Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 9:6 - ಕನ್ನಡ ಸತ್ಯವೇದವು C.L. Bible (BSI)

6 ಆಗ ಆ ಆಳು, “ಇಗೋ, ಈ ಪಟ್ಟಣದಲ್ಲಿ ಗೌರವಸ್ಥನಾದ ಒಬ್ಬ ದೈವಪುರುಷ ಇದ್ದಾನೆ. ಅವನು ನುಡಿಯುವುದೆಲ್ಲಾ ನೆರವೇರುತ್ತದೆ; ಅಲ್ಲಿಗೆ ಹೋಗೋಣ; ಒಂದು ವೇಳೆ ಅವನು ನಾವು ಹೋಗಬೇಕಾದ ಮಾರ್ಗವನ್ನು ತಿಳಿಸುವನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೆ ಆ ಆಳು, “ಇಗೋ, ಈ ಪಟ್ಟಣದಲ್ಲಿ ಗೌರವಸ್ಥನಾದ ಒಬ್ಬ ದೇವರ ಮನುಷ್ಯನಿರುತ್ತಾನೆ. ಅವನು ನುಡಿಯುವುದೆಲ್ಲಾ ನೆರವೇರುತ್ತದೆ; ಅಲ್ಲಿಗೆ ಹೋಗೋಣ; ಒಂದು ವೇಳೆ ಅವನು ನಾವು ಹೋಗತಕ್ಕ ಮಾರ್ಗವನ್ನು ತಿಳಿಸುವನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇಗೋ, ಈ ಪಟ್ಟಣದಲ್ಲಿ ಗೌರವಸ್ಥನಾದ ಒಬ್ಬ ದೇವರ ಮನುಷ್ಯನಿರುತ್ತಾನೆ. ಅವನು ನುಡಿಯುವದೆಲ್ಲಾ ನೆರವೇರುತ್ತದೆ; ಅಲ್ಲಿಗೆ ಹೋಗೋಣ; ಒಂದು ವೇಳೆ ಅವನು ನಾವು ಹೋಗತಕ್ಕ ಮಾರ್ಗವನ್ನು ತಿಳಿಸುವನು ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದರೆ ಆ ಸೇವಕನು, “ಈ ಪಟ್ಟಣದಲ್ಲಿ ಒಬ್ಬ ದೇವರ ಮನುಷ್ಯನಿದ್ದಾನೆ. ಜನರು ಅವನನ್ನು ಗೌರವಿಸುತ್ತಾರೆ. ಅವನು ಹೇಳುವ ವಿಷಯಗಳೆಲ್ಲ ನಿಜವಾಗುತ್ತವೆ. ಆದ್ದರಿಂದ ಈ ಪಟ್ಟಣಕ್ಕೆ ಹೋಗೋಣ ಬಹುಶಃ ನಾವು ಮುಂದೆ ಎಲ್ಲಿಗೆ ಹೋಗಬೇಕೆಂಬುದನ್ನು ಈ ದೇವರ ಮನುಷ್ಯನು ತಿಳಿಸಬಹುದು” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅದಕ್ಕವನು, “ಇಗೋ, ಈ ಪಟ್ಟಣದಲ್ಲಿ ದೇವರ ಮನುಷ್ಯನು ಒಬ್ಬನಿದ್ದಾನೆ, ಅವನು ಘನವುಳ್ಳ ಮನುಷ್ಯನು. ಅವನು ಹೇಳುವುದೆಲ್ಲಾ ನಿಶ್ಚಯವಾಗಿ ಆಗುವುದು. ಈಗ ನಾವು ಅಲ್ಲಿಗೆ ಹೋಗೋಣ. ಒಂದು ವೇಳೆ ಅವನು ನಾವು ಹೋಗಬೇಕೆಂದಿರುವ ನಮ್ಮ ಮಾರ್ಗವನ್ನು ತಿಳಿಸುವನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 9:6
16 ತಿಳಿವುಗಳ ಹೋಲಿಕೆ  

ದೇವಪುರುಷನದ ಮೋಶೆ ದೇಹವನ್ನು ಬಿಡುವುದಕ್ಕಿಂತ ಮುಂಚೆ ಇಸ್ರಯೇಲರನ್ನು ಕುರಿತು ಹೇಳಿದ ಆಶೀರ್ವಚನಗಳಿವು:


ಜುದೇಯ ನಾಡಿನವನಾದ ಒಬ್ಬ ದೈವಭಕ್ತನು ಸರ್ವೇಶ್ವರನಿಂದ ಕಳುಹಿಸಲ್ಪಟ್ಟವನಾಗಿ ಬೇತೇಲಿಗೆ ಬಂದನು. ಯಾರೊಬ್ಬಾಮನು ಧೂಪಾರತಿ ಎತ್ತಲು ಪೀಠದ ಹತ್ತಿರ ನಿಂತುಕೊಂಡನು.


ದೇವರ ಭಕ್ತನಾದ ನೀನು ಈ ಎಲ್ಲಾ ಕೇಡುಗಳಿಂದ ದೂರವಿರು. ದೇವರೊಡನೆ ಸತ್ಸಂಬಂಧ, ಭಕ್ತಿ, ವಿಶ್ವಾಸ, ಪ್ರೀತಿ, ಸ್ಥಿರಚಿತ್ತ, ಸಾತ್ವಿಕತೆ - ಇವೇ ಮೊದಲಾದ ಸದ್ಗುಣಗಳನ್ನು ಸಂಪಾದಿಸಲು ಪ್ರಯತ್ನಿಸು.


ಅವರು ನಿರ್ವಹಿಸುವ ಕಾರ್ಯದ ನಿಮಿತ್ತ ಅವರನ್ನು ಅತ್ಯಧಿಕ ಪ್ರೀತಿಯಿಂದ ಗೌರವಿಸಿರಿ. ನಿಮ್ಮನಿಮ್ಮೊಳಗೆ ಸಮಾಧಾನದಿಂದಿರಿ.


ವಿಶ್ವಾಸಿಗಳಾದ ನಿಮ್ಮ ನಡುವೆ ನಾವು ಎಷ್ಟು ಶುದ್ಧರಾಗಿ, ನೀತಿವಂತರಾಗಿ, ನಿರ್ದೋಷಿಗಳಾಗಿ ನಡೆದುಕೊಂಡೆವು ಎಂಬುದಕ್ಕೆ ನೀವೇ ಸಾಕ್ಷಿಗಳು, ಮಾತ್ರವಲ್ಲದೆ ದೇವರೂ ಸಾಕ್ಷಿಯೇ.


ಭೂಮ್ಯಾಕಾಶಗಳು ಗತಿಸಿಹೋಗುವುವು; ಆದರೆ ನನ್ನ ಮಾತುಗಳು ಶಾಶ್ವತವಾಗಿ ನಿಲ್ಲುವುವು.


ನನ್ನ ದಾಸನ ಮಾತನ್ನಾದರೋ ದೃಢೀಕರಿಸುವವನು ನಾನೆ ನನ್ನ ದೂತರ ಯೋಜನೆಯನ್ನು ಸಫಲಗೊಳಿಸುವವನು ನಾನೆ ಜನನಿವಾಸವಾಗುವುದು ಜೆರುಸಲೇಮ್ ನಗರವು ಪುನಃ ಕಟ್ಟಲ್ಪಡುವುವು ಜುದೇಯ ಪಟ್ಟಣಗಳು. ಅಲ್ಲಿ ಹಾಳುಬಿದ್ದವುಗಳು ಮರಳಿ ಎದ್ದು ನಿಲ್ಲುವುವು.


ದೈವಪುರುಷನು, “ಅದು ಎಲ್ಲಿ ಬಿದ್ದಿತು?” ಎಂದು ಕೇಳಿದನು; ಅದು ಬಿದ್ದ ಸ್ಥಳವನ್ನು ಅವನು ತೋರಿಸಿದನು. ಆಗ ದೈವಪುರುಷನು ಆ ಮರದಿಂದ ಒಂದು ತುಂಡು ಕಟ್ಟಿಗೆಯನ್ನು ಕಡಿದು ಅಲ್ಲಿ ಹಾಕಿದನು; ಕೂಡಲೆ ಆ ಕೊಡಲಿ ತೇಲಾಡಿತು.


ಒಂದು ದಿನ ದೇವಭಕ್ತನೊಬ್ಬನು ಏಲಿಯ ಬಳಿಗೆ ಬಂದು, ಸರ್ವೇಶ್ವರನಿಂದ ಬಂದ ಈ ಸಮಾಚಾರವನ್ನು ತಿಳಿಸಿದನು: “ಇಸ್ರಯೇಲರು ಈಜಿಪ್ಟಿನಲ್ಲಿ ಫರೋಹನ ದಾಸತ್ವದಲ್ಲಿದ್ದಾಗ ನಾನು ನಿನ್ನ ಗೋತ್ರದವರಿಗೆ ಪ್ರತ್ಯಕ್ಷನಾದೆ;


“ನಾನು ಇಂದು ಈ ಊರಿನ ಬುಗ್ಗೆಯ ಬಳಿಗೆ ಬಂದೆ. ‘ನನ್ನೊಡೆಯ ಅಬ್ರಹಾಮನ ದೇವರಾಗಿರುವ ಸರ್ವೇಶ್ವರಾ, ಇಗೋ, ನೀರಿನ ಬುಗ್ಗೆಯ ಬಳಿಯಲ್ಲೇ ನಿಂತಿದ್ದೇನೆ. ನೀವು ನನ್ನ ಪ್ರಯಾಣವನ್ನು ಸಫಲ ಮಾಡಿದ್ದಾದರೆ


ಏನು ಕೊಡುವುದು?” ಎನ್ನಲು ಆ ಆಳು, “ಇಗೋ, ನನ್ನ ಕೈಯಲ್ಲಿ ಒಂದು ಪಾವಲಿ ಬೆಳ್ಳಿನಾಣ್ಯವಿದೆ; ಇದನ್ನು ಅವನಿಗೆ ಕೊಡೋಣ; ಅವನು ನಮಗೆ ಮಾರ್ಗ ತೋರಿಸುವನು,” ಎಂದು ಉತ್ತರಕೊಟ್ಟನು.


ಇದಲ್ಲದೆ ಅರಸನು ಯಾಜಕನಾದ ಚಾದೋಕನಿಗೆ, “ನೀನು ದೇವದರ್ಶಿ; ನೀನು ನಿನ್ನ ಮಗನಾದ ಅಹೀಮಾಚನು ಮತ್ತು ಎಬ್ಯಾತಾರನ ಮಗನಾದ ಯೋನಾತಾನನು ಎಂಬ ಈ ಇಬ್ಬರು ಹುಡುಗರನ್ನು ಕರೆದುಕೊಂಡು ಸುರಕ್ಷಿತವಾಗಿ ಪಟ್ಟಣಕ್ಕೆ ಹೋಗಬೇಕು.


ಇಸ್ರಯೇಲರ ಅರಸನು ಸಿಟ್ಟಿನಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡನೆಂಬುದನ್ನು ದೈವಪುರುಷ ಎಲೀಷನು ಕೇಳಿದನು. ದೂತರ ಮುಖಾಂತರ ಅವನಿಗೆ, “ನೀವು ನಿಮ್ಮ ಬಟ್ಟೆಗಳನ್ನು ಹರಿದುಕೊಂಡದ್ದೇಕೆ? ಅವನನ್ನು ನನ್ನ ಬಳಿಗೆ ಕಳುಹಿಸಿ; ಇಸ್ರಯಲರಲ್ಲಿ ಒಬ್ಬ ಪ್ರವಾದಿ ಇದ್ದಾನೆಂಬುದು ಅವನಿಗೆ ಗೊತ್ತಾಗಲಿ,” ಎಂದು ಹೇಳಿ ಕಳುಹಿಸಿದನು.


ಪ್ರಭುವಿನ ಭಯಭಕುತಿಯುಳ್ಳವನಿಗೆ I ಲಭಿಪುದು ಖಚಿತ ಋಜುಮಾರ್ಗದ ಕಲಿಕೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು