಕರ್ಮಕ್ಕೆ ತಕ್ಕಂತೆ ಅನುಭವಿಸಮಾಡುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು