Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 1:12 - ಕನ್ನಡ ಸತ್ಯವೇದವು C.L. Bible (BSI)

12 ಅದಕ್ಕೆ ಎಲೀಯನು, “ನಾನು ದೈವಪುರುಷ ಹೌದಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ ನಿನ್ನ ಐವತ್ತುಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ,” ಎಂದನು. ಕೂಡಲೆ ದೇವರು ಆಕಾಶದಿಂದ ಕಳುಹಿಸಿದ ಬೆಂಕಿ ಬಂದು ಅವನನ್ನೂ ಅವನ ಐವತ್ತುಮಂದಿ ಸಿಪಾಯಿಗಳನ್ನೂ ಸುಟ್ಟುಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಗ ಎಲೀಯನು, “ನಾನು ದೇವರ ಮನುಷ್ಯನಾಗಿರುವುದಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ, ನಿನ್ನ ಐವತ್ತು ಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ” ಎಂದನು. ಕೂಡಲೆ ಆಕಾಶದಿಂದ ಬೆಂಕಿ ಬಿದ್ದು ಅವನನ್ನೂ, ಅವನ ಸಿಪಾಯಿಗಳನ್ನೂ ದಹಿಸಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆಗ ಎಲೀಯನು ಅವನಿಗೆ - ನಾನು ದೇವರ ಮನುಷ್ಯನಾಗಿರುವದಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ ನಿನ್ನ ಐವತ್ತು ಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ ಎಂದನು. ಕೂಡಲೆ ದೇವರು ಆಕಾಶದಿಂದ ಕಳುಹಿಸಿದ ಬೆಂಕಿಯು ಬಂದು ಅವನನ್ನೂ ಅವನ ಐವತ್ತು ಮಂದಿ ಸಿಪಾಯಿಗಳನ್ನೂ ಸುಟ್ಟುಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಎಲೀಯನು ಸೇನಾಧಿಪತಿಗೆ ಮತ್ತು ಅವನ ಐವತ್ತು ಮಂದಿ ಜನರಿಗೆ, “ನಾನು ದೇವಮನುಷ್ಯನಾಗಿದ್ದರೆ ಪರಲೋಕದಿಂದ ಬೆಂಕಿಯು ಕೆಳಗಿಳಿದು ಬಂದು ನಿನ್ನನ್ನೂ ನಿನ್ನ ಐವತ್ತು ಜನರನ್ನೂ ನಾಶಗೊಳಿಸಲಿ!” ಎಂದು ಹೇಳಿದನು. ಆಗ ಪರಲೋಕದಿಂದ ದೇವರ ಬೆಂಕಿಯು ಇಳಿದು ಬಂದು ಸೇನಾಧಿಪತಿಯನ್ನೂ ಅವನ ಐವತ್ತು ಜನರನ್ನೂ ನಾಶಗೊಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಎಲೀಯನು ಅವರಿಗೆ ಉತ್ತರವಾಗಿ, “ನಾನು ದೇವರ ಮನುಷ್ಯನಾಗಿದ್ದರೆ, ಬೆಂಕಿಯು ಆಕಾಶದಿಂದ ಇಳಿದು ನಿನ್ನನ್ನೂ ನಿನ್ನ ಐವತ್ತು ಮಂದಿಯನ್ನೂ ದಹಿಸಿಬಿಡಲಿ,” ಎಂದನು. ಆಗ ದೇವರ ಬೆಂಕಿಯು ಆಕಾಶದಿಂದ ಇಳಿದು ಅವನನ್ನೂ ಅವನ ಐವತ್ತು ಮಂದಿಯನ್ನೂ ಸುಟ್ಟುಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 1:12
6 ತಿಳಿವುಗಳ ಹೋಲಿಕೆ  

ಕೂಡಲೆ ಸರ್ವೇಶ್ವರನ ಕಡೆಯಿಂದ ಬೆಂಕಿ ಇಳಿದುಬಂದು ಬಲಿಮಾಂಸವನ್ನೂ ಕಟ್ಟಿಗೆ ಕಲ್ಲುಮಣ್ಣುಗಳನ್ನೂ ದಹಿಸಿಬಿಟ್ಟಿತು. ಕಾಲುವೆಯಲ್ಲಿದ್ದ ನೀರನ್ನೆಲ್ಲಾ ಹೀರಿಬಿಟ್ಟಿತು.


ಆಮೇಲೆ ಅರಸನು ಇನ್ನೊಬ್ಬ ಪಂಶಾಶದಧಿಪತಿಯನ್ನು ಅವನ ಐವತ್ತುಮಂದಿ ಸಿಪಾಯಿಗಳ ಸಮೇತ ಕಳುಹಿಸಿದನು. ಇವನು ಬಂದು ಎಲೀಯನಿಗೆ, “ದೈವಪುರುಷರೇ, ಬೇಗನೆ ಇಳಿದು ಬನ್ನಿ; ಅರಸರು ನಿಮ್ಮನ್ನು ಕರೆಯುತ್ತಾರೆ,” ಎಂದು ಹೇಳಿದನು.


ಅರಸನು ಮತ್ತೊಬ್ಬ ಪಚಾಶದಧಿಪತಿಯನ್ನು ಅವನ ಐವತ್ತುಮಂದಿ ಸಿಪಾಯಿಗಳೊಡನೆ ಕಳುಹಿಸಿದನು. ಇವನು ಬಂದು, ಎಲೀಯನ ಮುಂದೆ ಮೊಣಕಾಲೂರಿ, “ದೈವಪುರುಷರೇ, ನನ್ನ ಮತ್ತು ನನ್ನ ಸೇವಕರಾದ ಈ ಐವತ್ತುಮಂದಿಯ ಪ್ರಾಣ ನಿಮ್ಮ ದೃಷ್ಟಿಯಲ್ಲಿ ಮೌಲ್ಯವುಳ್ಳದ್ದಾಗಿರಲಿ;


ಆಗ ಸರ್ವೇಶ್ವರನ ಸನ್ನಿಧಿಯಿಂದ ಬೆಂಕಿ ಹೊರಟು ಅವರನ್ನು ನಾಶಮಾಡಿತು. ಅವರು ಸರ್ವೇಶ್ವರನ ಸನ್ನಿಧಿಯಲ್ಲೇ ಸತ್ತರು.


ಅವನು ಮಾತಾಡಿ ಮುಗಿಸುವಷ್ಟರಲ್ಲೇ ಮತ್ತೊಬ್ಬನು ಬಂದು, “ದೇವರು ಆಕಾಶದಿಂದ ಬೆಂಕಿ ಸುರಿಸಿದರು. ಅದು ಕುರಿಗಳನ್ನೂ, ಕೂಲಿ ಆಳುಗಳನ್ನೂ ಸುಟ್ಟು ಭಸ್ಮಮಾಡಿತು. ನಾನೊಬ್ಬನೇ ತಲೆತಪ್ಪಿಸಿಕೊಂಡು ಈ ಸುದ್ದಿಯನ್ನು ನಿಮಗೆ ಮುಟ್ಟಿಸಲು ಓಡಿಬಂದೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು