Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 10:21 - ಕನ್ನಡ ಸತ್ಯವೇದವು C.L. Bible (BSI)

21 ಆಗ ಬಾಳ್ ದೇವತೆಯ ಭಕ್ತರಲ್ಲಿ ಒಬ್ಬನೂ ತಪ್ಪದೆ ಎಲ್ಲರೂ ಕೂಡಿಬಂದುದರಿಂದ ಬಾಳನ ದೇವಸ್ಥಾನ ಸಂಪೂರ್ಣವಾಗಿ ತುಂಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೇಹುವು ಇಸ್ರಾಯೇಲರ ಸಮಸ್ತ ಪ್ರಾಂತ್ಯಗಳಲ್ಲಿ, ಬಾಳ್ ದೇವತೆಯನ್ನು ಸೇವಿಸುವ ಭಕ್ತರಲ್ಲಿ ಒಬ್ಬನೂ ತಪ್ಪದೆ ಎಲ್ಲರೂ ಸೇರಿ ಬರಬೇಕೆಂದು ಪ್ರಕಟಿಸಿದನು. ಅವನು ಎಲ್ಲಾ ಕಡೆಗಳಿಗೂ ದೂತರನ್ನು ಕಳುಹಿಸಿದ್ದರಿಂದ ಅವರಲ್ಲಿ ಒಬ್ಬನೂ ತಪ್ಪಿಸಿ ಕೊಳ್ಳದೆ ಎಲ್ಲರೂ ಸೇರಿ ಬಂದಿದ್ದರು. ಬಾಳ್ ದೇವತೆಯ ದೇವಸ್ಥಾನವು ಪೂರ್ಣವಾಗಿ ಅವನ ಪೂಜಾರಿಗಳಿಂದ, ಭಕ್ತರಿಂದ ತುಂಬಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆಗ ಬಾಳನ ಭಕ್ತರಲ್ಲಿ ಒಬ್ಬನೂ ತಪ್ಪದೆ ಎಲ್ಲರೂ ಕೂಡಿ ಬಂದದರಿಂದ ಬಾಳನ ದೇವಸ್ಥಾನವೂ ಪೂರ್ಣವಾಗಿ ತುಂಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಬಳಿಕ ಅವನು ಇಸ್ರೇಲಿನ ಪ್ರದೇಶದಲ್ಲೆಲ್ಲಾ ಒಂದು ಸಂದೇಶವನ್ನು ಕಳುಹಿಸಿದನು. ಬಾಳನ ಆರಾಧಕರೆಲ್ಲರೂ ಬಂದರು. ಮನೆಯಲ್ಲಿ ಯಾರೂ ಉಳಿಯಲಿಲ್ಲ. ಬಾಳನ ಆರಾಧಕರೆಲ್ಲ ಬಾಳನ ಆಲಯಕ್ಕೆ ಬಂದರು. ಜನರಿಂದ ಆಲಯವು ತುಂಬಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಯೇಹುವು ಇಸ್ರಾಯೇಲಿನಲ್ಲೆಲ್ಲಾ ಕಳುಹಿಸಿದ್ದರಿಂದ ಬಾಳನನ್ನು ಸೇವಿಸುವವರೆಲ್ಲರೂ ಬಂದರು. ಬಾರದೆ ಇದ್ದವನು ಒಬ್ಬನೂ ಇರಲಿಲ್ಲ. ಅವರು ಬಾಳನ ಮನೆಯಲ್ಲಿ ಪ್ರವೇಶಿಸಿದಾಗ, ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೆ ಬಾಳನ ದೇವಸ್ಥಾನ ಪೂರ್ಣವಾಗಿ ತುಂಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 10:21
7 ತಿಳಿವುಗಳ ಹೋಲಿಕೆ  

ಬಾಳ್ ದೇವರಿಗಾಗಿ ಸಮಾರಿಯದಲ್ಲಿ ಒಂದು ಗುಡಿ ಕಟ್ಟಿಸಿ, ಅದರಲ್ಲಿ ಬಲಿಪೀಠವನ್ನು ಕಟ್ಟಿಸಿದನು;


ಆ ದೆವ್ವಗಳು ಭೂರಾಜರೆಲ್ಲರನ್ನೂ ಒಂದು ಸ್ಥಳದಲ್ಲಿ ಸೇರಿಸಿದವು. ಆ ಸ್ಥಳಕ್ಕೆ ಹಿಬ್ರಿಯ ಭಾಷೆಯಲ್ಲಿ, ‘ಹರ್ಮಗೆದೋನ್’ ಎಂದು ಹೆಸರು.


ಎಲ್ಲಾ ರಾಷ್ಟ್ರಗಳನ್ನು ನ್ಯಾಯತೀರ್ಪಿನ ಜೊಸೆಫಾತ್ ಕಣಿವೆಗೆ ಬರಮಾಡುವೆನು. ನನ್ನ ಪ್ರಜೆಯೂ ಸ್ವಜನರೂ ಆದ ಇಸ್ರಯೇಲರಿಗೆ ಅವರು ಮಾಡಿದ ಹಿಂಸೆಗಾಗಿ ನ್ಯಾಯಕೇಳುವೆನು. ಅವರು ನನ್ನ ಪ್ರಜೆಯನ್ನು ದೇಶವಿದೇಶಗಳಿಗೆ ಚದರಿಸಿದ್ದಾರೆ. ನನ್ನ ನಾಡನ್ನು ಹಂಚಿಕೊಂಡಿದ್ದಾರೆ.


ಯೆಹೂದ್ಯರೆಲ್ಲರೂ ಬಾಳ್ ದೇವತೆಯ ದೇವಸ್ಥಾನಕ್ಕೆ ಹೋಗಿ ಬಾಳನ ಪೂಜಾರಿಯಾದ ಮತ್ತಾನನನ್ನು ಪೀಠಗಳ ಮುಂದೆಯೇ ಕೊಂದು, ಆ ದೇವಸ್ಥಾನವನ್ನೂ ಅದರಲ್ಲಿದ್ದ ಪೀಠ ಹಾಗು ವಿಗ್ರಹಗಳನ್ನೂ ಸಂಪೂರ್ಣವಾಗಿ ಹಾಳುಮಾಡಿದರು. ಯೆಹೋಯಾದಾವನು ದೇವಾಲಯಕ್ಕೆ ಕಾವಲಿಟ್ಟನು;


ಆ ಮನೆ ಸ್ತ್ರೀಪುರುಷರಿಂದ ಕಿಕ್ಕಿರಿದಿತ್ತು. ಫಿಲಿಷ್ಟಿಯರ ಅಧಿಪತಿಗಳೆಲ್ಲರೂ ಅಲ್ಲಿದ್ದರು. ಸಂಸೋನನು ತೋರಿಸುತ್ತಿದ್ದ ಮನೋರಂಜನಾ ಕಾರ್ಯಗಳನ್ನು ನೋಡುವುದಕ್ಕಾಗಿ ಬಂದವರಲ್ಲಿ ಸುಮಾರು ಮೂರು ಸಾವಿರ ಮಂದಿ ಸ್ತ್ರೀಪುರುಷರು ಮಾಳಿಗೆಯ ಮೇಲಿದ್ದರು.


ಯೇಹುವು ವಸ್ತ್ರಾಗಾರದ ಅಧಿಪತಿಗೆ, “ಬಾಳ್ ದೇವತೆಯ ಭಕ್ತರೆಲ್ಲರಿಗೂ ಪೂಜಾವಸ್ತ್ರಗಳನ್ನು ಕೊಡು,” ಎಂದು ಆಜ್ಞಾಪಿಸಲು ಅವನು ತಂದುಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು