2 ಅರಸುಗಳು 1:16 - ಕನ್ನಡ ಸತ್ಯವೇದವು C.L. Bible (BSI)16 ಅರಸನಿಗೆ, “ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ದೂತರನ್ನು ಕಳುಹಿಸಿದ್ದೇಕೆ? ಇಸ್ರಯೇಲರಲ್ಲಿ ದೇವರಿಲ್ಲವೆ? ಹೀಗೆ ಮಾಡಿದ್ದರಿಂದ ನೀವು ಹಿಡಿದ ಹಾಸಿಗೆಯಿಂದ ಏಳದೆ ಸಾಯಲೇಬೇಕು ಎಂಬುದಾಗಿ ಸರ್ವೇಶ್ವರ ಹೇಳಿದ್ದಾರೆ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಂತರ ಎಲೀಯನು ಅರಸನಿಗೆ, “ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ದೂತರನ್ನು ಕಳುಹಿಸಿದ್ದೇನು? ಅಂಥ ವಿಚಾರ ಮಾಡುವುದಕ್ಕೆ ಇಸ್ರಾಯೇಲರಲ್ಲಿ ದೇವರಿಲ್ಲವೋ? ನೀನು ಹೀಗೆ ಮಾಡಿದ್ದರಿಂದ ಹತ್ತಿದ ಮಂಚದಿಂದ ಇಳಿಯದೆ ಸಾಯಲೇಬೇಕು ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವದಕ್ಕೆ ದೂತರನ್ನು ಕಳುಹಿಸಿದ್ದೇನು? ಅಂಥ ವಿಚಾರಮಾಡುವದಕ್ಕೆ ಇಸ್ರಾಯೇಲ್ಯರಲ್ಲಿ ದೇವರಿಲ್ಲವೋ? ನೀನು ಹೀಗೆ ಮಾಡಿದ್ದರಿಂದ ಹತ್ತಿದ ಮಂಚದಿಂದಿಳಿಯದೆ ಸಾಯಲೇಬೇಕು ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಎಲೀಯನು ಅಹಜ್ಯನಿಗೆ, “ಇಸ್ರೇಲಿನಲ್ಲಿ ದೇವರಿದ್ದಾನೆ. ಹೀಗಿರುವಾಗ ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ಪ್ರಶ್ನೆಗಳನ್ನು ಕೇಳಲು ಸಂದೇಶಕರನ್ನು ಏಕೆ ಕಳುಹಿಸಿದೆ? ನೀನು ಈ ಕಾರ್ಯವನ್ನು ಮಾಡಿದ್ದರಿಂದ ನಿನ್ನ ಹಾಸಿಗೆಯಿಂದ ನೀನು ಮೇಲಕ್ಕೇಳುವುದಿಲ್ಲ. ನೀನು ಅಲ್ಲೇ ಸಾಯುವೆ! ಎಂಬುದಾಗಿ ಯೆಹೋವನು ಅನ್ನುತ್ತಾನೆ.” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅರಸನಿಗೆ, “ಯೆಹೋವ ದೇವರ ವಾಕ್ಯವನ್ನು ವಿಚಾರಿಸಲು ಇಸ್ರಾಯೇಲಿನಲ್ಲಿ ದೇವರಿಲ್ಲವೆಂಬ ಹಾಗೆ ನೀನು ಎಕ್ರೋನಿನ ದೇವರಾದ ಬಾಳ್ ಜೆಬೂಬನ್ನು ವಿಚಾರಿಸಲು ದೂತರನ್ನು ಕಳುಹಿಸಿದ ಕಾರಣ, ‘ನೀನು ಏರಿದ ಮಂಚದಿಂದ ಇಳಿಯದೆ ನಿಶ್ಚಯವಾಗಿ ಸಾಯುವೆ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು. ಅಧ್ಯಾಯವನ್ನು ನೋಡಿ |
ಅದಕ್ಕೆ ಅವರು, “ಒಬ್ಬ ವ್ಯಕ್ತಿ ನಮ್ಮನ್ನು ಎದುರುಗೊಂಡು, “ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ಹಿಂದಿರುಗಿರಿ. ಸರ್ವೇಶ್ವರನ ಹೆಸರಿನಲ್ಲಿ ಅವನಿಗೆ ಹೀಗೆಂದು ಹೇಳಿರಿ: ‘ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವ ಅಗತ್ಯವಾದರೂ ಏನು? ಇಸ್ರಯೇಲರಲ್ಲಿ ದೇವರಿಲ್ಲವೆ? ಹೀಗೆ ಮಾಡಿದ್ದರಿಂದ ನೀವು ಹಿಡಿದ ಹಾಸಿಗೆಯಿಂದ ಏಳದೆ ಸಾಯಲೇಬೇಕು ಎಂಬುದಾಗಿ ಹೇಳಿರಿ’ ಎಂದು ಆಜ್ಞಾಪಿಸಿದನು,” ಎಂದು ಉತ್ತರಕೊಟ್ಟರು.
“ಆದಕಾರಣ ನೀನು ಅವರನ್ನು ಸಂಬೋಧಿಸಿ ಹೀಗೆ ಹೇಳು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಇಸ್ರಯೇಲ್ ವಂಶದವರಲ್ಲಿ ಯಾರು ಯಾರು ವಿಗ್ರಹಗಳನ್ನು ತಮ್ಮ ಹೃದಯದಲ್ಲಿ ನೆಲೆಗೊಳಿಸಿಕೊಂಡಿದ್ದಾರೋ, ಪಾಪಕಾರಿಯಾದ ಆ ವಿಘ್ನವನ್ನು ತಮ್ಮ ಮುಂದೆಯೇ ಇಟ್ಟುಕೊಂಡಿದ್ದಾರೋ ಅಂಥವರು ಪ್ರವಾದಿಯನ್ನು ಪ್ರಶ್ನೆ ಕೇಳುವುದಕ್ಕೆ ಬಂದರೆ ಅವರು ಪಾತಕಕ್ಕೆ ಅಂದರೆ, ಅವರ ಲೆಕ್ಕವಿಲ್ಲದ ವಿಗ್ರಹಗಳಿಗೆ ತಕ್ಕ ಹಾಗೆ ಸರ್ವೇಶ್ವರನಾದ ನಾನೇ ಅವರಿಗೆ ಉತ್ತರಕೊಡುವೆನು.