Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 27:8 - ಕನ್ನಡ ಸತ್ಯವೇದವು C.L. Bible (BSI)

8 ಈ ಅವಧಿಯಲ್ಲಿ ಅವನು ಮತ್ತು ಅವನ ಜನರು ಗೆಷೂರ್ಯರ ಮೇಲೆ, ಗಿಜ್ರೀಯರ ಮೇಲೆ ಹಾಗು ಅಮಾಲೇಕ್ಯರ ಮೇಲೆ ದಾಳಿಮಾಡುತ್ತಿದ್ದರು. ಇವರುಗಳ ಪ್ರಾಂತ್ಯಗಳು ತೇಲಾಮಿನಿಂದ ಶೂರಿನವರೆಗೂ ಹಾಗು ಈಜಿಪ್ಟಿನವರೆಗೂ ವಿಸ್ತರಿಸಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆ ಕಾಲದಲ್ಲಿ ಅವನೂ, ಅವನ ಜನರೂ ತೇಲಾಮಿನಿಂದ ಶೂರಿನವರೆಗೂ, ಐಗುಪ್ತ ದೇಶದವರೆಗೂ ವಿಸ್ತರಿಸಿಕೊಂಡಿರುವ ಪ್ರಾಂತ್ಯಗಳಲ್ಲಿ ವಾಸಿಸುತ್ತಿರುವ ಗೆಷೂರ್ಯರು, ಗಿಜ್ರೀಯರು, ಅಮಾಲೇಕ್ಯರು ಇವರ ಮೇಲೆ ಆಕ್ರಮಣ ಮಾಡಿ ಸುಲಿದುಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಈ ಕಾಲದಲ್ಲಿ ಅವನೂ ಅವನ ಜನರೂ ತೇಲಾವಿುನಿಂದ ಶೂರಿನವರೆಗೂ ಐಗುಪ್ತ ದೇಶದವರೆಗೂ ವಿಸ್ತರಿಸಿಕೊಂಡಿರುವ ಪ್ರಾಂತಗಳಲ್ಲಿ ವಾಸಿಸುತ್ತಿರುವ ಗೆಷೂರ್ಯರು, ಗಿಜ್ರೀಯರು, ಅಮಾಲೇಕ್ಯರು ಇವರ ಮೇಲೆ ಬಿದ್ದು ಸುಲುಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ದಾವೀದನು ಮತ್ತು ಅವನ ಜನರು ಅಮಾಲೇಕ್ಯರ ಮೇಲೆಯೂ ಗೆಷೂರ್ಯರ ಮೇಲೆಯೂ ಗಿಜ್ರೀಯರ ಮೇಲೆಯೂ ಯುದ್ಧಮಾಡಲು ಹೋದರು. ದಾವೀದನ ಜನರು ಅವರನ್ನು ಸೋಲಿಸಿ ಅವರ ಸಂಪತ್ತನ್ನು ವಶಪಡಿಸಿಕೊಂಡರು. ಈಜಿಪ್ಟಿನವರೆಗೆ ವಿಸ್ತರಿಸಿರುವ ಶೂರಿನ ಸಮೀಪದ ತೇಲಾಮಿನವರೆಗೂ ಆ ಜನರು ವಾಸಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ದಾವೀದನೂ, ಅವನ ಜನರೂ ಶೂರಿಗೆ ಹೋಗುವ ಮೇರೆಯಿಂದ ಈಜಿಪ್ಟಿನವರೆಗೂ ಇರುವ ಸೀಮೆಯಲ್ಲಿ ಪೂರ್ವದಿಂದ ವಾಸಿಸಿರುವವರಾದ ಗೆಷೂರ್ಯರ ಮೇಲೆಯೂ ಗಿಜ್ರೀಯರ ಮೇಲೆಯೂ ಅಮಾಲೇಕ್ಯರ ಮೇಲೆಯೂ ದಂಡೆತ್ತಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 27:8
22 ತಿಳಿವುಗಳ ಹೋಲಿಕೆ  

ಅವು ಯಾವುವೆಂದರೆ - ಈಜಿಪ್ಟಿನ ಈಚೆಯಿರುವ ಶೀಹೋರ್ ನದಿಯಿಂದ ಕಾನಾನ್ಯರಿಗೆ ಸೇರಿದ ಉತ್ತರ ಮೇರೆಯಾದ ಎಕ್ರೋನಿನವರೆಗಿರುವ ಗಾಜಾ, ಅಷ್ಡೋದ್, ಅಷ್ಕೆಲೋನ್, ಗತೂರ್, ಎಕ್ರೋನ್ ಎಂಬ ನಗರಗಳ ಐದು ಮಂದಿ ಫಿಲಿಷ್ಟಿಯ ಪ್ರಭುಗಳ ಸ್ವಾಧೀನದಲ್ಲಿದ್ದಂಥ ಫಿಲಿಷ್ಟಿಯ ಪ್ರಾಂತ್ಯ;


ಇಸ್ರಯೇಲರು ಗೆಷೂರ್ಯರನ್ನೂ ಮಾಕತೀಯರನ್ನೂ ನಾಡಿನೊಳಗಿಂದ ಅಟ್ಟಿಬಿಡಲಿಲ್ಲ. ಅವರು ಇಂದಿನವರೆಗೂ ಇಸ್ರಯೇಲರ ಮಧ್ಯದಲ್ಲೇ ಇದ್ದಾರೆ.


ಎಫ್ರಯಿಮ್ ಕುಲದವರು ಗೆಜೆರಿನಲ್ಲಿದ್ದ ಕಾನಾನ್ಯರನ್ನು ಹೊರಡಿಸಿಬಿಡಲಿಲ್ಲ. ಆದುದರಿಂದ ಅವರು ಅವರ ನಡುವೆಯೇ ವಾಸಿಸಿದರು.


ಅವರು ಗೆಜೆರಿನಲ್ಲಿದ್ದ ಕಾನಾನ್ಯರನ್ನು ಹೊರಡಿಸದೆ ಹೋದುದರಿಂದ ಅವರು ಇಂದಿಗೂ ಎಫ್ರಯಿಮ್ಯರ ನಡುವೆ ಊಳಿಗದವರಾಗಿದ್ದುಕೊಂಡು ಅವರಿಗೆ ಸೇವೆಮಾಡುತ್ತಾರೆ.


ಆದರೆ ಗೆಷೂರ್ಯರ ಮತ್ತು ಅರಾಮ್ಯರ ರಾಜ್ಯಗಳವರು ಯಾಯೀರನ ಹಾಗೂ ಕೆನತ್ ಪ್ರಾಂತ್ಯದ ಗ್ರಾಮಗಳನ್ನೂ ಅವುಗಳ ಸಮೀಪದ ಪಟ್ಟಣಗಳನ್ನೂ ಸೇರಿ ಒಟ್ಟು ಅರುವತ್ತು ಪಟ್ಟಣಗಳನ್ನು ಗೆದ್ದುಕೊಂಡರು. ಅಲ್ಲಿ ವಾಸಿಸಿದ್ದ ಎಲ್ಲಾ ಜನರೂ ಗಿಲ್ಯಾದನ ತಂದೆ ಮಾಕೀರನ ವಂಶಜರೇ ಆಗಿದ್ದರು.


ನಿಮ್ಮ ಸೇವಕನಾದ ನಾನು ಸಿರಿಯಾದೇಶದ ಗೆಷೂರಿನಲ್ಲಿದ್ದಾಗ ಸರ್ವೇಶ್ವರ ನನ್ನನ್ನು ಮರಳಿ ಜೆರುಸಲೇಮಿಗೆ ಬರಮಾಡುವುದಾದರೆ ಅವರಿಗೆ ಒಂದು ವಿಶೇಷ ಆರಾಧನೆ ಮಾಡಿಸುವೆನೆಂದು ಹರಕೆ ಮಾಡಿದ್ದೆನು,” ಎಂದು ವಿಜ್ಞಾಪಿಸಿದನು.


ಅಬ್ಷಾಲೋಮನು, “ನಾನು ಗೆಷೂರಿನಿಂದ ಇಲ್ಲಿಗೆ ಬಂದದ್ದೇಕೆ? ಅಲ್ಲೇ ಇದ್ದಿದ್ದರೆ ಒಳ್ಳೇದಾಗುತ್ತಿತ್ತಲ್ಲವೇ?’ ಎಂದು ನಿನ್ನ ಮುಖಾಂತರ ಅರಸನಿಗೆ ತಿಳಿಸುವುದಕ್ಕಾಗಿ ನಿನ್ನನ್ನು ಕರೇಕಳುಹಿಸಿದೆ; ನಾನು ಹೇಗೂ ಅರಸನ ಮುಖವನ್ನು ನೋಡಬೇಕು; ನಾನು ಅಪರಾಧಿ ಆಗಿದ್ದರೆ ಅವರು ನನ್ನನ್ನು ಕೊಲ್ಲಿಸಲಿ,” ಎಂದನು.


ಬಳಿಕ ಎದ್ದು ಗೆಷೂರಿಗೆ ಹೋಗಿ ಅಬ್ಷಾಲೋಮನನ್ನು ಜೆರೂಸ‍ಲೇಮಿಗೆ ಕರೆದುಕೊಂಡು ಬಂದನು.


ದಾವೀದನೂ ಅವನ ಜನರೂ ಮಾರನೆಯ ದಿನ ಚಿಕ್ಲಗ್ ಊರನ್ನು ಸೇರಿದರು. ಅಷ್ಟರೊಳಗೆ ಅಮಾಲೇಕ್ಯರು ದಂಡೆತ್ತಿ ದಕ್ಷಿಣಪ್ರಾಂತ್ಯಕ್ಕೂ ಚಿಕ್ಲಗ್ ಊರಿಗೂ ಬಂದು ಚಿಕ್ಲಗ್ ಊರನ್ನು ಸುಟ್ಟು ಹಾಳುಮಾಡಿದ್ದರು.


ಅಮಾಲೇಕ್ಯರು ರೆಫೀದೀಮಿನಲ್ಲಿ ಇಸ್ರಯೇಲರ ಮೇಲೆ ಯುದ್ಧಮಾಡುವುದಕ್ಕೆ ಬಂದರು.


ಬಳಿಕ ಮೋಶೆ ಇಸ್ರಯೇಲರನ್ನು ಕೆಂಪು ಸಮುದ್ರದ ಬಳಿಯಿಂದ ಕರೆದುಕೊಂಡು ಹೋದನು. ಅವರು ಶೂರ್ ಮರುಭೂಮಿಯಲ್ಲಿ ಮೂರು ದಿನ ಪ್ರಯಾಣ ಮಾಡಬೇಕಾಯಿತು. ಅಲ್ಲಿ ಅವರಿಗೆ ನೀರು ಸಿಕ್ಕಲೇ ಇಲ್ಲ.


ಇವನ ರಾಜ್ಯ, ಹೆರ್ಮೋನ್ ಮಲೆನಾಡು, ಸಲ್ಕಾನಗರ, ಗೆಷೂರ್ಯರ ಮತ್ತು ಮಾಕತೀಯರ ಮೇರೆಯವರೆಗಿದ್ದ ಬಾಷಾನ್ ನಾಡು, ಹೆಷ್ಬೋನಿನ ಅರಸನದ ಸೀಹೋನನ ಮೇರೆಯವರೆಗಿದ್ದ ಗಿಲ್ಯಾದಿನ ಅರ್ಧಪ್ರಾಂತ್ಯ ಇವುಗಳಿಂದ ಕೂಡಿತ್ತು.


ಆಗ ಆಕೀಷನು ದಾವೀದನನ್ನು ಕರೆದು, “ಸರ್ವೇಶ್ವರನಾಣೆ, ನೀನು ಯಥಾರ್ಥನು; ನೀನು ನನ್ನ ಸಂಗಡ ಪಾಳೆಯದಲ್ಲಿದ್ದುಕೊಂಡು ಯುದ್ಧಕ್ಕೆ ಹೋಗುತ್ತಾ ಬರುತ್ತಾ ಇರುವುದು ಯುಕ್ತವೆಂದು ನನಗೆ ತೋರಿತು. ನೀನು ಬಂದಂದಿನಿಂದ ಇಂದಿನವರೆಗೂ ನಿನ್ನಲ್ಲಿ ಯಾವ ದೋಷವನ್ನೂ ಕಾಣಲಿಲ್ಲ.


ಎರಡನೆಯವನು ಕಿಲಾಬನು; ಇವನು ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳ ಮಗ. ಮೂರನೆಯವನು ಅಬ್ಷಾಲೋಮನು; ಇವನು ಗೆಷೂರಿನ ಅರಸನಾದ ತಲ್ಮೈ ಎಂಬವನ ಮಗಳಾದ ಮಾಕಳ ಪುತ್ರ.


ಸುಲಿಗೆ ಮಾಡುವುದಕ್ಕಾಗಿ ಹೋಗಿದ್ದ ದಾವೀದನ ಯೋಧರು ಮತ್ತು ಯೋವಾಬನು ದೊಡ್ಡ ಕೊಳ್ಳೆಯೊಡನೆ ಅಷ್ಟರಲ್ಲಿ ಹಿಂದಿರುಗಿ ಬಂದರು. ಅವರು ಹೆಬ್ರೋನಿಗೆ ಬಂದಾಗ ಅಬ್ನೇರನು ದಾವೀದನ ಹತ್ತಿರ ಇರಲಿಲ್ಲ. ದಾವೀದನು ಅವನನ್ನು ಸುರಕ್ಷಿತವಾಗಿ ಕಳುಹಿಸಿಬಿಟ್ಟಿದ್ದನು.


ಪಡೆದುಕೊಂಡ ಬೆಳ್ಳಿ ಬಂಗಾರವನ್ನೂ ಸರ್ವೇಶ್ವರನಿಗೆ ಪ್ರತಿಷ್ಠಾಪಿಸಿದನು.


ದಕ್ಷಿಣ ಪ್ರಾಂತದಲ್ಲಿ ಅಮಾಲೇಕ್ಯರು, ಮಲೆನಾಡಿನಲ್ಲಿ ಹಿತ್ತಿಯರು ಯೆಬೂಸಿಯರು ಹಾಗು ಅಮೋರಿಯರು ಮತ್ತು ಸಮುದ್ರ ತೀರದಲ್ಲಿ ಹಾಗೂ ಜೋರ್ಡನ್ ನದಿಯ ಪರಿಸರದಲ್ಲಿ ಕಾನಾನ್ಯರು ವಾಸವಾಗಿದ್ದಾರೆ,” ಎಂದು ವರದಿ ಮಾಡಿದರು.


ಆ ಮಲೆನಾಡಿನಲ್ಲಿ ವಾಸವಾಗಿದ್ದ ಅಮಾಲೇಕ್ಯರು ಹಾಗೂ ಕಾನಾನ್ಯರು ಇಳಿದುಬಂದು ಅವರನ್ನು ಹೊಡೆದು ಹೊರ್ಮಾ ಪಟ್ಟಣದವರೆಗೂ ಬೆನ್ನಟ್ಟಿ ಬಂದು ಸಂಹರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು