Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 10:31 - ಕನ್ನಡ ಸತ್ಯವೇದವು C.L. Bible (BSI)

31 ಆದರೆ ಅವನು ಇಸ್ರಯೇಲ್ ದೇವರಾದ ಸರ್ವೇಶ್ವರನ ಧರ್ಮಶಾಸ್ತ್ರವನ್ನು ಪೂರ್ಣಮನಸ್ಸಿನಿಂದ ಕೈಕೊಳ್ಳುವುದಕ್ಕೆ ಪ್ರಯತ್ನಿಸಲಿಲ್ಲ; ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದ ಯಾರೊಬ್ಬಾಮನ ಮಾರ್ಗವನ್ನು ಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆದರೆ ಯೇಹುವು ಇಸ್ರಾಯೇಲರ ದೇವರಾದ ಯೆಹೋವನ ಧರ್ಮನಿಯಮಗಳನ್ನು ಪೂರ್ಣಮನಸ್ಸಿನಿಂದ ಕೈಕೊಳ್ಳುವುದಕ್ಕೆ ಮನಸ್ಸುಮಾಡಲು ಪ್ರಯತ್ನಿಸಲಿಲ್ಲ. ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ಯಾರೊಬ್ಬಾಮನ ಮಾರ್ಗವನ್ನು ಬಿಡಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆದರೆ ಅವನು ಇಸ್ರಾಯೇಲ್‍ದೇವರಾದ ಯೆಹೋವನ ಧರ್ಮಶಾಸ್ತ್ರವನ್ನು ಪೂರ್ಣಮನಸ್ಸಿನಿಂದ ಕೈಕೊಳ್ಳುವದಕ್ಕೆ ಪ್ರಯತ್ನಿಸಲಿಲ್ಲ; ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ಯಾರೊಬ್ಬಾಮನ ಮಾರ್ಗವನ್ನು ಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆದರೆ ಯೇಹು ಇಸ್ರೇಲಿನ ದೇವರಾದ ಯೆಹೋವನ ನಿಯಮಗಳನ್ನು ಪೂರ್ಣಮನಸ್ಸಿನಿಂದಲೂ ಎಚ್ಚರಿಕೆಯಿಂದಲೂ ಪಾಲಿಸಲಿಲ್ಲ. ಇಸ್ರೇಲಿನ ಪಾಪಗಳಿಗೆ ಪ್ರೇರಕನಾದ ಯಾರೊಬ್ಬಾಮನ ಪಾಪಗಳನ್ನು ಯೇಹುವು ಮಾಡುವುದನ್ನು ನಿಲ್ಲಿಸಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಯೇಹುವು ತನ್ನ ಪೂರ್ಣಹೃದಯದಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರ ನಿಯಮದಲ್ಲಿ ನಡೆಯಲು ಪ್ರಯತ್ನಿಸಲಿಲ್ಲ. ಇಸ್ರಾಯೇಲರನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 10:31
19 ತಿಳಿವುಗಳ ಹೋಲಿಕೆ  

ಆದರೂ ಅವನು ಇಸ್ರಯೇಲರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗ ಯಾರೊಬ್ಬಾಮನ ಮಾರ್ಗವನ್ನು ಕೈಬಿಡದೆ, ಬೇತೇಲ್, ದಾನ್ ಎಂಬ ಊರುಗಳಲ್ಲಿದ್ದ ಚಿನ್ನದ ಹೋರಿಕರುಗಳನ್ನು ಪೂಜಿಸುತ್ತಿದ್ದನು.


ನಿನ್ನ ಹೃದಯವನ್ನು ಕಾಪಾಡು ಜಾಗರೂಕತೆಯಿಂದ; ಏಕೆಂದರೆ ಜೀವಧಾರೆ ಹೊರಡುವುದು ಅದರಿಂದ.


ಆದ್ದರಿಂದಲೇ ಹುಚ್ಚುಹೊಳೆಯಲ್ಲಿ ಕೊಚ್ಚಿಹೋಗದ ಹಾಗೆ ನಾವು ಕೇಳಿರುವ ಸತ್ಯಗಳಿಗೆ ಬಿಗಿಯಾಗಿ ಕಚ್ಚಿಕೊಳ್ಳಬೇಕು.


ಪಾಲಿಸಲಿಲ್ಲ ಅವರು ದೇವರ ನಿಬಂಧನೆಯನು I ಅನುಸರಿಸಲಿಲ್ಲ ಆತನ ಧರ್ಮಶಾಸ್ತ್ರವನು II


ನಮ್ಮ ದೇವರಾದ ಸರ್ವೇಶ್ವರನ ಮಾತನ್ನು ಕೇಳಲಿಲ್ಲ. ಅವರ ದಾಸರಾದ ಪ್ರವಾದಿಗಳ ಮುಖಾಂತರ ನಮಗೆ ಗೊತ್ತುಮಾಡಿದ ಸನ್ಮಾರ್ಗದಲ್ಲಿ ನಾವು ನಡೆಯಲಿಲ್ಲ.


ನನ್ನ ಆತ್ಮವನ್ನು ನಿಮ್ಮಲ್ಲಿ ನೆಲೆಸಿರುವಂತೆ ಅನುಗ್ರಹಿಸಿ, ನೀವು ನನ್ನ ನಿಯಮಗಳನ್ನು ಅನುಸರಿಸುವ ಹಾಗೆ ಮಾಡುವೆನು. ನೀವು ನನ್ನ ವಿಧಿಗಳನ್ನು ಕೈಗೊಂಡು ಆಚರಿಸುವಿರಿ.


ನಡತೆಯಲಿ ಶುದ್ಧವಿರಲು ಯುವಜನಕೆ ಹೇಗೆ ಸಾಧ್ಯ? I ನಿನ್ನಯ ವಾಕ್ಯಾನುಸರಣೆಯಿಂದಲೆ ಅವರಿಗದು ಸಾಧ್ಯ II


ನಾ ಇಂತೆಂದುಕೊಂಡೆ : “ಜಾಗರೂಕನಾಗಿರುವೆ ಜಿಹ್ವೆ ಪಾಪಕ್ಕೆಳೆಯದಂತೆ I ಬಾಯಿಗೆ ಕುಕ್ಕೆ ಹಾಕಿಕೊಂಡಿರುವೆ ದುರ್ಜನರ ಮುಂದೆ” II


ಮುಖಂಡರಾದ ತಮ್ಮ ಸಹೋದರರನ್ನು ಸೇರಿಕೊಂಡು, ದೇವರ ದಾಸ ಮೋಶೆಯ ಮುಖಾಂತರ ಕೊಡಲಾದ ದೇವರ ಧರ್ಮೋಪದೇಶವನ್ನು ತಾವು ಅನುಸರಿಸಿ, ತಮ್ಮ ಸರ್ವೇಶ್ವರನಾದ ದೇವರ ಎಲ್ಲ ಆಜ್ಞಾನಿಯಮವಿಧಿಗಳನ್ನು ಕೈಗೊಂಡು ನಡೆಯುವುದಾಗಿ, ಆಣೆ ಇಟ್ಟು ಹೀಗೆ ಪ್ರಮಾಣ ಮಾಡಿದರು:


ಇಸ್ರಯೇಲ್ ದೇವರಾದ ಸರ್ವೇಶ್ವರಾ, ನೀವು ನನ್ನ ತಂದೆ ದಾವೀದನಿಗೆ, ‘ನಿನ್ನ ಸಂತಾನದವರು ನಿನ್ನಂತೆ ಜಾಗರೂಕತೆಯಿಂದ ನನ್ನ ಕಟ್ಟಳೆಯನ್ನು ಅನುಸರಿಸಿ ನನ್ನ ಮಾರ್ಗದಲ್ಲಿ ನಡೆದುಕೊಂಡರೆ ಅವರು ಇಸ್ರಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವುದು ತಪ್ಪದು’ ಎಂಬುದಾಗಿ ವಾಗ್ದಾನ ಮಾಡಿದ್ದೀರಿ; ಅದನ್ನು ನೆರವೇರಿಸಿರಿ.


ಆದರೂ ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗ ಯಾರೊಬ್ಬಾಮನ ಮಾರ್ಗವನ್ನು ಬಿಡಲೇ ಇಲ್ಲ.


ಯಾರೊಬ್ಬಾಮನ ಪಾಪಗಳ ನಿಮಿತ್ತ ಹಾಗು ಅವನ ಪ್ರೇರಣೆಯಿಂದ ಇಸ್ರಯೇಲರು ಮಾಡಿದ ಪಾಪಗಳ ನಿಮಿತ್ತ ಸರ್ವೇಶ್ವರ ಅವರನ್ನು ಶತ್ರುಗಳಿಗೆ ಒಪ್ಪಿಸುವರು,” ಎಂದು ಆಕೆಗೆ ಹೇಳಿದನು.


ಇದಲ್ಲದೆ ಸರ್ವೇಶ್ವರ, ‘ನಿನ್ನ ಸಂತಾನದವರು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ನನಗೆ ನಂಬಿಗಸ್ತರಾಗಿ ನಡೆದುಕೊಳ್ಳುವುದರಲ್ಲಿ ಜಾಗರೂಕರಾಗಿದ್ದರೆ ಅವರು ಇಸ್ರಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವುದು ತಪ್ಪದು,’ ಎಂದು ನನಗೆ ಮಾಡಿದ ವಾಗ್ದಾನವನ್ನು ಅವರು ಸ್ಥಿರಪಡಿಸುವರು.


ಆಗ, ನೀವು ಸ್ವಾಧೀನಪಡಿಸಿಕೊಳ್ಳಲಿರುವ ನಾಡಿನಲ್ಲಿ ದೀರ್ಘಕಾಲ ಸುಕ್ಷೇಮದಿಂದ ಬಾಳುವಿರಿ.”


“ಎಚ್ಚರಿಕೆಯಾಗಿರಿ; ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಮರೆತುಬಿಡಬೇಡಿ. ಅವರು ಪೂಜಿಸಬೇಡಿರೆಂದು ನಿಷೇಧಿಸಿದ ಯಾವ ವಿಗ್ರಹ ವಸ್ತುಗಳನ್ನೂ ಮಾಡಿಕೊಳ್ಳಬೇಡಿ.


“ಹೋರೇಬಿನಲ್ಲಿ” ಸರ್ವೇಶ್ವರ ಅಗ್ನಿಜ್ವಾಲೆಯೊಳಗಿಂದ ನಿಮ್ಮ ಸಂಗಡ ಮಾತನಾಡಿದರು. ಆಗ ನಿಮಗೆ ಯಾವ ಆಕಾರವೂ ಕಾಣಿಸಲಿಲ್ಲ. ಆದುದರಿಂದ ಬಹಳ ಎಚ್ಚರಿಕೆಯಿಂದಿರಿ.


ನಿಮ್ಮಲ್ಲಿ ಯಾರೂ ದೇವರ ಅನುಗ್ರಹವನ್ನು ಕಳೆದುಕೊಳ್ಳದಂತೆ ಎಚ್ಚರಿಕೆಯಾಗಿರಿ. ಯಾವ ವಿಷದ ಬೇರೂ ನಿಮ್ಮಲ್ಲಿ ತಲೆದೋರಿ, ಅಸಮಾಧಾನವನ್ನು ಹುಟ್ಟಿಸಿ, ಸಭೆಯನ್ನು ಕೆಡಿಸದಂತೆ ನೋಡಿಕೊಳ್ಳಿ.


ಅವರು ಯಾರೊಬ್ಬಾಮನ ದುರ್ಮಾರ್ಗದಲ್ಲೇ ನಡೆಯುವುದನ್ನು ಬಿಡಲಿಲ್ಲವಾದುದರಿಂದ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು