Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 6:14 - ಕನ್ನಡ ಸತ್ಯವೇದವು C.L. Bible (BSI)

14 ಆ ಬಂಡಿ ಬೇತ್‍ಷೆಮೆಷಿನವನಾದ ಯೆಹೋಶುವನ ಹೊಲದಲ್ಲಿದ್ದ ಒಂದು ದೊಡ್ಡ ಕಲ್ಲಿನ ಬಳಿ ಬಂದು ನಿಂತಿತು. ಅವರು ಅಲ್ಲಿಗೆ ಹೋಗಿ, ಬಂಡಿಯ ಕಟ್ಟಿಗೆಗಳನ್ನು ಮುರಿದು, ಅಗ್ನಿ ಮಾಡಿ ಆ ಹಸುಗಳನ್ನು ಸರ್ವೇಶ್ವರನಿಗೆ ದಹನಬಲಿಯಾಗಿ ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಬಂಡಿಯು ಬೇತ್ ಷೆಮೆಷಿನವನಾದ ಯೆಹೋಶುವನ ಹೊಲದಲ್ಲಿದ್ದ ದೊಡ್ಡ ಕಲ್ಲಿನ ಬಳಿಯಲ್ಲಿ ಬಂದು ನಿಂತಿತು. ಆಗ ಅವರು ಹೋಗಿ ಬಂಡಿಯ ಕಟ್ಟಿಗೆಗಳನ್ನು ಸೀಳಿ, ಆ ಹಸುಗಳನ್ನು ಯೆಹೋವನಿಗೆ ಯಜ್ಞಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಬಂಡಿಯು ಬೇತ್‍ಷೆಮೆಷಿನವನಾದ ಯೆಹೋಶುವನ ಹೊಲದಲ್ಲಿದ್ದ ದೊಡ್ಡ ಕಲ್ಲಿನ ಬಳಿಯಲ್ಲಿ ಬಂದು ನಿಲ್ಲಲು ಅವರು ಹೋಗಿ ಬಂಡಿಯ ಕಟ್ಟಿಗೆಗಳನ್ನು ಒಡೆದು ಅಗ್ನಿಮಾಡಿ ಆ ಹಸುಗಳನ್ನು ಯೆಹೋವನಿಗೋಸ್ಕರ ಆಹುತಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14-15 ಬೇತ್‌ಷೆಮೆಷಿನ ಯೆಹೋಶುವನಿಗೆ ಸೇರಿದ ಹೊಲಕ್ಕೆ ಆ ಬಂಡಿಯು ಬಂದಿತು. ಆ ಹೊಲದ ಒಂದು ದೊಡ್ಡ ಕಲ್ಲಿನ ಬಳಿ ಆ ಬಂಡಿಯು ನಿಂತಿತು. ಬೇತ್‌ಷೆಮೆಷಿನ ಜನರು ಬಂಡಿಯ ಕಟ್ಟಿಗೆಗಳನ್ನು ಒಡೆದು ಆ ಹಸುಗಳನ್ನು ಯೆಹೋವನಿಗೆ ಆಹುತಿಯಾಗಿ ಅರ್ಪಿಸಿದರು. ಕೆಲವು ಲೇವಿಯರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಇಳಿಸಿದರು. ಅಲ್ಲದೆ ಅವರು ಚಿನ್ನದ ಮಾದರಿಗಳಿದ್ದ ಚೀಲವನ್ನು ಇಳಿಸಿದರು. ಲೇವಿಯರು ಯೆಹೋವನ ಪೆಟ್ಟಿಗೆಯನ್ನು ಮತ್ತು ಆ ಚೀಲವನ್ನು ದೊಡ್ಡಕಲ್ಲಿನ ಮೇಲಿಟ್ಟರು. ಅದೇ ದಿನ ಬೇತ್‌ಷೆಮೆಷಿನ ಜನರು ಯೆಹೋವನಿಗೆ ಸರ್ವಾಂಗಹೋಮಗಳನ್ನು ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆ ಬಂಡಿಯು ಬೇತ್ ಷೆಮೆಷ್ ಊರಿನವನಾದ ಯೆಹೋಶುವನ ಹೊಲದಲ್ಲಿ ಬಂದು ನಿಂತಿತು. ಅಲ್ಲಿ ಒಂದು ದೊಡ್ಡ ಬಂಡೆ ಇತ್ತು. ಆಗ ಅವರು ಆ ಬಂಡಿಯ ಕಟ್ಟಿಗೆಗಳನ್ನು ಸೀಳಿ, ಹಸುಗಳನ್ನು ಯೆಹೋವ ದೇವರಿಗೆ ದಹನಬಲಿಯಾಗಿ ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 6:14
13 ತಿಳಿವುಗಳ ಹೋಲಿಕೆ  

ಆಗ ಅರೌನನು ದಾವೀದನಿಗೆ, “ನನ್ನ ಒಡೆಯರಾದ ಅರಸರು ತಮಗೆ ಇಷ್ಟವಾದುದನ್ನು ತೆಗೆದುಕೊಂಡು ಅರ್ಪಿಸೋಣವಾಗಲಿ; ಇಲ್ಲಿ ಬಲಿದಾನಕ್ಕೆ ಹೋರಿಗಳೂ, ಸೌದೆಗೆ ಹಂತೀಕುಂಟೆ ಮೊದಲಾದ ಎತ್ತಿನ ಸಾಮಾನುಗಳೂ ಇರುತ್ತವೆ.


ಮರುದಿವಸ ಅವರು ಬೆಳಿಗ್ಗೆ ಎದ್ದು ಬಲಿಪೀಠವನ್ನು ಕಟ್ಟಿ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಸಮರ್ಪಿಸಿದರು.


ಎಲೀಷನು ಹಿಂದಿರುಗಿಹೋಗಿ ತಾನು ಉಳುತ್ತಿದ್ದ ಜೋಡಿ ಎತ್ತುಗಳನ್ನು ತೆಗೆದುಕೊಂಡು ವಧಿಸಿ ಮಾಂಸವನ್ನು ನೊಗದ ಕಟ್ಟಿಗೆಯಿಂದ ಬೇಯಿಸಿ, ಜನರಿಗೆ ಔತಣಮಾಡಿಸಿದನು. ಅನಂತರ ಅವನು ಎದ್ದು ಎಲೀಯನನ್ನು ಹಿಂಬಾಲಿಸಿ ಅವನ ಶಿಷ್ಯನಾದನು.


ಅಲ್ಲಿ ಸರ್ವೇಶ್ವರನಿಗೆ ಬಲಿಪೀಠವನ್ನು ಕಟ್ಟಿಸಿ ಅದರ ಮೇಲೆ ಅವರಿಗೆ ದಹನಬಲಿಗಳನ್ನು ಹಾಗು ಶಾಂತಿಸಮಾಧಾನದ ಬಲಿಗಳನ್ನು ಅರ್ಪಿಸಿದನು. ಹೀಗೆ ನಾಡಿನ ಮೇಲಿದ್ದ ಸರ್ವೇಶ್ವರನ ಕೋಪ ಶಮನವಾಯಿತು. ಇಸ್ರಯೇಲರಲ್ಲಿದ್ದ ಆ ಸಂಹಾರಕವ್ಯಾಧಿ ನಿಂತುಹೋಯಿತು.


ಅದೇ ದಿನದಲ್ಲಿ ಗಾದನು ದಾವೀದನ ಬಳಿಗೆ ಬಂದು, “ನೀವು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಸರ್ವೇಶ್ವರನಿಗಾಗಿ ಒಂದು ಬಲಿಪೀಠವನ್ನು ಕಟ್ಟಿಸಿ,” ಎಂದು ಹೇಳಿದನು.


ತನ್ನ ಅಣ್ಣ ಅದಕ್ಕಾಗಿ ನನ್ನನ್ನು ಕರೆದಿದ್ದಾನೆ; ತಾನು ಹೋಗಿ ನನ್ನ ಅಣ್ಣಂದಿರನ್ನು ನೋಡಿಬರಲು ಅಪ್ಪಣೆಯಾಗಬೇಕು, ಎಂದು ನನ್ನನ್ನು ಬಹಳವಾಗಿ ಬೇಡಿಕೊಂಡನು. ಆದುದರಿಂದ ಅವನು ಅರಸರ ಪಂಕ್ತಿಗೆ ಬರಲಿಲ್ಲ,” ಎಂದು ಉತ್ತರಕೊಟ್ಟನು.


ಅಷ್ಟರಲ್ಲಿ ಸೌಲನು ಹೊಲದಿಂದ ದನಗಳನ್ನು ಹೊಡೆದುಕೊಂಡು ಬಂದನು. ಜನರು ಗೋಳಾಡುವುದಕ್ಕೇನು ಕಾರಣವೆಂದು ಕೇಳಲು ಯಾಬೇಷಿನವರ ವರ್ತಮಾನವನ್ನು ಅವನಿಗೆ ತಿಳಿಸಲಾಯಿತು.


ಈ ಗುಡ್ಡದ ಶಿಖರದಲ್ಲಿ ಸರ್ವೇಶ್ವರನಿಗಾಗಿ ನೇಮಕವಾದ ರೀತಿಯಿಂದ ಒಂದು ಬಲಿಪೀಠವನ್ನು ಕಟ್ಟಿಸು. ನೀನು ಕಡಿದುಹಾಕಿದ ಅಶೇರ ವಿಗ್ರಹಸ್ತಂಭದಿಂದ ಬೆಂಕಿಮಾಡಿ ಆ ಎರಡನೆ ಹೋರಿಯನ್ನು ದಹನ ಬಲಿಯಾಗಿ ಸಮರ್ಪಿಸು,” ಎಂದು ಹೇಳಿದರು.


ನನಗಾಗಿ ನೀವು ಮಣ್ಣಿನಿಂದ ಒಂದು ಬಲಿಪೀಠವನ್ನು ಮಾಡಬೇಕು. ಅದರ ಮೇಲೆ ನಿಮ್ಮ ದನಕುರಿಗಳನ್ನು ದಹನ ಬಲಿಯನ್ನಾಗಿಯೂ ಸಮಾಧಾನ ಬಲಿಯನ್ನಾಗಿಯೂ ಸಮರ್ಪಿಸಬೇಕು.


ಬೇತ್ ಷೆಮೆಷಿನವರು ಅಲ್ಲಿನ ತಗ್ಗಿನಲ್ಲಿ ಗೋದಿಬೆಳೆಯನ್ನು ಕೊಯ್ಯುತ್ತಿದ್ದರು. ಕಣ್ಣೆತ್ತಿ ಸರ್ವೇಶ್ವರನ ಮಂಜೂಷವನ್ನು ನೋಡಿ ಬಹಳ ಸಂತೋಷಪಟ್ಟರು.


ಅವರು ಕಳುಹಿಸಿದ ಬಂಗಾರದ ಇಲಿಗಳು ಫಿಲಿಷ್ಟಿಯರ ಐದು ಮಂದಿ ರಾಜರ ಅಧೀನದಲ್ಲಿದ್ದ ಎಲ್ಲ ಪುಟ್ಟ ಗ್ರಾಮಗಳ ಹಾಗು ಕೋಟೆಪೇಟೆಗಳ ಸಂಖ್ಯೆಗೆ ಸರಿಯಾಗಿದ್ದವು. ಸರ್ವೇಶ್ವರನ ಮಂಜೂಷವನ್ನು ಇಡಲಾಗಿದ್ದ ಆ ದೊಡ್ಡ ಕಲ್ಲು ಇಂದಿನವರೆಗೂ ಬೇತ್ ಷೆಮೆಷಿನ ಯೆಹೋಶುವಿನ ಹೊಲದಲ್ಲಿ ಸಾಕ್ಷಿಯಾಗಿ ನಿಂತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು