Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 30:14 - ಕನ್ನಡ ಸತ್ಯವೇದವು C.L. Bible (BSI)

14 ಕೆರೇತ್ಯರೂ ಯೆಹೂದ್ಯರೂ ಕಾಲೇಬ್ಯರೂ ಇರುವ ದಕ್ಷಿಣ ಪ್ರಾಂತ್ಯವನ್ನು ನಾವು ಸೂರೆಮಾಡಿ ಚಿಕ್ಲಗ್ ಊರನ್ನು ಸುಟ್ಟುಬಿಟ್ಟು ಬಂದೆವು,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾವು ಕೆರೇತ್ಯರೂ ಯೆಹೂದ್ಯರೂ ಕಾಲೇಬ್ಯರೂ ಇರುವ ದಕ್ಷಿಣ ಪ್ರಾಂತ್ಯವನ್ನು ಸೂರೆಮಾಡಿ ಚಿಕ್ಲಗ್ ಊರನ್ನು ಸುಟ್ಟುಬಿಟ್ಟು ಬಂದೆವು” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಾವು ಕೆರೇತ್ಯರೂ ಯೆಹೂದ್ಯರೂ ಕಾಲೇಬ್ಯರೂ ಇರುವ ದಕ್ಷಿಣಪ್ರಾಂತವನ್ನು ಸೂರೆಮಾಡಿ ಚಿಕ್ಲಗ್ ಊರನ್ನು ಸುಟ್ಟುಬಿಟ್ಟು ಬಂದೆವು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಕೆರೇತ್ಯರು ವಾಸಿಸುವ ನೆಗೆವ್ ಮೇಲೆ ನಾವು ಆಕ್ರಮಣ ಮಾಡಿದೆವು. ನಾವು ಯೆಹೂದ ದೇಶದ ಮೇಲೆ ಮತ್ತು ಕಾಲೇಬ್ಯರು ವಾಸಿಸುವ ನೆಗೆವ್ ಪ್ರಾಂತ್ಯಗಳ ಮೇಲೆ ಆಕ್ರಮಣ ಮಾಡಿದೆವು. ನಾವು ಚಿಕ್ಲಗನ್ನು ಸುಟ್ಟುಹಾಕಿದೆವು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಾವು ಕೆರೇತ್ಯರ ದಕ್ಷಿಣ ಪ್ರಾಂತದ ಮೇಲೆಯೂ, ಯೆಹೂದದ ಮೇರೆಯ ಮೇಲೆಯೂ, ಕಾಲೇಬನ ದಕ್ಷಿಣ ಪ್ರಾಂತದ ಮೇಲೆಯೂ ದಾಳಿಮಾಡಿ, ಚಿಕ್ಲಗ್ ಊರನ್ನು ಬೆಂಕಿಯಿಂದ ಸುಟ್ಟುಬಿಟ್ಟೆವು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 30:14
14 ತಿಳಿವುಗಳ ಹೋಲಿಕೆ  

ಕರಾವಳಿಯಲ್ಲಿ ವಾಸಿಸುವ ಕೆರೇತ್ಯ ಜನರೇ, ನಿಮಗೆ ಧಿಕ್ಕಾರ! ಫಿಲಿಷ್ಟಿಯರ ನಾಡಾದ ಕಾನಾನೇ, ನಿನಗೆ ಧಿಕ್ಕಾರ! ಸರ್ವೇಶ್ವರನ ನ್ಯಾಯತೀರ್ಪು ನಿನಗೆ ವಿರುದ್ಧವಾಗಿದೆ; ನಿನ್ನಲ್ಲಿ ಯಾರೂ ಉಳಿಯದಂತೆ ಅಳಿಸಿಬಿಡುವರು.


ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಇಗೋ, ನಾನು ಫಿಲಿಷ್ಟಿಯರ ಮೇಲೆ ಕೈಯೆತ್ತುವೆನು; ಕೆರೇತಿಯರನ್ನು ಕತ್ತರಿಸಿಬಿಟ್ಟು, ಸಮುದ್ರತೀರದಲ್ಲಿನ ಜನಶೇಷವನ್ನು ನಿಶ್ಶೇಷಮಾಡುವೆನು;


ಯಾಜಕ ಚಾದೋಕ್, ಪ್ರವಾದಿ ನಾತಾನ್ ಹಾಗು ಯೆಹೋಯಾದಾವನ ಮಗ ಬೆನಾಯ ಇವರನ್ನೂ ಕೆರೇತ್ಯ-ಪೆಲೇತ್ಯರನ್ನೂ ಅರಸರು ಅವನ ಜೊತೆಯಲ್ಲಿ ಕಳುಹಿಸಿದ್ದಾರೆ. ಅವರು ಅವನನ್ನು ಅರಸನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿದ್ದಾರೆ.


ಆಗ ಯಾಜಕ ಚಾದೋಕ್, ಪ್ರವಾದಿ ನಾತಾನ್ ಹಾಗು ಯೆಹೋಯಾದಾವನ ಮಗ ಬೆನಾಯ ಎಂಬವರು ‘ಕೆರೇತ್ಯ’, ‘ಪೆಲೇತ್ಯ’ ಎಂಬ ಕಾವಲುದಂಡುಗಳನ್ನು ತೆಗೆದುಕೊಂಡು, ಸೊಲೊಮೋನನನ್ನು ಅರಸ ದಾವೀದನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿ, ಗೀಹೋನಿಗೆ ಕರೆದುಕೊಂಡು ಹೋದರು.


ಯೆಹೋಯಾದಾವನ ಮಗ ಬೆನಾಯನು ‘ಕೆರೇತ್ಯ’, ‘ಪೆಲೇತ್ಯ,’ ಎಂಬ ಕಾವಲುದಂಡುಗಳ ಮುಖ್ಯಸ್ಥನಾಗಿದ್ದನು. ದಾವೀದನ ಮಕ್ಕಳೂ ಯಾಜಕರಾಗಿದ್ದರು.


ಅವರು ಅಲ್ಲಿಗೆ ಹೋದಾಗ ಆ ದಾಳಿಕಾರರು ತಮಗೆ ಫಿಲಿಷ್ಟಿಯ ಹಾಗು ಯೆಹೂದ ಪ್ರಾಂತ್ಯಗಳಲ್ಲಿ ದೊರಕಿದ್ದ ದೊಡ್ಡಕೊಳ್ಳೆಯ ನಿಮಿತ್ತ ಸಂತೋಷಿಸಿ, ತಿಂದು, ಕುಡಿದು, ಕುಣಿದಾಡುತ್ತಾ ಅಲ್ಲಿನ ಬಯಲಿನಲ್ಲಿ ವ್ಯಾಪಿಸಿಕೊಂಡಿದ್ದರು.


ದಾವೀದನೂ ಅವನ ಜನರೂ ಮಾರನೆಯ ದಿನ ಚಿಕ್ಲಗ್ ಊರನ್ನು ಸೇರಿದರು. ಅಷ್ಟರೊಳಗೆ ಅಮಾಲೇಕ್ಯರು ದಂಡೆತ್ತಿ ದಕ್ಷಿಣಪ್ರಾಂತ್ಯಕ್ಕೂ ಚಿಕ್ಲಗ್ ಊರಿಗೂ ಬಂದು ಚಿಕ್ಲಗ್ ಊರನ್ನು ಸುಟ್ಟು ಹಾಳುಮಾಡಿದ್ದರು.


ಯೆಹೋಶುವನು ಸರ್ವೇಶ್ವರನ ಅಪ್ಪಣೆಯಂತೆ ಯೆಫುನ್ನೆಯ ಮಗ ಕಾಲೇಬನಿಗೆ ಯೆಹೂದ ಕುಲದವರ ನಡುವೆ ಅನಾಕನ ತಂದೆ ಆದ ಅರ್ಬನ ನಗರವಾಗಿದ್ದ ಹೆಬ್ರೋನನ್ನು ಕೊಟ್ಟನು.


ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬನನ್ನು ಆಶೀರ್ವದಿಸಿ, ಹೆಬ್ರೋನ್ ನಗರವನ್ನು ಅವನಿಗೆ ಸೊತ್ತಾಗಿ ಕೊಟ್ಟನು.


ಯೆಹೋಯಾದಾವನ ಮಗ ಬಿನಾಯನು ‘ಕೆರೇತ್ಯ’, ‘ಪೆಲೇತ್ಯ’ ಎಂಬ ಕಾವಲುದಂಡುಗಳ ಮುಖ್ಯಸ್ಥನಾಗಿದ್ದನು. ದಾವೀದನ ಮಕ್ಕಳು ಅರಸನ ಒಡ್ಡೋಲಗದಲ್ಲಿ ಪ್ರಧಾನರಾಗಿದ್ದರು.


ಆದರೆ ಇದಕ್ಕೆ ಸೇರಿದ ಹೊಲಗಳನ್ನು ಮತ್ತು ಗ್ರಾಮಗಳನ್ನು ಯಫುನ್ನೆಯ ಮಗ ಕಾಲೇಬನಿಗೆ ಕೊಟ್ಟರು.


ಅವನ ಹೆಂಡತಿಯ ಹೆಸರು ಅಬೀಗೈಲ್. ಆಕೆ ಬಹು ಬುದ್ಧಿವಂತೆ ಹಾಗು ಸುಂದರಿ. ಕಾಲೇಬನ ವಂಶದವನಾದ ಆ ಮನುಷ್ಯನಾದರೊ ನಿಷ್ಠುರನು ಹಾಗು ದುಷ್ಕರ್ಮಿ. ಅವನು ಬಹು ಧನವಂತನೂ ಆಗಿದ್ದ. ಅವನಿಗೆ ಮೂರು ಸಾವಿರ ಕುರಿಗಳೂ ಸಾವಿರ ಆಡುಗಳೂ ಇದ್ದವು. ಅವನು ಒಮ್ಮೆ ಕರ್ಮೆಲಿನಲ್ಲಿ ಕುರಿಗಳ ಉಣ್ಣೆಯನ್ನು ಕತ್ತರಿಸುತ್ತಿದ್ದನು.


ಆಗ ದಾವೀದನು ಅವನನ್ನು, “ನೀನು ಯಾರ ಕಡೆಯವನು? ಎಲ್ಲಿಯವನು?” ಎಂದು ಕೇಳಿದನು. ಆಗ ಅವನು, “ನಾನು ಈಜಿಪ್ಟಿನವನು; ಒಬ್ಬ ಅಮಾಲೇಕ್ಯನ ಗುಲಾಮನು. ನಾನು ಮೂರು ದಿನಗಳ ಹಿಂದೆ ಅಸ್ವಸ್ಥನಾಗಿ ಮಲಗಿಕೊಂಡದ್ದರಿಂದ ನನ್ನ ಯಜಮಾನ ನನ್ನನ್ನು ಬಿಟ್ಟುಹೋದನು.


ಅನಂತರ ದಾವೀದನು, “ನೀನು ನನ್ನನ್ನು ಆ ಗುಂಪು ಇರುವ ಸ್ಥಳಕ್ಕೆ ಕರೆದುಕೊಂಡು ಹೋಗುವಿಯಾ?” ಎಂದು ಕೇಳಿದ್ದಕ್ಕೆ ಅವನು, “ನೀನು ನನ್ನನ್ನು ಕೊಲ್ಲುವುದಿಲ್ಲವೆಂದೂ ನನ್ನ ಯಜಮಾನನ ಕೈಗೆ ಒಪ್ಪಿಸುವುದಿಲ್ಲವೆಂದೂ ದೇವರ ಹೆಸರಿನಲ್ಲಿ ಪ್ರಮಾಣಮಾಡಿದರೆ ನಿನ್ನನ್ನು, ಆ ಗುಂಪಿನವರ ಬಳಿಗೆ ಕರೆದುಕೊಂಡು ಹೋಗುವೆನು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು