Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 29:4 - ಕನ್ನಡ ಸತ್ಯವೇದವು C.L. Bible (BSI)

4 ಆದರೆ ಆ ಫಿಲಿಷ್ಟಿಯ ರಾಜರುಗಳು ಅವನ ಮೇಲೆ ಕೋಪಗೊಂಡು, :ಈ ಮನುಷ್ಯನನ್ನು ಕಳುಹಿಸಿಬಿಡು; ಇವನು ಹಿಂದಿರುಗಿ ಹೋಗಿ ನೀನು ನೇಮಿಸಿದ್ದ ಸ್ಥಳದಲ್ಲೇ ವಾಸಿಸಲಿ; ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು. ಬಂದರೆ ನಮಗೇ ಶತ್ರುವಾಗಿ ನಿಂತಾನು. ಫಿಲಿಷ್ಟಿಯರ ತಲೆಗಳನ್ನು ಕಡುಯುವುದರಿಂದಲೇ ಇವನು ತನ್ನ ಯಜಮಾನನ ಮೆಚ್ಚಿಕೆಯನ್ನು ಪಡೆಯಬಹುದಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆದರೆ ಫಿಲಿಷ್ಟಿಯ ಪ್ರಭುಗಳು ಅವನ ಮೇಲೆ ಕೋಪಗೊಂಡು ಅವನಿಗೆ, “ಈ ಮನುಷ್ಯನನ್ನು ಕಳುಹಿಸಿಬಿಡು, ಇವನು ಹಿಂದಿರುಗಿ ಹೋಗಿ ನೀನು ನೇಮಿಸಿದ ಸ್ಥಳದಲ್ಲೇ ವಾಸಿಸಲಿ. ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು. ಬಂದರೆ ನಮಗೆ ಶತ್ರುವಾಗಿ ನಿಂತಾನು, ಫಿಲಿಷ್ಟಿಯರ ತಲೆಗಳನ್ನು ಕಡಿದಿದ್ದರಿಂದಲೇ ಇವನು ತನ್ನ ಯಜಮಾನನ ಮೆಚ್ಚಿಕೆಯನ್ನು ಪಡೆಯಬಹುದಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆದರೆ ಫಿಲಿಷ್ಟಿಯಪ್ರಭುಗಳು ಅವನ ಮೇಲೆ ಕೋಪಗೊಂಡು ಅವನಿಗೆ - ಈ ಮನುಷ್ಯನನ್ನು ಕಳುಹಿಸಿಬಿಡು, ಇವನು ಹಿಂದಿರುಗಿ ಹೋಗಿ ನೀನು ನೇವಿುಸಿದ ಸ್ಥಳದಲ್ಲೇ ವಾಸಿಸಲಿ; ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು. ಬಂದರೆ ನಮಗೆ ಶತ್ರುವಾಗಿ ನಿಂತಾನು. ಫಿಲಿಷ್ಟಿಯರ ತಲೆಗಳನ್ನು ಕಡಿಯುವದರಿಂದಲೇ ಇವನು ತನ್ನ ಯಜಮಾನನ ಮೆಚ್ಚಿಕೆಯನ್ನು ಪಡೆಯಬಹುದಲ್ಲವೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದರೆ ಫಿಲಿಷ್ಟಿಯರ ಅಧಿಪತಿಗಳು ಆಕೀಷನ ಮೇಲೆ ಬಹಳ ಕೋಪಗೊಂಡು, “ದಾವೀದನನ್ನು ಹಿಂದಕ್ಕೆ ಕಳುಹಿಸು! ನೀನು ಕೊಟ್ಟಿರುವ ನಗರಕ್ಕೆ ದಾವೀದನು ಹಿಂದಿರುಗಿ ಹೋಗಲೇಬೇಕು. ಅವನು ನಮ್ಮೊಡನೆ ಯುದ್ಧಕ್ಕೆ ಬರುವಂತಿಲ್ಲ. ಅವನು ನಮ್ಮ ಜೊತೆಯಲ್ಲಿದ್ದರೆ, ಆಗ ನಮ್ಮ ಪಾಳೆಯದಲ್ಲಿ ಒಬ್ಬ ಶತ್ರುವಿದ್ದಂತಾಗುತ್ತದೆ. ಅವನು ನಮ್ಮ ಜನರನ್ನು ಕೊಲ್ಲುವುದರ ಮೂಲಕ ತನ್ನ ರಾಜನ ಮೆಚ್ಚಿಕೆಯನ್ನು ಗಳಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದರೆ ಫಿಲಿಷ್ಟಿಯರ ಅಧಿಪತಿಗಳು ಆಕೀಷನ ಮೇಲೆ ಕೋಪಗೊಂಡು ಅವನಿಗೆ, “ಇವನು ಯುದ್ಧದಲ್ಲಿ ನಮಗೆ ಶತ್ರುವಾಗಿರದಂತೆ, ಯುದ್ಧಕ್ಕೆ ನಮ್ಮ ಸಂಗಡ ಇವನನ್ನು ಬರಗೊಡದೆ, ನೀನು ಅವನಿಗೆ ನೇಮಿಸಿದ ಸ್ಥಳಕ್ಕೆ ತಿರುಗಿ ಹೋಗುವಹಾಗೆ ಅವನನ್ನು ಕಳುಹಿಸಿಬಿಡು. ಏಕೆಂದರೆ ಇವನು ಯಾವುದರಿಂದ ತನ್ನ ಯಜಮಾನನ ಮೆಚ್ಚಿಗೆ ಪಡೆದುಕೊಳ್ಳುವನು. ಅದು ಈ ಮನುಷ್ಯರ ತಲೆಗಳಿಂದಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 29:4
8 ತಿಳಿವುಗಳ ಹೋಲಿಕೆ  

ಇದಲ್ಲದೆ, ಮುಂದಿನಿಂದಲೇ ಫಿಲಿಷ್ಟಿಯರನ್ನು ಸೇರಿಕೊಂಡು ಅವರೊಡನೆ ಪಾಳೆಯದಲ್ಲಿದ್ದ ಹಿಬ್ರಿಯರು, ಸೌಲ-ಯೋನಾತಾನರ ಜೊತೆಯಲ್ಲಿ ಬಂದ ಇಸ್ರಯೇಲರನ್ನು ಕೂಡಿಕೊಂಡರು.


ಅರಸ ಸೌಲನಿಗೆ ವಿರುದ್ಧ ಯುದ್ಧಮಾಡಲು ಫಿಲಿಷ್ಟಿಯರೊಂದಿಗೆ ಹೋಗುತ್ತಿದ್ದಾಗ ಮನಸ್ಸೆ ಗೋತ್ರದ ಕೆಲವು ಜನ ಸೈನಿಕರು ಬಂದು ದಾವೀದನ ಪಕ್ಷದಲ್ಲಿ ಸೇರಿಕೊಂಡರು. ದಾವೀದನು ನಿಜವಾಗಿಯೂ ಫಿಲಿಷ್ಟಿಯರಿಗೆ ಸಹಾಯಮಾಡಲಿಲ್ಲ. ತನ್ನ ಮೊದಲಿನ ಯಜಮಾನ ಸೌಲನಿಗೆ ತಮ್ಮನ್ನು ಹಿಡಿದುಕೊಡಬಹುದೆಂಬ ಭಯ ಫಿಲಿಷ್ಟಿಯ ರಾಜರುಗಳಿಗೆ ಇದ್ದುದರಿಂದ ಅವರು ಅವನನ್ನು ಚಿಕ್ಲಗಿಗೆ ಹಿಂದಕ್ಕೆ ಕಳುಹಿಸಿದರು.


“ಈ ಅಪ್ರಾಮಾಣಿಕ ಮೇಸ್ತ್ರಿ ಮಾಡಿದ ಮುಂದಾಲೋಚನೆಯನ್ನು ಅವನ ಯಜಮಾನ ಪ್ರಶಂಶಿಸಿದ. ಏಕೆಂದರೆ, ತಮ್ಮ ತಮ್ಮ ವ್ಯವಹಾರಗಳಲ್ಲಿ ಲೌಕಿಕ ಜನರು ಬೆಳಕಿನ ರಾಜ್ಯದ ಜನರಿಗಿಂತ ಜಾಣರು.


ಆಕೀಷನು ಕೂಡಲೆ ಅವನಿಗೆ ಚಿಕ್ಲಗ್ ಊರನ್ನು ಕೊಟ್ಟನು. ಆದುದರಿಂದ “ಚಿಕ್ಲಗ್” ಎಂಬುದು ಇಂದಿನವರೆಗೂ ಯೆಹೂದ ಅರಸರಿಗೆ ಸೇರಿದೆ.


ಆಗ ಆಕೀಷನು ದಾವೀದನಿಗೆ, “ನೀನು ಒಳ್ಳೆಯವನೆಂದು ನನಗೆ ಗೊತ್ತಿದೆ; ನನ್ನ ದೃಷ್ಟಿಯಲ್ಲಿ ನೀನು ದೇವದೂತನಂತಿರುವೆ; ಆದರೆ ಫಿಲಿಷ್ಟಿಯದ ರಾಜರುಗಳು, ‘ಇವನು ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಹೊರಡಬಾರದು’ ಎಂದು ಹೇಳುತ್ತಾರೆ;


ದಾವೀದನೂ ಅವನ ಜನರೂ ಮಾರನೆಯ ದಿನ ಚಿಕ್ಲಗ್ ಊರನ್ನು ಸೇರಿದರು. ಅಷ್ಟರೊಳಗೆ ಅಮಾಲೇಕ್ಯರು ದಂಡೆತ್ತಿ ದಕ್ಷಿಣಪ್ರಾಂತ್ಯಕ್ಕೂ ಚಿಕ್ಲಗ್ ಊರಿಗೂ ಬಂದು ಚಿಕ್ಲಗ್ ಊರನ್ನು ಸುಟ್ಟು ಹಾಳುಮಾಡಿದ್ದರು.


ಯುದ್ಧವೇನಾದರು ಸಂಭವಿಸಿದರೆ ಅವರು ನಮ್ಮ ಶತ್ರುಗಳೊಂದಿಗೆ ಕೂಡಿಕೊಂಡು ನಮಗೆ ವಿರೋಧವಾಗಿ ಕಾದಾಡಿ ನಾಡನ್ನು ಬಿಟ್ಟು ಪಲಾಯನ ಗೈಯಬಹುದು. ಆದ್ದರಿಂದ ಅವರು ವೃದ್ಧಿಯಾಗದಂತೆ ನಾವು ಉಪಾಯ ಹೂಡಬೇಕು,” ಎಂದು ಎಚ್ಚರಿಸಿದನು.


ಹೀಗೆ ಅವನು ಹಿಂದಿರುಗುತ್ತಿದ್ದಾಗ ಅವನನ್ನು ಸೇರಿಕೊಂಡ ಮನಸ್ಸೆಗೋತ್ರದ ಸೈನಿಕರ ಹೆಸರುಗಳು ಇಂತಿವೆ: ಅದ್ನ, ಯೋಜಾಬಾದ್, ಎದೀಗಯೇಲ್, ಮೀಕಾಯೇಲ್, ಯೋಜಾಬಾದ್, ಎಲೀಹೂ ಹಾಗೂ ಚಿಲ್ಲೆತೈ. ಇವರೆಲ್ಲರೂ ಮನಸ್ಸೆ ಗೋತ್ರದಲ್ಲಿ ಸಹಸ್ರಾಧಿಪತಿಗಳಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು