Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 29:1 - ಕನ್ನಡ ಸತ್ಯವೇದವು C.L. Bible (BSI)

1 ಫಿಲಿಷ್ಟಿಯರು ತಮ್ಮ ಸೈನ್ಯವನ್ನು ಕೂಡಿಸಿಕೊಂಡು ಬಂದು ಅಫೇಕಿನಲ್ಲಿ ಪಾಳೆಯಮಾಡಿಕೊಂಡರು. ಇಸ್ರಯೇಲರು ಜೆಸ್ರೀಲ್ ಬೈಲಿನಲ್ಲಿರುವ ಬುಗ್ಗೆಯ ಬಳಿಯಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಫಿಲಿಷ್ಟಿಯರು ತಮ್ಮ ಸೈನ್ಯವನ್ನು ಕೂಡಿಸಿಕೊಂಡು ಬಂದು ಅಫೇಕಿನಲ್ಲಿ ಪಾಳೆಯಮಾಡಿಕೊಂಡರು. ಇಸ್ರಾಯೇಲರು ಇಜ್ರೇಲಿನ ಬೈಲಿನಲ್ಲಿರುವ ಬುಗ್ಗೆಯ ಬಳಿಯಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಫಿಲಿಷ್ಟಿಯರು ತಮ್ಮ ಸೈನ್ಯವನ್ನು ಕೂಡಿಸಿಕೊಂಡು ಬಂದು ಅಫೇಕಿನಲ್ಲಿ ಪಾಳೆಯಮಾಡಿಕೊಂಡರು. ಇಸ್ರಾಯೇಲ್ಯರು ಇಜ್ರೇಲ್ ಬೈಲಿನಲ್ಲಿರುವ ಬುಗ್ಗೆಯ ಬಳಿಯಲ್ಲಿ ಇಳುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಫಿಲಿಷ್ಟಿಯರ ಸೈನಿಕರೆಲ್ಲಾ ಅಫೇಕಿನಲ್ಲಿ ಒಟ್ಟುಗೂಡಿದರು. ಇಸ್ರೇಲರು ಇಜ್ರೇಲ್ ಬಳಿಯಿರುವ ಚಿಲುಮೆಯ ಹತ್ತಿರ ಪಾಳೆಯಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಫಿಲಿಷ್ಟಿಯರು ತಮ್ಮ ಸಮಸ್ತ ಸೈನ್ಯಗಳನ್ನು ಅಫೇಕದಲ್ಲಿ ಕೂಡಿಸಿಕೊಂಡರು. ಹಾಗೆಯೇ ಇಸ್ರಾಯೇಲರು ಇಜ್ರೆಯೇಲ್ ಎಂಬ ಬುಗ್ಗೆಯ ಬಳಿಯಲ್ಲಿ ದಂಡಿಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 29:1
20 ತಿಳಿವುಗಳ ಹೋಲಿಕೆ  

ಇಸ್ರಯೇಲರು ಫಿಲಿಷ್ಟಿಯರಿಗೆ ವಿರುದ್ಧ ಯುದ್ಧಕ್ಕೆ ಹೊರಟು ಎಬೆನೆಜೆರಿನ ಸಮೀಪದಲ್ಲಿ ಪಾಳೆಯ ಮಾಡಿಕೊಂಡರು. ಫಿಲಿಷ್ಟಿಯರು ಬಂದು ಅಫೇಕಿನಲ್ಲಿ ಇಳಿದುಕೊಂಡರು.


ಅನಂತರ ಸಂಭವಿಸಿದ ಘಟನೆಗಳು ಇವು; ಜೆಸ್ರೀಲಿನಲ್ಲಿ, ಸಮಾರಿಯದ ಅರಸ ಅಹಾಬನ ಅರಮನೆಯ ಹತ್ತಿರ ಜೆಸ್ರೀಲಿನವನಾದ ನಾಬೋತನೆಂಬ ವ್ಯಕ್ತಿಗೆ ಒಂದು ದ್ರಾಕ್ಷೀತೋಟವಿತ್ತು.


ಉಳಿದ ಇಪ್ಪತ್ತೇಳು ಸಾವಿರಮಂದಿ ಸೈನಿಕರು ಅಫೇಕ ಪಟ್ಟಣವನ್ನು ಹೊಕ್ಕರು. ಆದರೆ ಆ ಪಟ್ಟಣದ ಗೋಡೆ ಅವರ ಮೇಲೆ ಬಿದ್ದುದರಿಂದ ಅವರೂ ಸತ್ತರು. ಬೆನ್ಹದದನೂ ಆ ಪಟ್ಟಣವನ್ನು ಹೊಕ್ಕು, ಒಂದು ಮನೆಯ ಒಳಕೋಣೆಯಲ್ಲಿ ಅಡಗಿಕೊಂಡನು.


ಉಮ್ಮಾ, ಅಫೇಕ್, ರೆಹೂಬ್ ಇವೇ ಮೊದಲಾದ ಇಪ್ಪತ್ತೆರಡು ನಗರಗಳೂ ಅವುಗಳ ಗ್ರಾಮಗಳೂ


ಅಷ್ಟಾರೋನಿನ ಅರಸ - 1 ಅಫೇಕದ ಅರಸ - 1


ಅವರು ಹಿಂದಿರುಗಿ, ಯೇಹುವಿನ ಹತ್ತಿರ ಬಂದು, ಆ ಸಂಗತಿಯನ್ನು ತಿಳಿಸಿದರು. ಅವನು ಅವರಿಗೆ, “’ನಾಯಿಗಳು ಈಜೆಬೆಲಳ ದೇಹಮಾಂಸವನ್ನು ಜೆಸ್ರೀಲಿನ ಹೊಲದಲ್ಲಿ ತಿಂದುಬಿಡುವುವು;


ಯೇಹುವು ಜೆಸ್ರೀಲಿಗೆ ಬಂದನು. ಈಜೆಬೆಳು ಅದನ್ನು ಕೇಳಿ ತಲೆಯನ್ನು ಆಭರಣಗಳಿಂದ ಅಲಂಕರಿಸಿಕೊಂಡು, ಕಣ್ಣಿಗೆ ಕಾಡಿಗೆ ಹಚ್ಚಿಕೊಂಡು, ಕಿಟಕಿಯಿಂದ ನೋಡುತ್ತಾ ನಿಂತಳು.


ಇದಲ್ಲದೆ ಈಜೆಬೆಲಳನ್ನು ಕುರಿತು ಅವರು, ‘ನಾಯಿಗಳು ಜೆಸ್ರೀಲ್ ಪಟ್ಟಣದ ಗೋಡೆಯ ಬಳಿಯಲ್ಲಿ ಆಕೆಯ ಶವವನ್ನು ತಿನ್ನುವುವು;


ಫಿಲಿಷ್ಟಿಯರು ಸೈನ್ಯಕೂಡಿಸಿಕೊಂಡು ಬಂದು ಶೂನೇಮಿನಲ್ಲಿ ಪಾಳೆಯಮಾಡಿಕೊಂಡಿದ್ದರು. ಸೌಲನು ಸಮಸ್ತ ಇಸ್ರಯೇಲರೊಡನೆ ಬಂದು ಗಿಲ್ಬೋವದಲ್ಲಿ ಇಳಿದುಕೊಂಡನು.


ಇಷ್ಟರಲ್ಲಿ ಮಿದ್ಯಾನ್ಯರೂ ಅಮಾಲೇಕ್ಯರೂ ಮೂಡಣದೇಶದವರೂ ಕೂಡಿ ಹೊಳೆದಾಟಿ ಬಂದು ಇಜ್ರೇಲಿನ ತಗ್ಗಿನಲ್ಲಿ ಪಾಳೆಯಮಾಡಿಕೊಂಡರು.


ಇಜ್ರೇಲ್, ಕೆಸುಲ್ಲೋತ್,


ಸೌಲನಿಗೂ ಅವನ ಸೇವಕರಿಗೂ ಬಡಿಸಿದಳು. ಅವರು ಊಟಮಾಡಿ ಅದೇ ರಾತ್ರಿ ಹೊರಟುಹೋದರು.


ಗಿಲ್ಯಾದ್, ಆಶೇರ್, ಜೆಸ್ರೀಲ್, ಎಫ್ರಯಿಮ್, ಬೆನ್ಯಾಮೀನ್ ಇವುಗಳ ಜನರ ಮೇಲೆ ಮತ್ತು ಬೇರೆ ಎಲ್ಲ ಇಸ್ರಯೇಲರ ಮೇಲೆ ಅವನನ್ನು ಅರಸನನ್ನಾಗಿ ಮಾಡಿದನು.


ಇಸ್ರಯೇಲರು ದಾವೀದನನ್ನು ಅಭಿಷೇಕಿಸಿ ತಮ್ಮ ಅರಸನನ್ನಾಗಿ ಮಾಡಿಕೊಂಡರೆಂಬ ಸಮಾಚಾರ ಫಿಲಿಷ್ಟಿಯರಿಗೆ ಮುಟ್ಟಿತು. ಆಗ ಅವರು ಅವನನ್ನು ಬಂಧಿಸಲು ಬಂದರು. ದಾವೀದನು ಇದನ್ನು ಕೇಳಿ ದುರ್ಗಕ್ಕೆ ಹೋದನು.


ಅವರು ಮತ್ತೆ ಯೆಹೋಶುವನಿಗೆ , “ನಮ್ಮ ಮಲೆನಾಡು ನಮಗೆ ಸಾಲುವುದಿಲ್ಲ. ಬೇತ್ ಷೆಯಾನ್ ಮತ್ತು ಅದಕ್ಕೆ ಸೇರಿದ ಊರುಗಳಿರುವ ಕಣಿವೆಯಲ್ಲೂ ಹಾಗೂ ಇಜ್ರೇಲಿನ ಕಣಿವೆಯಲ್ಲೂ ವಾಸಮಾಡುವ ಕಾನಾನ್ಯರೆಲ್ಲರು ಕಬ್ಬಿಣದ ರಥವುಳ್ಳವರು,” ಎಂದರು.


‘ಯೆರುಬ್ಬಾಳ’ ಎನಿಸಿಕೊಂಡ ಗಿದ್ಯೋನನೂ ಅವನ ಸಂಗಡ ಇದ್ದ ಜನರೂ ಬೆಳಿಗ್ಗೆ ಎದ್ದು ಹೊರಟುಹೋಗಿ ಹರೋದಿನ ಬುಗ್ಗೆಯ ಬಳಿಯಲ್ಲಿ ಇಳಿದುಕೊಂಡರು. ಇವರಿಗೆ ಉತ್ತರದಿಕ್ಕಿನಲ್ಲಿ ಮೋರೆ ಗುಡ್ಡದ ಹಿಂದಿನ ತಗ್ಗಿನಲ್ಲಿ ಮಿದ್ಯಾನ್ಯರ ದಂಡಿಳಿದಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು