Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 26:24 - ಕನ್ನಡ ಸತ್ಯವೇದವು C.L. Bible (BSI)

24 ನಾನು ಈ ದಿನ ನಿಮ್ಮ ಜೀವವನ್ನು ಮಾನ್ಯವಾದದ್ದೆಂಣಿಸಿದಂತೆ ಸರ್ವೇಶ್ವರ ನನ್ನ ಜೀವವನ್ನೂ ಮಾನ್ಯವಾದದ್ದೆಂದೆಣಿಸಿ ನನ್ನನ್ನು ಎಲ್ಲ ಇಕ್ಕಟ್ಟಿನಿಂದ ಬಿಡಿಸಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನಾನು ಈ ಹೊತ್ತು ನಿನ್ನ ಜೀವವನ್ನು ಮಾನ್ಯವಾದದ್ದೆಂದು ಎಣಿಸಿದಂತೆ ಯೆಹೋವನು ನನ್ನ ಜೀವವನ್ನು ಮಾನ್ಯವಾದದ್ದೆಂದು ಎಣಿಸಿ, ಎಲ್ಲಾ ಇಕ್ಕಟ್ಟಿನಿಂದ ಬಿಡಿಸಲಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನಾನು ಈಹೊತ್ತು ನಿನ್ನ ಜೀವವನ್ನು ಮಾನ್ಯವಾದದ್ದೆಂದೆಣಿಸಿದಂತೆ ಯೆಹೋವನು ನನ್ನ ಜೀವವನ್ನೂ ಮಾನ್ಯವಾದದ್ದೆಂದೆಣಿಸಿ ನನ್ನನ್ನು ಎಲ್ಲಾ ಇಕ್ಕಟ್ಟಿನಿಂದ ಬಿಡಿಸಲಿ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನಿನ್ನ ಜೀವವು ನನಗೆ ಮುಖ್ಯವೆಂಬುದನ್ನು ಈ ದಿನ ನಾನು ನಿನಗೆ ತೋರಿಸಿದೆ! ಇದೇ ರೀತಿ, ನನ್ನ ಜೀವವು ತನಗೆ ಮುಖ್ಯವೆಂಬುದನ್ನು ಯೆಹೋವನು ತೋರಿಸುತ್ತಾನೆ! ಯೆಹೋವನು ನನ್ನನ್ನು ಎಲ್ಲಾ ಕೇಡುಗಳಿಂದಲೂ ರಕ್ಷಿಸುತ್ತಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಈ ದಿನ ನಿನ್ನ ಪ್ರಾಣವು ನನ್ನ ದೃಷ್ಟಿಗೆ ಹೇಗೆ ದೊಡ್ಡದಾಗಿತ್ತೋ, ಹಾಗೆಯೇ ನನ್ನ ಪ್ರಾಣವು ಯೆಹೋವ ದೇವರ ದೃಷ್ಟಿಗೆ ದೊಡ್ಡದಾಗಿರಲಿ. ಅವರು ನನ್ನನ್ನು ಎಲ್ಲಾ ಸಂಕಟದಿಂದ ತಪ್ಪಿಸಿಬಿಡಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 26:24
17 ತಿಳಿವುಗಳ ಹೋಲಿಕೆ  

ದಯಾವಂತರು ಭಾಗ್ಯವಂತರು; ದೇವರ ದಯೆ ಅವರಿಗೆ ದೊರಕುವುದು.


ಅದಕ್ಕೆ ನಾನು, “ಸ್ವಾಮೀ ನೀವೇ ಬಲ್ಲಿರಿ,” ಎಂದು ಉತ್ತರಕೊಟ್ಟೆ. ಆಗ ಆತನು ನನಗೆ ಹೀಗೆಂದನು : “ಇವರು ಆ ಭೀಕರ ಹಿಂಸೆಬಾಧೆಯನ್ನು ಅನುಭವಿಸಿ ಬಂದವರು. ತಮ್ಮ ನಿಲುವಂಗಿಗಳನ್ನು ಯಜ್ಞದ ಕುರಿಮರಿಯ ರಕ್ತದಿಂದ ತೊಳೆದು ಬಿಳುಪಾಗಿಸಿಕೊಂಡಿದ್ದಾರೆ.


ದುಷ್ಟರ ಹಾಗೂ ಕೆಡುಕರ ಬಲೆಗೆ ನಾವು ಬೀಳದಂತೆ ಪ್ರಾರ್ಥಿಸಿರಿ. ಏಕೆಂದರೆ, ವಿಶ್ವಾಸವೆಂಬುದು ಎಲ್ಲರಲ್ಲಿಯೂ ಇರುವುದಿಲ್ಲ.


ಅಲ್ಲಿ ಭಕ್ತಾದಿಗಳನ್ನು ದೃಢಪಡಿಸಿ ವಿಶ್ವಾಸದಲ್ಲಿ ನಿಷ್ಠರಾಗಿರುವಂತೆ ಪ್ರೋತ್ಸಾಹಿಸಿದರು. ‘ಕಷ್ಟಸಂಕಟಗಳ ಮೂಲಕ ನಾವು ದೇವರ ಸಾಮ್ರಾಜ್ಯವನ್ನು ಪ್ರವೇಶಿಸಬೇಕಾಗಿದೆ’ ಎಂದು ಬೋಧಿಸಿದರು.


ನೀವು ಇತರರ ಬಗ್ಗೆ ಕೊಡುವ ತೀರ್ಪಿಗೆ ಅನುಗುಣವಾಗಿಯೇ ದೇವರು ನಿಮಗೂ ತೀರ್ಪುಕೊಡುವರು. ಇತರರಿಗೆ ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದುಕೊಡುವರು.


ಆತನೇ ನನಗೆ ಬಂಡೆ, ಕೋಟೆ, ದುರ್ಗ, ಉದ್ಧಾರಕ I ನನಗೆ ರಕ್ಷಾಕವಚ, ಆಶ್ರಯ, ಶತ್ರು ವಿಧ್ವಂಸಕ II


ಎಂತಲೆ ಸ್ವಂತ ಇಚ್ಛೆಯಿಂದ ಬಲಿಯನರ್ಪಿಸುವೆ ನಿನಗೆ I ಧನ್ಯವಾದ ಪ್ರಭು, ನಿನ್ನ ಸರ್ವೋತ್ತಮ ನಾಮಕೆ II


ಶತ್ರುಗಳಿಂದ ನೀನೆನ್ನ ಮುಕ್ತಗೊಳಿಸಿದೆ I ಎದುರಾಳಿಗೆ ತಪ್ಪಿಸಿ ನನ್ನನ್ನುನ್ನತಿಗೇರಿಸಿದೆ I ಹಿಂಸಾತ್ಮಕರಿಂದ ನೀಯೆನ್ನ ಸಂರಕ್ಷಿಸಿದೆ II


ಕರುಣೆಯುಳ್ಳವನಿಗಾತ ಕರುಣಾಮಯಿ I ದೋಷರಹಿತನಿಗಾತ ನಿರ್ದೋಷಿ II


ಪ್ರಭುವೇ, ನೀನೆ ನನ್ನ ಬಲವು I ನನಗಿದೆ ನಿನ್ನಲೇ ಒಲವು II


ಸಕಲ ಆಪತ್ತು ಕೇಡುಗಳಿಂದ ನನ್ನನ್ನು ಕಾಪಾಡಿಕೊಂಡು ಬಂದ ಆ ದೂತನು, ಈ ಹುಡುಗರನ್ನು ಆಶೀರ್ವದಿಸಲಿ! ಅವರ ಮುಖಾಂತರ ನನ್ನ ಹೆಸರೂ ನನ್ನ ಪಿತೃಗಳಾದ ಅಬ್ರಹಾಮ್ - ಇಸಾಕರ ಹೆಸರೂ ಊರ್ಜಿತಗೊಳ್ಳಲಿ; ಧರೆಯಲ್ಲಿ ಇವರು ದೊಡ್ಡ ಜನಸ್ತೋಮವಾಗಿ ಬೆಳೆಯಲಿ!”


ಫಿಲಿಷ್ಟಿಯ ರಾಜರು ಯುದ್ಧಕ್ಕೆ ಬಂದಾಗಲೆಲ್ಲ ಸೌಲನ ಸೇನಾಪತಿಗಳಲ್ಲಿ ದಾವೀದನೇ ಅತ್ಯಧಿಕ ಜಯಶೀಲನಾಗಿ ಹಿಂದಿರುಗುತ್ತಿದ್ದನು. ಈ ಕಾರಣ ಅವನ ಹೆಸರು ಸುಪ್ರಸಿದ್ಧವಾಯಿತು.


ದಾವೀದನ ಮಾತುಗಳು ಮುಗಿದನಂತರ ಸೌಲನು, “ದಾವೀದನೇ, ನನ್ನ ಮಗನೇ, ಇದು ನಿಜವಾಗಿಯೂ ನಿನ್ನ ಸ್ವರವೇ?” ಎಂದು ಗಟ್ಟಿಯಾಗಿ ಅತ್ತನು.


ದಾವೀದನು ಬೇರೋತಿನ ರಿಮ್ಮೋನನ ಮಕ್ಕಳು ಆದ ಆ ರೇಕಾಬ್ ಹಾಗು ಬಾಣ ಎಂಬವರಿಗೆ,


ಕಾಪಾಡುವನು ಅವನೆಲಬುಗಳೆಲ್ಲವನ್ನೂ I ಮುರಿಯಬಿಡನು ಪ್ರಭು ಅವುಗಳಲ್ಲೊಂದನ್ನೂ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು