Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 10:14 - ಕನ್ನಡ ಸತ್ಯವೇದವು C.L. Bible (BSI)

14 ಆಗ ಯೇಹುವು ತನ್ನ ಸೇವಕರಿಗೆ, “ಅವರನ್ನು ಸಜೀವಿಗಳಾಗಿ ಹಿಡಿಯಿರಿ,” ಎಂದು ಆಜ್ಞಾಪಿಸಿದನು. ಅವರು ಅವರನ್ನು ಹಿಡಿದು ವಧಿಸಿ ಆ ಛತ್ರದ ಬಾವಿಯಲ್ಲಿ ಹಾಕಿದರು. ಅವರು ನಾಲ್ವತ್ತೆರಡು ಮಂದಿಯಿದ್ದರು; ಅವರಲ್ಲಿ ಒಬ್ಬನನ್ನೂ ಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಯೇಹುವು ತನ್ನ ಸೇವಕರಿಗೆ, “ಅವರನ್ನು ಜೀವಸಹಿತ ಹಿಡಿಯಿರಿ” ಎಂದು ಆಜ್ಞಾಪಿಸಿದನು. ಅವರು ಅವರನ್ನು ಹಿಡಿದು ಕೊಂದು, ಉಣ್ಣೆ ಕತ್ತರಿಸುವ ಮನೆಯ ಬಾವಿಯಲ್ಲಿ ಹಾಕಿಬಿಟ್ಟರು. ಅವರು ನಲ್ವತ್ತೆರಡು ಮಂದಿ ಇದ್ದರು. ಅವರಲ್ಲಿ ಒಬ್ಬನನ್ನೂ ತಪ್ಪಿಸಿಕೊಳ್ಳಲು ಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಗ ಯೇಹುವು ತನ್ನ ಸೇವಕರಿಗೆ - ಅವರನ್ನು ಸಜೀವಿಗಳಾಗಿ ಹಿಡಿಯಿರಿ ಎಂದು ಆಜ್ಞಾಪಿಸಿದನು. ಅವರು ಅವರನ್ನು ಹಿಡಿದು ವಧಿಸಿ ಆ ಛತ್ರದ ಬಾವಿಯಲ್ಲಿ ಹಾಕಿದರು. ಅವರು ನಾಲ್ವತ್ತೆರಡು ಮಂದಿಯಿದ್ದರು; ಅವರಲ್ಲಿ ಒಬ್ಬನನ್ನೂ ಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆಗ ಯೇಹುವು ತನ್ನ ಜನರಿಗೆ, “ಅವರನ್ನು ಜೀವಸಹಿತ ಹಿಡಿದು ತನ್ನಿ!” ಎಂದು ಹೇಳಿದನು. ಯೇಹುವಿನ ಜನರು ಅಹಜ್ಯನ ಬಂಧುಗಳನ್ನು ಜೀವಸಹಿತ ಹಿಡಿದು ತಂದರು. ಅಲ್ಲಿ ನಲವತ್ತೆರಡು ಮಂದಿ ಜನರಿದ್ದರು. ಯೇಹು ಬೆತ್‌ಎಕೇಡ್‌ನ ಬಾವಿಯ ಹತ್ತಿರ ಅವರನ್ನು ಕೊಂದುಹಾಕಿದನು. ಯೇಹುವು ಯಾರನ್ನೂ ಜೀವಸಹಿತ ಉಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಅವನು, “ಅವರನ್ನು ಜೀವದಿಂದ ಹಿಡಿಯಿರಿ,” ಎಂದು ಹೇಳಿದ್ದರಿಂದ ಕುರುಬರು ಇವರನ್ನು ಜೀವದಿಂದ ಹಿಡಿದು, ಉಣ್ಣೆ ಕತ್ತರಿಸುವ ಮನೆಯ ಬಾವಿಯ ಬಳಿಯಲ್ಲಿ ಕೊಂದುಹಾಕಿದರು. ಅವರು ನಲವತ್ತೆರಡು ಮಂದಿ ಇದ್ದರು. ಅವರಲ್ಲಿ ಒಬ್ಬನನ್ನಾದರೂ ಉಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 10:14
11 ತಿಳಿವುಗಳ ಹೋಲಿಕೆ  

ಅಹಜ್ಯನು ಮರಣಹೊಂದಿದನೆಂಬುದನ್ನು ಅವನ ತಾಯಿ ಅತಲ್ಯಳು ಕೇಳಿದ ಕೂಡಲೆ ಜುದೇಯರ ರಾಜಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟಳು.


ಯೇಹುವು, ಅಹಾಬನ ಮನೆಯವರ ಮೇಲೆ ಆ ನಿರ್ಣಯವನ್ನು ನೆರವೇರಿಸುತ್ತಿರುವಾಗ ತನಗೆ ಸಿಕ್ಕಿದ ಯೆಹೂದ್ಯ ಪ್ರಮುಖರನ್ನೂ ಅಹಜ್ಯನಿಗೆ ಸೇವೆಮಾಡುತ್ತಿದ್ದ ಅವನ ಅಣ್ಣತಮ್ಮಂದಿರ ಮಕ್ಕಳನ್ನೂ ಕೊಲ್ಲಿಸಿದನು;


ಅಹಜ್ಯನು ಮರಣಹೊಂದಿದನೆಂಬುದನ್ನು ಅವನ ತಾಯಿ ಅತಲ್ಯಳು ಕೇಳಿದಾಗ ರಾಜಸಂತಾನದವರನ್ನೆಲ್ಲಾ ಬೇಗನೆ ಸಂಹರಿಸಿಬಿಟ್ಟಳು.


ಆಗ ಯೇಹುವು ಇನ್ನೊಂದು ಪತ್ರದ ಮೂಲಕ ಅವರಿಗೆ, “ನೀವು ನನ್ನ ಪಕ್ಷದವರಾಗಿದ್ದು ನನ್ನ ಆಜ್ಞಾನುಸಾರವಾಗಿ ನಡೆದುಕೊಳ್ಳಲು ಮನಸ್ಸುಳ್ಳವರಾಗಿದ್ದರೆ, ನಾಳೆ ಇಷ್ಟು ಹೊತ್ತಿಗೆ, ನಿಮ್ಮ ಯಜಮಾನನ ಸಂತಾನದವರ ತಲೆಗಳೊಡನೆ ಬನ್ನಿರಿ,” ಎಂದು ಆಜ್ಞಾಪಿಸಿದನು. ಎಪ್ಪತ್ತುಮಂದಿ ರಾಜಪುತ್ರರು ಪಟ್ಟಣದ ಪ್ರಧಾನಪುರುಷರ ಪರಾಂಬರಿಕೆಯಲ್ಲಿದ್ದರು.


ಇವನು ಅಹಾಬನ ಮಗಳನ್ನು ಮದುವೆಮಾಡಿಕೊಂಡದ್ದರಿಂದ ಅಹಾಬನ ಕುಟುಂಬದವರಾದ ಇಸ್ರಯೇಲ್ ಅರಸರ ಹೆಜ್ಜೆಯಲ್ಲೇ ನಡೆದು ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.


“ಅವರು ಯುದ್ಧಕ್ಕಾಗಿಯೇ ಬಂದಿರಲಿ, ಸಮಾಧಾನಕ್ಕಾಗಿಯೇ ಬಂದಿರಲಿ, ಅವರನ್ನು ಸಜೀವಿಗಳನ್ನಾಗಿ ಹಿಡಿದುತನ್ನಿ,” ಎಂದು ಆಜ್ಞಾಪಿಸಿದನು.


ಆಮೇಲೆ ಯೇಹುವು ಸಮಾರಿಯಕ್ಕೆ ಹೊರಟುಹೋದನು. ದಾರಿಯಲ್ಲಿ ಕುರುಬರ ಛತ್ರಕ್ಕೆ ಬಂದಾಗ ಯೆಹೂದ್ಯರ ಅರಸನಾದ ಅಹಜ್ಯನ ಸಹೋದರರನ್ನು ಕಂಡು, “ನೀವು ಯಾರು?” ಎಂದು ಕೇಳಿದನು.


ಅದಕ್ಕೆ ಅವರು, “ನಾವು ಅಹಜ್ಯನ ಸಹೋದರರು; ರಾಜಪುತ್ರರನ್ನೂ ರಾಜಮಾತೆಯ ಮಕ್ಕಳನ್ನೂ ವಂದಿಸುವುದಕ್ಕಾಗಿ ಇಲ್ಲಿಗೆ ಬಂದಿದ್ದೇವೆ,” ಎಂದು ಉತ್ತರಕೊಟ್ಟರು.


ಯೇಹುವು ಅಲ್ಲಿಂದ ಮುಂದೆ ಹೋಗುತ್ತಿರುವಾಗ ತನ್ನನ್ನು ಎದುರುಗೊಳ್ಳುವುದಕ್ಕಾಗಿ ಬಂದ ರೇಕಾಬನ ಮಗನಾದ ಯೆಹೋನಾದಾಬನನ್ನು ಕಂಡು ವಂದಿಸಿದನು. “ನಿನ್ನ ವಿಷಯದಲ್ಲಿ ನನ್ನ ಮನಸ್ಸು ಯಥಾರ್ಥವಾಗಿರುವಂತೆ ನಿನ್ನ ಮನಸ್ಸು ಯಥಾರ್ಥವಾಗಿ ಇರುತ್ತದೋ?’ ಎಂದು ಕೇಳಿದನು. ಅವನು, “ಹೌದು,” ಎಂದು ಉತ್ತರಕೊಟ್ಟನು. ಆಗ ಯೇಹುವು, “ಹಾಗಾದರೆ ನಿನ್ನ ಕೈಕೊಡು,” ಎನ್ನಲು ಅವನು ಕೈಕೊಟ್ಟನು. ಯೇಹುವು ಅವನನ್ನು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡನು.


ಇಂತಿರಲು ಗಡ್ಡ ಬೋಳಿಸಿ, ಬಟ್ಟೆ ಹರಿದು, ಗಾಯಮಾಡಿಕೊಂಡಿದ್ದ ಎಂಬತ್ತು ಜನರು ಶೆಕೆಮ್, ಶಿಲೋ, ಸಮಾರಿಯ ಎಂಬ ಊರುಗಳಿಂದ ಬಂದು, ಕೈಯಲ್ಲಿ ಧೂಪನೈವೇದ್ಯದ್ರವ್ಯಗಳನ್ನು ತೆಗೆದುಕೊಂಡು ಸರ್ವೇಶ್ವರನ ಆಲಯಕ್ಕೆ ಹೋಗುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು