Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 3:11 - ಕನ್ನಡ ಸತ್ಯವೇದವು C.L. Bible (BSI)

11 ಆಗ ಸರ್ವೇಶ್ವರ ಸಮುವೇಲನಿಗೆ, “ನಾನು ಇಸ್ರಯೇಲರಲ್ಲಿ ಒಂದು ವಿಶೇಷಕಾರ್ಯವನ್ನು ನಡಿಸುವೆನು. ಈ ವಿಷಯವನ್ನು ಕೇಳುವವರ ಕಿವಿಗಳೆರಡೂ ನಿಮಿರುವುವು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನು ಸಮುವೇಲನಿಗೆ “ನಾನು ಇಸ್ರಾಯೇಲ್ಯರಲ್ಲಿ ಒಂದು ವಿಶೇಷಕಾರ್ಯವನ್ನು ನಡೆಸುವೆನು; ಅದರ ವಿಷಯ ಕೇಳುವವರ ಎರಡು ಕಿವಿಗಳೂ ನಿಮಿರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನು ಸಮುವೇಲನಿಗೆ - ನಾನು ಇಸ್ರಾಯೇಲ್ಯರಲ್ಲಿ ಒಂದು ವಿಶೇಷ ಕಾರ್ಯವನ್ನು ನಡಿಸುವೆನು; ಅದರ ವಿಷಯ ಕೇಳುವವರ ಎರಡು ಕಿವಿಗಳೂ ಮೊರ್ರೆನ್ನುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋವನು ಸಮುವೇಲನಿಗೆ, “ನಾನು ಇಸ್ರೇಲಿನಲ್ಲಿ ಒಂದು ಕಾರ್ಯವನ್ನು ಶೀಘ್ರದಲ್ಲೇ ಮಾಡುವೆನು. ಈ ಕಾರ್ಯದ ಬಗ್ಗೆ ಕೇಳಿದ ಜನರು ಗಾಬರಿಗೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ಯೆಹೋವ ದೇವರು ಸಮುಯೇಲನಿಗೆ, “ನಾನು ಇಸ್ರಾಯೇಲಿನಲ್ಲಿ ಒಂದು ಕಾರ್ಯವನ್ನು ಮಾಡುವೆನು. ಅದನ್ನು ಕೇಳುವವನ ಎರಡು ಕಿವಿಗಳೂ ಕಂಪಿಸುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 3:11
11 ತಿಳಿವುಗಳ ಹೋಲಿಕೆ  

ಆಗ ಸರ್ವೇಶ್ವರ ತಮ್ಮ ಜನರಿಗೆ ಇಂತೆಂದರು: “ಜನಾಂಗಗಳ ಮಧ್ಯೆ ನಡೆಯುವುದನ್ನು ನೋಡಿರಿ. ನೋಡಿದರೆ ಬೆಕ್ಕಸಬೆರಗಾಗುವಿರಿ. ನಿಮ್ಮ ಕಾಲದಲ್ಲೇ ನಾನೊಂದು ಕಾರ್ಯವನ್ನು ಮಾಡುವೆನು. ಅದನ್ನು ಕುರಿತು ನೀವು ಕಿವಿಯಾರೆ ಕೇಳಿದರೂ ನೀವು ನಂಬುವುದಿಲ್ಲ.


‘ಅವಹೇಳನ ಮಾಡುವವರೇ, ಗಮನಿಸಿರಿ; ದಿಗ್ಭ್ರಮೆಗೊಂಡು ದಿಕ್ಕುಪಾಲಾಗಿರಿ; ನಿಮ್ಮ ಕಾಲದಲ್ಲೇ ನಾನೊಂದು ಮಹತ್ಕಾರ್ಯವನ್ನು ಮಾಡುತ್ತೇನೆ; ಅದನ್ನು ನೀವು ನಂಬಲಾರಿರಿ, ಇನ್ನೊಬ್ಬರು ವಿವರಿಸಿ ಹೇಳಿದರೂ ನಂಬಲಾರಿರಿ’, “ ಎಂದು ಹೇಳಿದನು.


‘ಜುದೇಯದ ಅರಸರೇ, ಜೆರುಸಲೇಮಿನ ನಿವಾಸಿಗಳೇ, ಸರ್ವೇಶ್ವರನ ಸಂದೇಶವನ್ನು ಕೇಳಿರಿ. ಇದು ಇಸ್ರಯೇಲರ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರನ ನುಡಿ: ಈ ಸ್ಥಳದ ಮೇಲೆ ನಾನು ಕೇಡನ್ನು ಬರಮಾಡುವೆನು. ಅದರ ಸುದ್ದಿಯನ್ನು ಕೇಳುವವರ ಕಿವಿಗಳೂ ನಿಮಿರುವುವು.


ಆದ್ದರಿಂದ ಇಸ್ರಯೇಲ್ ದೇವರಾದ ಸರ್ವೇಶ್ವರ ಎಂಬ ನಾನು ಜೆರುಸಲೇಮಿನವರ ಮೇಲೂ ಜುದೇಯದವರ ಮೇಲೂ ಕೇಡನ್ನು ಬರಮಾಡುವೆನು; ಅದನ್ನು ಕೇಳುವವರ ಎರಡು ಕಿವಿಗಳೂ ಬಿರಿಯುವುವು.


ಗ್ರಹಶಕ್ತಿಗಳು ಕದಲುವುದರಿಂದ ಧರೆಯಲ್ಲಿ ಏನೇನು ಸಂಭವಿಸುವುದೋ ಎಂಬ ಭಯಭೀತಿಯಿಂದ ಮಾನವರು ದಿಗ್ಭ್ರಮೆಗೊಳ್ಳುವರು.


ಇಂತಿರಲು ಇವರ ಮಧ್ಯೆ ಎಸಗುವೆನು ಅಧಿಕಾಶ್ಚರ್ಯವಾದ ಅದ್ಭುತಕಾರ್ಯಗಳನು, ಅಳಿವುದು ಇವರ ಜ್ಞಾನಿಗಳ ಜ್ಞಾನವು, ಅಡಗುವುದು ವಿವೇಕಿಗಳ ವಿವೇಕವು".


ಅದು ಹಾದುಹೋಗುವಾಗಲೆಲ್ಲಾ ನಿಮ್ಮನ್ನು ಹಿಡಿದುಬಿಡುವುದು. ಪ್ರತಿದಿನವೂ ಹಗಲೂ ರಾತ್ರಿ ಅದು ಹಾದುಹೋಗುವುದು. ಸರ್ವೇಶ್ವರ ಸ್ವಾಮಿಯ ಈ ಸಂದೇಶವನ್ನು ಅರ್ಥಮಾಡಿಕೊಳ್ಳುವವರಿಗೆ ಭಯಭ್ರಾಂತಿ ಉಂಟಾಗುವುದು.


ಸರ್ವೇಶ್ವರ ಪ್ರತ್ಯಕ್ಷರಾಗಿ ಹಿಂದಿನಂತೆಯೇ, “ಸಮುವೇಲನೇ, ಸಮುವೇಲನೇ,” ಎಂದರು. ಸಮುವೇಲನು, “ಅಪ್ಪಣೆಯಾಗಲಿ, ತಮ್ಮ ದಾಸನಾದ ನಾನು ಕಾದಿದ್ದೇನೆ,” ಎಂದನು.


ಇಸ್ರಯೇಲರು ಸೋತು ತಮ್ಮ ತಮ್ಮ ಮನೆಗಳಿಗೆ ಓಡಿಹೋದರು. ಮಹಾ ಸಂಹಾರವಾಯಿತು; ಇಸ್ರಯೇಲರಲ್ಲಿ ಮೂವತ್ತು ಸಾವಿರ ಕಾಲಾಳುಗಳು ಮಡಿದರು.


ಅದನು ಹಿಡಿಯಬಹುದೆಂಬ ನಂಬಿಕೆ ವ್ಯರ್ಥ ಹಿಡಿಯಬಂದವನು ನೋಡಿದ್ದೇ ಬಿದ್ದುಹೋದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು