Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 1:4 - ಕನ್ನಡ ಸತ್ಯವೇದವು C.L. Bible (BSI)

4 ಈ ಕಾರಣ ಅಹಜ್ಯನು ತಾನು ಹಿಡಿದ ಹಾಸಿಗೆಯಿಂದ ಏಳದೆ ಸಾಯಲೇಬೇಕು ಎನ್ನುತ್ತಾರೆ ಸರ್ವೇಶ್ವರ’ ಎಂದು ಹೇಳು,” ಎಂದು ಆಜ್ಞಾಪಿಸಿದರು. ಎಲೀಯನು ಹಾಗೆಯೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅಹಜ್ಯನು ತಾನು ಹತ್ತಿ ಮಲಗಿದ ಮಂಚದಿಂದ ಇಳಿಯದೆ ಸಾಯಲೇ ಬೇಕು’ ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂಬುದಾಗಿ ಹೇಳು ಎಂದು ಆಜ್ಞಾಪಿಸಿದನು. ಎಲೀಯನು ಹಾಗೆಯೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅಹಜ್ಯನು ತಾನು ಹತ್ತಿದ ಮಂಚದಿಂದಿಳಿಯದೆ ಸಾಯಲೇಬೇಕು ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳು ಎಂದು ಆಜ್ಞಾಪಿಸಿದನು. ಎಲೀಯನು ಹಾಗೆಯೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ರಾಜನಾದ ಅಹಜ್ಯನಿಗೆ ಈ ಸಂಗತಿಗಳನ್ನು ತಿಳಿಸಿ: ಬಾಳ್ಜೆಬೂಬನಿಂದ ಪ್ರಶ್ನೆಗಳನ್ನು ಕೇಳುವುದಕ್ಕೆ ನೀನು ಸಂದೇಶಕರನ್ನು ಕಳುಹಿಸಿದೆ. ನೀನು ಈ ಕಾರ್ಯವನ್ನು ಮಾಡಿದುದರಿಂದ, ಯೆಹೋವನು ಹೀಗೆನ್ನುವನು: ನೀನು ನಿನ್ನ ಹಾಸಿಗೆಯಿಂದ ಮೇಲಕ್ಕೇಳುವುದಿಲ್ಲ. ನೀನು ಅಲ್ಲೇ ಸಾಯುವೆ’ ಎಂದು ತಿಳಿಸು” ಎಂಬುದಾಗಿ ಹೇಳಿದನು. ಎಲೀಯನು ಅಹಜ್ಯನ ಸೇವಕರಿಗೆ ಈ ಮಾತುಗಳನ್ನು ಹೇಳಿ ಅಲ್ಲಿಂದ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಇದರ ನಿಮಿತ್ತ ನೀನು ಏರಿದ ಮಂಚದಿಂದ ಇಳಿಯದೆ, ನಿಶ್ಚಯವಾಗಿ ಸಾಯುವೆ,’ ಎಂದು ಯೆಹೋವ ದೇವರು ಹೇಳುತ್ತಾರೆ ಎಂದು ಹೇಳು,” ಎಂದರು. ಆಗ ಎಲೀಯನು ಹೊರಟುಹೋಗಿ ಅದರಂತೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 1:4
14 ತಿಳಿವುಗಳ ಹೋಲಿಕೆ  

ಇಗೋ, ಸಕಲ ನರಪ್ರಾಣಿಗಳು ನನ್ನವೇ; ತಂದೆಯೇನು, ಮಗನೇನು, ನರಪ್ರಾಣಿಗಳೆಲ್ಲವೂ ನನ್ನಧೀನದಲ್ಲಿವೆ; ಪಾಪಮಾಡುವ ಪ್ರಾಣಿಯೇ ಸಾಯುವನು.


ಆಗ ಆ ಸರ್ಪ, “ಆ ಮಾತು ನಿಜವಲ್ಲ, ನೀವು ಸಾಯುವುದು ಸುಳ್ಳು.


ಆದರೆ ಒಳಿತು - ಕೆಡಕುಗಳ ಅರಿವನ್ನು ಹುಟ್ಟಿಸುವ ಮರದ ಹಣ್ಣನ್ನು ಮಾತ್ರ ತಿನ್ನಬಾರದು; ತಿಂದೆಯಾದರೆ, ಅದೇ ದಿನ ಸತ್ತುಹೋಗುವೆ,” ಎಂದು ವಿಧಿಸಿದರು.


ಧರ್ಮನಿರತನಿಗೆ ದೊರಕುವುದು ಜೀವ; ಅಧರ್ಮಾಸಕ್ತನಿಗೆ ಸಿಗುವುದು ಮರಣ.


ಅರಸನಿಗೆ, “ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ದೂತರನ್ನು ಕಳುಹಿಸಿದ್ದೇಕೆ? ಇಸ್ರಯೇಲರಲ್ಲಿ ದೇವರಿಲ್ಲವೆ? ಹೀಗೆ ಮಾಡಿದ್ದರಿಂದ ನೀವು ಹಿಡಿದ ಹಾಸಿಗೆಯಿಂದ ಏಳದೆ ಸಾಯಲೇಬೇಕು ಎಂಬುದಾಗಿ ಸರ್ವೇಶ್ವರ ಹೇಳಿದ್ದಾರೆ,” ಎಂದನು.


ನಿನ್ನ ಸಮೇತ ಇಸ್ರಯೇಲರನ್ನು ಫಿಲಿಷ್ಟಿಯರ ಕೈಗೆ ಒಪ್ಪಿಸುವರು. ನಾಳೆ ನೀನೂ ನಿನ್ನ ಮಕ್ಕಳೂ ನಾನಿರುವಲ್ಲಿಗೆ ಬರುವಿರಿ. ಸರ್ವೇಶ್ವರ ಇಸ್ರಯೇಲ್ ಸೈನ್ಯವನ್ನು ಫಿಲಿಷ್ಟಿಯರ ಕೈಗೆ ಒಪ್ಪಿಸುವರು,” ಎಂದು ಹೇಳಿದನು.


ಆಪತ್ಕಾಲ ಬಂದಾಗ ದುಷ್ಟನು ಹಾಳಾಗುತ್ತಾನೆ; ಮರಣವೇಳೆಯಲ್ಲೂ ನೀತಿವಂತ ನಂಬಿಕೆಯಿಂದಿರುತ್ತಾನೆ.


ಅದಕ್ಕೆ ಅವರು, “ಒಬ್ಬ ವ್ಯಕ್ತಿ ನಮ್ಮನ್ನು ಎದುರುಗೊಂಡು, “ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ಹಿಂದಿರುಗಿರಿ. ಸರ್ವೇಶ್ವರನ ಹೆಸರಿನಲ್ಲಿ ಅವನಿಗೆ ಹೀಗೆಂದು ಹೇಳಿರಿ: ‘ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವ ಅಗತ್ಯವಾದರೂ ಏನು? ಇಸ್ರಯೇಲರಲ್ಲಿ ದೇವರಿಲ್ಲವೆ? ಹೀಗೆ ಮಾಡಿದ್ದರಿಂದ ನೀವು ಹಿಡಿದ ಹಾಸಿಗೆಯಿಂದ ಏಳದೆ ಸಾಯಲೇಬೇಕು ಎಂಬುದಾಗಿ ಹೇಳಿರಿ’ ಎಂದು ಆಜ್ಞಾಪಿಸಿದನು,” ಎಂದು ಉತ್ತರಕೊಟ್ಟರು.


“ನೀನು ನಿನ್ನ ಮನೆಗೆ ಹೋಗು; ನೀನು ಪಟ್ಟಣದೊಳಗೆ ಕಾಲಿಡುವಷ್ಟರಲ್ಲಿ ಹುಡುಗನು ಸಾಯುವನು.


ಏಕೆಂದರೆ ನಿಶ್ಚಯವಾಗಿ ಅವರು ಮರುಭೂಮಿಯಲ್ಲೇ ಸಾಯುವರೆಂದು ಸರ್ವೇಶ್ವರ ಸ್ವಾಮಿ ಹೇಳಿದ್ದರು. ಆದ್ದರಿಂದ ಯೆಫುನ್ನೆಯ ಮಗ ಕಾಲೇಬ್ ಮತ್ತು ನೂನನ ಮಗ ಯೆಹೋಶುವ ಇವರಿಬ್ಬರನ್ನು ಬಿಟ್ಟರೆ ಅವರಲ್ಲಿ ಯಾರೂ ಉಳಿಯಲಿಲ್ಲ.


ದೂತರು ಅರಸನ ಬಳಿಗೆ ಹಿಂದಿರುಗಿ ಬಂದಾಗ ಅರಸನು, “ನೀವು ಹಿಂದಿರುಗಿದ್ದೇಕೆ?” ಎಂದು ಕೇಳಿದನು.


ಎಲೀಯನು ಅಹಾಬನನ್ನು ನೋಡುವುದಕ್ಕೆ ಹೊರಟನು. ಆಗ ಸಮಾರಿಯದಲ್ಲಿ ಕ್ಷಾಮ ಬಹಳ ಭೀಕರವಾಗಿತ್ತು.


ಆಗ ದೈವಪುರುಷನಾದ ಎಲೀಷನು, “ಖಂಡಿತವಾಗಿ ಗುಣವಾಗುವುದು ಎಂಬುದಾಗಿ ಬೆನ್ಹದದನಿಗೆ ಹೇಳು; ಆದರೂ ಅವನು ಸತ್ತುಹೋಗುವುದು ನಿಶ್ಚಯವೆಂದು ಸರ್ವೇಶ್ವರ ನನಗೆ ತಿಳಿಸಿದ್ದಾರೆ,”


ಆ ದಿನಗಳಲ್ಲಿ ಹಿಜ್ಕೀಯನು ಮಾರಕ ರೋಗದಿಂದ ನರಳುತ್ತಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು, “ನಿನ್ನ ಸಂಸಾರದ ವಿಷಯವಾಗಿ ವ್ಯವಸ್ಥೆಮಾಡು; ಏಕೆಂದರೆ, ‘ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ,’ ಎಂಬುದಾಗಿ ಸರ್ವೇಶ್ವರ ಹೇಳಿದ್ದಾರೆ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು