Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 10:13 - ಕನ್ನಡ ಸತ್ಯವೇದವು C.L. Bible (BSI)

13 ಅದಕ್ಕೆ ಅವರು, “ನಾವು ಅಹಜ್ಯನ ಸಹೋದರರು; ರಾಜಪುತ್ರರನ್ನೂ ರಾಜಮಾತೆಯ ಮಕ್ಕಳನ್ನೂ ವಂದಿಸುವುದಕ್ಕಾಗಿ ಇಲ್ಲಿಗೆ ಬಂದಿದ್ದೇವೆ,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೇಹುವು ಯೆಹೂದ್ಯರ ಅರಸನಾದ ಅಹಜ್ಯನ ಸಹೋದರರನ್ನು ಕಂಡು ಅವರಿಗೆ, “ನೀವು ಯಾರು?” ಎಂದು ಕೇಳಿದನು. ಅದಕ್ಕೆ ಅವರು, “ನಾವು ಅಹಜ್ಯನ ಸಹೋದರರು. ರಾಜಪುತ್ರರನ್ನೂ, ರಾಜಮಾತೆಯ ಮಕ್ಕಳನ್ನೂ ವಂದಿಸುವುದಕ್ಕೋಸ್ಕರ ಇಲ್ಲಿಗೆ ಬಂದಿದ್ದೇವೆ” ಎಂದು ಉತ್ತರ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೆಹೂದ್ಯರ ಅರಸನಾದ ಅಹಜ್ಯನ ಸಹೋದರರನ್ನು ಕಂಡು ಅವರನ್ನು - ನೀವು ಯಾರು ಎಂದು ಕೇಳಿದನು. ಅದಕ್ಕೆ ಅವರು - ನಾವು ಅಹಜ್ಯನ ಸಹೋದರರು; ರಾಜಪುತ್ರರನ್ನೂ ರಾಜಮಾತೆಯ ಮಕ್ಕಳನ್ನೂ ವಂದಿಸುವದಕ್ಕೋಸ್ಕರ ಇಲ್ಲಿಗೆ ಬಂದಿದ್ದೇವೆ ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೇಹು ಯೆಹೂದದ ರಾಜನಾದ ಅಹಜ್ಯನ ಬಂಧುಗಳನ್ನು ಭೇಟಿಮಾಡಿ ಅವರಿಗೆ, “ನೀವು ಯಾರು?” ಎಂದು ಕೇಳಿದನು. ಅವರು, “ನಾವು ಯೆಹೂದದ ರಾಜನಾದ ಅಹಜ್ಯನ ಬಂಧುಗಳು. ನಾವು ರಾಜನ ಮಕ್ಕಳನ್ನು ಮತ್ತು ರಾಜಮಾತೆಯ ಮಕ್ಕಳನ್ನು ನೋಡಲು ಬಂದಿದ್ದೇವೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೆಹೂದದ ಅರಸನಾದ ಅಹಜ್ಯನ ಸಹೋದರರನ್ನು ಕಂಡು ಅವರಿಗೆ, “ನೀವು ಯಾರು?” ಎಂದನು. ಅದಕ್ಕವರು, “ನಾವು ಅಹಜ್ಯನ ಸಹೋದರರು. ಅರಸನ ಮಕ್ಕಳನ್ನೂ, ರಾಣಿಯ ಮಕ್ಕಳನ್ನೂ ವಂದಿಸಲು ಹೋಗುತ್ತಿದ್ದೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 10:13
8 ತಿಳಿವುಗಳ ಹೋಲಿಕೆ  

ಸಿರಿಯಾದವರು ಯೋರಾಮನನ್ನು ಗಾಯಪಡಿಸಿದರು. ಯುದ್ಧದಲ್ಲಾದ ಗಾಯಗಳನ್ನು ಮಾಗಿಸಿಕೊಳ್ಳುವುದಕ್ಕಾಗಿ ಅವನು ಜೆಸ್ರೀಲಿಗೆ ಬಂದನು. ಅವನು ಅಸ್ವಸ್ಥನಾಗಿದ್ದುದರಿಂದ ಯೆಹೂದ್ಯರ ಅರಸನಾದ ಯೆಹೋರಾಮನ ಮಗ ಅಹಜ್ಯನು ಅವನನ್ನು ನೋಡುವುದಕ್ಕಾಗಿ ಅಲ್ಲಿಗೆ ಹೋದನು.


ಅವನು ನಿಧನನಾಗಿ ಪಿತೃಗಳ ಬಳಿ ಸೇರಲು ಅವನ ಶವವನ್ನು ದಾವೀದನಗರದೊಳಗೆ ಕುಟುಂಬ ಸ್ಮಶಾನ ಭೂಮಿಯಲ್ಲಿ ಸಮಾಧಿಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಅಹಜ್ಯನು ಅರಸನಾದನು.


ಅವರು ಜುದೇಯದ ಮೇಲೆ ಯುದ್ಧಕ್ಕೆ ಬಂದು, ನಾಡಿನೊಳಗೆ ನುಗ್ಗಿ, ಅರಮನೆಯಲ್ಲಿ ಸಿಕ್ಕಿದ ಎಲ್ಲ ಸೊತ್ತನ್ನೂ ಅರಸನ ಮಡದಿ ಮಕ್ಕಳನ್ನೂ ಸೆರೆಗೆ ಒಯ್ದರು. ಅವನಿಗೆ ಕಿರಿಯಮಗ ಯೆಹೋವಾಹಾಜನ ಹೊರತು ಮಕ್ಕಳೇ ಉಳಿಯಲಿಲ್ಲ.


ಆಮೇಲೆ ಯೇಹುವು ಸಮಾರಿಯಕ್ಕೆ ಹೊರಟುಹೋದನು. ದಾರಿಯಲ್ಲಿ ಕುರುಬರ ಛತ್ರಕ್ಕೆ ಬಂದಾಗ ಯೆಹೂದ್ಯರ ಅರಸನಾದ ಅಹಜ್ಯನ ಸಹೋದರರನ್ನು ಕಂಡು, “ನೀವು ಯಾರು?” ಎಂದು ಕೇಳಿದನು.


ಆಗ ಯೇಹುವು ತನ್ನ ಸೇವಕರಿಗೆ, “ಅವರನ್ನು ಸಜೀವಿಗಳಾಗಿ ಹಿಡಿಯಿರಿ,” ಎಂದು ಆಜ್ಞಾಪಿಸಿದನು. ಅವರು ಅವರನ್ನು ಹಿಡಿದು ವಧಿಸಿ ಆ ಛತ್ರದ ಬಾವಿಯಲ್ಲಿ ಹಾಕಿದರು. ಅವರು ನಾಲ್ವತ್ತೆರಡು ಮಂದಿಯಿದ್ದರು; ಅವರಲ್ಲಿ ಒಬ್ಬನನ್ನೂ ಬಿಡಲಿಲ್ಲ.


ಇಂತಿರಲು ಗಡ್ಡ ಬೋಳಿಸಿ, ಬಟ್ಟೆ ಹರಿದು, ಗಾಯಮಾಡಿಕೊಂಡಿದ್ದ ಎಂಬತ್ತು ಜನರು ಶೆಕೆಮ್, ಶಿಲೋ, ಸಮಾರಿಯ ಎಂಬ ಊರುಗಳಿಂದ ಬಂದು, ಕೈಯಲ್ಲಿ ಧೂಪನೈವೇದ್ಯದ್ರವ್ಯಗಳನ್ನು ತೆಗೆದುಕೊಂಡು ಸರ್ವೇಶ್ವರನ ಆಲಯಕ್ಕೆ ಹೋಗುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು