Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 27:10 - ಕನ್ನಡ ಸತ್ಯವೇದವು C.L. Bible (BSI)

10 ಆಕೀಷನು, “ಈ ಹೊತ್ತು ಯಾವ ಪ್ರಾಂತ್ಯದವರನ್ನು ಸೂರೆಮಾಡಿಕೊಂಡು ಬಂದಿರಿ?” ಎಂದು ಕೇಳುತ್ತಿದ್ದನು. ದಾವೀದನು ಅವನಿಗೆ, ದಕ್ಷಿಣ ಪ್ರಾಂತ್ಯದಲ್ಲಿರುವ ಯೆಹೂದ್ಯರು, ಎರಹ್ಮೇಲ್ಯರು, ಕೇನ್ಯರು ಇವರಲ್ಲಿ ಯಾರ ಹೆಸರನ್ನಾದರೂ ಹೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಕೀಷನು ಅವನನ್ನು “ಈ ಹೊತ್ತು ಯಾವ ಪ್ರಾಂತ್ಯದವರನ್ನು ಸೂರೆಮಾಡಿಕೊಂಡು ಬಂದಿರಿ” ಎಂದು ಕೇಳುವನು. ದಾವೀದನು ಅವನಿಗೆ “ದಕ್ಷಿಣ ಪ್ರಾಂತ್ಯದಲ್ಲಿರುವ ಯೆಹೂದ್ಯರು, ಎರಹ್ಮೇಲ್ಯರು ಕೇನ್ಯರು ಇವರಲ್ಲಿ ಯಾರ ಹೆಸರನ್ನಾದರೂ” ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಕೀಷನು ಅವನನ್ನು - ಈಹೊತ್ತು ಯಾವ ಪ್ರಾಂತದವರನ್ನು ಸೂರೆಮಾಡಿಕೊಂಡು ಬಂದಿರಿ ಎಂದು ಕೇಳುವನು. ದಾವೀದನು ಅವನಿಗೆ - ದಕ್ಷಿಣಪ್ರಾಂತದಲ್ಲಿರುವ ಯೆಹೂದ್ಯರು, ಎರಹ್ಮೇಲ್ಯರು, ಕೇನ್ಯರು ಇವರಲ್ಲಿ ಯಾರ ಹೆಸರನ್ನಾದರೂ ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದಾವೀದನು ಅನೇಕ ಸಲ ಹೀಗೆ ಮಾಡಿದನು. ಪ್ರತಿಸಲವೂ ಆಕೀಷನು ದಾವೀದನನ್ನು, “ನೀನು ಎಲ್ಲಿ ಯುದ್ಧಮಾಡಿದೆ ಮತ್ತು ಇವುಗಳನ್ನು ಎಲ್ಲಿಂದ ತಂದೆ” ಎಂದು ಕೇಳುತ್ತಿದ್ದನು. ದಾವೀದನು, “ನಾನು ಯೆಹೂದ ದೇಶದ ದಕ್ಷಿಣ ಭಾಗದ ವಿರುದ್ಧ ಯುದ್ಧಮಾಡಿದೆ” ಎಂದಾಗಲಿ, “ನಾನು ಎರಹ್ಮೇಲ್ಯರ ದಕ್ಷಿಣಭಾಗದ ವಿರುದ್ಧ ಯುದ್ಧಮಾಡಿದೆ” ಎಂದಾಗಲೀ “ನಾನು ಕೇನ್ಯರ ದಕ್ಷಿಣ ಭಾಗದ ವಿರುದ್ಧ ಯುದ್ಧಮಾಡಿದೆ” ಎಂದಾಗಲೀ ಹೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಆಕೀಷನು, “ಈ ಹೊತ್ತು ಎಲ್ಲಿ ಸುಲಿದುಕೊಂಡಿರಿ?” ಎಂದಾಗ ದಾವೀದನು, “ನಾವು ಯೆಹೂದದ ದಕ್ಷಿಣ ಸೀಮೆಯ ಮೇಲೆಯೂ, ಯೆರಹ್ಮೇಲ್ಯರ ದಕ್ಷಿಣ ಸೀಮೆಯ ಮೇಲೆಯೂ, ಕೇನ್ಯರ ದಕ್ಷಿಣ ಸೀಮೆಯ ಮೇಲೆಯೂ ಬಿದ್ದೆವು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 27:10
21 ತಿಳಿವುಗಳ ಹೋಲಿಕೆ  

ಕೇನ್ಯನೂ ಮೋಶೆಯ ಮಾವನೂ ಆದ ಹೋಬಾಬನ ವಂಶದವರು ಖರ್ಜೂರ ನಗರದಿಂದ ಹೊರಟು ಯೆಹೂದ ಕುಲದವರ ಜೊತೆಯಲ್ಲಿ ಆರಾದಿನ ದಕ್ಷಿಣದಲ್ಲಿರುವ ಯೆಹೂದ ಮರುಭೂಮಿಗೆ ಬಂದು ಅಲ್ಲಿಯ ಜನರ ಸಂಗಡ ವಾಸಮಾಡಿದರು.


ಹೆಚ್ರೋನನ ಚೊಚ್ಚಲ ಮಗ ಯೆರಹ್ಮೇಲನಿಗೆ ಐದು ಜನ ಮಕ್ಕಳು ಇದ್ದರು. ಅವರು - ಹಿರಿಯವನಾದ ರಾಮ್ ಮತ್ತು ಬೂನ, ಓರೆನ್, ಓಚೆಮ್, ಹಾಗೂ ಅಹೀಯ ಎಂಬವರು.


ಹೆಚ್ರೋನನಿಗೆ ಮೂರು ಜನ ಮಕ್ಕಳು ಇದ್ದರು. ಅವರು - ಯೆರಹ್ಮೇಲ್, ರಾಮ್ ಮತ್ತು ಕೆಲೂಬಾಯ್ ಎಂಬವರು.


ರಾಕಾಲಿನವರು, ಎರಹ್ಮೇಲ್ಯರು, ಕೇನ್ಯರು,


ಕೇನ್ಯನಾದ ಹೆಬೆರನು ಮೋಶೆಯ ಮಾವ ಹೋಬಾಬನ ವಂಶದ ಉಳಿದ ಕೇನ್ಯರನ್ನು ಬಿಟ್ಟು ಕೆದೆಷಿನ ಹತ್ತಿರ ಇರುವ ‘ಚಾನನ್ನೀಮ್’ ಎಂಬ ಊರಿನ ಏಲೋನ್ ವೃಕ್ಷದವರೆಗೆ ಬಂದು ಅಲ್ಲಿ ಗುಡಾರ ಹಾಕಿಕೊಂಡಿದ್ದನು.


ಆದುದರಿಂದ, ಸುಳ್ಳಾಡುವುದನ್ನು ಬಿಟ್ಟುಬಿಡಿ. ಒಬ್ಬರೊಡನೊಬ್ಬರು ಸತ್ಯವನ್ನೇ ನುಡಿಯಿರಿ. ಏಕೆಂದರೆ, ನಾವೆಲ್ಲರೂ ಒಂದೇ ಶರೀರದ ಅಂಗಗಳು.


ಮಾನವರಿಗೆ ಹೆದರಿ ನಡೆವವನು ಬಲೆಗೆ ಸಿಕ್ಕಿಬೀಳುವನು; ಸರ್ವೇಶ್ವರನಲ್ಲಿ ನಂಬಿಕೆಯಿಟ್ಟವನು ಸಂರಕ್ಷಣೆ ಹೊಂದುವನು.


ಹಿಡಿಸದು ಎನಗೆ ಮಿಥ್ಯವಾದುದು, ಅದು ಎನಗೆ ಅಸಹ್ಯ I ನಿನ್ನ ಧರ್ಮಶಾಸ್ತ್ರವಾದರೋ ನನಗೆ ಸುಪ್ರಿಯ II


ಮಿಥ್ಯಮಾರ್ಗವನು ನನಗೆ ದೂರಮಾಡಯ್ಯಾ I ಧರ್ಮಶಾಸ್ತ್ರವನು ಎನಗೆ ಅನುಗ್ರಹಿಸಯ್ಯಾ II


ಅಬ್ಷಾಲೋಮನ ಸೇವಕರು ಆ ಸ್ತ್ರೀಯ ಮನೆಗೆ ಹೋಗಿ, “ಅಹೀಮಾಚ್ ಮತ್ತು ಯೋನಾತಾನರೆಲ್ಲಿ?” ಎಂದು ಆಕೆಯನ್ನು ಕೇಳಿದ್ದಕ್ಕೆ ಆಕೆ, ” ಅವರು ಹಳ್ಳದಾಟಿ ಹೋಗಿಬಿಟ್ಟರು,” ಎಂದು ಉತ್ತರಕೊಟ್ಟಳು. ಸೇವಕರು ಅವರನ್ನು ಹುಡುಕುವುದಕ್ಕೆ ಹೋಗಿ ಕಾಣದೆ ಜೆರುಸಲೇಮಿಗೆ ಹಿಂದಿರುಗಿದರು.


ಅದೇ ವೇಳೆಗೆ ದೂತನೊಬ್ಬನು ಸೌಲನ ಬಳಿಗೆ ಬಂದು, “ಬೇಗ ಬನ್ನಿ, ಫಿಲಿಷ್ಟಿಯರು ನಾಡಿನೊಳಕ್ಕೆ ನುಗ್ಗಿದ್ದಾರೆ,” ಎಂದು ತಿಳಿಸಿದನು.


ಅವನು, “ಅರಸರು ಒಂದು ಕೆಲಸವನ್ನು ಆಜ್ಞಾಪಿಸಿ ಇದನ್ನು ಯಾರಿಗೂ ತಿಳಿಸಬಾರದೆಂದು ಕಟ್ಟಪ್ಪಣೆಮಾಡಿ ನನ್ನನ್ನು ಕಳುಹಿಸಿದ್ದಾರೆ. ನನ್ನ ಆಳುಗಳು ಇಂಥಿಂಥ ಸ್ಥಳದಲ್ಲಿ ನನ್ನನ್ನು ಸಂಧಿಸಬೇಕೆಂದು ಗೊತ್ತುಮಾಡಿದ್ದೇನೆ.


ಆದರೆ ಕೇನ್ಯರಿಗೆ ಅವನು, “ನೀವು ಅಮಾಲೇಕ್ಯರನ್ನು ಬಿಟ್ಟುಹೋಗಿ; ಇಲ್ಲವಾದರೆ ನೀವೂ ಅವರೊಡನೆ ನಾಶವಾದೀರಿ; ಇಸ್ರಯೇಲರು ಈಜಿಪ್ಟಿನಿಂದ ಬರುತ್ತಿದ್ದಾಗ ನೀವು ಅವರಿಗೆ ದಯೆತೋರಿಸಿದಿರ ಅಲ್ಲವೆ?” ಎಂದು ಹೇಳಿ ಕಳುಹಿಸಿದನು. ಅದರಂತೆಯೇ ಅವರು ಅಮಾಲೇಕ್ಯರನ್ನು ಬಿಟ್ಟುಹೋದರು.


ಗುಡಾರಗಳಲಿ ವಾಸಿಸುವ ಸ್ತ್ರೀಯರಲ್ಲಿ ಯಾಯೇಲಳೆ ಭಾಗ್ಯವತಿ, ಹೌದು, ಅವಳೇ ಭಾಗ್ಯವತಿ, ಕೇನ್ಯನಾದ ಹೆಬೆರನ ಆ ಹೆಂಡತಿ.


ಬಳಿಕ ಕೇನ್ಯರನ್ನು ನೋಡಿ ಅವರ ವಿಷಯದಲ್ಲಿ ಇಂತೆಂದು ನುಡಿದನು: “ನಿಮ್ಮ ನಿವಾಸಸ್ಥಳ ಸುರಕ್ಷಿತ ಬೆಟ್ಟದ ತುತ್ತತುದಿಯಲ್ಲಿ ಗೂಡು ಕಟ್ಟಿಕೊಂಡಷ್ಟು ಸುರಕ್ಷಿತ


ಆದರೂ ಮರಳಿ, “ನೀನು ನಿಶ್ಚಯವಾಗಿ ನನ್ನ ಮಗ ಏಸಾವನೋ” ಎಂದು ಕೇಳಿದನು. ಯಕೋಬನು “ಹೌದು,” ಎಂದು ಉತ್ತರಕೊಟ್ಟನು.


ದಾವೀದನು ತನ್ನ ಕೃತ್ಯವನ್ನು ಜನರು ಹರಡಬಹುದೆಂದು ನೆನೆಸಿ ಅವನು ಯಾರನ್ನೂ ಗತ್ ಊರಿಗೆ ತಾರದೆ ಸ್ತ್ರೀಪುರುಷರನ್ನೆಲ್ಲ ಅಲ್ಲೇ ಕೊಂದುಹಾಕುತ್ತಿದ್ದನು. ಅವನು ಫಿಲಿಷ್ಟಿಯರ ದೇಶದಲ್ಲಿ ವಾಸವಾಗಿದ್ದ ಅವಧಿಯಲ್ಲಿ ಇದೇ ರೀತಿ ಮಾಡುತ್ತಿದ್ದನು.


ದಾವೀದನು ಆಕೀಷನಿಗೆ, “ನಾನೇನು ಮಾಡಿದೆ? ನಿಮ್ಮ ಸೇವಕನಾದ ನಾನು ನಿಮ್ಮ ಬಳಿಗೆ ಬಂದಂದಿನಿಂದ ಇಂದಿನವರೆಗೂ ನನ್ನಲ್ಲಿ ಯಾವ ಅಪರಾಧವನ್ನು ಕಂಡಿರಿ? ರಾಜರಾದ ನನ್ನ ಒಡೆಯರ ಜೊತೆಯಲ್ಲಿ ಹೋಗಿ ಅವರ ಶತ್ರುಗಳೊಡನೆ ನಾನೇಕೆ ಯುದ್ಧಮಾಡಬಾರದು? ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು