Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 27:9 - ಕನ್ನಡ ಸತ್ಯವೇದವು C.L. Bible (BSI)

9 ಸ್ತ್ರೀಪುರುಷರಲ್ಲಿ ಒಬ್ಬರನ್ನೂ ಉಳಿಸದೆ ದೇಶದ ನಿವಾಸಿಗಳನ್ನೆಲ್ಲ ಕೊಂದು, ದನ, ಕುರಿ, ಕತ್ತೆ, ಒಂಟೆ, ಉಡುಗೊರೆ ಇವುಗಳನ್ನು ತೆಗೆದುಕೊಂಡು ದಾವೀದನು ಆಕೀಷನ ಬಳಿಗೆ ಹೋಗುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ದಾವೀದನು ಸ್ತ್ರೀಪುರುಷರಲ್ಲಿ ಒಬ್ಬರನ್ನೂ ಉಳಿಸದೆ ದೇಶದ ಎಲ್ಲಾ ನಿವಾಸಿಗಳನ್ನು ಕೊಂದು, ಕುರಿ, ದನ, ಕತ್ತೆ, ಒಂಟೆ, ಉಡುಗೊರೆ ಇವುಗಳನ್ನು ತೆಗೆದುಕೊಂಡು ಆಕೀಷನ ಬಳಿಗೆ ಹೋಗುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ದಾವೀದನು ಸ್ತ್ರೀಪುರುಷರಲ್ಲಿ ಒಬ್ಬರನ್ನೂ ಉಳಿಸದೆ ದೇಶದ ಎಲ್ಲಾ ನಿವಾಸಿಗಳನ್ನು ಕೊಂದು ಕುರಿ, ದನ, ಕತ್ತೆ, ಒಂಟೆ, ಉಡುಗೊರೆ ಇವುಗಳನ್ನು ತೆಗೆದುಕೊಂಡು ಆಕೀಷನ ಬಳಿಗೆ ಹೋಗುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದಾವೀದನು ಆ ಪ್ರದೇಶದ ಜನರೊಂದಿಗೆ ಯುದ್ಧಮಾಡಿ ಯಾರನ್ನೂ ಜೀವಸಹಿತ ಬಿಡಲಿಲ್ಲ. ಅವರಿಗೆ ಸೇರಿದ ಕುರಿಗಳನ್ನು ದನಗಳನ್ನು, ಹೇಸರಕತ್ತೆಗಳನ್ನು, ಒಂಟೆಗಳನ್ನು ಮತ್ತು ಬಟ್ಟೆಗಳನ್ನು ದಾವೀದನು ವಶಪಡಿಸಿಕೊಂಡನು. ನಂತರ ಅವುಗಳನ್ನು ಆಕೀಷನ ಬಳಿಗೆ ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ದಾವೀದನು ಪುರುಷರನ್ನಾದರೂ, ಸ್ತ್ರೀಯರನ್ನಾದರೂ ಉಳಿಸದೆ, ಆ ಸೀಮೆಯನ್ನು ಹೊಡೆದು, ಕುರಿಪಶುಗಳನ್ನೂ, ಕತ್ತೆಗಳನ್ನೂ, ಒಂಟೆಗಳನ್ನೂ, ವಸ್ತ್ರಗಳನ್ನೂ ತೆಗೆದುಕೊಂಡು ಆಕೀಷನ ಬಳಿಗೆ ತಿರುಗಿಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 27:9
9 ತಿಳಿವುಗಳ ಹೋಲಿಕೆ  

ಈಗ ನೀನು ಹೋಗಿ ಅವರನ್ನು ಸೋಲಿಸಿ ಅವರಿಗಿರುವುದನ್ನೆಲ್ಲಾ ಸಂಪೂರ್ಣವಾಗಿ ಹಾಳುಮಾಡು. ಗಂಡಸರನ್ನು, ಹೆಂಗಸರನ್ನು, ಮಕ್ಕಳನ್ನು, ಶಿಶುಗಳನ್ನು ಹಾಗು ಎತ್ತು, ಕುರಿ, ಕತ್ತೆ, ಒಂಟೆ ಇವುಗಳನ್ನೂ ಉಳಿಸದೆ ಕೊಂದುಹಾಕು ಎಂದು ಹೇಳುತ್ತಾರೆ ಸೇನಾಧೀಶ್ವರರಾದ ಸರ್ವೇಶ್ವರ,” ಎಂದನು.


ಆಗ ಸೌಲನು ಅಮಾಲೇಕ್ಯರನ್ನು ಹವೀಲಾ ಪ್ರಾಂತ್ಯದಿಂದ ಈಜಿಪ್ಟಿನ ಪೂರ್ವದಿಕ್ಕಿನಲ್ಲಿರುವ ಶೂರಿನವರೆಗೂ ಸದೆಬಡಿಯುತ್ತಾ ಹೋದನು.


ಅಲ್ಲಿದ್ದ ಗಂಡಸರು, ಹೆಂಗಸರು, ಯುವಕರು, ಮುದುಕರು, ದನ ಕುರಿ, ಕತ್ತೆ ಇವುಗಳನ್ನೆಲ್ಲಾ ನಿಶ್ಯೇಷವಾಗಿ ಕತ್ತಿಯಿಂದ ಸಂಹರಿಸಿಬಿಟ್ಟರು.


ಬಳಿಕ ಮೋಶೆ ಇಸ್ರಯೇಲರನ್ನು ಕೆಂಪು ಸಮುದ್ರದ ಬಳಿಯಿಂದ ಕರೆದುಕೊಂಡು ಹೋದನು. ಅವರು ಶೂರ್ ಮರುಭೂಮಿಯಲ್ಲಿ ಮೂರು ದಿನ ಪ್ರಯಾಣ ಮಾಡಬೇಕಾಯಿತು. ಅಲ್ಲಿ ಅವರಿಗೆ ನೀರು ಸಿಕ್ಕಲೇ ಇಲ್ಲ.


ಇಷ್ಮಾಯೇಲ್ಯರು ಹವೀಲ ಹಾಗು ಶೂರಿನ ಮಧ್ಯೆಯಿರುವ ಪ್ರದೇಶದಲ್ಲಿ ವಾಸಮಾಡಿದರು. ಶೂರ್ ಈಜಿಪ್ಟಿನ ಪೂರ್ವಕ್ಕೆ ಅಸ್ಸೀರಿಯಗೆ ಹೋಗುವ ಹಾದಿಯಲ್ಲಿದೆ. ಹೀಗೆ ಇಷ್ಮಾಯೇಲ್ಯರು ತಮ್ಮ ಸಂಬಂಧಿಕರಿಗೆ ಎದುರುಬದುರಿನಲ್ಲೇ ವಾಸಮಾಡಿದರು.


ಮರಳುಗಾಡಿನಲ್ಲಿ ಶೂರಿಗೆ ಹೋಗುವ ಹಾದಿಪಕ್ಕದಲ್ಲಿದ್ದ ಒಂದು ಒರತೆಯ ಬಳಿ ಸ್ವಾಮಿಯ ದೂತನು ಅವಳನ್ನು ಕಂಡನು.


ಅವರ ಅರಸನಾದ ಅಗಾಗನನ್ನು ಜೀವಂತವಾಗಿ ಹಿಡಿದು ಜನರೆಲ್ಲರನ್ನು ಕತ್ತಿಯಿಂದ ಸಂಹರಿಸಿದನು.


ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡಿ ಎತ್ತುಗಳು, ಮತ್ತು ಐನೂರು ಕತ್ತೆಗಳು ಅವನಿಗಿದ್ದವು. ಜೊತೆಗೆ, ಆತನಿಗಿದ್ದ ಸೇವಕರೋ ಹಲವಾರು. ಮೂಡಣ ನಾಡಿನವರಲ್ಲಿ ಆತನೇ ದೊಡ್ಡ ಐಶ್ವರ್ಯವಂತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು