Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 28:7 - ಕನ್ನಡ ಸತ್ಯವೇದವು C.L. Bible (BSI)

7 ಆದುದರಿಂದ ಅವನು ತನ್ನ ಸೇವಕರಿಗೆ, “ಭೂತಪ್ರೇತಗಳಲ್ಲಿ ವಿಚಾರಿಸಬಲ್ಲ ಒಬ್ಬ ಸ್ತ್ರೀಯನ್ನು ಹುಡುಕಿರಿ; ನಾನು ಆಕೆಯ ಬಳಿಗೇ ಹೋಗಿ ವಿಚಾರಿಸುವೆನು,” ಎಂದು ಹೇಳಿದನು. ಅವರು, “ಅಂಥವಳೊಬ್ಬಳು ಏಂದೋರಿನಲ್ಲಿದ್ದಾಳೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದುದರಿಂದ ಅವನು ತನ್ನ ಸೇವಕರಿಗೆ, “ಸತ್ತವರಲ್ಲಿ ವಿಚಾರಿಸಬಲ್ಲ ಒಬ್ಬ ಸ್ತ್ರೀಯನ್ನು ಹುಡುಕಿರಿ. ನಾನು ಆಕೆಯ ಹತ್ತಿರ ಹೋಗಿ ವಿಚಾರಿಸುವೆನು” ಎಂದು ಹೇಳಿದನು. ಆಗ ಅವರು, “ಅಂಥವಳೊಬ್ಬಳು ಏಂದೋರಿನಲ್ಲಿದ್ದಾಳೆ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದದರಿಂದ ಅವನು ತನ್ನ ಸೇವಕರಿಗೆ - ಸತ್ತವರಲ್ಲಿ ವಿಚಾರಿಸಬಲ್ಲ ಒಬ್ಬ ಸ್ತ್ರೀಯನ್ನು ಹುಡುಕಿರಿ; ನಾನು ಆಕೆಯ ಹತ್ತಿರ ಹೋಗಿ ವಿಚಾರಿಸುವೆನು ಎಂದು ಹೇಳಲಾಗಿ ಅವರು - ಅಂಥವಳೊಬ್ಬಳು ಏಂದೋರಿನಲ್ಲಿದ್ದಾಳೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಕಡೆಯದಾಗಿ, ಸೌಲನು ತನ್ನ ಸೇನಾಧಿಪತಿಗಳಿಗೆ, “ಸತ್ತವರ ಆತ್ಮಗಳೊಂದಿಗೆ ಮಾತನಾಡಬಲ್ಲ ಒಬ್ಬ ಮಾಂತ್ರಿಕ ಹೆಂಗಸನ್ನು ಕಂಡುಹಿಡಿಯಿರಿ. ಈ ಯುದ್ಧದಲ್ಲಿ ಏನಾಗುವುದೆಂಬುದನ್ನು ನಾನು ಹೋಗಿ ಅವಳನ್ನು ಕೇಳುತ್ತೇನೆ” ಎಂದು ಹೇಳಿದನು. ಅವನ ಅಧಿಕಾರಿಗಳು, “ಏಂದೋರಿನಲ್ಲಿ ಒಬ್ಬ ಬೇತಾಳಿಕಳಿದ್ದಾಳೆ” ಎಂದು ಉತ್ತರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಸೌಲನು ತನ್ನ ದಾಸರಿಗೆ, “ನಾನು ವಿಚಾರಿಸುವಂತೆ ಮಾಂತ್ರಿಕಳಾದ ಒಬ್ಬ ಸ್ತ್ರೀಯನ್ನು ವಿಚಾರಿಸಿರಿ,” ಎಂದನು. ಅವನ ದಾಸರು ಅವನಿಗೆ, “ಇಗೋ, ಎಂದೋರಿನಲ್ಲಿ ಮಾಂತ್ರಿಕಳಾದ ಒಬ್ಬ ಸ್ತ್ರೀ ಇದ್ದಾಳೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 28:7
13 ತಿಳಿವುಗಳ ಹೋಲಿಕೆ  

ಒಂದು ದಿನ ನಾವು ಪ್ರಾರ್ಥನಾ ಸ್ಥಳಕ್ಕೆ ಹೋಗುತ್ತಿದ್ದೆವು. ಗಾರುಡಗಾತಿಯಾದ ಒಬ್ಬ ದಾಸಿ ನಮ್ಮನ್ನು ಎದುರುಗೊಂಡಳು. ಆ ಹುಡುಗಿ ಕಣಿಶಕುನ ಹೇಳಿ ತನ್ನ ಯಜಮಾನನಿಗೆ ತುಂಬಾ ಹಣ ಸಂಪಾದಿಸುತ್ತಿದ್ದಳು.


ಎಂದೋರಿನಲ್ಲವರು ಕೊಲೆಯಾದರು I ಹೊಲಗದ್ದೆಗಳಿಗೆ ಗೊಬ್ಬರವಾದರು II


ಸೌಲನು ಸರ್ವೇಶ್ವರನಿಗೆ ಅವಿಧೇಯನಾದ್ದರಿಂದ ಮರಣ ಹೊಂದಿದನು. ಅವನು ಸರ್ವೇಶ್ವರನ ಆಜ್ಞೆಗಳನ್ನು ಮೀರಿದನು; ಸರ್ವೇಶ್ವರನನ್ನು ವಿಚಾರಿಸದೆ ಭೂತಪ್ರೇತಗಳನ್ನು ವಿಚಾರಿಸಿದನು.


ಇದಲ್ಲದೆ ಮನಸ್ಸೆಯವರಿಗೆ ಇಸ್ಸಾಕಾರ್, ಆಶೇರ್ ಎಂಬವರ ಪ್ರಾಂತ್ಯಗಳಲ್ಲಿ ಬೇತ್ ಷೆಯಾನ್, ಇಬ್ಲೆಯಾಮ್, ದೋರ್ ಎಂಬ ನಗರಗಳೂ ಅವುಗಳ ಗ್ರಾಮಗಳೂ ದುರ್ಗತ್ರಯವಾದ ಎಂದೋರ್, ತಾನಕ್, ಮೆಗಿದ್ದೋ ಎಂಬ ನಗರಗಳೂ ಅವುಗಳಿಗೆ ಸೇರಿದ ಊರುಗಳೂ ಸಿಕ್ಕಿದವು.


ನಿಯಮಿತ ಕಾಲದಲ್ಲಿ ಆ ದರ್ಶನ ನೆರವೇರುವುದು. ಅದರ ಅಂತಿಮ ಪರಿಣಾಮ ಶೀಘ್ರದಲ್ಲಿ ಗೊತ್ತಾಗುವುದು. ತಡವಾದರೂ ಕಾದಿರು; ಮೋಸಮಾಡದು. ಅದು ಖಂಡಿತವಾಗಿ ಕೈಗೂಡುವುದು; ತಾಮಸವಾಗದು.


“ಭೂತಪ್ರೇತಗಳನ್ನು ವಿಚಾರಿಸುವವರ ಬಳಿಗೆ ಹೋಗಬೇಡ; ಅವರ ಆಲೋಚನೆಯನ್ನು ಕೇಳಿ ಅಶುದ್ಧನಾಗಬೇಡ. ನಾನು ಸರ್ವೇಶ್ವರ.


ಈಜಿಪ್ಟಿನವರ ಚೈತನ್ಯ ಉಡುಗಿಹೋಗುವುದು. ಅವರ ಯೋಜನೆಗಳು ಭಂಗವಾಗುವುವು. ಜನರು ವಿಗ್ರಹಗಳನ್ನು, ಮಂತ್ರಗಾರರನ್ನು, ಪ್ರೇತವಿಚಾರಕರನ್ನು, ಕಣಿಹೇಳುವವರನ್ನು ಆಶ್ರಯಿಸುವರು.”


ಅವನು ಅವರೊಡನೆ ಮಾತಾಡುತ್ತಿರುವಾಗಲೇ ಆ ಆಳೂ ಅವನ ಹಿಂದಿನಿಂದ ಅರಸನೂ ಅಲ್ಲಿಗೆ ಬಂದರು. ಅರಸನು ಎಲೀಷನಿಗೆ, “ನೋಡು, ಈ ಆಪತ್ತು ಸರ್ವೇಶ್ವರನಿಂದಲೇ ಬಂದದ್ದು. ಇನ್ನು ಮುಂದೆ ನಾನೇಕೆ ಆತನನ್ನು ನಂಬಿ ನಿರೀಕ್ಷಿಸಿಕೊಂಡಿರಬೇಕು?” ಎಂದನು.


ಸಮುವೇಲನು ಮರಣಹೊಂದಿದ್ದನು. ಇಸ್ರಯೇಲರು ಅವನಿಗಾಗಿ ಸಂತಾಪ ಸೂಚಿಸುತ್ತಾ ಅವನ ಶವವನ್ನು ಅವನ ಸ್ವಂತ ಊರಾದ ರಾಮಾದಲ್ಲಿ ಸಮಾಧಿಮಾಡಿದ್ದರು. ಸೌಲನು ಭೂತಪ್ರೇತಗಳನ್ನು ವಿಚಾರಿಸುವವರನ್ನೂ ಬೇತಾಳಿಕರನ್ನೂ ನಾಡಿನಿಂದ ಹೊರಡಿಸಿಬಿಟ್ಟಿದ್ದನು.


ಮಾಟಗಾರರು, ತಂತ್ರಗಾರರು, ಸತ್ತವರನ್ನು ವಿಚಾರಿಸುವವರು, ಬೇತಾಳಿಕರು, ಪ್ರೇತಸಿದ್ಧರು ಇಂಥವರು ಯಾರೂ ನಿಮ್ಮಲ್ಲಿ ಇರಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು