Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 8:8 - ಕನ್ನಡ ಸತ್ಯವೇದವು C.L. Bible (BSI)

8 ನಾನು ಅವರನ್ನು ಈಜಿಪ್ಟಿನಿಂದ ಬಿಡಿಸಿದೆ. ಅಂದಿನಿಂದ ಇಂದಿನವರೆಗೂ ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಪೂಜಿಸಿದರು. ನನಗೆ ಹೇಗೆ ಮಾಡಿದರೋ ಹಾಗೆಯೇ ನಿನಗೂ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾನು ಅವರನ್ನು ಐಗುಪ್ತದಿಂದ ಬಿಡಿಸಿದಂದಿನಿಂದ ಇಂದಿನ ವರೆಗೂ ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಸೇವಿಸಿದರು. ನನಗೆ ಹೇಗೆ ಮಾಡಿದರೋ, ಹಾಗೆಯೇ ನಿನಗೂ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾನು ಅವರನ್ನು ಐಗುಪ್ತದಿಂದ ಬಿಡಿಸಿದಂದಿನಿಂದ ಇಂದಿನವರೆಗೂ ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಸೇವಿಸಿದರು. ನನಗೆ ಹೇಗೆ ಮಾಡಿದರೋ ಹಾಗೆಯೇ ನಿನಗೂ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅವರು ಯಾವಾಗಲೂ ಮಾಡಿದಂತೆ ಈಗಲೂ ಮಾಡುತ್ತಿದ್ದಾರೆ. ಅವರನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದೆನು. ಆದರೆ ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳ ಸೇವೆ ಮಾಡಿದರು. ಅವರು ನಿನಗೂ ಹೀಗೆಯೇ ಮಾಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಾನು ಅವರನ್ನು ಈಜಿಪ್ಟಿನಿಂದ ಬರಮಾಡಿದ ದಿನವು ಮೊದಲುಗೊಂಡು ಈ ದಿನದವರೆಗೂ ಅವರು ನನ್ನನ್ನು ಬಿಟ್ಟು, ಅನ್ಯದೇವರುಗಳನ್ನು ಸೇವಿಸಿ, ಮಾಡಿದ ಸಮಸ್ತ ಕೃತ್ಯಗಳ ಪ್ರಕಾರ ನಿನಗೂ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 8:8
22 ತಿಳಿವುಗಳ ಹೋಲಿಕೆ  

‘ಮೋಶೆ ಬೆಟ್ಟದಿಂದ ಇಳಿಯದೆ ತಡಮಾಡಿದ್ದನ್ನು ಇಸ್ರಯೇಲರು ನೋಡಿ, ಆರೋನನ ಬಳಿಗೆ ಕೂಡಿಬಂದರು. ಅವನಿಗೆ, “ಈಜಿಪ್ಟ್ ದೇಶದಿಂದ ನಮ್ಮನ್ನು ಕರೆದುಕೊಂಡು ಬಂದ ಆ ಮೋಶೆ ಏನಾದನೋ ಗೊತ್ತಿಲ್ಲ. ಆದ್ದರಿಂದ ಏಳು, ನಮ್ಮನ್ನು ಮುನ್ನಡೆಸಿಕೊಂಡು ಹೋಗಲು ನಮಗೊಬ್ಬ ದೇವರನ್ನು ಮಾಡಿಸಿಕೊಡು,” ಎಂದು ಕೇಳಿದರು.


ಇಸ್ರಯೇಲರು ಮತ್ತೊಮ್ಮೆ ಸರ್ವೇಶ್ವರಸ್ವಾಮಿಯ ದೃಷ್ಟಿಯಲ್ಲಿ ದ್ರೋಹಿಗಳಾದರು. ಆದುದರಿಂದ ಅವರನ್ನು ನಾಲ್ವತ್ತು ವರ್ಷಗಳ ತನಕ ಫಿಲಿಷ್ಟಿಯರ ಕೈಗೆ ಒಪ್ಪಿಸಲಾಯಿತು.


ಇಸ್ರಯೇಲರು ಮತ್ತೆ ಸರ್ವೇಶ್ವರಸ್ವಾಮಿಯ ದೃಷ್ಟಿಯಲ್ಲಿ ದ್ರೋಹಿಗಳಾದರು. ಆದ್ದರಿಂದ ಸರ್ವೇಶ್ವರ ಅವರನ್ನು ಏಳುವರ್ಷಕಾಲ ಮಿದ್ಯಾನ್ಯರ ಕೈಗೊಪ್ಪಿಸಿದರು.


ಏಹೂದನು ನಿಧನನಾದ ನಂತರ ಇಸ್ರಯೇಲರು ಪುನಃ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಗಳಾದರು.


ಆದ್ದರಿಂದ ಸರ್ವೇಶ್ವರನ ಕೋಪ ಇಸ್ರಯೇಲರ ಮೇಲೆ ಉರಿಯುತ್ತಲೇ ಇತ್ತು; “ಈ ಜನರ ಪೂರ್ವಜರಿಗೆ ನಾನು ಕೊಟ್ಟ ನಿಬಂಧನೆಯನ್ನು ಇವರು ಪಾಲಿಸಲಿಲ್ಲ, ನನ್ನ ಮಾತಿಗೆ ಕಿವಿಗೊಡಲಿಲ್ಲ.


ನನಗೆ ನಿಮ್ಮ ಪರಿಚಯವಾದಂದಿನಿಂದಲೂ ನೀವು ಸರ್ವೇಶ್ವರನ ಆಜ್ಞೆಯನ್ನು ಉಲ್ಲಂಘಿಸುತ್ತಾ ಬಂದಿದ್ದೀರಿ.


ಆದರೂ ಇಸ್ರಯೇಲ್ ಸಮುದಾಯದವರು ಮೋಶೆ ಮತ್ತು ಆರೋನರ ಮೇಲೆ ಗೊಣಗುಟ್ಟ ತೊಡಗಿದರು. ‘ಸರ್ವೇಶ್ವರನ ಜನರನ್ನು ಸಾಯಸಿದವರು ನೀವೇ’ ಎಂದು ಹೇಳುವವರಾದರು.


ಅಲ್ಲಿ ಕುಡಿಯುವುದಕ್ಕೆ ನೀರಿರಲಿಲ್ಲ. ಜನರು ಮೋಶೆಯ ಸಂಗಡ ಜಗಳವಾಡುತ್ತಾ, “ನಮಗೆ ಕುಡಿಯುವುದಕ್ಕೆ ನೀರು ತೋರಿಸಬೇಕು,” ಎಂದು ಹೇಳಿದರು. ಆಗ ಮೋಶೆ, “ನೀವು ನನ್ನ ಸಂಗಡ ವಾದಿಸುವುದೇಕೆ? ಸರ್ವೇಶ್ವರನನ್ನು ಏಕೆ ಪರೀಕ್ಷಿಸುತ್ತೀರಿ?” ಎಂದನು.


“ಈ ಸಮಾಜವನ್ನೆಲ್ಲ ಹಸಿವೆಯಿಂದ ಸಾಯಿಸಬೇಕೆಂದು ಈ ಮರುಭೂಮಿಗೆ ನಮ್ಮನ್ನು ಕರೆದು ತಂದಿದ್ದೀರಿ; ನಾವು ಈಜಿಪ್ಟಿನಲ್ಲಿದ್ದಾಗ ಸರ್ವೇಶ್ವರನ ಕೈಯಿಂದಲೆ ಸತ್ತಿದ್ದರೆ ಎಷ್ಟೊ ಲೇಸಾಗಿತ್ತು. ಆಗ ಮಾಂಸ ಪಾತ್ರೆಗಳ ಪಕ್ಕದಲ್ಲೇ ಕುಳಿತು ಹೊಟ್ಟೇ ತುಂಬ ಊಟಮಾಡುತ್ತಿದ್ದೆವು,” ಎಂದು ಗುಣಗಿದರು.


ಸರ್ವೇಶ್ವರ ಅವನಿಗೆ, “ಜನರು ಹೇಳಿದಂತೆಯೇ ಮಾಡು; ಅವರು ನಿನ್ನನ್ನಲ್ಲ, ನನ್ನನ್ನು ತಿರಸ್ಕರಿಸಿದ್ದಾರೆ. ನನ್ನ ಆಳ್ವಿಕೆ ಬೇಡವೆನ್ನುತ್ತಾರೆ.


ನೀನು ಈಗ ಅವರು ಕೇಳಿಕೊಂಡಂತೆ ಮಾಡು; ಆದರೆ ಅವರ ಮೇಲೆ ರಾಜರಿಗಿರುವ ಅಧಿಕಾರ ಎಷ್ಟು ಘನವಾದುದೆಂಬುದನ್ನು ಅವರಿಗೆ ತಿಳಿಸಿ ಎಚ್ಚರಿಸದೆ ಇರಬೇಡ,” ಎಂದು ಹೇಳಿದರು.


ಒಬ್ಬ ಹಿಬ್ರಿಯನು ತನ್ನನ್ನೇ ನಿಮಗೆ ಮಾರಿಕೊಂಡು ಆರು ವರ್ಷ ನಿಮ್ಮ ಜೀತಗಾರನಾಗಿದ್ದರೆ ಅಂಥ ಸಹೋದರನನ್ನು ಏಳನೆಯ ವರ್ಷದಲ್ಲಿ ಸ್ವತಂತ್ರನನ್ನಾಗಿ ಬಿಟ್ಟುಬಿಡಿ ಎಂದು ವಿಧಿಸಿದ್ದೆ. ಆದರೆ ನಿಮ್ಮ ಪೂರ್ವಜರು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.


ಅವರು ನನಗೆ ಹೀಗೆ ಹೇಳಿದರು, “ನರಪುತ್ರನೇ, ನನಗೆ ವಿಮುಖರಾಗಿ ದ್ರೋಹಮಾಡಿದ ಜನಾಂಗದವರಾದ ಇಸ್ರಯೇಲರ ಬಳಿಗೆ ನಿನ್ನನ್ನು ಕಳುಹಿಸುವೆನು; ಈ ದಿನದವರೆಗೆ ಅವರೂ ಅವರ ಪಿತೃಗಳೂ ನನ್ನನ್ನು ಪ್ರತಿಭಟಿಸುತ್ತಲೇ ಬಂದಿದ್ದಾರೆ.


ಮರೆಯರು ನನ್ನ ಮಹತ್ಕಾರ್ಯಗಳನು I ಇಡುವರು ನನ್ನಲ್ಲೇ ಭರವಸೆಯನು I ಕೈಗೊಳ್ಳುವರು ನನ್ನ ಆಜ್ಞೆಗಳನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು