1 ಸಮುಯೇಲ 28:9 - ಕನ್ನಡ ಸತ್ಯವೇದವು C.L. Bible (BSI)9 ಆಗ ಆಕೆ ಅವನಿಗೆ, “ಸೌಲನು ಮಾಡಿದ್ದು ನಿನಗೆ ಗೊತ್ತುಂಟು; ಅವನು ಭೂತಪ್ರೇತಗಳನ್ನು ವಿಚಾರಿಸುವವರನ್ನು ಹಾಗು ಬೇತಾಳಿಕರನ್ನು ನಾಡಿನಿಂದ ಹೊರಡಿಸಿಬಿಟ್ಟನಲ್ಲವೇ? ಹೀಗಿದ್ದರೂ ನಾನು ಸಾಯುವಂತೆ ನೀನು ನನ್ನ ಪ್ರಾಣಕ್ಕೆ ಉರಲೊಡ್ಡುವುದೇಕೆ?” ಎಂದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆಗ ಆಕೆಯು ಅವನಿಗೆ, “ಸೌಲನು ಮಾಡಿದ್ದು ನಿನಗೆ ಗೊತ್ತುಂಟು. ಅವನು ಸತ್ತವರಲ್ಲಿ ವಿಚಾರಿಸುವವರನ್ನು ಬೇತಾಳಿಕರನ್ನೂ ದೇಶದಿಂದ ಹೊರಡಿಸಿಬಿಟ್ಟನಲ್ಲಾ, ಹೀಗಿದ್ದರೂ ನಾನೂ ಸಾಯುವಂತೆ ನೀನು ನನ್ನ ಪ್ರಾಣಕ್ಕೆ ಉರುಲೊಡ್ಡುವುದೇಕೆ?” ಅಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆಗ ಆಕೆಯು ಅವನಿಗೆ - ಸೌಲನು ಮಾಡಿದ್ದು ನಿನಗೆ ಗೊತ್ತುಂಟು; ಅವನು ಸತ್ತವರಲ್ಲಿ ವಿಚಾರಿಸುವವರನ್ನೂ ಬೇತಾಳಿಕರನ್ನೂ ದೇಶದಿಂದ ಹೊರಡಿಸಿಬಿಟ್ಟನಲ್ಲಾ; ಹೀಗಿದ್ದರೂ ನಾನು ಸಾಯುವಂತೆ ನೀನು ನನ್ನ ಪ್ರಾಣಕ್ಕೆ ಉರಲೊಡ್ಡುವದೇಕೆ ಅಂದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆದರೆ ಆ ಬೇತಾಳಿಕಳು ಸೌಲನಿಗೆ, “ಸೌಲನು ಏನು ಮಾಡಿದನೆಂಬುದು ನಿನಗೆ ನಿಜವಾಗಿಯೂ ತಿಳಿದಿದೆ. ಅವನು ಮಾಂತ್ರಿಕರನ್ನೂ ಜ್ಯೋತಿಷಿಗಳನ್ನೂ ಬಲಾತ್ಕಾರವಾಗಿ ದೇಶದಿಂದ ಹೊರಗಟ್ಟಿದನು. ನೀನು ನನ್ನನ್ನು ಬಲೆಗೆ ಬೀಳಿಸಿ ಕೊಲ್ಲಲು ಪ್ರಯತ್ನಿಸುತ್ತಿರುವೆ” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆ ಸ್ತ್ರೀಯು ಅವನಿಗೆ, “ಸೌಲನು ಮಾಂತ್ರಿಕಳನ್ನೂ, ಭೂತಪ್ರೇತಗಳನ್ನು ಆರಾಧಿಸುವವರನ್ನೂ ದೇಶದಿಂದ ತೆಗೆದುಬಿಟ್ಟನೆಂದು ನೀನು ಬಲ್ಲೆ. ಈಗ ನಾನು ಸಾಯುವುದಕ್ಕೆ ಕಾರಣವಾಗುವ ಹಾಗೆ ಏಕೆ ನನ್ನ ಪ್ರಾಣಕ್ಕೆ ಉರುಳಿಡುತ್ತಿ?” ಎಂದಳು. ಅಧ್ಯಾಯವನ್ನು ನೋಡಿ |
ಇಸ್ರಯೇಲರ ಅರಸನು ಈ ಪತ್ರವನ್ನು ಓದಿದ ಕೂಡಲೆ, ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, ತನ್ನ ಪರಿವಾರದವರಿಗೆ, “ತಾನು ಕಳುಹಿಸಿದ ವ್ಯಕ್ತಿಯನ್ನು ಚರ್ಮರೋಗದಿಂದ ನಾನು ವಾಸಿಮಾಡಬೇಕಂತೆ! ಇದು ಎಂಥ ಅಪ್ಪಣೆ; ನಾನೇನು ದೇವರೋ? ಜೀವದಾನ ಮಾಡುವುದಕ್ಕಾಗಲಿ ಜೀವಹರಣ ಮಾಡುವುದಕ್ಕಾಗಲಿ ನನಗೆ ಸಾಮರ್ಥ್ಯವುಂಟೇ? ಇವನು ನನ್ನೊಡನೆ ಯುದ್ಧಮಾಡುವುದಕ್ಕೆ ನೆಪ ಹುಡುಕುತ್ತಾನಲ್ಲದೆ ಮತ್ತೇನು? ನೀವೇ ಆಲೋಚಿಸಿ ನೋಡಿ,” ಎಂದು ಹೇಳೀದನು.