Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 8:18 - ಕನ್ನಡ ಸತ್ಯವೇದವು C.L. Bible (BSI)

18 ಆಗ, ನೀವು ಆರಿಸಿಕೊಂಡ ಅರಸನ ನಿಮಿತ್ತ, ಆ ದಿನದಲ್ಲಿ ಬೇಸತ್ತು ಸರ್ವೇಶ್ವರನಿಗೆ ಮೊರೆಯಿಡುವಿರಿ; ಆಗ ಅವರು ನಿಮ್ಮನ್ನು ಲಕ್ಷಿಸುವುದಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆಗ ನೀವು ಆರಿಸಿಕೊಂಡ ಅರಸನ ದೆಸೆಯಿಂದ ಆ ದಿನದಲ್ಲಿ ಬೇಸತ್ತು ಯೆಹೋವನಿಗೆ ಮೊರೆಯಿಡುವಿರಿ. ಆಗ ಆತನು ನಿಮ್ಮನ್ನು ಲಕ್ಷಿಸುವುದಿಲ್ಲ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆಗ ನೀವು ಆರಿಸಿಕೊಂಡ ಅರಸನ ದೆಸೆಯಿಂದ ಆ ದಿನದಲ್ಲಿ ಬೇಸತ್ತು ಯೆಹೋವನಿಗೆ ಮೊರೆಯಿಡುವಿರಿ; ಆಗ ಆತನು ನಿಮ್ಮನ್ನು ಲಕ್ಷಿಸುವದಿಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ರಾಜನು ಬೇಕೆಂದು ಕೇಳಿಕೊಂಡದ್ದಕ್ಕಾಗಿ ಗೋಳಾಡುವಿರಿ. ಆದರೆ ಆಗ ಯೆಹೋವನು ನಿಮಗೆ ಉತ್ತರಿಸುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನೀವು ನಿಮಗೆ ಆಯ್ದುಕೊಂಡ ನಿಮ್ಮ ಅರಸನ ನಿಮಿತ್ತ ಆ ದಿವಸದಲ್ಲಿ ಕೂಗುವಿರಿ, ಆದರೆ ಆ ದಿವಸದಲ್ಲಿ ಯೆಹೋವ ದೇವರು ನಿಮಗೆ ಕಿವಿಗೊಡುವುದಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 8:18
13 ತಿಳಿವುಗಳ ಹೋಲಿಕೆ  

ಇಷ್ಟೆಲ್ಲಾ ಮಾಡಿದಂಥ ನೀವು ಸರ್ವೇಶ್ವರಸ್ವಾಮಿಗೆ ಮೊರೆಯಿಡುತ್ತೀರಿ. ಆದರೆ ಅವರು ನಿಮಗೆ ಉತ್ತರಕೊಡುವುದಿಲ್ಲ. ಬದಲಿಗೆ ನಿಮ್ಮ ದುಷ್ಕೃತ್ಯಗಳ ನಿಮಿತ್ತ ನಿಮಗೆ ವಿಮುಖರಾಗುವರು.”


ನೀವು ಕೈಯೆತ್ತಿ ಬೇಡುವಾಗ ನಾನು ಕಣ್ಣುಮುಚ್ಚಿಕೊಳ್ಳುವೆನು. ನೀವು ಎಷ್ಟೇ ಪ್ರಾರ್ಥನೆಗಳನ್ನು ಮಾಡಿದರೂ ನಾನು ಕಿವಿಗೊಡೆನು, ಏಕೆಂದರೆ ನಿಮ್ಮ ಕೈಗಳು ರಕ್ತಸಿಕ್ತವಾಗಿವೆ.


ಜನರು ಘೋರ ಕಷ್ಟಗಳಿಗೆ ಒಳಗಾಗುವರು. ಹಸಿದು ದೇಶದಲ್ಲೆಲ್ಲ ಅಲೆದಾಡುವರು. ಹಸಿವಿನಿಂದ ರೋಷಗೊಂಡು ಅರಸನನ್ನೂ ದೇವರನ್ನೂ ಹಳಿಯುವರು.


ಮನೆಯ ಯಜಮಾನನು ಎದ್ದು ಬಾಗಿಲನ್ನು ಮುಚ್ಚಿದ ಮೇಲೆ ನೀವು ಹೊರಗಡೆ ನಿಲ್ಲಬೇಕಾಗುವುದು. ಬಾಗಿಲನ್ನು ತಟ್ಟುತ್ತಾ, ‘ಸ್ವಾಮೀ, ನಮಗೆ ಬಾಗಿಲು ತೆರೆಯಿರಿ,’ ಎಂದು ನೀವು ಕೇಳುವಿರಿ. ಅದಕ್ಕೆ ಅವನು, ‘ನೀವು ಎಲ್ಲಿಯವರೋ ನಾನು ಅರಿಯೆ’ ಎನ್ನುವನು.


ಬಡವನ ಮೊರೆಗೆ ಕಿವಿ ಮುಚ್ಚಿಕೊಳ್ಳುವವನೇ, ನೀನೇ ಮೊರೆಯಿಡುವಾಗ ಉತ್ತರಕೊಡುವವರಾರು ನಿನಗೆ?


ಎಲ್ಲಿ ಯಾಚಿಸಿದರೂ ಅವರಿಗಿರಲಿಲ್ಲ ರಕ್ಷಕ I ಸರ್ವೇಶ್ವರನಿಗೆ ಮೊರೆಯಿಟ್ಟರು ದೊರಕಲಿಲ್ಲ ಉತ್ತರ II


ಅವನಿಗೆ ಕಷ್ಟದುಃಖ ಬಂದೊದಗಲು ದೇವರು ಆಲೈಸುವನೆ ಅವನ ಮೊರೆಯನು?


ಕುರಿಹಿಂಡುಗಳಲ್ಲೂ ಹತ್ತರಲ್ಲೊಂದು ಭಾಗವನ್ನು ತೆಗೆದುಕೊಳ್ಳುವನು; ನೀವೂ ಅವನಿಗೆ ಗುಲಾಮರಾಗಿರಬೇಕು.


ನನ್ನ ತಂದೆ ನಿಮ್ಮ ಮೇಲೆ ಭಾರವಾದ ನೊಗವನ್ನು ಹೇರಿರುವುದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ; ಅವರು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ನಿಮ್ಮನ್ನು ಮುಳ್ಳು ಕೊರಡೆಗಳಿಂದ ದಂಡಿಸುವೆನು’ ಎಂಬುದಾಗಿ ಹೇಳಬೇಕು", ಎಂದು ಉತ್ತರ ಕೊಟ್ಟರು.


ದೇವರೇ ದುಷ್ಟನ ಪ್ರಾಣ ತೆಗೆವ ಕಾಲಕ್ಕೆ ಅವನಿಗೆಲ್ಲಿಂದ ಬಂದೀತು ಭರವಸೆ!


ನಾನು ಹೇಳುವುದನ್ನು ಕೇಳಿ : ಸರ್ವೇಶ್ವರ ಸ್ವಾಮಿಯ ಕೈ ನಿಮ್ಮನ್ನು ರಕ್ಷಿಸಲಾಗದಂಥ ಮೋಟುಗೈಯಲ್ಲ, ಅವರ ಕಿವಿ ಕಿವುಡಲ್ಲ.


ಆದಕಾರಣ ನಾನೂ ಕೋಪೋದ್ರೇಕದಿಂದ ವರ್ತಿಸುವೆನು. ಅವರನ್ನು ಕಟಾಕ್ಷಿಸೆನು, ಉಳಿಸೆನು; ಅವರು ನನ್ನ ಕಿವಿಯಲ್ಲಿ ಎಷ್ಟು ಗಟ್ಟಿಯಾಗಿ ಕೂಗಿಕೊಂಡರೂ ನಾನು ಆಲಿಸೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು