Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 1:15 - ಕನ್ನಡ ಸತ್ಯವೇದವು C.L. Bible (BSI)

15 ಆಗ ಸರ್ವೇಶ್ವರನ ದೂತನು ಎಲೀಯನಿಗೆ, “ನೀನು ಇವನ ಸಂಗಡ ಹೋಗು; ಹೆದರಬೇಡ,” ಎಂದು ಹೇಳಿದನು. ಆದ್ದರಿಂದ ಎಲೀಯನು ಎದ್ದು ಇವನ ಜೊತೆಯಲ್ಲೇ ಅರಸನ ಬಳಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಯೆಹೋವನ ದೂತನು ಎಲೀಯನಿಗೆ, “ನೀನು ಇವನ ಸಂಗಡ ಹೋಗು, ಅವನಿಗೆ ಹೆದರಬೇಡ” ಎಂದು ಹೇಳಿದ್ದರಿಂದ ಅವನು ಎದ್ದು, ಇವನ ಜೊತೆಯಲ್ಲಿ ಅರಸನ ಬಳಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಗ ಯೆಹೋವನ ದೂತನು ಎಲೀಯನಿಗೆ - ನೀನು ಇವನ ಸಂಗಡ ಹೋಗು; ಇವನಿಗೆ ಹೆದರಬೇಡ ಎಂದು ಹೇಳಿದ್ದರಿಂದ ಅವನು ಎದ್ದು ಇವನ ಜೊತೆಯಲ್ಲಿ ಅರಸನ ಬಳಿಗೆ ಹೋಗಿ ಅವನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೆಹೋವನ ದೂತನು ಎಲೀಯನಿಗೆ, “ಸೇನಾಧಿಪತಿಯೊಡನೆ ಹೋಗು, ಅವನಿಗೆ ಹೆದರಬೇಡ” ಎಂದು ಹೇಳಿದನು. ಎಲೀಯನು ರಾಜನಾದ ಅಹಜ್ಯನನ್ನು ನೋಡಲು ಆ ಸೇನಾಧಿಪತಿಯೊಡನೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ಯೆಹೋವ ದೇವರ ದೂತನು ಎಲೀಯನಿಗೆ, “ಅವನ ಸಂಗಡ ಇಳಿದು ಹೋಗು, ಅವನಿಗೆ ಭಯಪಡಬೇಡ,” ಎಂದನು. ಆದ್ದರಿಂದ ಎಲೀಯನು ಎದ್ದು ಅವನ ಸಂಗಡ ಅರಸನ ಬಳಿಗೆ ಇಳಿದು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 1:15
11 ತಿಳಿವುಗಳ ಹೋಲಿಕೆ  

“ನಾನೆ, ನಾನೆ ನಿನ್ನನು ಸಂತೈಸುವವನಾಗಿರೆ, ನೀ ಭಯಪಡುವುದೇಕೆ ಮರ್ತ್ಯನಾದ ಮಾನವನಿಗೆ? ನೀ ಹೆದರಿ ನಡುಗುವುದೇಕೆ ಹುಲುಮಾನವನಿಗೆ?


“ನರಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯೆ ಇದ್ದರೂ ಅವರಿಗೆ ಭಯಪಡಬೇಡ. ಅವರ ಗದರಿಕೆಗೆ ಹೆದರದಿರು; ಅವರು ದ್ರೋಹಿ ವಂಶದವರು; ಅವರ ಬಿರುನುಡಿಗೆ ದಿಗಿಲು ಪಡಬೇಡ, ಅವರ ಬಿರುನೋಟಕ್ಕೆ ಬೆಚ್ಚದಿರು.


ನೀನು ಎದ್ದು ನಡುಕಟ್ಟಿಕೊ, ನಾನು ಆಜ್ಞಾಪಿಸುವುದನ್ನೆಲ್ಲ ಅವರಿಗೆ ತಿಳಿಸು, ಅವರಿಗೆ ಹೆದರಬೇಡ; ಹೆದರಿದರೆ ನಾನೂ ನಿನ್ನನ್ನು ಅವರ ಮುಂದೆ ಹೆದರಿಸುವೆನು.


ದೇಹವನ್ನು ಕೊಂದು ಹಾಕುವವರಿಗೆ ಭಯಪಡಬೇಡಿ; ಏಕೆಂದರೆ, ಅವರಿಂದ ಆತ್ಮವನ್ನು ಕೊಲ್ಲಲು ಆಗದು. ಆದರೆ ದೇಹಾತ್ಮಗಳೆರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿ.


ನಾನು ನಿನ್ನನ್ನು ಆ ಜನರಿಗೆ ದುರ್ಗಮವಾದ ಕಂಚಿನ ಪೌಳಿಗೋಡೆಯನ್ನಾಗಿಸುವೆನು. ನಿನಗೆ ವಿರುದ್ಧ ಅವರು ಯುದ್ಧಮಾಡುವರು. ಆದರೆ ನಿನ್ನನ್ನು ಸೋಲಿಸಲಾಗದು. ನಿನ್ನ ನ್ನು ಉದ್ಧರಿಸಿ ರಕ್ಷಿಸಲು ನಾನೇ ನಿನ್ನೊಂದಿಗಿರುವೆನು.


ನನಗೆ ಬೆಳಕು, ನನಗೆ ರಕ್ಷೆ, ಪ್ರಭುವೆ I ನಾನಾರಿಗೂ ಅಳುಕೆನು II ನನ್ನ ಬಾಳಿಗಾಧಾರ ಪ್ರಭುವೆ I ನಾನಾರಿಗೂ ಅಂಜೆನು II


ಆದರೆ ಸರ್ವೇಶ್ವರ ಸ್ವಾಮಿಯ ದೂತನು ತಿಷ್ಬೀಯನಾದ ಎಲೀಯನಿಗೆ, “ನೀನು ಹೋಗಿ ಸಮಾರಿಯದ ಅರಸನ ಆ ಸೇವಕರನ್ನು ಭೇಟಿಯಾಗು. ಅವರಿಗೆ, ‘ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವ ಅಗತ್ಯವಾದರೂ ಏನು? ಇಸ್ರಯೇಲರಲ್ಲಿ ದೇವರಿಲ್ಲವೆ?


ಆಗ ಎಲೀಯನು, “ನಾನು ಸನ್ನಿಧಿಸೇವೆಮಾಡುತ್ತಿರುವ ಸರ್ವಶಕ್ತನಾಣೆ, ಈ ದಿನ ನಾನು ಅಹಾಬನಿಗೆ ಹೇಗೂ ಕಾಣಿಸಿಕೊಳ್ಳಲೇಬೇಕು,” ಎಂದನು.


ಈ ಘಟನೆಗಳೆಲ್ಲ ನಡೆದ ಮೇಲೆ ಅಬ್ರಾಮನಿಗೆ ಒಂದು ದಿವ್ಯದರ್ಶನ ಆಯಿತು. ಅದರಲ್ಲಿ ಸರ್ವೇಶ್ವರ ಸ್ವಾಮಿಯ ಈ ವಾಣಿ ಕೇಳಿಸಿತು: “ಅಬ್ರಾಮನೇ ಭಯಪಡಬೇಡ, ನಿನ್ನನ್ನು ರಕ್ಷಿಸುವ ಕವಚ ನಾನೇ, ಘನವಾದ ಬಹುಮಾನ ಸಿಗುವುದು ನಿನಗೆ".


ವಿಶ್ವಾಸವಿದ್ದುದರಿಂದಲೇ ಆತನು ಅರಸನ ಕಡುಕೋಪಕ್ಕೂ ಅಂಜದೆ ಈಜಿಪ್ಟ್ ದೇಶವನ್ನು ಬಿಟ್ಟುಬಂದನು. ಕಣ್ಣಿಗೆ ಕಾಣದ ದೇವರನ್ನು ಕಣ್ಣಾರೆ ಕಾಣುತ್ತಿರುವನೋ ಎನ್ನುವಷ್ಟು ದೃಢಚಿತ್ತನಾಗಿ ಅವನು ಮುನ್ನಡೆದನು.


ಆಕಾಶದಿಂದ ಬೆಂಕಿಬಿದ್ದು ನನಗೆ ಮುಂದೆ ಬಂದ ಆ ಇಬ್ಬರು ಪಂಚಾಶದಧಿಪತಿಗಳನ್ನೂ ಅವರ ಸಿಪಾಯಿಗಳನ್ನೂ ದಹಿಸಿಬಿಟ್ಟಿತಲ್ಲವೆ? ನನ್ನ ಪ್ರಾಣವಾದರೂ ನಿಮ್ಮ ದೃಷ್ಟಿಯಲ್ಲಿ ಮೌಲ್ಯವುಳ್ಳದೆಂದು ಮಾನ್ಯವಾಗಲಿ,” ಎಂದು ಬೇಡಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು