Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 5:11 - ಕನ್ನಡ ಸತ್ಯವೇದವು C.L. Bible (BSI)

11 ದೇವರ ಹಸ್ತ ಅವರಿಗೂ ಬಾಧಕವಾಗಿದ್ದುದರಿಂದ ಅವರಿಗೆ ಮರಣಭಯವುಂಟಾಯಿತು. ಅವರು ಫಿಲಿಷ್ಟಿಯ ರಾಜರೆಲ್ಲರನ್ನು ಕೂಡಿಸಿ, “ಇಸ್ರಯೇಲ್ ದೇವರ ಮಂಜೂಷದಿಂದ ನಮಗೂ ನಮ್ಮ ಜನರಿಗೂ ಮರಣವುಂಟಾಗದ ಹಾಗೆ ಅದನ್ನು ಅದರ ಸ್ಥಳಕ್ಕೆ ಕಳುಹಿಸಿಬಿಡಿ,” ಎಂದು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ದೇವರ ಹಸ್ತವು ಅವರಿಗೂ ಬಾಧಕವಾಗಿದ್ದುದರಿಂದ ಅವರಿಗೆ ಮರಣಭಯವುಂಟಾಯಿತು. ಅವರು ಫಿಲಿಷ್ಟಿಯ ಪ್ರಭುಗಳೆಲ್ಲರನ್ನೂ ಕೂಡಿಸಿ ಅವರಿಗೆ, “ಇಸ್ರಾಯೇಲಿನ ದೇವರ ಮಂಜೂಷವನ್ನು ಹಾಗೆಯೇ ಅದರ ಸ್ಥಳಕ್ಕೆ ಕಳುಹಿಸಿಬಿಡಿರಿ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ದೇವರ ಹಸ್ತವು ಅವರಿಗೂ ಬಾಧಕವಾಗಿದ್ದದರಿಂದ ಅವರಿಗೆ ಮರಣಭಯವುಂಟಾಯಿತು. ಅವರು ಫಿಲಿಷ್ಟಿಯ ಪ್ರಭುಗಳೆಲ್ಲರನ್ನೂ ಕೂಡಿಸಿ ಅವರಿಗೆ - ಇಸ್ರಾಯೇಲ್‍ದೇವರ ಮಂಜೂಷದಿಂದ ನಮಗೂ ನಮ್ಮ ಜನರಿಗೂ ಮರಣವುಂಟಾಗದ ಹಾಗೆ ಅದನ್ನು ಅದರ ಸ್ಥಳಕ್ಕೆ ಕಳುಹಿಸಿಬಿಡಿರಿ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಎಕ್ರೋನಿನ ಜನರು ಫಿಲಿಷ್ಟಿಯರ ಅಧಿಪತಿಗಳನ್ನೆಲ್ಲಾ ಒಟ್ಟಿಗೆ ಸೇರಿಸಿ, “ಇಸ್ರೇಲರ ದೇವರ ಪವಿತ್ರಪೆಟ್ಟಿಗೆಯು ನಮ್ಮನ್ನೂ ನಮ್ಮ ಜನರನ್ನೂ ಕೊಲ್ಲುವುದಕ್ಕೆ ಮೊದಲೇ ಅದನ್ನು ಅದರ ಸ್ವಸ್ಥಳಕ್ಕೆ ಕಳುಹಿಸಿ” ಎಂದು ಹೇಳಿದರು. ಎಕ್ರೋನಿನ ಜನರು ಬಹಳ ಹೆದರಿಕೊಂಡಿದ್ದರು. ದೇವರು ಅಲ್ಲಿಯ ಜನರ ಜೀವನವನ್ನು ಬಹು ಕಠಿಣಗೊಳಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ಆ ಇಡೀ ಪಟ್ಟಣಕ್ಕೆ ಮರಣಾಂತಿಕ ವಿನಾಶ ಉಂಟಾಗಿ, ದೇವರ ಕೈ ಅಲ್ಲಿ ಮಹಾಬಾಧಕವಾಗಿದ್ದರಿಂದ ಅವರು ಫಿಲಿಷ್ಟಿಯರ ಅಧಿಪತಿಗಳೆಲ್ಲರನ್ನು ಒಟ್ಟುಗೂಡಿಸಿ, “ಇಸ್ರಾಯೇಲ್ ದೇವರ ಮಂಜೂಷವು ನಮ್ಮನ್ನೂ, ನಮ್ಮ ಜನರನ್ನೂ ಕೊಂದು ಹಾಕದ ಹಾಗೆ ನೀವು ಅದನ್ನು ಅದರ ಸ್ವಸ್ಥಳಕ್ಕೆ ತಿರುಗಿ ಹೋಗುವಂತೆ ಕಳುಹಿಸಿಬಿಡಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 5:11
7 ತಿಳಿವುಗಳ ಹೋಲಿಕೆ  

ಸರ್ವೇಶ್ವರನ ಹಸ್ತ ಅಷ್ಡೋದಿನವರಿಗೆ ಬಾಧಕವಾಗಿತ್ತು. ಸರ್ವೇಶ್ವರ ಗಡ್ಡೆರೋಗವನ್ನು ಬರಮಾಡಿ ಅವರ ನಗರವನ್ನೂ ಅದರ ಗ್ರಾಮಗಳನ್ನೂ ಹಾಳುಮಾಡಿದರು.


ಆದುದರಿಂದ ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ಅದು ಅಲ್ಲಿಗೆ ಬಂದಾಗ ಆ ಊರಿನವರು, “ನೋಡಿ, ನಮ್ಮನ್ನೂ ನಮಗೆ ಸೇರಿದವರನ್ನೂ ಕೊಲ್ಲುವುದಕ್ಕಾಗಿಯೇ ಇಸ್ರಯೇಲ್ ದೇವರ ಮಂಜೂಷವನ್ನು ಇಲ್ಲಿಗೆ ಕಳುಹಿಸಿದ್ದಾರೆ,” ಎಂದು ಕೂಗಾಡಿದರು.


ನಿಮ್ಮ ದೇಶನಿವಾಸಿಗಳ ವಿನಾಶಕ್ಕೆ ಕಾರಣವಾಗಿರುವ ಈ ಗಡ್ಡೆಗಳ ಹಾಗು ಇಲಿಗಳ ರೂಪವನ್ನು ಚಿನ್ನದಿಂದ ಮಾಡಿಸಿ ಇಸ್ರಯೇಲ್ ದೇವರಿಗೆ ಬಹುಮಾನವಾಗಿ ಕೊಡಿ. ಆಗ ಆತನ ಶಿಕ್ಷಾಹಸ್ತ ನಿಮ್ಮನ್ನೂ ನಿಮ್ಮ ದೇವತೆಗಳನ್ನೂ ಹಾಗು ಪ್ರಾಂತ್ಯಗಳನ್ನೂ ಬಿಟ್ಟುಹೋಗಬಹುದು.


ಆಗ ಪರಿವಾರದವರು ಫರೋಹನಿಗೆ, “ಈ ಮನುಷ್ಯ ಇನ್ನೆಷ್ಟುಕಾಲ ನಮಗೆ ಉರುಳಾಗಿರುವನೋ! ಆ ಜನರು ಹೋಗಿ ತಮ್ಮ ದೇವರಾದ ಸರ್ವೇಶ್ವರನನ್ನು ಆರಾಧಿಸಲು ಅಪ್ಪಣೆಕೊಟ್ಟುಬಿಡಿ. ಈಜಿಪ್ಟ್ ದೇಶವೇ ಹಾಳಾಗುತ್ತಿದೆಯೆಂದು ತಮ್ಮ ಮನಸ್ಸಿಗೆ ತೋಚಿರಬೇಕಲ್ಲವೆ?” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು