Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 10:24 - ಕನ್ನಡ ಸತ್ಯವೇದವು C.L. Bible (BSI)

24 ಆಮೇಲೆ ಅವರು ದಹನಬಲಿ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಹೋದರು. ಇದಕ್ಕೆ ಮೊದಲೇ ಅವನು ದೇವಸ್ಥಾನದ ಹೊರಗೆ ಎಂಬತ್ತು ಮಂದಿಯನ್ನು ಕಾಯುವುದಕ್ಕಾಗಿ ಇರಿಸಿ ಅವರಿಗೆ, “ನಾನು ಯಾರನ್ನು ನಿಮ್ಮ ಕೈಗೆ ಸಿಕ್ಕುವ ಹಾಗೆ ಮಾಡುವೆನೋ ಅವರಲ್ಲಿ ಒಬ್ಬನನ್ನೂ ಬಿಡಬೇಡಿ; ಬಿಟ್ಟರೆ ಅವನ ಪ್ರಾಣಕ್ಕೆ ಬದಲಾಗಿ ನಿಮ್ಮ ಪ್ರಾಣವು ಹೋಗುವುದು,” ಎಂಬುದಾಗಿ ಆಜ್ಞಾಪಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆಮೇಲೆ ಅವರು ಸರ್ವಾಂಗಹೋಮಯಜ್ಞಗಳನ್ನು ಸಮರ್ಪಿಸುವುದಕ್ಕೆ ಹೋದರು. ಇದಕ್ಕೆ ಮೊದಲೇ ಅವನು ದೇವಸ್ಥಾನದ ಹೊರಗೆ ಎಂಭತ್ತು ಮಂದಿಯನ್ನು ಕಾಯುವುದಕ್ಕಾಗಿ ಇರಿಸಿ ಯೇಹುವು ಅವರಿಗೆ, “ನಾನು ಯಾರನ್ನು ನಿಮ್ಮ ಕೈಗೆ ಸಿಕ್ಕುವ ಹಾಗೆ ಮಾಡುವೆನೋ ಅವರಲ್ಲಿ ಒಬ್ಬನನ್ನೂ ಬಿಡಬೇಡಿರಿ. ಬಿಟ್ಟರೆ ಅವನ ಪ್ರಾಣಕ್ಕೆ ಬದಲಾಗಿ ನಿಮ್ಮ ಪ್ರಾಣವು ಹೋಗುವುದು” ಎಂಬುದಾಗಿ ಆಜ್ಞಾಪಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆಮೇಲೆ ಅವರು ಸರ್ವಾಂಗಹೋಮಯಜ್ಞಗಳನ್ನು ಸಮರ್ಪಿಸುವದಕ್ಕೆ ಹೋದರು. ಇದಕ್ಕೆ ಮೊದಲೇ ಅವನು ದೇವಸ್ಥಾನದ ಹೊರಗೆ ಎಂಭತ್ತು ಮಂದಿಯನ್ನು ಕಾಯುವದಕ್ಕಾಗಿ ಇರಿಸಿ ಅವರಿಗೆ - ನಾನು ಯಾರನ್ನು ನಿಮ್ಮ ಕೈಗೆ ಸಿಕ್ಕುವ ಹಾಗೆ ಮಾಡುವೆನೋ ಅವರಲ್ಲಿ ಒಬ್ಬನನ್ನೂ ಬಿಡಬೇಡಿರಿ; ಬಿಟ್ಟರೆ ಅವನ ಪ್ರಾಣಕ್ಕೆ ಬದಲಾಗಿ ನಿಮ್ಮ ಪ್ರಾಣವು ಹೋಗುವದು ಎಂಬದಾಗಿ ಆಜ್ಞಾಪಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಬಾಳನ ಆರಾಧಕರು ಯಜ್ಞಗಳನ್ನು ಮತ್ತು ಸರ್ವಾಂಗಹೋಮಗಳನ್ನು ಅರ್ಪಿಸಲು ಬಾಳನ ಆಲಯದೊಳಕ್ಕೆ ಹೋದರು. ಆದರೆ ಹೊರಗಡೆ ಯೇಹುವಿನ ಎಂಭತ್ತು ಜನರು ಕಾಯುತ್ತಿದ್ದರು. ಯೇಹು ಅವರಿಗೆ, “ಯಾರೂ ತಪ್ಪಿಸಿಕೊಂಡು ಹೋಗಲು ಬಿಡಬೇಡಿ. ಯಾರಾದರೂ ಒಬ್ಬ ಮನುಷ್ಯನನ್ನು ತಪ್ಪಿಸಿಕೊಂಡು ಹೋಗಲು ಬಿಟ್ಟರೆ, ಅವನು ತನ್ನ ಜೀವವನ್ನು ಬೆಲೆಯಾಗಿ ಕೊಡಬೇಕಾಗುತ್ತದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅವರು ಬಲಿಗಳನ್ನೂ, ದಹನಬಲಿಗಳನ್ನೂ ಅರ್ಪಿಸಲು ಒಳಗೆ ಪ್ರವೇಶಿಸಿದ ತರುವಾಯ, ಯೇಹುವು ಹೊರಗೆ ಎಂಬತ್ತು ಮಂದಿಯನ್ನು ಇರಿಸಿಕೊಂಡು ಅವರಿಗೆ, “ನಾನು ನಿಮ್ಮ ಕೈಗೆ ಒಪ್ಪಿಸಿದ ಮನುಷ್ಯರಲ್ಲಿ ಯಾವನಾದರೂ ತಪ್ಪಿಸಿಕೊಂಡುಹೋದರೆ, ಅವನ ಪ್ರಾಣಕ್ಕೆ ನಿಮ್ಮ ಪ್ರಾಣ ಈಡಾಗಿರುವುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 10:24
3 ತಿಳಿವುಗಳ ಹೋಲಿಕೆ  

ಆಗ ಎಲೀಯನು ಅವರಿಗೆ, “ಬಾಳನ ಪ್ರವಾದಿಗಳೆಲ್ಲರನ್ನು ಹಿಡಿಯಿರಿ; ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳಬಾರದು,” ಎಂದು ಆಜ್ಞಾಪಿಸಲು ಅವರು ಹಿಡಿದರು. ಅವನು ಅವರನ್ನು ಕೀಷೋನ್ ಹಳ್ಳಕ್ಕೆ ಒಯ್ದು ಕೊಲ್ಲಿಸಿದನು.


ಅನಂತರ ಯೇಹುವು ರೇಕಾಬನ ಮಗ ಯೆಹೋನಾದಾಬನೊಡನೆ ದೇವಸ್ಥಾನವನ್ನು ಪ್ರವೇಶಿಸಿ ಬಾಳ್ ದೇವತೆಯ ಭಕ್ತರಿಗೆ, “ಸರ್ವೇಶ್ವರನ ಭಕ್ತರು ನಿಮ್ಮ ಮಧ್ಯೆ ಬಂದಿರುತ್ತಾರೋ ವಿಚಾರಿಸಿ ನೋಡಿ; ಬಾಳನ ಭಕ್ತರು ಮಾತ್ರ ಇಲ್ಲಿರಬೇಕು,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು