Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 5:4 - ಕನ್ನಡ ಸತ್ಯವೇದವು C.L. Bible (BSI)

4 ಮಾರನೆಯ ದಿನ ಬೆಳಿಗ್ಗೆ ನೋಡುವಾಗ ದಾಗೋನನ ತಲೆ ಮತ್ತು ಕೈಗಳು ಮುರಿದು ಹೊಸ್ತಿಲಿನ ಮೇಲೆ ಬಿದ್ದಿದ್ದವು; ಮುಂಡ ಮಾತ್ರ ಸರ್ವೇಶ್ವರನ ಮಂಜೂಷದ ಮುಂದೆ ಬಿದ್ದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮಾರನೆಯ ದಿನ ಬೆಳಿಗ್ಗೆ ನೋಡುವಾಗ ದಾಗೋನನ ತಲೆಯೂ, ಕೈಗಳೂ ಕಡಿಯಲ್ಪಟ್ಟು ಹೊಸ್ತಿಲಿನ ಮೇಲೆ ಬಿದ್ದಿದ್ದವು; ಮುಂಡ ಮಾತ್ರ ಯೆಹೋವನ ಮಂಜೂಷದ ಮುಂದೆ ಬಿದ್ದಿತ್ತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮುಂದಿನ ದಿನ ಬೆಳಿಗ್ಗೆ ನೋಡುವಾಗ ದಾಗೋನನ ತಲೆಯೂ ಕೈಗಳೂ ಕಡಿಯಲ್ಪಟ್ಟು ಹೊಸ್ತಲಿನ ಮೇಲೆ ಬಿದ್ದಿದ್ದವು; ಮುಂಡ ಮಾತ್ರ ಯೆಹೋವನ ಮಂಜೂಷದ ಮುಂದೆ ಬಿದ್ದಿತ್ತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದರೆ ಮರುದಿನ ಬೆಳಿಗ್ಗೆ ಅಷ್ಡೋದಿನ ಜನರು ಎದ್ದಾಗ ದಾಗೋನ್ ವಿಗ್ರಹವು ನೆಲದ ಮೇಲೆ ಯೆಹೋವನ ಪವಿತ್ರ ಪೆಟ್ಟಿಗೆಯ ಮುಂದೆ ಬೋರಲಬಿದ್ದಿತ್ತು. ದಾಗೋನಿನ ತಲೆಯು ಮತ್ತು ಕೈಗಳು ಮುರಿದು ಹೊಸ್ತಿಲಿನ ಮೇಲೆ ಬಿದ್ದಿದ್ದವು; ದೇಹವು ಏಕಶಿಲೆಯಾಗಿ ಬಿದ್ದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಅವರು ದಾಗೋನನನ್ನು ತೆಗೆದು, ಅದನ್ನು ಅದರ ಸ್ಥಳದಲ್ಲಿ ತಿರುಗಿ ಇಟ್ಟರು. ಅವರು ಮಾರನೆಯ ದಿವಸ ಬೆಳಿಗ್ಗೆ ಎದ್ದಾಗ, ದಾಗೋನ್ ಯೆಹೋವ ದೇವರ ಮಂಜೂಷದ ಮುಂದೆ ಬೋರಲು ಬಿದ್ದಿತ್ತು. ದಾಗೋನನ ತಲೆಯೂ ಅದರ ಎರಡು ಕೈಗಳೂ ಕತ್ತರಿಸಲಾಗಿ ಹೊಸ್ತಿಲ ಮೇಲೆ ಬಿದ್ದಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 5:4
11 ತಿಳಿವುಗಳ ಹೋಲಿಕೆ  

ಅದರಲ್ಲಿನ ಎರಕದ ಪ್ರತಿಮೆಗಳನ್ನು ಪುಡಿಪುಡಿ ಮಾಡುವೆನು. ಅದರ ಸಂಪಾದನೆಯೆಲ್ಲ ಅಗ್ನಿಗೆ ಆಹುತಿಯಾಗುವುದು. ಅದರ ವಿಗ್ರಹಗಳನ್ನೆಲ್ಲ ಹಾಳುಮಾಡುವೆನು. ಅವು ಸೂಳೆತನದಿಂದ ಸಂಪಾದನೆಯಾದುವು, ಸೂಳೆತನದ ಸಂಪಾದನೆಯಾಗಿಯೇ ಪರರ ಪಾಲಾಗುವುದು,” ಎಂದು ಸರ್ವೇಶ್ವರ ಹೇಳುತ್ತಾರೆ.


“ರಾಷ್ಟ್ರಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮುಚ್ಚುಮರೆಯಿಲ್ಲದೆ ಹೀಗೆಂದು ಸಾರಿರಿ: ‘ಬಾಬಿಲೋನ್ ಶತ್ರುವಶವಾಯಿತು. ಬೇಲ್ ದೇವತೆ ನಾಚಿಕೆಗೊಂಡಿದೆ. ಮೆರೋದಾಕ್ ದೇವತೆ ಬೆಚ್ಚಿಬಿದ್ದಿದೆ. ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ. ಅದರ ಬೊಂಬೆಗಳು ಚೂರುಚೂರಾಗಿವೆ.


“ಭೂಮ್ಯಾಕಾಶಗಳನ್ನು ಸೃಷ್ಟಿಸದ ದೇವರುಗಳು ಭೂಮಿಯ ಮೇಲಿಂದಲೂ ಆಕಾಶದ ಕೆಳಗಿನಿಂದಲೂ ಅಳಿದುಹೋಗುವುವು” ಎಂದು ನೀವು ಆ ಜನಾಂಗಗಳಿಗೆ ತಿಳಿಸಿರಿ.


ಅವರ ದೇವರುಗಳನ್ನೂ ಎರಕದ ಬೊಂಬೆಗಳನ್ನೂ ಒಳ್ಳೊಳ್ಳೆ ಬೆಳ್ಳಿಬಂಗಾರದ ಪಾತ್ರೆಗಳನ್ನೂ ಸೂರೆಮಾಡಿಕೊಂಡು ಈಜಿಪ್ಟಿಗೆ ಹಿಂದಿರುಗುವನು. ಕೆಲವು ವರ್ಷಗಳ ತನಕ ಉತ್ತರರಾಜನ ಗೊಡವೆಗೆ ಹೋಗನು.


ಇಂತಿರಲು ಯಕೋಬ್ಯರ ಅಧರ್ಮಕ್ಕೆ ಪ್ರಾಯಶ್ಚಿತ್ತವಾಗಬೇಕಾದರೆ, ಅವರ ಪಾಪಪರಿಹಾರವನ್ನು ಸೂಚಿಸುವ ಪೂರ್ಣಫಲ ದೊರಕಬೇಕಾದರೆ, ಅವರ ವಿಗ್ರಹಾರಾಧಕ ಬಲಿಪೀಠದ ಕಲ್ಲುಗಳೆಲ್ಲ ಸುಣ್ಣದಂತೆ ಪುಡಿಪುಡಿ ಆಗಬೇಕು; ಆಶೇರಾ ಎಂಬ ವಿಗ್ರಹಸ್ತಂಭಗಳನ್ನೂ ಸೂರ್ಯಸ್ತಂಭಗಳನ್ನೂ ಪ್ರತಿಷ್ಠಾಪಿಸುವುದು ಇನ್ನು ನಿಲ್ಲಬೇಕು.


ನಿಮ್ಮ ದೇಶನಿವಾಸಿಗಳ ವಿನಾಶಕ್ಕೆ ಕಾರಣವಾಗಿರುವ ಈ ಗಡ್ಡೆಗಳ ಹಾಗು ಇಲಿಗಳ ರೂಪವನ್ನು ಚಿನ್ನದಿಂದ ಮಾಡಿಸಿ ಇಸ್ರಯೇಲ್ ದೇವರಿಗೆ ಬಹುಮಾನವಾಗಿ ಕೊಡಿ. ಆಗ ಆತನ ಶಿಕ್ಷಾಹಸ್ತ ನಿಮ್ಮನ್ನೂ ನಿಮ್ಮ ದೇವತೆಗಳನ್ನೂ ಹಾಗು ಪ್ರಾಂತ್ಯಗಳನ್ನೂ ಬಿಟ್ಟುಹೋಗಬಹುದು.


ಇಷ್ಟು ಹಣವನ್ನು ವೆಚ್ಚ ಮಾಡಲಾಗದ ಬಡವನು ಹುಡುಕುವನು ಹುಳಿತುಹೋಗದ ಮರವನು ಬಾಗಿ ಬೀಳದ ವಿಗ್ರಹವನ್ನು ಮಾಡಬಲ್ಲಾ ಕುಶಲನನು.


ಇದರ ಮುಂದೆ ತಿಳುವಳಿಕೆಯಿಲ್ಲದ ಪಶುಪ್ರಾಯರು ಜನರೆಲ್ಲರು. ತಾನು ಕೆತ್ತಿದ ವಿಗ್ರಹಕ್ಕಾಗಿ ಹೇಸುವನು ಪ್ರತಿಯೊಬ್ಬ ಅಕ್ಕಸಾಲಿಗನು. ಅವನು ಎರಕ ಹೊಯ್ದ ವಿಗ್ರಹಗಳು ಟೊಳ್ಳು, ಶ್ವಾಸವಿಲ್ಲದವುಗಳು.


ಅವು ವ್ಯರ್ಥವಾದುವುಗಳು, ಹಾಸ್ಯಾಸ್ಪದವಾದುವುಗಳು ದಂಡನೆಯ ಕಾಲದಲ್ಲಿ ಅಳಿದುಹೋಗುವಂಥವುಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು