Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 6:17 - ಕನ್ನಡ ಸತ್ಯವೇದವು C.L. Bible (BSI)

17 ಫಿಲಿಷ್ಟಿಯರು ಸರ್ವೇಶ್ವರನಿಗೆ ಪ್ರಾಯಶ್ಚಿತಾರ್ಥವಾಗಿ ಸಮರ್ಪಿಸಿದ ಚಿನ್ನದ ಗಡ್ಡೆಗಳ ಸಂಸ್ಥಾನಾನುಸಾರವಾದ ಪಟ್ಟಿ ಇದು: ಅಷ್ಡೋದ್, ಗಾಜಾ, ಪರವಾಗಿ ಒಂದು, ಅಷ್ಕೆಲೋನ್ ಪರವಾಗಿ ಒಂದು, ಗತ್ ಪರವಾಗಿ ಒಂದು ಮತ್ತು ಎಕ್ರೋನ್ ಪರವಾಗಿ ಒಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಫಿಲಿಷ್ಟಿಯರು ಯೆಹೋವನಿಗೆ ಸಮರ್ಪಿಸಿದ ಚಿನ್ನದ ಗಡ್ಡೆಗಳು ಅಷ್ಡೋದ್, ಗಾಜಾ, ಅಷ್ಕೆಲೋನ್, ಗತ್ ಊರು, ಎಕ್ರೋನ್ ಎಂಬ ಅವರ ಸಂಸ್ಥಾನಗಳ ಸಂಖ್ಯೆಗಳಿಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಫಿಲಿಷ್ಟಿಯರು ಯೆಹೋವನಿಗೆ ಸಮರ್ಪಿಸಿದ ಚಿನ್ನದ ಗಡ್ಡೆಗಳು ಅಷ್ಡೋದ್, ಗಾಜಾ, ಅಷ್ಕೆಲೋನ್, ಗತ್ಊರು, ಎಕ್ರೋನ್ ಎಂಬ ಅವರ ಸಂಸ್ಥಾನಗಳ ಸಂಖ್ಯೆಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಈ ರೀತಿ ಫಿಲಿಷ್ಟಿಯರು ತಾವು ಯೆಹೋವನಿಗೆ ಮಾಡಿದ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಚಿನ್ನದ ಗಡ್ಡೆಗಳನ್ನು ಕಾಣಿಕೆಗಳನ್ನಾಗಿ ಕಳುಹಿಸಿದರು. ಅವರು ಪ್ರತಿಯೊಂದು ಫಿಲಿಷ್ಟಿಯ ನಗರಕ್ಕೆ ಒಂದರಂತೆ ಚಿನ್ನದ ಗಡ್ಡೆಗಳನ್ನು ಕಳುಹಿಸಿದ್ದರು. ಅಷ್ಡೋದ್, ಗಾಜಾ, ಅಷ್ಕೆಲೋನ್, ಗತ್ ಮತ್ತು ಎಕ್ರೋನ್‌ಗಳೇ ಆ ನಗರಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಫಿಲಿಷ್ಟಿಯರು ದೋಷಪರಿಹಾರ ಕಾಣಿಕೆಗಾಗಿ, ಗಡ್ಡೆರೋಗದ ಬಂಗಾರ ಸ್ವರೂಪಗಳನ್ನು ಅಷ್ಡೋದಿನಿಂದ ಒಂದೂ, ಗಾಜನಿಂದ ಒಂದೂ, ಅಷ್ಕೆಲೋನದಿಂದ ಒಂದೂ, ಗತ್‌ನಿಂದ ಒಂದೂ, ಎಕ್ರೋನಿನಿಂದ ಒಂದೂ ಯೆಹೋವ ದೇವರಿಗೆ ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 6:17
19 ತಿಳಿವುಗಳ ಹೋಲಿಕೆ  

ಸಾರಬೇಡಿ ಈ ಸುದ್ದಿಯನು ‘ಗತ್’ ಊರಿನಲಿ ಘೋಷಿಸಬೇಡಿ ಅಷ್ಕೆಲೋನಿನ ಬೀದಿಗಳಲಿ. ಏಕೆನೆ, ಉಲ್ಲಾಸಿಸಿಯಾರು ಆ ಫಿಲಿಷ್ಟಿಯ ಮಹಿಳೆಯರು; ಜಯಘೋಷ ಮಾಡಿಯಾರು ಸುನ್ನತಿಯಿಲ್ಲದವರಾ ಸ್ತ್ರೀಯರು!


ಕಲ್ನೆ ಪಟ್ಟಣಕ್ಕೆ ಹೋಗಿ ನೋಡಿ. ಅಲ್ಲಿಂದ ಪ್ರಖ್ಯಾತ ಪಟ್ಟಣವಾದ ಹಮಾತಿಗೆ ನಡೆಯಿರಿ. ಹಮಾತಿನಿಂದ ಫಿಲಿಷ್ಟಿಯರ ಊರಾದ ಗತ್ ನಗರಕ್ಕೆ ಇಳಿದುಹೋಗಿರಿ. ಅವು ನಿಮ್ಮ ರಾಜ್ಯಗಳಿಗಿಂತ ದೊಡ್ಡವೋ? ಅವುಗಳ ಪ್ರಾಂತ್ಯ, ನಿಮ್ಮ ಪ್ರಾಂತ್ಯಕ್ಕಿಂತ ಹಿರಿದೋ?


ಊಚ್ ನಾಡಿನ ಎಲ್ಲ ಅರಸರು, ಫಿಲಿಷ್ಟಿಯ ದೇಶದ ಎಲ್ಲ ಅರಸರು, ಅಷ್ಕೆಲೋನ್, ಗಾಜಾ, ಎಕ್ರೋನ್, ಅಷ್ಟೋದಿನ ಶೇಷ, ಈ ಪ್ರಾಂತ್ಯಗಳ ಎಲ್ಲ ಅರಸರು;


ಉಜ್ಜೀಯನು ಫಿಲಿಷ್ಟಿಯರ ಮೇಲೆ ಯುದ್ಧಕ್ಕೆ ಹೊರಟು ಗತ್‍ಊರು, ಯಬ್ನೆ, ಅಷ್ಡೋದ್ ಎಂಬ ಪಟ್ಟಣಗಳ ಗೋಡೆಗಳನ್ನು ಕೆಡವಿಬಿಟ್ಟು ಅಷ್ಡೋದಿನ ಮತ್ತು ಫಿಲಿಷ್ಟಿಯರ ಪ್ರಾಂತಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.


ಅಹಜ್ಯನು ಸಮಾರಿಯದಲ್ಲಿದ್ದ ತನ್ನ ಮೇಲುಪ್ಪರಿಗೆಯ ಕಿಟಕಿಯೊಂದರಿಂದ ಬಿದ್ದು ಅಸ್ವಸ್ಥನಾಗಿದ್ದನು. ಅವನು ತನ್ನ ಸೇವಕರನ್ನು ಕರೆದು, “ನೀವು ಎಕ್ರೋನಿನ ದೇವರಾದ ‘ಬಾಳ್ಜೆಬೂಬ’ನ ಸನ್ನಿಧಿಗೆ ಹೋಗಿ ನಾನು ಈ ಅಸ್ವಸ್ಥತೆಯಿಂದ ಗುಣವಾಗುವೆನೋ ಇಲ್ಲವೋ, ಎಂದು ವಿಚಾರಿಸಿ ಬನ್ನಿ,” ಎಂದು ಹೇಳಿ ಕಳುಹಿಸಿದನು.


ಗತ್ ಊರಿನವರಾದ ಈ ನಾಲ್ಕು ಮಂದಿ ರೆಫಾಯರು ದಾವೀದನಿಂದಲೂ ಅವನ ಸೇವಕರಿಂದಲೂ ಹತರಾದರು.


ಆ ಜನರು, “ನಾವು ಪ್ರಾಯಶ್ಚಿತಾರ್ಥವಾಗಿ ಏನನ್ನು ಕಳುಹಿಸಬೇಕು?” ಎಂದು ವಿಚಾರಿಸಿದರು. ಅದಕ್ಕೆ ಅವರು, “ನಿಮಗೂ ನಿಮ್ಮ ರಾಜರುಗಳಿಗೂ ಒಂದೇ ವಿಧವಾದ ವ್ಯಾಧಿ ಇರುವುದರಿಂದ ನಿಮ್ಮ ರಾಜರುಗಳ ಸಂಖ್ಯೆಗೆ ಸರಿಯಾಗಿ ಐದು ಬಂಗಾರದ ಗಡ್ಡೆಗಳನ್ನು ಹಾಗು ಐದು ಬಂಗಾರದ ಇಲಿಗಳನ್ನು ಮಾಡಿಸಬೇಕು.


ಆದುದರಿಂದ ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ಅದು ಅಲ್ಲಿಗೆ ಬಂದಾಗ ಆ ಊರಿನವರು, “ನೋಡಿ, ನಮ್ಮನ್ನೂ ನಮಗೆ ಸೇರಿದವರನ್ನೂ ಕೊಲ್ಲುವುದಕ್ಕಾಗಿಯೇ ಇಸ್ರಯೇಲ್ ದೇವರ ಮಂಜೂಷವನ್ನು ಇಲ್ಲಿಗೆ ಕಳುಹಿಸಿದ್ದಾರೆ,” ಎಂದು ಕೂಗಾಡಿದರು.


ಫಿಲಿಷ್ಟಿಯದ ರಾಜರೆಲ್ಲರನ್ನು ಕೂಡಿಸಿ, “ಇಸ್ರಯೇಲ್ ದೇವರ ಮಂಜೂಷವನ್ನು ಏನು ಮಾಡೋಣ?” ಎಂದು ವಿಚಾರಿಸಿದರು. ಅವರು ಅದನ್ನು ಗತ್ ಊರಿಗೆ ಕಳುಹಿಸಬೇಕೆಂದು ನಿರ್ಣಯಿಸಿದರು. ಹಾಗೆಯೇ ಇಸ್ರಯೇಲ್ ದೇವರ ಮಂಜೂಷವನ್ನು ಅಲ್ಲಿಗೆ ಕಳುಹಿಸಿದರು.


ಫಿಲಿಷ್ಟಿಯರು ದೇವರ ಮಂಜೂಷವನ್ನು ಎಬೆನೆಜೆರಿನಿಂದ ಅಷ್ಡೋದಿನಲ್ಲಿರುವ ದಾಗೋನನ ಗುಡಿಗೆ ಒಯ್ದರು.


ಫಿಲಿಷ್ಟಿಯರು ಅವನನ್ನು ಹಿಡಿದು, ಕಣ್ಣುಗಳನ್ನು ಕಿತ್ತು, ಗಾಜಾಕ್ಕೆ ಒಯ್ದು, ಕಬ್ಬಿಣದ ಬೇಡಿಗಳನ್ನು ಹಾಕಿ, ಸೆರೆಮನೆಯಲ್ಲಿ ಬೀಸುವುದಕ್ಕೆ ಹಚ್ಚಿದರು.


ತರುವಾಯ ಸಂಸೋನನು ಗಾಜಾಕ್ಕೆ ಹೋದಾಗ ಅಲ್ಲಿ ಒಬ್ಬ ವೇಶ್ಯೆಯನ್ನು ಕಂಡು ಅವಳ ಬಳಿಗೆ ಹೋದನು.


ಅನಂತರ ಅವರು ಗಾಜಾ, ಅಷ್ಕೆಲೋನ್, ಎಕ್ರೋನ್ ಎಂಬ ಪಟ್ಟಣಗಳನ್ನೂ ಅವುಗಳ ಮೇರೆಗಳನ್ನೂ ಸ್ವಾಧೀನಮಾಡಿಕೊಂಡರು.


“ಆಡು ಕುರಿಯನ್ನು ಕೊಡಲು ಅವನಿಂದ ಆಗದಿದ್ದಲ್ಲಿ ದೋಷದ ಪ್ರಾಯಶ್ಚಿತ್ತಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಮರಿ ಪಾರಿವಾಳಗಳನ್ನಾಗಲಿ ತೆಗೆದುಕೊಂಡು ಬಂದು ದಹನ ಬಲಿಯಾಗಿ ಒಂದನ್ನೂ ದೋಷಪರಿಹಾರಕ ಬಲಿಯಾಗಿ ಮತ್ತೊಂದನ್ನು ಸರ್ವೇಶ್ವರನಿಗೆ ಸಮರ್ಪಿಸಲಿ.


“ಈಜಿಪ್ಟರನ್ನು ಬಾಧಿಸಿದಂತೆ ಹುಣ್ಣು, ಬಾವು, ತುರಿಕಜ್ಜಿ ಮುಂತಾದ ವಾಸಿಯಾಗದ ರೋಗಗಳಿಂದ ಸರ್ವೇಶ್ವರ ನಿಮ್ಮನ್ನು ಬಾಧಿಸುವರು.


ಸರ್ವೇಶ್ವರ ಇಂತೆನ್ನುತ್ತಾರೆ: “ಗಾಜದ ಜನರು ಪದೇಪದೇ ಮಾಡಿದ ದ್ರೋಹಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ಇಡೀ ಜನಾಂಗವನ್ನೇ ಸೆರೆಹಿಡಿದು ಎದೋಮ್ ನಾಡಿಗೆ ಗಡೀಪಾರು ಮಾಡಿದ್ದಾರೆ.


ಸರ್ವೇಶ್ವರನ ಆತ್ಮ ಫಕ್ಕನೆ ಅವನ ಮೇಲೆ ಬಂದಿತು. ಅವನು ಅಷ್ಕೆಲೋನಿಗೆ ಹೋಗಿ ಅಲ್ಲಿನ ಮೂವತ್ತು ಮಂದಿಯನ್ನು ಹೊಡೆದು ಅವರ ವಸ್ತ್ರಗಳನ್ನು ಸುಲಿದುಕೊಂಡು ಒಗಟನ್ನು ಬಿಡಿಸಿದವರಿಗೆ ತಂದುಕೊಟ್ಟನು. ಬಳಿಕ ಕೋಪಗೊಂಡು ತನ್ನ ತಂದೆಯ ಮನೆಗೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು