Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 3:9 - ಕನ್ನಡ ಸತ್ಯವೇದವು C.L. Bible (BSI)

9 ಅವನು ಸಮುವೇಲನಿಗೆ, “ಹೋಗಿ ಮಲಗಿಕೋ; ಮತ್ತೆ ಅವರು ನಿನ್ನನ್ನು ಕರೆದರೆ, ‘ಸರ್ವೇಶ್ವರಾ, ಅಪ್ಪಣೆಯಾಗಲಿ; ತಮ್ಮ ದಾಸ ಕಾದಿದ್ದಾನೆ,’ ಎಂದು ಹೇಳು,” ಎಂದನು. ಸಮುವೇಲನು ಹಿಂದಿರುಗಿ ಹೋಗಿ ತನ್ನ ಸ್ಥಳದಲ್ಲೇ ಮಲಗಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಪುನಃ ಆತನು ನಿನ್ನನ್ನು ಕರೆದರೆ ಯೆಹೋವನೇ, ಅಪ್ಪಣೆಯಾಗಲಿ, ನಿನ್ನ ದಾಸನು ಕೇಳಿಸಿಕೊಳ್ಳುತ್ತಿದ್ದಾನೆ” ಎಂದು ಹೇಳು ಅಂದನು. ಸಮುವೇಲನು ತಿರುಗಿ ಹೋಗಿ ತನ್ನ ಸ್ಥಳದಲ್ಲಿ ಮಲಗಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ತಿರಿಗಿ ಶಬ್ದವಾದರೆ ಯೆಹೋವನೇ, ಅಪ್ಪಣೆಯಾಗಲಿ, ನಿನ್ನ ದಾಸನು ಕಾದಿದ್ದಾನೆ ಎಂದು ಹೇಳು ಅಂದನು. ಸಮುವೇಲನು ತಿರಿಗಿ ಹೋಗಿ ತನ್ನ ಸ್ಥಳದಲ್ಲಿ ಮಲಗಿಕೊಳ್ಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಏಲಿಯು ಸಮುವೇಲನಿಗೆ, “ಹೋಗಿ ಮಲಗಿಕೋ. ನಿನ್ನನ್ನು ಮತ್ತೆ ಕರೆದರೆ, ‘ಅಪ್ಪಣೆಯಾಗಲಿ, ಯೆಹೋವನೇ ನಾನು ನಿನ್ನ ಸೇವಕ, ಕೇಳಿಸಿಕೊಳ್ಳುತ್ತಿದ್ದೇನೆ’ ಎಂದು ಉತ್ತರಿಸು” ಎಂಬುದಾಗಿ ಹೇಳಿದನು. ಸಮುವೇಲನು ತನ್ನ ಸ್ಥಳದಲ್ಲಿ ಮಲಗಲು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಏಲಿಯು ಸಮುಯೇಲನಿಗೆ, “ನೀನು ಹೋಗಿ ಮಲಗು; ಅವರು ನಿನ್ನನ್ನು ಕರೆದರೆ, ಆಗ ನೀನು, ‘ಯೆಹೋವ ದೇವರೇ, ಮಾತನಾಡಿ, ನಿಮ್ಮ ದಾಸನು ಕೇಳುತ್ತಾನೆ,’ ಎಂದು ಹೇಳು,” ಎಂದನು. ಹಾಗೆಯೇ ಸಮುಯೇಲನು ಹೋಗಿ ತನ್ನ ಸ್ಥಳದಲ್ಲಿ ಮಲಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 3:9
9 ತಿಳಿವುಗಳ ಹೋಲಿಕೆ  

ಅವರು ಮೋಶೆಗೆ, “ನೀನೇ ನಮ್ಮೊಡನೆ ಮಾತಾಡು, ನಾವು ಕೇಳುತ್ತೇವೆ. ದೇವರು ನಮ್ಮೊಡನೆ ಮಾತಾಡಿದರೆ ನಾವು ಸತ್ತು ಹೋಗುತ್ತೇವೆ,” ಎಂದು ಹೇಳಿದರು.


ಆಗ, “ಯಾರನ್ನು ಕಳುಹಿಸಲಿ? ನಮ್ಮ ಪರವಾಗಿ ಹೋಗುವವರು ಯಾರು?” ಎಂಬ ನುಡಿ ಕೇಳಿಸಿತು. ಅದಕ್ಕೆ ನಾನು, “ಇಗೋ, ನಾನು ಸಿದ್ಧ, ನನ್ನನ್ನು ಕಳುಹಿಸಿ” ಎಂದೆನು.


ನಾ ಕೇಳುತ್ತಿರುವೆನು, ಪ್ರಭು ಹೇಳುವುದನು I ತನ್ನ ಜನರಿಗಾತ ನುಡಿವುದು ಶಾಂತಿಯನು I ಇನ್ನಾದರು ತೊರೆಯೋಣ ಮೂರ್ಖತೆಯನು II


ನೀನೆದ್ದು ಪಟ್ಟಣಕ್ಕೆ ಹೋಗು, ಏನು ಮಾಡಬೇಕೆಂದು ನಿನಗೆ ಅಲ್ಲಿ ತಿಳಿಸಲಾಗುವುದು,” ಎಂದು ಆ ವಾಣಿ ಹೇಳಿತು.


ಬಳಿಕ ಆ ವ್ಯಕ್ತಿ ನನಗೆ, “ಅತಿಪ್ರಿಯನೇ, ಭಯಪಡಬೇಡ. ನಿನಗೆ ಶಾಂತಿಸಮಾಧಾನವಿರಲಿ! ಧೈರ್ಯತಂದುಕೊ! ಧೈರ್ಯತಂದುಕೊ!” ಎಂದು ಹೇಳಿದ. ಅವನ ಈ ಮಾತನ್ನು ಕೇಳಿದ ಕೂಡಲೆ ನಾನು ಧೈರ್ಯದಿಂದ, “ಎನ್ನೊಡೆಯಾ, ಮಾತಾಡು. ನನಗೆ ಧೈರ್ಯತುಂಬಿರುವೆ,” ಎಂದು ಅರಿಕೆಮಾಡಿದೆ.


ಸರ್ವೇಶ್ವರ ಸಮುವೇಲನನ್ನು ಮೂರನೆಯ ಸಾರಿ ಕರೆದರು. ಅವನು ತಟ್ಟನೆ ಏಲಿಯ ಹತ್ತಿರ ಓಡಿ, “ಇಗೋ, ಬಂದಿದ್ದೇನೆ, ನನ್ನನ್ನು ಕರೆದಿರಲ್ಲಾ,” ಎಂದನು. ಹುಡುಗನನ್ನು ಕರೆದವರು ಸರ್ವೇಶ್ವರನೇ ಎಂದು ಏಲಿಗೆ ತಿಳಿಯಿತು.


ಸರ್ವೇಶ್ವರ ಪ್ರತ್ಯಕ್ಷರಾಗಿ ಹಿಂದಿನಂತೆಯೇ, “ಸಮುವೇಲನೇ, ಸಮುವೇಲನೇ,” ಎಂದರು. ಸಮುವೇಲನು, “ಅಪ್ಪಣೆಯಾಗಲಿ, ತಮ್ಮ ದಾಸನಾದ ನಾನು ಕಾದಿದ್ದೇನೆ,” ಎಂದನು.


ಆಗ ಆ ವ್ಯಕ್ತಿ, “ನಾನು ಅಂಥವನಲ್ಲ; ನಾನು ಸರ್ವೇಶ್ವರನ ಸೇನಾಪತಿ. ಇದೀಗಲೆ ಬಂದವನು,’ ಎಂದು ಉತ್ತರಿಸಿದನು. ಕೂಡಲೆ ಯೆಹೋಶುವ ಅವನಿಗೆ ಸಾಷ್ಟಾಂಗವೆರಗಿ, “ಒಡೆಯಾ, ತಮ್ಮ ದಾಸನಾದ ನನಗೆ ಏನು ಆಜ್ಞಾಪಿಸಬೇಕೆಂದಿದ್ದೀರಿ?” ಎಂದನು.


ಭಯಭಕ್ತಿಯುಳ್ಳವರಿಗಾತನ ರಕ್ಷಣೆ ಸನ್ನಿಹಿತ I ಇದರಿಂದಾತನ ಮಹಿಮೆ ನಾಡಿಲ್ಲಿರುವುದು ನಿರುತ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು