Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 28:10 - ಕನ್ನಡ ಸತ್ಯವೇದವು C.L. Bible (BSI)

10 ಅದಕ್ಕೆ ಸೌಲನು, ” ಸರ್ವೇಶ್ವರನಾಣೆ, ಈ ವಿಷಯದಲ್ಲಿ ನೀನು ದಂಡನೆಗೆ ಗುರಿಯಾಗುವುದಿಲ್ಲ,” ಎಂದು ಆಕೆಗೆ ಸರ್ವೇಶ್ವರನ ಹೆಸರಿನಲ್ಲಿ ಪ್ರಮಾಣ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅದಕ್ಕೆ ಸೌಲನು, “ಯೆಹೋವನಾಣೆ, ಈ ವಿಷಯದಲ್ಲಿ ನೀನು ದಂಡನೆಗೆ ಗುರಿಯಾಗುವುದಿಲ್ಲ” ಎಂದು ಆಕೆಗೆ ಯೆಹೋವನ ಹೆಸರಿನಲ್ಲಿ ಪ್ರಮಾಣಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅದಕ್ಕೆ ಸೌಲನು - ಯೆಹೋವನಾಣೆ, ಈ ವಿಷಯದಲ್ಲಿ ನೀನು ದಂಡನೆಗೆ ಗುರಿಯಾಗುವದಿಲ್ಲ ಎಂದು ಆಕೆಗೆ ಯೆಹೋವನ ಹೆಸರಿನಲ್ಲಿ ಪ್ರಮಾಣಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಸೌಲನು ಯೆಹೋವನ ಹೆಸರಿನಲ್ಲಿ ಆ ಬೇತಾಳಿಕಳಿಗೆ ವಾಗ್ದಾನಮಾಡಿ, “ಯೆಹೋವನಾಣೆ, ಈ ಕಾರ್ಯವನ್ನು ಮಾಡಿದ್ದಕ್ಕಾಗಿ ನಿನಗೆ ದಂಡನೆಯಾಗುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಸೌಲನು, “ಯೆಹೋವ ದೇವರ ಜೀವದಾಣೆ, ಈ ಕಾರ್ಯಕ್ಕೋಸ್ಕರ ನಿನಗೆ ದಂಡನೆ ಬರುವುದಿಲ್ಲ,” ಎಂದು ಅವಳಿಗೆ ಯೆಹೋವ ದೇವರ ಮೇಲೆ ಪ್ರಮಾಣ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 28:10
10 ತಿಳಿವುಗಳ ಹೋಲಿಕೆ  

ಆಗ ಅರಸ ಹೆರೋದನು ಅವಳಿಗೆ, “ನಿನಗೆ ಏನುಬೇಕಾದರೂ ಕೇಳು, ಕೊಡುತ್ತೇನೆ” ಎಂದನು. “ನೀನು ಏನು ಕೇಳಿಕೊಂಡರೂ ಸರಿ, ನನ್ನ ರಾಜ್ಯದಲ್ಲಿ ಅರ್ಧವನ್ನು ಕೇಳಿಕೊಂಡರೂ ಅದನ್ನು ನಿನಗೆ ಕೊಡುತ್ತೇನೆ,” ಎಂದು ಪ್ರಮಾಣ ಮಾಡಿದನು.


ಪೇತ್ರನು, “ಆ ಮನುಷ್ಯ ಯಾರೋ ನಾನರಿಯೆ,” ಎಂದು ಆಣೆಯಿಟ್ಟು ಇನೊಮ್ಮೆ ನಿರಾಕರಿಸಿದನು.


ಆಗ ಆ ಸ್ತ್ರೀ, “ಸಮೀಪ ಬಂಧುವು ನನ್ನ ಎರಡನೆಯ ಮಗನನ್ನು ಕೊಂದು ನನ್ನ‍ನ್ನು ಪೂರ್ಣವಾಗಿ ಹಾಳುಮಾಡದಂತೆ ಅರಸರು ತಾವಾಗಿ ನೋಡಿಕೊಳ್ಳುವರೆಂಬುದಾಗಿ ನನ್ನ ದೇವರಾದ ಸರ್ವೇಶ್ವರನ ಮೇಲೆ ಆಣೆಯಿಟ್ಟು ಪ್ರಮಾಣ ಮಾಡಬೇಕು,” ಎಂದು ಬೇಡಿಕೊಂಡಳು. ಅದಕ್ಕೆ ದಾವೀದನು, “ಸರ್ವೇಶ್ವರನಾಣೆ, ನಿನ್ನ ಮಗನ ತಲೆಕೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳ್ಗೊಡುವುದಿಲ್ಲ,” ಎಂದು ಹೇಳಿದನು.


ಸೌಲನು ಯೋನಾತಾನನ ಮಾತುಗಳನ್ನು ಆಲಿಸಿದನು. “ಸರ್ವೇಶ್ವರನಾಣೆ, ಅವನನ್ನು ಕೊಲ್ಲುವುದಿಲ್ಲ,” ಎಂದು ಪ್ರಮಾಣಮಾಡಿದನು.


ಇಸ್ರಯೇಲರ ರಕ್ಷಕನಾದ ಸರ್ವೇಶ್ವರನ ಆಣೆ, ಪಾಪಮಾಡಿದವರು ಯಾರೇ ಆಗಿರ಼ಲಿ, ಮಗನಾದ ಯೋನಾತಾನನಾಗಿದ್ದರೂ ಸರಿಯೇ, ಅವನು ಸಾಯಲೇಬೇಕು,” ಎಂದು ಹೇಳಿದನು. ಜನರು ಏನೂ ಮಾತಾಡದೆ ಮೌನವಾಗಿದ್ದರು.


ನಿನ್ನ ದೇವರಾದ ಸರ್ವೇಶ್ವರನ ಹೆಸರನ್ನು ದುರುಪಯೋಗಪಡಿಸಿಕೊಳ್ಳಬೇಡ. ಏಕೆಂದರೆ ಸರ್ವೇಶ್ವರನಾದ ನಾನು ನನ್ನ ಹೆಸರನ್ನು ದುರುಪಯೋಗ ಪಡಿಸುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.


ಇದರ ಹಣ್ಣನ್ನು ತಿಂದ ಕೂಡಲೆ ನಿಮ್ಮ ಕಣ್ಣುಗಳು ತೆರೆಯುವುವು, ನೀವು ದೇವರಂತೆ ಆಗಿ ಒಳಿತು - ಕೆಡಕುಗಳನ್ನರಿತ ಜ್ಞಾನಿಗಳು ಆಗಿಬಿಡುವಿರಿ. ಇದು ದೇವರಿಗೆ ಚೆನ್ನಾಗಿ ಗೊತ್ತುಂಟು,” ಎಂದಿತು.


ಆಗ ಆಕೆ ಅವನಿಗೆ, “ಸೌಲನು ಮಾಡಿದ್ದು ನಿನಗೆ ಗೊತ್ತುಂಟು; ಅವನು ಭೂತಪ್ರೇತಗಳನ್ನು ವಿಚಾರಿಸುವವರನ್ನು ಹಾಗು ಬೇತಾಳಿಕರನ್ನು ನಾಡಿನಿಂದ ಹೊರಡಿಸಿಬಿಟ್ಟನಲ್ಲವೇ? ಹೀಗಿದ್ದರೂ ನಾನು ಸಾಯುವಂತೆ ನೀನು ನನ್ನ ಪ್ರಾಣಕ್ಕೆ ಉರಲೊಡ್ಡುವುದೇಕೆ?” ಎಂದಳು.


ಆಗ ಆ ಸ್ತ್ರೀ, “ನಿನಗೆ ಯಾರನ್ನು ಬರಮಾಡಬೇಕು?” ಎಂದಳು. “ಸಮುವೇಲನನ್ನು,” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು