Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 30:15 - ಕನ್ನಡ ಸತ್ಯವೇದವು C.L. Bible (BSI)

15 ಅನಂತರ ದಾವೀದನು, “ನೀನು ನನ್ನನ್ನು ಆ ಗುಂಪು ಇರುವ ಸ್ಥಳಕ್ಕೆ ಕರೆದುಕೊಂಡು ಹೋಗುವಿಯಾ?” ಎಂದು ಕೇಳಿದ್ದಕ್ಕೆ ಅವನು, “ನೀನು ನನ್ನನ್ನು ಕೊಲ್ಲುವುದಿಲ್ಲವೆಂದೂ ನನ್ನ ಯಜಮಾನನ ಕೈಗೆ ಒಪ್ಪಿಸುವುದಿಲ್ಲವೆಂದೂ ದೇವರ ಹೆಸರಿನಲ್ಲಿ ಪ್ರಮಾಣಮಾಡಿದರೆ ನಿನ್ನನ್ನು, ಆ ಗುಂಪಿನವರ ಬಳಿಗೆ ಕರೆದುಕೊಂಡು ಹೋಗುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅನಂತರ ದಾವೀದನು, “ನೀನು ನನ್ನನ್ನು ಆ ಗುಂಪು ಇರುವ ಸ್ಥಳಕ್ಕೆ ಕರೆದುಕೊಂಡು ಹೋಗುವಿಯೋ?” ಎಂದು ಕೇಳಿದ್ದಕ್ಕೆ ಅವನು, “ನೀನು ನನ್ನನ್ನು ಕೊಲ್ಲುವುದಿಲ್ಲವೆಂದೂ ದೇವರ ಹೆಸರಿನಲ್ಲಿ ಪ್ರಮಾಣ ಮಾಡಿದರೆ ನಿನ್ನನ್ನು ಆ ಗುಂಪಿನವರ ಬಳಿಗೆ ಕರಕೊಂಡು ಹೋಗುವೆನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅನಂತರ ದಾವೀದನು - ನೀನು ನನ್ನನ್ನು ಆ ಗುಂಪು ಇರುವ ಸ್ಥಳಕ್ಕೆ ಕರಕೊಂಡು ಹೋಗುವಿಯೋ ಎಂದು ಕೇಳಿದ್ದಕ್ಕೆ ಅವನು - ನೀನು ನನ್ನನ್ನು ಕೊಲ್ಲುವದಿಲ್ಲವೆಂದೂ ನನ್ನ ಯಜಮಾನನ ಕೈಗೆ ಒಪ್ಪಿಸುವದಿಲ್ಲವೆಂದೂ ದೇವರ ಹೆಸರಿನಲ್ಲಿ ಪ್ರಮಾಣಮಾಡಿದರೆ ನಿನ್ನನ್ನು ಆ ಗುಂಪಿನವರ ಬಳಿಗೆ ಕರಕೊಂಡು ಹೋಗುವೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ದಾವೀದನು ಈಜಿಪ್ಟಿನವನನ್ನು, “ನಮ್ಮ ಕುಟುಂಬಗಳನ್ನು ಅಪಹರಿಸಿರುವ ಜನರ ಹತ್ತಿರಕ್ಕೆ ನಮ್ಮನ್ನು ಕರೆದುಕೊಂಡು ಹೋಗುವೆಯಾ?” ಎಂದು ಕೇಳಿದನು. ಈಜಿಪ್ಟಿನವನು, “ನೀವು ನನ್ನನ್ನು ಕೊಲ್ಲುವುದಿಲ್ಲವೆಂದು ಇಲ್ಲವೆ ನನ್ನ ಒಡೆಯನಿಗೆ ಮರಳಿ ಒಪ್ಪಿಸುವುದಿಲ್ಲವೆಂದು ದೇವರ ಮುಂದೆ ಪ್ರಮಾಣ ಮಾಡಿರಿ. ಆಗ ನಾನು ನಿಮ್ಮವರನ್ನು ಕಂಡು ಹಿಡಿಯಲು ಸಹಾಯ ಮಾಡುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ದಾವೀದನು ಅವನಿಗೆ, “ನೀನು ನನ್ನನ್ನು ಆ ಗುಂಪಿನ ಬಳಿಗೆ ಕರೆದುಕೊಂಡು ಹೋಗುತ್ತೀಯಾ?” ಎಂದು ಕೇಳಿದನು. ಅದಕ್ಕವನು, “ನೀನು ನನ್ನನ್ನು ಕೊಂದುಹಾಕುವುದಿಲ್ಲ ಇಲ್ಲವೆ ನನ್ನನ್ನು ನನ್ನ ಯಜಮಾನನ ಕೈಯಲ್ಲಿ ಒಪ್ಪಿಸಿಕೊಡುವುದಿಲ್ಲ ಎಂದು ನನಗೆ ದೇವರ ಹೆಸರಿನಿಂದ ಪ್ರಮಾಣಮಾಡಿದರೆ, ನಿನ್ನನ್ನು ಅಲ್ಲಿಗೆ ಕರೆದುಕೊಂಡು ಹೋಗುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 30:15
12 ತಿಳಿವುಗಳ ಹೋಲಿಕೆ  

“ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜೀವದಾಣೆ, ನನಗೆ ಮಾಡಿದ ಪ್ರಮಾಣವನ್ನು ಅವನು ತಿರಸ್ಕರಿಸಿ ನನ್ನ ಒಡಂಬಡಿಕೆಯನ್ನು ಮೀರಿದ ದೋಷವನ್ನು ಅವನ ತಲೆಯ ಮೇಲೆ ಹೊರಿಸುವೆನು.


“ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜೀವದಾಣೆ, ಇವನು ಯಾವನಿಂದ ಅರಸನಾಗಿ ನೇಮಕಗೊಂಡನೋ, ಯಾವನಿಗೆ ಮಾಡಿದ ಪ್ರಮಾಣವನ್ನು ತಿರಸ್ಕರಿಸಿದನೋ, ಯಾವನ ಒಪ್ಪಂದವನ್ನು ಮೀರಿದನೋ, ಆ ಅರಸನ ಬಳಿಯಲ್ಲೆ, ಅಂದರೆ ಬಾಬಿಲೋನೆಂಬ ಅವನ ವಾಸಸ್ಥಾನದಲ್ಲೆ, ಇವನು ಸಾಯುವುದು ಖಂಡಿತ.


ಮತ್ತು ರಾಜವಂಶದವನೊಬ್ಬನನ್ನು ಆರಿಸಿ ಅವನೊಂದಿಗೆ ಒಪ್ಪಂದಮಾಡಿ ಅವನಿಂದ ಆಣೆಯಿಡಿಸಿದ.


ಆಗ ಆಕೀಷನು ದಾವೀದನನ್ನು ಕರೆದು, “ಸರ್ವೇಶ್ವರನಾಣೆ, ನೀನು ಯಥಾರ್ಥನು; ನೀನು ನನ್ನ ಸಂಗಡ ಪಾಳೆಯದಲ್ಲಿದ್ದುಕೊಂಡು ಯುದ್ಧಕ್ಕೆ ಹೋಗುತ್ತಾ ಬರುತ್ತಾ ಇರುವುದು ಯುಕ್ತವೆಂದು ನನಗೆ ತೋರಿತು. ನೀನು ಬಂದಂದಿನಿಂದ ಇಂದಿನವರೆಗೂ ನಿನ್ನಲ್ಲಿ ಯಾವ ದೋಷವನ್ನೂ ಕಾಣಲಿಲ್ಲ.


ಯೆಹೋಶುವ ಅವರೊಡನೆ, “ನಿಮ್ಮ ಜೀವವನ್ನು ಕಾಪಾಡುತ್ತೇವೆ” ಎಂದು ಶಾಂತಿಸಂಧಾನ ಮಾಡಿಕೊಂಡನು. ಸಭೆಯ ನಾಯಕರೂ ಅಂತೆಯೇ ಪ್ರಮಾಣ ಮಾಡಿದರು.


ಆದುದರಿಂದ ಈಗ ನೀವು ನನಗೆ ನಂಬತಕ್ಕ ಒಂದು ಗುರುತನ್ನು ಕೊಡಬೇಕು. ನಾನು ನಿಮಗೆ ದಯೆ ತೋರಿದಂತೆ ನೀವೂ ನನ್ನ ತಂದೆಯ ಮನೆಯವರಿಗೆ ದಯೆ ತೋರಬೇಕು.


ಕೆರೇತ್ಯರೂ ಯೆಹೂದ್ಯರೂ ಕಾಲೇಬ್ಯರೂ ಇರುವ ದಕ್ಷಿಣ ಪ್ರಾಂತ್ಯವನ್ನು ನಾವು ಸೂರೆಮಾಡಿ ಚಿಕ್ಲಗ್ ಊರನ್ನು ಸುಟ್ಟುಬಿಟ್ಟು ಬಂದೆವು,” ಎಂದು ಉತ್ತರಕೊಟ್ಟನು.


ಅವರು ಅಲ್ಲಿಗೆ ಹೋದಾಗ ಆ ದಾಳಿಕಾರರು ತಮಗೆ ಫಿಲಿಷ್ಟಿಯ ಹಾಗು ಯೆಹೂದ ಪ್ರಾಂತ್ಯಗಳಲ್ಲಿ ದೊರಕಿದ್ದ ದೊಡ್ಡಕೊಳ್ಳೆಯ ನಿಮಿತ್ತ ಸಂತೋಷಿಸಿ, ತಿಂದು, ಕುಡಿದು, ಕುಣಿದಾಡುತ್ತಾ ಅಲ್ಲಿನ ಬಯಲಿನಲ್ಲಿ ವ್ಯಾಪಿಸಿಕೊಂಡಿದ್ದರು.


“ನನ್ನ ಮಗ ಇಸಾಕನಿಗೆ ಹೆಣ್ಣನ್ನು ನಾನು ವಾಸಮಾಡುತ್ತಿರುವ ಕಾನಾನ್ಯರಿಂದ ತರಬಾರದು;


ಇವರು ಆ ಊರೊಳಗಿಂದ ಬರುತ್ತಿದ್ದ ಒಬ್ಬ ವ್ಯಕ್ತಿಯನ್ನು ಕಂಡು, “ದಯಮಾಡಿ, ಪಟ್ಟಣದೊಳಗೆ ನುಗ್ಗಬಹುದಾದ ದಾರಿಯನ್ನು ನಮಗೆ ತೋರಿಸಿಕೊಡು; ನಾವು ನಿನಗೆ ಒಳ್ಳೆಯದನ್ನೇ ಮಾಡುತ್ತೇವೆ,” ಎಂದರು. ಅವನು ಅವರಿಗೆ ಆ ದಾರಿಯನ್ನು ತೋರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು