Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 3:19 - ಕನ್ನಡ ಸತ್ಯವೇದವು C.L. Bible (BSI)

19 ಸಮುವೇಲನು ದೊಡ್ಡವನಾಗುತ್ತಾ ಬಂದನು. ಸರ್ವೇಶ್ವರ ಅವನೊಡನೆ ಇದ್ದರು. ಆದುದರಿಂದಲೆ ಅವನು ಪ್ರವಾದನೆ ಮಾಡಿದವುಗಳಲ್ಲಿ ಒಂದೂ ತಪ್ಪಿಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಸಮುವೇಲನು ದೊಡ್ಡವನಾಗುತ್ತಾ ಬಂದನು. ಯೆಹೋವನು ಅವನೊಡನೆ ಇದ್ದುದ್ದರಿಂದ ಅವನ ಪ್ರವಾದನೆಗಳಲ್ಲಿ ಒಂದೂ ಬಿದ್ದುಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಸಮುವೇಲನು ದೊಡ್ಡವನಾಗುತ್ತಾ ಬಂದನಷ್ಟೆ. ಯೆಹೋವನು ಅವನೊಡನೆ ಇದ್ದದರಿಂದ ಅವನ ಪ್ರವಾದನೆಗಳಲ್ಲಿ ಒಂದೂ ಬಿದ್ದುಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಯೆಹೋವನು ಸಮುವೇಲನ ಸಂಗಡವಿದ್ದನು; ಸಮುವೇಲನು ಬೆಳೆದು ದೊಡ್ಡವನಾದನು; ಸಮುವೇಲನ ಯಾವ ಸಂದೇಶವೂ ಸುಳ್ಳಾಗದಂತೆ ಯೆಹೋವನು ನೋಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಸಮುಯೇಲನು ಬೆಳೆಯುತ್ತಾ ಬಂದನು. ಯೆಹೋವ ದೇವರು ಅವನ ಸಂಗಡ ಇದ್ದು, ಅವರ ವಾಕ್ಯಗಳಲ್ಲಿ ಒಂದಾದರೂ ಬಿದ್ದು ಹೋಗಗೊಡಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 3:19
32 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಸ್ವಾಮಿ ಜೋಸೆಫನ ಸಂಗಡ ಇದ್ದ ಕಾರಣ, ಅವನು ಏಳಿಗೆಯಾಗಿ ತನ್ನ ಈಜಿಪ್ಟಿನ ದಣಿಯ ಮನೆಯಲ್ಲಿ ಒಬ್ಬ ಸೇವಕನಾದ.


ಆಗ ಆ ಆಳು, “ಇಗೋ, ಈ ಪಟ್ಟಣದಲ್ಲಿ ಗೌರವಸ್ಥನಾದ ಒಬ್ಬ ದೈವಪುರುಷ ಇದ್ದಾನೆ. ಅವನು ನುಡಿಯುವುದೆಲ್ಲಾ ನೆರವೇರುತ್ತದೆ; ಅಲ್ಲಿಗೆ ಹೋಗೋಣ; ಒಂದು ವೇಳೆ ಅವನು ನಾವು ಹೋಗಬೇಕಾದ ಮಾರ್ಗವನ್ನು ತಿಳಿಸುವನು,” ಎಂದನು.


“ತಾವು ವಾಗ್ದಾನ ಮಾಡಿದಂತೆ ತಮ್ಮ ಪ್ರಜೆಗಳಾದ ಇಸ್ರಯೇಲರಿಗೆ ವಿಶ್ರಾಂತಿಯನ್ನು ಅನುಗ್ರಹಿಸಿದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ತಮ್ಮ ದಾಸ ಮೋಶೆಯ ಮುಖಾಂತರ ಮಾಡಿದ ಅತಿಶ್ರೇಷ್ಠ ವಾಗ್ದಾನಗಳಲ್ಲಿ ಒಂದೂ ತಪ್ಪಿಹೋಗಲಿಲ್ಲ.


ಯೇಸು ಬೆಳೆದಂತೆ ಜ್ಞಾನದಲ್ಲಿ ಪ್ರವರ್ಧಿಸುತ್ತಾ ದೇವರಿಗೂ ಮಾನವರಿಗೂ ಅಚ್ಚುಮೆಚ್ಚಾಗುತ್ತಾ ಬಂದರು.


ಪ್ರಭು ನಿನ್ನೊಂದಿಗಿರಲಿ, ದೇವರ ಅನುಗ್ರಹ ನಿಮ್ಮೆಲ್ಲರಲ್ಲೂ ಇರಲಿ!


ಸರ್ವೇಶ್ವರನ ಅನುಗ್ರಹ ಹನ್ನಳಿಗೆ ಲಭಿಸಿತು. ಆಕೆಗೆ ಮೂರು ಗಂಡು, ಇಬ್ಬರು ಹೆಣ್ಣು ಮಕ್ಕಳಾದುವು. ಬಾಲಕ ಸಮುವೇಲನು ಸರ್ವೇಶ್ವರನ ಸನ್ನಿಧಿಯಲ್ಲಿ ಬೆಳೆದು ದೊಡ್ಡವನಾದನು.


ಕೊನೆಯದಾಗಿ ಪ್ರಿಯ ಸಹೋದರರೇ, ಸಂತೋಷದಿಂದಿರಿ, ಪರಿಪೂರ್ಣರಾಗಲು ಪ್ರಯತ್ನಿಸಿರಿ. ನನ್ನ ಬುದ್ಧಿಮಾತುಗಳಿಗೆ ಕಿವಿಗೊಡಿ; ಒಮ್ಮನಸ್ಸಿನಿಂದ ಬಾಳಿರಿ; ಸಮಾಧಾನದಿಂದ ಜೀವಿಸಿರಿ; ಆಗ ಪ್ರೀತಿ ಮತ್ತು ಶಾಂತಿ ಸ್ವರೂಪರಾದ ದೇವರು ನಿಮ್ಮೊಡನೆ ಇರುತ್ತಾರೆ.


ಬಾಲಕ ಯೇಸು ಬೆಳೆದಂತೆ ಶಕ್ತರೂ ಜ್ಞಾನ ಸಂಪೂರ್ಣರೂ ಆದರು. (ಇದಲ್ಲದೆ) ದೈವಾನುಗ್ರಹ ಅವರ ಮೇಲಿತ್ತು.


ಬಾಲಕನು ಬೆಳೆದಂತೆ ಆತ್ಮಶಕ್ತಿಯುತನಾದನು. ಇಸ್ರಯೇಲ್ ಜನರಿಗೆ ಬಹಿರಂಗವಾಗಿ ಕಾಣಿಸಿಕೊಳ್ಳುವವರೆಗೂ ಅವನು ಬೆಂಗಾಡಿನಲ್ಲೇ ವಾಸಿಸುತ್ತಿದ್ದನು.


ನಾನೇ ಇರುವೆ ನಿನ್ನ ಸಂಗಡ ನೀ ಜಲರಾಶಿಯನ್ನು ದಾಟುವಾಗ ಮುಳುಗಿಸದು ನದಿ ನೀ ಅದನ್ನು ಹಾದುಹೋಗುವಾಗ ಸುಡದು ಬೆಂಕಿ, ದಹಿಸದು ಜ್ವಾಲೆ, ಅದರ ಮಧ್ಯೆ ನೀ ನಡೆಯುವಾಗ.


ಸರ್ವೇಶ್ವರ ಅವನೊಂದಿಗೆ ಇದ್ದುದರಿಂದ ಅವನು ಎಲ್ಲ ಕಾರ್ಯಗಳಲ್ಲಿ ವಿವೇಕದಿಂದ ವರ್ತಿಸಿ ಜಯಶಾಲಿಯಾಗುತ್ತಿದ್ದನು.


“ಇಮ್ಮಾನುವೇಲ್” ಎಂದರೆ, “ದೇವರು ನಮ್ಮೊಡನೆ ಇದ್ದಾರೆ” ಎಂದು ಅರ್ಥ.


ನನ್ನ ದಾಸನ ಮಾತನ್ನಾದರೋ ದೃಢೀಕರಿಸುವವನು ನಾನೆ ನನ್ನ ದೂತರ ಯೋಜನೆಯನ್ನು ಸಫಲಗೊಳಿಸುವವನು ನಾನೆ ಜನನಿವಾಸವಾಗುವುದು ಜೆರುಸಲೇಮ್ ನಗರವು ಪುನಃ ಕಟ್ಟಲ್ಪಡುವುವು ಜುದೇಯ ಪಟ್ಟಣಗಳು. ಅಲ್ಲಿ ಹಾಳುಬಿದ್ದವುಗಳು ಮರಳಿ ಎದ್ದು ನಿಲ್ಲುವುವು.


ಆ ದಿನಗಳಲ್ಲಿ ಅಬೀಮೆಲೆಕನು ತನ್ನ ಸೇನಾಪತಿಯಾದ ಫೀಕೋಲನ ಸಮೇತ ಅಬ್ರಹಾಮನ ಬಳಿಗೆ ಬಂದು, “ನೀನು ಮಾಡುವ ಕೆಲಸಕಾರ್ಯಗಳಲ್ಲೆಲ್ಲಾ ದೇವರು ನಿನ್ನ ಸಂಗಡ ಇದ್ದಾರೆ.


ದೇವದೂತನು ಆಕೆಯ ಬಳಿಗೆ ಬಂದು, “ದೈವಾನುಗ್ರಹಭರಿತಳೇ, ನಿನಗೆ ಶುಭವಾಗಲಿ; ಸರ್ವೇಶ್ವರ ನಿನ್ನೊಡನೆ ಇದ್ದಾರೆ!” ಎಂದನು.


ಆ ಮಹಿಳೆ ಒಬ್ಬ ಮಗನನ್ನು ಹೆತ್ತು ಅವನಿಗೆ ‘ಸಂಸೋನ’ ಎಂದು ಹೆಸರಿಟ್ಟಳು. ಹುಡುಗ ಬೆಳೆದು ದೊಡ್ಡವನಾದ. ಸರ್ವೇಶ್ವರನ ಆಶೀರ್ವಾದ ಅವನ ಮೇಲಿತ್ತು.


ಗಮನಿಸು, ನಾನು ನಿನ್ನೊಂದಿಗೆ ಇರುತ್ತೇನೆ. ನೀನು ಎಲ್ಲಿಗೆ ಹೋದರೂ ನಿನ್ನನ್ನು ಕಾಪಾಡಿ ಈ ನಾಡಿಗೆ ಮರಳಿ ಬರಮಾಡುತ್ತೇನೆ. ನಾನು ನಿನಗೆ ಹೇಳಿದ್ದನ್ನೆಲ್ಲ ನೆರವೇರಿಸದೆ ಬಿಡುವುದಿಲ್ಲ,” ಎಂದರು.


ಇನ್ನು ಇವನೇ ನಿಮ್ಮನ್ನು ಮುನ್ನಡೆಸುವನು. ಚಿಕ್ಕಂದಿನಿಂದ ನಿಮ್ಮ ನಾಯಕನಾಗಿದ್ದ ನಾನು ಈಗ ತಲೆನರೆತ ಮುದುಕನಾಗಿದ್ದೇನೆ; ನನ್ನ ಮಕ್ಕಳು ನಿಮ್ಮ ಮಧ್ಯದಲ್ಲಿದ್ದಾರೆ.


ಸೇವಕರಲ್ಲೊಬ್ಬನು ಅವನಿಗೆ, “ಬೆತ್ಲೆಹೇಮಿನವನಾದ ಜೆಸ್ಸೆಯನ ಮಗನನ್ನು ನೋಡಿದ್ದೇನೆ; ಅವನು ಚೆನ್ನಾಗಿ ಬಾರಿಸಬಲ್ಲನು. ಅವನು ಪರಾಕ್ರಮಶಾಲಿ, ರಣಶೂರ, ವಾಕ್ಚತುರ, ಸುಂದರ ಹಾಗು ಸರ್ವೇಶ್ವರನ ಅನುಗ್ರಹ ಹೊಂದಿದವ,” ಎಂದು ತಿಳಿಸಿದನು.


ಜೋಸೆಫನ ಸಂಗಡ ಸರ್ವೇಶ್ವರ ಇದ್ದು ಅವನು ಮಾಡುವ ಕೆಲಸವನ್ನೆಲ್ಲ ಫಲಕಾರಿಯಾಗಿ ಮಾಡುತ್ತಾರೆಂಬುದು ಅವನ ದಣಿಗೆ ತಿಳಿಯಿತು.


ಪ್ರವಾದಿ ಸರ್ವೇಶ್ವರನ ಮಾತೆಂದು ಹೇಳಿ, ಮುಂತಿಳಿಸಿದ ಸಂಗತಿ ನಡೆಯದೆ ಹೋದರೆ, ಅವನ ಮಾತು ಸರ್ವೇಶ್ವರನದಲ್ಲವೆಂದು ನೀವು ತಿಳಿದುಕೊಳ್ಳಬೇಕು. ಅವನು ಅಧಿಕಾರವಿಲ್ಲದೆ ಮಾತಾಡಿದವನು; ಅವನಿಗೆ ಹೆದರಬಾರದು.


ಸರ್ವೇಶ್ವರ ಇಸ್ರಯೇಲರಿಗೆ ಮಾಡಿದ ಅತ್ಯುನ್ನತ ವಾಗ್ದಾನಗಳಲ್ಲಿ ಒಂದೂ ತಪ್ಪಿಹೋಗಲಿಲ್ಲ. ಎಲ್ಲವೂ ನೆರವೇರಿದವು.


ಬಾಲಕ ಸಮುವೇಲ ಈ ಮಧ್ಯೆ ಬೆಳೆಯುತ್ತಾ ಸರ್ವೇಶ್ವರನ ಹಾಗು ಮಾನವರ ಪ್ರೀತಿಗೆ ಪಾತ್ರನಾಗುತ್ತಿದ್ದನು.


ಈ ಗುರುತುಗಳೆಲ್ಲ ಸಂಭವಿಸಿದಾಗ ನಿನಗೆ ಅನುಕೂಲವಿದ್ದ ಹಾಗೆ ವರ್ತಿಸು, ದೇವರು ನಿನ್ನೊಂದಿಗೆ ಇದ್ದಾರೆ!


ದಾವೀದನಾದರೋ ಸೌಲನು ಎಲ್ಲಿಗೆ ಕಳುಹಿಸಿದರೂ ಅಲ್ಲಿಗೆ ಹೋಗಿ ಎಲ್ಲವನ್ನು ವಿವೇಕದಿಂದ ಮಾಡಿ ಯಶಸ್ಸು ಪಡೆಯುತ್ತಿದ್ದನು. ಆದ್ದರಿಂದ ಸೌಲನು ಅವನನ್ನು ಸೇನಾಪತಿಯನ್ನಾಗಿ ನೇಮಿಸಿದನು. ಇದರಿಂದ ಎಲ್ಲ ಅಧಿಕಾರಿಗಳಿಗೂ ಜನಸಾಮಾನ್ಯರಿಗೂ ಸಂತೋಷವಾಯಿತು.


ಸರ್ವೇಶ್ವರ ಸೌಲನನ್ನು ತ್ಯಜಿಸಿ ದಾವೀದನೊಂದಿಗೆ ಇದ್ದರು. ಈ ಕಾರಣಕ್ಕಾಗಿ ಸೌಲನು ದಾವೀದನಿಗೆ ಭಯಪಟ್ಟನು.


ಇಗೋ, ಅಹಾಬನ ಮನೆಯವರನ್ನುಕುರಿತು ಸರ್ವೇಶ್ವರ ಹೇಳಿದ ಮಾತುಗಳೆಲ್ಲಾ ತಪ್ಪದೆ ನೆರವೇರುವುದೆಂದು ತಿಳಿದುಕೊಳ್ಳಿರಿ. ಸರ್ವೇಶ್ವರ ತಮ್ಮ ದಾಸನಾದ ಎಲೀಯನ ಮುಖಾಂತರ ಹೇಳಿದ್ದನ್ನು ನೆರವೇರಿಸಿದ್ದಾರಷ್ಟೇ,” ಎಂದು ಹೇಳಿದನು.


ನಿನ್ನ ಸಂತಾನದವರು ನಾಲ್ಕನೆಯ ತಲೆಯವರೆಗೂ ಇಸ್ರಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು ಎಂಬುದಾಗಿ ಯೇಹುವಿಗೆ ಸರ್ವೇಶ್ವರ ಮುಂತಿಳಿಸಿದ ಮಾತು ನೆರವೇರಿತು.


‘ಈ ನಾಡಿನ ಮೇಲೆ ಹಾಗು ಜನರ ಮೇಲೆ ಜುದೇಯದ ಅರಸನು ಓದಿಸಿದ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಿಕ್ಷೆಯನ್ನು ಬರಮಾಡುವೆನು.


ಅಂತೆಯೇ, ನನ್ನ ಬಾಯಿಂದ ಹೊರಡುವ ಮಾತು ನನ್ನ ಇಷ್ಟಾರ್ಥವನು ನೆರವೇರಿಸಿದ ಹೊರತು, ನನ್ನ ಉದ್ದೇಶವನು ಕೈಗೂಡಿಸಿದ ಹೊರತು. ನನ್ನ ಬಳಿಗೆ ವ್ಯರ್ಥವಾಗಿ ಹಿಂದಿರುಗದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು