Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 10:6 - ಕನ್ನಡ ಸತ್ಯವೇದವು C.L. Bible (BSI)

6 ಆಗ ಯೇಹುವು ಇನ್ನೊಂದು ಪತ್ರದ ಮೂಲಕ ಅವರಿಗೆ, “ನೀವು ನನ್ನ ಪಕ್ಷದವರಾಗಿದ್ದು ನನ್ನ ಆಜ್ಞಾನುಸಾರವಾಗಿ ನಡೆದುಕೊಳ್ಳಲು ಮನಸ್ಸುಳ್ಳವರಾಗಿದ್ದರೆ, ನಾಳೆ ಇಷ್ಟು ಹೊತ್ತಿಗೆ, ನಿಮ್ಮ ಯಜಮಾನನ ಸಂತಾನದವರ ತಲೆಗಳೊಡನೆ ಬನ್ನಿರಿ,” ಎಂದು ಆಜ್ಞಾಪಿಸಿದನು. ಎಪ್ಪತ್ತುಮಂದಿ ರಾಜಪುತ್ರರು ಪಟ್ಟಣದ ಪ್ರಧಾನಪುರುಷರ ಪರಾಂಬರಿಕೆಯಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಯೇಹುವು ಇನ್ನೊಂದು ಪತ್ರದ ಮೂಲಕವಾಗಿ ಅವರಿಗೆ, “ನೀವು ನನ್ನ ಪಕ್ಷದವರಾಗಿದ್ದು ನನ್ನ ಆಜ್ಞಾನುಸಾರ ನಡೆದುಕೊಳ್ಳುವ ಮನಸ್ಸುಳ್ಳವರಾಗಿದ್ದರೆ, ನಾಳೆ ಇಷ್ಟು ಹೊತ್ತಿಗೆ ನಿಮ್ಮ ಯಜಮಾನನ ಸಂತಾನದವರ ತಲೆಗಳೊಡನೆ ಇಜ್ರೇಲಿಗೆ ಬನ್ನಿರಿ” ಎಂದು ಆಜ್ಞಾಪಿಸಿದನು. ಆಹಾಬನ ಎಪ್ಪತ್ತು ಮಂದಿ ರಾಜಪುತ್ರರು ಪಟ್ಟಣದ ಪ್ರಧಾನಪುರುಷರ ಪರಾಂಬರಿಕೆಯಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಗ ಯೇಹುವು ಇನ್ನೊಂದು ಪತ್ರದ ಮೂಲಕವಾಗಿ ಅವರಿಗೆ - ನೀವು ನನ್ನ ಪಕ್ಷದವರಾಗಿದ್ದು ನನ್ನ ಆಜ್ಞಾನುಸಾರವಾಗಿ ನಡೆದುಕೊಳ್ಳಮನಸ್ಸುಳ್ಳವರಾಗಿದ್ದರೆ ನಾಳೆ ಇಷ್ಟು ಹೊತ್ತಿಗೆ ನಿಮ್ಮ ಯಜಮಾನನ ಸಂತಾನದವರ ತಲೆಗಳೊಡನೆ ಬನ್ನಿರಿ ಎಂದು ಆಜ್ಞಾಪಿಸಿದನು. ಎಪ್ಪತ್ತು ಮಂದಿ ರಾಜಪುತ್ರರು ಪಟ್ಟಣದ ಪ್ರಧಾನಪುರುಷರ ಪರಾಂಬರಿಕೆಯಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಂತರ ಯೇಹು ಈ ನಾಯಕರಿಗೆ ಎರಡನೆಯ ಪತ್ರವನ್ನು ಬರೆದನು. ಯೇಹುವು, “ನೀವು ನನಗೆ ಬೆಂಬಲ ಕೊಡುವುದಾದರೆ ಮತ್ತು ವಿಧೇಯರಾಗಿರುವುದಾದರೆ ಅಹಾಬನ ಮಕ್ಕಳ ತಲೆಗಳನ್ನು ಕತ್ತರಿಸಿ ಹಾಕಿ. ನಾಳೆ ಇದೇ ಸಮಯಕ್ಕೆ ಇಜ್ರೇಲಿಗೆ ನನ್ನ ಬಳಿಗೆ ಅವುಗಳನ್ನು ತನ್ನಿ.” ಅಹಾಬನಿಗೆ ಎಪ್ಪತ್ತು ಮಂದಿ ಮಕ್ಕಳಿದ್ದರು. ಅವರು ತಮ್ಮ ಪಾಲಕರಾದ ನಗರದ ನಾಯಕರ ಬಳಿಯಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಯೇಹುವು ಅವರಿಗೆ ಎರಡನೆಯ ಸಾರಿ ಪತ್ರವನ್ನು ಬರೆದು, “ನೀವು ನನ್ನವರಾಗಿದ್ದು ನನ್ನ ಮಾತು ಕೇಳುವವರಾಗಿದ್ದರೆ, ನಾಳೆ ಇಷ್ಟು ಹೊತ್ತಿಗೆ ಇಜ್ರೆಯೇಲ್ ಪಟ್ಟಣಕ್ಕೆ ನಿಮ್ಮ ಯಜಮಾನನ ಪುತ್ರರ ತಲೆಗಳನ್ನು ತೆಗೆದುಕೊಂಡು ನನ್ನ ಬಳಿಗೆ ಬನ್ನಿರಿ,” ಎಂದು ಹೇಳಿದನು. ಆದರೆ ಅರಸನ ಮಕ್ಕಳಾದ ಎಪ್ಪತ್ತು ಮಂದಿ ಮನುಷ್ಯರು ಪಟ್ಟಣದ ಪ್ರಮುಖರ ಬಳಿಯಲ್ಲಿ ಇದ್ದರು. ಅವರು ಅವರನ್ನು ಪೋಷಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 10:6
13 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು, “ಅವನನ್ನು ತಡೆಯಬೇಡಿ, ನಿಮ್ಮ ವಿರೋಧಿ ಅಲ್ಲದವನು ನಿಮ್ಮ ಪರವಾದಿ,” ಎಂದು ಉತ್ತರಕೊಟ್ಟರು.


ನನ್ನ ಪರವಾಗಿ ಇಲ್ಲದವನು ನನಗೆ ವಿರೋಧಿಯೇ ಸರಿ. ನನ್ನೊಡನೆ ಶೇಖರಿಸದವನು ಚದರಿಸುತ್ತಾನೆ.


ದುಷ್ಟ ತಂದೆಯ ಪಾಪಫಲವನು ಮಕ್ಕಳಿಗೆ ಕಾದಿಟ್ಟಿದ್ದಾರೆಯೇ ದೇವರು? ಅವನಿಗೇ ಆ ದಂಡನೆ ಆಗಲಿ ಆ ದುಷ್ಟನೇ ಅದನ್ನು ಅನುಭವಿಸಲಿ.


ಅವನು ಕಣ್ಣೆತ್ತಿ ಕಿಟಕಿಯ ಕಡೆಗೆ ನೋಡಿ, “ಅಲ್ಲಿ ನನ್ನ ಪಕ್ಷದವರು ಯಾರು?” ಎಂದು ಕೂಗಿದನು. ಕೂಡಲೆ ಆ ಕಿಟಕಿಯಿಂದ ಇಬ್ಬರು ಮೂವರು ಕಂಚುಕಿಗಳು ಅವನ ಕಡೆಗೆ ನೋಡಿದರು.


ಅವುಗಳಿಗೆ ಅಡ್ಡಬೀಳಬೇಡ. ಅವುಗಳನ್ನು ಆರಾಧಿಸಬೇಡ. ಏಕೆಂದರೆ ನಾನೇ ನಿನ್ನ ದೇವರಾದ ಸರ್ವೇಶ್ವರ, ನನಗೆ ಸಲ್ಲತಕ್ಕ ಗೌರವವನ್ನು ನಾನು ಮತ್ತೊಬ್ಬನಿಗೆ ಸಲ್ಲಗೊಡಿಸುವುದಿಲ್ಲ. ನನ್ನನ್ನು ದ್ವೇಷಿಸುವವರನ್ನು ದಂಡಿಸುತ್ತೇನೆ; ಹೆತ್ತವರ ದೋಷಫಲವನ್ನು ಅವರ ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುತ್ತೇನೆ.


ಮೋಶೆಗೆ, “ಈ ಜನರ ಮುಖಂಡರೆಲ್ಲರನ್ನು ಹಿಡಿಸಿ, ನನ್ನ ಆಜ್ಞಾನುಸಾರ ಬಹಿರಂಗವಾಗಿ ಮರಣದಂಡನೆಗೆ ಗುರಿಮಾಡಿಸು. ಆಗ ನನ್ನ ಕೋಪಾಗ್ನಿ ಇಸ್ರಯೇಲರಿಂದ ತೊಲಗುವುದು,” ಎಂದರು.


ಅನಂತರ ರಾಜಗೃಹಾಧಿಪತಿ, ಪುರಾಧಿಕಾರಿ, ಹಿರಿಯರು, ರಾಜಪುತ್ರಪಾಲಕರು ಇವರು ಎಲ್ಲರು ಕೂಡಿ ಯೇಹುವಿಗೆ, “ನಾವು ನಿಮ್ಮ ಆಜ್ಞಾಧಾರಕರಾದ ಸೇವಕರು, ನಾವಾಗಿ ನಮಗೊಬ್ಬ ಅರಸನನ್ನು ನೇಮಿಸಿಕೊಳ್ಳುವುದಿಲ್ಲ; ನಿಮ್ಮ ಚಿತ್ತವೇ ನೆರವೇರಲಿ,” ಎಂದು ಹೇಳಿಕಳುಹಿಸಿದರು.


ಪ್ರಧಾನಪುರುಷರು ಪತ್ರವನ್ನು ಓದಿದೊಡನೆ ಆ ಎಪ್ಪತ್ತು ಮಂದಿಯನ್ನು ಹಿಡಿದುಕೊಂಡು ಅವರ ತಲೆಗಳನ್ನು ಪುಟ್ಟಿಗಳಲ್ಲಿ ಹಾಕಿ ಜೆಸ್ರೀಲಿನಲ್ಲಿದ್ದ ಯೇಹುವಿಗೆ ಕಳುಹಿಸಿದರು.


ಮರುದಿನ ಬೆಳಿಗ್ಗೆ ಅವನು ಅವುಗಳ ಹತ್ತಿರ ಹೋಗಿ ಎಲ್ಲಾ ಜನರ ಎದುರಿಗೆ ನಿಂತು, “ನೀವು ನಿರಪರಾಧಿಗಳು; ನಾನಾದರೋ ನನ್ನ ಯಜಮಾನನಿಗೆ ವಿರೋಧವಾಗಿ ಒಳಸಂಚುಮಾಡಿ ಅವನನ್ನು ಕೊಂದವನು; ಆದರೆ ಇವರನ್ನೆಲ್ಲಾ ಹತಿಸಿದವರಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು