Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 30:26 - ಕನ್ನಡ ಸತ್ಯವೇದವು C.L. Bible (BSI)

26 ದಾವೀದನು ಚಿಕ್ಲಗಿಗೆ ಬಂದನಂತರ ತನ್ನ ಸ್ನೇಹಿತರಾದ ಯೆಹೂದ ಹಿರಿಯರಿಗೆ ಕೊಳ್ಳೆಯ ಒಂದು ಭಾಗವನ್ನು ಕಳುಹಿಸಿದನು. “ಇಗೋ, ಸರ್ವೇಶ್ವರ ಶತ್ರುಗಳನ್ನು ಸೂರೆಮಾಡಿ ತಂದವುಗಳಲ್ಲಿ ಇದು ನಿಮಗೆ ಬಹುಮಾನವಾಗಿರಲಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ದಾವೀದನು ಚಿಕ್ಲಗ್ ಊರಿಗೆ ಬಂದನಂತರ ತನ್ನ ಸ್ನೇಹಿತರಾದ ಯೆಹೂದದ ಹಿರಿಯರಿಗೆ ಕೊಳ್ಳೆಯ ಒಂದು ಭಾಗವನ್ನು ಕಳುಹಿಸಿ, “ಇಗೋ ಯೆಹೋವನ ಶತ್ರುಗಳನ್ನು ಸೂರೆಮಾಡಿ ತಂದವುಗಳಲ್ಲಿ ಇದು ನಿಮಗೆ ಬಹುಮಾನವಾಗಿರಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ದಾವೀದನು ಚಿಕ್ಲಗಿಗೆ ಬಂದನಂತರ ತನ್ನ ಸ್ನೇಹಿತರಾದ ಯೆಹೂದಹಿರಿಯರಿಗೆ ಕೊಳ್ಳೆಯ ಒಂದು ಭಾಗವನ್ನು ಕಳುಹಿಸಿ - ಇಗೋ, ಯೆಹೋವನ ಶತ್ರುಗಳನ್ನು ಸೂರೆಮಾಡಿ ತಂದವುಗಳಲ್ಲಿ ಇದು ನಿಮಗೆ ಬಹುಮಾನವಾಗಿರಲಿ ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ದಾವೀದನು ಚಿಕ್ಲಗಿಗೆ ಆಗಮಿಸಿದನು. ನಂತರ ಅವನು ಅಮಾಲೇಕ್ಯರಿಂದ ವಶಪಡಿಸಿಕೊಂಡಿದ್ದ ಕೆಲವು ವಸ್ತುಗಳನ್ನು ಯೆಹೂದದ ಅವನ ಗೆಳೆಯರಿಗೂ ನಾಯಕರಿಗೂ ಕಳುಹಿಸಿದನು. ದಾವೀದನು, “ಯೆಹೋವನ ಶತ್ರುಗಳಿಂದ ನಾವು ವಶಪಡಿಸಿಕೊಂಡ ವಸ್ತುಗಳ ಕೊಡುಗೆಯು ನಿಮಗಾಗಿ ಇಲ್ಲಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ದಾವೀದನು ಚಿಕ್ಲಗನ್ನು ತಲುಪಿದಾಗ ಕೊಳ್ಳೆಯಿಂದ ತಂದದ್ದರಲ್ಲಿ ಒಂದು ಭಾಗವನ್ನು ತನ್ನ ಸ್ನೇಹಿತರಾದ ಯೆಹೂದದ ಹಿರಿಯರಿಗೆ ಕಳುಹಿಸಿದನು. “ಯೆಹೋವ ದೇವರ ವೈರಿಗಳಿಂದ ಕೊಳ್ಳೆ ಹೊಡೆದದ್ದರಿಂದ ಈ ಬಹುಮಾನ ನಿಮಗಾಗಿದೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 30:26
14 ತಿಳಿವುಗಳ ಹೋಲಿಕೆ  

ನಿಮ್ಮ ದಾಸಿ ತಂದ ಈ ಕಾಣಿಕೆಯನ್ನು ಅಂಗೀಕರಿಸಿರಿ. ಅದು ತಮ್ಮ ಸೇವಕರಿಗೆ ಸಲ್ಲಲಿ.


ಆದ್ದರಿಂದಲೇ, ನೀವು ವಾಗ್ದಾನಮಾಡಿದ ಕೊಡುಗೆಯನ್ನು ಸಂಗ್ರಹಿಸುವ ಏರ್ಪಾಡನ್ನು ಮಾಡುವಂತೆ ಈ ಸಹೋದರರನ್ನು ನಮಗೆ ಮುಂಚಿತವಾಗಿಯೇ ನಿಮ್ಮ ಬಳಿಗೆ ಕಳುಹಿಸುವುದು ಉಚಿತವೆಂದು ನನಗೆ ತೋಚಿತು. ಹೀಗೆ ಈ ಕೊಡುಗೆ ಬಲಾತ್ಕಾರವಾದ ವಸೂಲಿ ಆಗಿರದೆ ಮನಃಪೂರ್ವಕವಾಗಿ ಕೊಟ್ಟ ನಿಧಿ ಆಗಿರುತ್ತದೆ.


ಆದರೆ ಧರ್ಮವಂತನು ಮಹತ್ಕಾರ್ಯಗಳಲ್ಲಿಯೇ ನಿರತನಾಗಿರುತ್ತಾನೆ.


ಹೇ ದೇವಾ, ಹೇ ಪ್ರಭು, ನೀನೇರಿದೆ ಉನ್ನತ ಶಿಖರಕೆ I ಕರೆದೊಯ್ದೆ ಖೈದಿಗಳನೇಕರನು ನಿನ್ನ ನಿವಾಸಕೆ I ಸರಳರಿಂದಲೂ ದುರುಳರಿಂದಲೂ ಪಡೆದೆ ಕಪ್ಪಕಾಣಿಕೆ I ದೇವರಾದ ಪ್ರಭುವೇ, ಅಲ್ಲೇ ನೀ ವಾಸಿಸುವೆ II


ನನಗೆ ನ್ಯಾಯ ಬಯಸುವವರು ನಲಿದು ಮಾಡಲಿ ಜಯಕಾರ I “ದಾಸನ ಹಿತೈಷಿ ಪ್ರಭುಗೆ, ಜೈ” ಎಂಬ ನಿರಂತರ ಪ್ರಚಾರ II


ಅನಂತರ ನಾಮಾನನು ತನ್ನ ಪರಿವಾರದವರೊಡನೆ ಹಿಂದಿರುಗಿ ದೈವಪುರುಷನ ಬಳಿಗೆ ಹೋಗಿ ಅವನ ಮುಂದೆ ನಿಂತನು. “ಇಸ್ರಯೇಲ್ ನಾಡಿನಲ್ಲಿರುವ ದೇವರ ಹೊರತು, ಲೋಕದಲ್ಲಿ ಬೇರೆ ದೇವರು ಇಲ್ಲವೇ ಇಲ್ಲವೆಂಬುದು ಈಗ ನನಗೆ ಗೊತ್ತಾಯಿತು; ತಾವು ದಯವಿಟ್ಟು ಈ ಕಾಣಿಕೆಯನ್ನು ಅಂಗೀಕರಿಸಬೇಕು,” ಎಂದು ಹೇಳಿದನು.


ದೇವರ ಕೃಪೆಯಿಂದ ನನಗೆ ಬೇಕಾದುದೆಲ್ಲ ಇದೆ; ಆದಕಾರಣ ನಾನು ಸಮರ್ಪಿಸುವ ಕಾಣಿಕೆಯನ್ನು ತಾವು ದಯವಿಟ್ಟು ಅಂಗೀಕರಿಸಬೇಕು,” ಎಂದು ಹೇಳಿ ಒತ್ತಾಯಪಡಿಸಿದ್ದರಿಂದ ಏಸಾವನು ಆ ಕಾಣಿಕೆಯನ್ನು ತೆಗೆದುಕೊಂಡನು.


ಒಂದು ದಿನ ಸೌಲನು, “ಇವನು ನನ್ನ ಕೈಯಿಂದ ಸಾಯಬಾರದು; ಫಿಲಿಷ್ಟಿಯರ ಕೈಯಿಂದಲೇ ಸಾಯಲಿ,” ಎಂದು ಒಂದು ಉಪಾಯ ಹೂಡಿದನು. ದಾವೀದನಿಗೆ, “ನೀನು ನನ್ನ ವೀರನಾಗಿ ಹೋಗಿ ಸರ್ವೇಶ್ವರನ ಯುದ್ಧಗಳನ್ನು ನಡೆಸು; ನಾನು ನನ್ನ ಹಿರಿಯ ಮಗಳಾದ ಮೇರಬಳನ್ನು ನಿನಗೆ ಮದುವೆಮಾಡಿಕೊಡುತ್ತೇನೆ,” ಎಂದನು.


ನಿಮ್ಮ ದಾಸಿಯ ಅಪರಾಧಕ್ಕೆ ಕ್ಷಮಾಪಣೆಯಾಗಲಿ; ಒಡೆಯಾ, ತಾವು ಸರ್ವೇಶ್ವರನ ಶತ್ರುಗಳೊಡನೆ ಯುದ್ಧಮಾಡುವುದರಿಂದ ಅವರು ನಿಮ್ಮ ಮನೆಯನ್ನು ಶಾಶ್ವತವಾಗಿ ಸ್ಥಿರಪಡಿಸುವರು. ಆದುದರಿಂದ ನಿಮ್ಮ ಜೀವಮಾನದಲ್ಲೆಲ್ಲಾ ನಮ್ಮಲ್ಲಿ ಕೆಟ್ಟತನ ಕಾಣದಿರಲಿ;


ಇದಲ್ಲದೆ, ದಾವೀದನು ಶತ್ರುಗಳ ದನಕುರಿಗಳನ್ನೂ ತೆಗೆದುಕೊಂಡನು. ಅವನ ಜನರು, “ಇವು ದಾವೀದನ ಕೊಳ್ಳೆ,” ಎಂದು ಹೇಳಿ ಅವುಗಳನ್ನು ತಮ್ಮ ದನಗಳ ಸಮೇತ ಹೊಡೆದುಕೊಂಡು ಬಂದರು.


ದಾವೀದನು ಇಸ್ರಯೇಲರಲ್ಲಿ ಇದನ್ನು ಒಂದು ಕಟ್ಟಳೆಯನ್ನಾಗಿ ಅಂದು ವಿಧಿಸಿದ್ದರಿಂದ ಇಂದಿನವರೆಗೂ ಹಾಗೆಯೇ ನಡೆಯುತ್ತಾ ಬಂದಿದೆ.


ಸೌಲನು ಸತ್ತನಂತರ ಸಂಭವಿಸಿದ ಘಟನೆಗಳು: ದಾವೀದನು ಅಮಾಲೇಕ್ಯರನ್ನು ಸದೆಬಡಿದು ಬಂದು ಚಿಕ್ಲಗಿನಲ್ಲಿ ಎರಡು ದಿವಸ ತಂಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು