Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 9:11 - ಕನ್ನಡ ಸತ್ಯವೇದವು C.L. Bible (BSI)

11 ಅವರಿಬ್ಬರೂ ಗುಡ್ಡ ಹತ್ತಿ ದೇವಪುರುಷನಿದ್ದ ಪಟ್ಟಣವನ್ನು ಸಮೀಪಿಸಿದರು. ನೀರು ಸೇದುವುದಕ್ಕಾಗಿ ಹೊರಗೆ ಬಂದಿದ್ದ ಮಹಿಳೆಯರನ್ನು ಕಂಡು, “ದಾರ್ಶನಿಕರು ಊರಲ್ಲಿ ಇದ್ದಾರೋ?” ಎಂದು ಕೇಳಲು, ಅವರು “ಹೌದು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರಿಬ್ಬರೂ ಗುಡ್ಡವನ್ನು ಹತ್ತಿ ದೇವರ ಮನುಷ್ಯನಿದ್ದ ಪಟ್ಟಣವನ್ನು ಸಮೀಪಿಸಲು ನೀರು ಸೇದುವುದಕ್ಕೋಸ್ಕರ ಊರ ಹೊರಗೆ ಬಂದಿದ್ದ ಸ್ತ್ರೀಯರನ್ನು ಕಂಡು, “ದರ್ಶಿಯು ಊರಲ್ಲಿದ್ದಾನೋ” ಎಂದು ಕೇಳಿದರು. ಅವರು, “ಇದ್ದಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವರಿಬ್ಬರೂ ದಿನ್ನೆಯನ್ನು ಹತ್ತಿ ದೇವರ ಮನುಷ್ಯನಿದ್ದ ಪಟ್ಟಣವನ್ನು ಸಮೀಪಿಸಲು ನೀರು ಸೇದುವದಕ್ಕೋಸ್ಕರ ಹೊರಗೆ ಬಂದಿದ್ದ ಸ್ತ್ರೀಯರನ್ನು ಕಂಡು - ದರ್ಶಿಯು ಊರಲ್ಲಿದ್ದಾನೋ ಎಂದು ಕೇಳಲು ಅವರು - ಇದ್ದಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಸೌಲನು ಮತ್ತು ಆ ಸೇವಕನು ಬೆಟ್ಟದ ಮೇಲೆ ನಡೆಯುತ್ತಾ ಆ ಪಟ್ಟಣಕ್ಕೆ ಹೋದರು. ಆ ದಾರಿಯಲ್ಲಿ ಅವರು ಕೆಲವು ಸ್ತ್ರೀಯರನ್ನು ಸಂಧಿಸಿದರು. ಆ ಸ್ತ್ರೀಯರು ನೀರನ್ನು ತರಲು ಹೋಗುತ್ತಿದ್ದರು. ಸೌಲನು ಮತ್ತು ಆ ಸೇವಕನು, “ದರ್ಶಿಯು ಇಲ್ಲಿರುವನೇ?” ಎಂದು ಆ ಯುವತಿಯರನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವರು ದಿಣ್ಣೆಯನ್ನು ಹತ್ತಿ ಪಟ್ಟಣದೊಳಗೆ ಹೋಗುವಾಗ, ನೀರು ಸೇದಲು ಬರುವ ಹುಡುಗಿಯರನ್ನು ಕಂಡು, “ದರ್ಶಿಯು ಇಲ್ಲಿ ಇದ್ದಾನೋ?” ಎಂದು ಅವರನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 9:11
9 ತಿಳಿವುಗಳ ಹೋಲಿಕೆ  

ಸಂಜೆ, ಹೆಣ್ಣುಮಕ್ಕಳು ನೀರು ಹೊರುವುದಕ್ಕೆ ಬರುವ ವೇಳೆಗೆ, ಅವನು ಊರ ಹೊರಗಡೆ ಬಾವಿಯ ಬಳಿ ಒಂಟೆಗಳನ್ನು ಮಲಗಿಸಿದನು.


ಒಂದು ದಿನ ಮೋಶೆ ಆ ನಾಡಿನ ಬಾವಿಯೊಂದರ ಬಳಿ ಕುಳಿತಿದ್ದನು. ಮಿದ್ಯಾನರ ಪೂಜಾರಿಯ ಏಳು ಮಂದಿ ಹೆಣ್ಣು ಮಕ್ಕಳು ಅಲ್ಲಿಗೆ ಬಂದರು. ತಮ್ಮ ತಂದೆಯ ಕುರಿಗಳಿಗೆ ನೀರು ಕುಡಿಸುವುದಕ್ಕಾಗಿ ನೀರು ಸೇದಿ ತೊಟ್ಟಿಗಳಲ್ಲಿ ತುಂಬುತ್ತಿದ್ದರು.


ಸೇದುವ ಬಾವಿಗಳ ಬಳಿ ಕುಳಿತು ಕೊಳ್ಳೆಹಂಚಿಕೊಳ್ಳುವವರ ಧ್ವನಿಯನಾಲಿಸು! ವರ್ಣಿಸುತಿಹರವರು ಸರ್ವೇಶ್ವರ ಸಾಧಿಸಿದ ನೀತಿಯನು, ತನ್ನ ಪ್ರಜೆ ಇಸ್ರಯೇಲ್ ಊರುಗಳಲ್ಲಾತನು ಸ್ಥಾಪಿಸಿದ ನ್ಯಾಯವನು.


ಆತನು ಹೀಗೆ ಹೇಳಿಕೊಳ್ಳುತ್ತಿರುವಾಗಲೇ ರೆಬೆಕ್ಕಳು ಹೆಗಲ ಮೇಲೆ ಕೊಡವನ್ನಿಟ್ಟುಕೊಂಡು ಊರ ಹೊರಗೆ ಬರುವುದನ್ನು ಕಂಡನು. ಆಕೆ, ಅಬ್ರಹಾಮನ ತಮ್ಮನಾದ ನಾಹೋರನಿಗೆ ಹೆಂಡತಿಯಾಗಿದ್ದ ಮಿಲ್ಕಳ ಮಗ ಬೆತೂವೇಲನ ಮಗಳು.


ಅವರು, “ಇಲ್ಲ, ಕುರಿಗಾಹಿಗಳೆಲ್ಲ ಒಂದುಗೂಡಿ ಬಾವಿಯ ಮೇಲೆ ಮುಚ್ಚಿರುವ ಕಲ್ಲನ್ನು ತೆಗೆಯುವ ತನಕ ಕುಡಿಸಕೂಡದು, ಅನಂತರ ಕುರಿಗಳಿಗೆ ನೀರು ಕುಡಿಸುತ್ತೇವೆ,” ಎಂದರು.


ಯಕೋಬನು ಅವರೊಂದಿಗೆ ಮಾತಾಡುತ್ತ ಇರುವಾಗಲೆ ಕುರಿಗಾಹಿ ರಾಖೇಲಳು ತನ್ನ ತಂದೆಯ ಕುರಿಗಳನ್ನು ಹೊಡೆದುಕೊಂಡು ಅಲ್ಲಿಗೆ ಬಂದಳು.


ಆಗ ಸೌಲನು ಆಳಿಗೆ, “ನೀನು ಹೇಳುವುದು ಒಳ್ಳೆಯದು, ಹೋಗೋಣ, ನಡೆ,” ಎಂದನು.


ದುಷ್ಟನೇ, ನೀತಿವಂತನ ಮನೆಗೆ ಕನ್ನಹಾಕಬೇಡ; ಅವನು ಕೂಡಿಸಿದ್ದನ್ನು ಕೊಳ್ಳೆಹೊಡೆಯಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು