Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 28:19 - ಕನ್ನಡ ಸತ್ಯವೇದವು C.L. Bible (BSI)

19 ನಿನ್ನ ಸಮೇತ ಇಸ್ರಯೇಲರನ್ನು ಫಿಲಿಷ್ಟಿಯರ ಕೈಗೆ ಒಪ್ಪಿಸುವರು. ನಾಳೆ ನೀನೂ ನಿನ್ನ ಮಕ್ಕಳೂ ನಾನಿರುವಲ್ಲಿಗೆ ಬರುವಿರಿ. ಸರ್ವೇಶ್ವರ ಇಸ್ರಯೇಲ್ ಸೈನ್ಯವನ್ನು ಫಿಲಿಷ್ಟಿಯರ ಕೈಗೆ ಒಪ್ಪಿಸುವರು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆತನು ನಿನ್ನ ಕೂಡ ಇಸ್ರಾಯೇಲ್ಯರೆಲ್ಲರನ್ನೂ ಫಿಲಿಷ್ಟಿಯರ ಕೈಗೆ ಒಪ್ಪಿಸುವನು. ನಾಳೆ ನೀನೂ ನಿನ್ನ ಮಕ್ಕಳೂ ನಾನಿರುವಲ್ಲಿಗೆ ಬರುವಿರಿ. ಆತನು ಇಸ್ರಾಯೇಲ್ಯರ ಸೈನ್ಯವನ್ನು ಫಿಲಿಷ್ಟಿಯರ ಕೈಗೆ ಒಪ್ಪಿಸುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆತನು ನಿನ್ನ ಕೂಡ ಇಸ್ರಾಯೇಲ್ಯರನ್ನೂ ಫಿಲಿಷ್ಟಿಯರ ಕೈಗೆ ಒಪ್ಪಿಸುವನು. ನಾಳೆ ನೀನೂ ನಿನ್ನ ಮಕ್ಕಳೂ ನಾನಿರುವಲ್ಲಿಗೆ ಬರುವಿರಿ; ಆತನು ಇಸ್ರಾಯೇಲ್ ಸೈನ್ಯವನ್ನು ಫಿಲಿಷ್ಟಿಯರ ಕೈಗೆ ಒಪ್ಪಿಸುವನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಯೆಹೋವನು ನಿನ್ನನ್ನು ಮತ್ತು ಇಸ್ರೇಲರನ್ನು ಫಿಲಿಷ್ಟಿಯರ ವಶಕ್ಕೆ ಒಪ್ಪಿಸುತ್ತಾನೆ. ಫಿಲಿಷ್ಟಿಯರು ಇಸ್ರೇಲ್ ಸೈನ್ಯವನ್ನು ಸೋಲಿಸುವಂತೆ ಯೆಹೋವನು ಮಾಡುತ್ತಾನೆ. ಮಾರನೆಯ ದಿನ, ನೀನು ಮತ್ತು ನಿನ್ನ ಮಕ್ಕಳು ನನ್ನೊಡನೆ ಇಲ್ಲಿರುತ್ತೀರಿ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯೆಹೋವ ದೇವರು ನಿನ್ನ ಸಹಿತವಾಗಿ ಇಸ್ರಾಯೇಲನ್ನು ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿಕೊಡುವರು. ನಾಳೆ ನೀನೂ, ನಿನ್ನ ಪುತ್ರರೂ ನನ್ನ ಸಂಗಡ ಇರುವಿರಿ. ಯೆಹೋವ ದೇವರು ಇಸ್ರಾಯೇಲ್ ಸೈನ್ಯವನ್ನು ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 28:19
12 ತಿಳಿವುಗಳ ಹೋಲಿಕೆ  

ಈ ಮಾತುಗಳನ್ನು ಕೇಳಿದಾಕ್ಷಣವೇ ಅನನೀಯನು ಸತ್ತುಬಿದ್ದನು.


ನರಪುತ್ರನೇನೋ ಪವಿತ್ರಗ್ರಂಥದಲ್ಲಿ ಬರೆದಿರುವ ಪ್ರಕಾರ ಹೊರಟುಹೋಗುತ್ತಾನೆ, ನಿಜ. ಆದರೆ ಅಯ್ಯೋ, ನರಪುತ್ರನಿಗೆ ದ್ರೋಹಬಗೆಯುವವನ ದುರ್ಗತಿಯನ್ನು ಏನೆಂದು ಹೇಳಲಿ! ಅವನು ಹುಟ್ಟದೇ ಇದ್ದಿದ್ದರೆ ಎಷ್ಟೋ ಚೆನ್ನಾಗಿತ್ತು!” ಎಂದರು.


ಮೀಕಾಯೆಹುವು ಅರಸನಿಗೆ, “ನೀನು ಸುರಕ್ಷಿತನಾಗಿ ಬರುವುದಾದರೆ ನಾನು ನುಡಿದದ್ದು ಸರ್ವೇಶ್ವರನ ಮಾತಲ್ಲವೆಂದು ತಿಳಿದುಕೋ,” ಎಂದು ಹೇಳಿ, “ಮಹಾಜನರೇ, ನನ್ನ ಮಾತನ್ನು ಗಮನದಲ್ಲಿಡಿ,” ಎಂದು ಕೂಗಿದನು.


ಸರ್ವೇಶ್ವರ ತಮ್ಮ ಹತ್ತಿರ ನಿಂತವರನ್ನು, “ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್ ಗಿಲ್ಯಾದಿನ ಯುದ್ಧಕ್ಕೆ ಯಾರು ಪ್ರೇರಿಸುವಿರಿ?” ಎಂದು ಕೇಳಿದಾಗ ಒಬ್ಬನು ಒಂದು ವಿಧವಾಗಿಯೂ ಇನ್ನೊಬ್ಬನು ಇನ್ನೊಂದು ವಿಧವಾಗಿಯೂ ಉತ್ತರಕೊಟ್ಟರು.


ನೀವು ದ್ರೋಹಿಗಳಾಗಿಯೇ ಇದ್ದರೆ ನಿಮ್ಮ ಅರಸನ ಸಮೇತ ನಾಶವಾಗುವಿರಿ,” ಎಂದು ಹೇಳಿದನು.


ಹಾಗಾದರೆ ನಾಳೆ ಇಷ್ಟು ಹೊತ್ತಿಗೆ ವಿಪರೀತವಾದ ಆನೆಕಲ್ಲಿನ ಮಳೆ ಬೀಳುವಂತೆ ಮಾಡುವೆನು. ಈಜಿಪ್ಟಿನ ರಾಜ್ಯ ಸ್ಥಾಪಿತವಾಗಿ ಇಂದಿನವರೆಗೂ ಬೀಳದಂಥ ಕಲ್ಲಿನ ಮಳೆ ಬೀಳುವುದು.


ಸೌಲನು ಸಮುವೇಲನ ಮಾತುಗಳನ್ನು ಕೇಳಿದ ಕೂಡಲೆ ದಿಗ್ಭ್ರಾಂತನಾಗಿ ನೆಲದ ಮೇಲೆ ಕೈಕಾಲು ಚಾಚಿಬಿದ್ದನು. ಅವನು ಇಡೀ ದಿವಸ ಊಟಮಾಡಿರಲಿಲ್ಲ. ಆದುದರಿಂದ ಅವನಲ್ಲಿ ಬಲವೇ ಇರಲಿಲ್ಲ.


ದಣಿದವರಿಗೆ ದೊರಕುವುದು ಆ ಕೂಪದಲಿ ವಿಶ್ರಾಂತಿ ಅಣಗುವುದಲ್ಲಿ ದುರುಳರು ಕೊಡುವ ಹಾವಳಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು