Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 11:1 - ಕನ್ನಡ ಸತ್ಯವೇದವು C.L. Bible (BSI)

1 ಅಹಜ್ಯನು ಮರಣಹೊಂದಿದನೆಂಬುದನ್ನು ಅವನ ತಾಯಿ ಅತಲ್ಯಳು ಕೇಳಿದಾಗ ರಾಜಸಂತಾನದವರನ್ನೆಲ್ಲಾ ಬೇಗನೆ ಸಂಹರಿಸಿಬಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಹಜ್ಯನು ಮರಣಹೊಂದಿದನೆಂದು ಅವನ ತಾಯಿಯಾದ ಅತಲ್ಯಳು ಕೇಳಿದಾಗ ಪಕ್ಕನೆ ರಾಜಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅಹಜ್ಯನು ಮರಣಹೊಂದಿದನೆಂಬದನ್ನು ಅವನ ತಾಯಿಯಾದ ಅತಲ್ಯಳು ಕೇಳಿದಾಗ ಫಕ್ಕನೆ ರಾಜಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಅಹಜ್ಯನ ತಾಯಿಯಾದ ಅತಲ್ಯಳು ತನ್ನ ಮಗ ಸತ್ತದ್ದನ್ನು ನೋಡಿದಳು. ಅವಳು ಮೇಲೆದ್ದು ರಾಜನ ಕುಟುಂಬವನ್ನೆಲ್ಲ ಕೊಂದುಬಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅಹಜ್ಯನ ತಾಯಿಯಾದ ಅತಲ್ಯಳು ತನ್ನ ಮಗನು ಸತ್ತು ಹೋದದ್ದನ್ನು ಕಂಡಾಗ, ಅವಳು ಎದ್ದು ರಾಜಸಂತಾನದವರನ್ನೆಲ್ಲಾ ನಾಶಮಾಡಲು ಆರಂಭಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 11:1
17 ತಿಳಿವುಗಳ ಹೋಲಿಕೆ  

ಏಳನೆಯ ತಿಂಗಳಿನಲ್ಲಿ ಇಷ್ಮಯೇಲನು ಹತ್ತು ಮಂದಿಯೊಂದಿಗೆ ಅಹೀಕಾಮನ ಮಗ ಗೆದಲ್ಯನು ವಾಸವಾಗಿದ್ದ ಮಿಚ್ಪಕ್ಕೆ ಬಂದನು. ಈತನು ರಾಜವಂಶದವನು, ಎಲೀಷಾಮನ ಮೊಮ್ಮಗನು, ನೆತನ್ಯನ ಮಗನು ಹಾಗು ಅರಸನ ಪದಾಧಿಕಾರಿಗಳಲ್ಲಿ ಒಬ್ಬನು. ಅಲ್ಲಿ ಗೆದಲ್ಯನೊಂದಿಗೆ ಅವರೆಲ್ಲರು ಊಟಮಾಡುತ್ತಿದ್ದಾಗ,


ಆದರೆ ಏಳನೆಯ ತಿಂಗಳಿನಲ್ಲಿ ರಾಜವಂಶದವನೂ ಎಲೀಷಮನ ಮೊಮ್ಮಗನೂ ನೆತನ್ಯನ ಮಗನೂ ಆದ ಇಷ್ಮಾಯೇಲನು ಹತ್ತುಮಂದಿ ಆಳುಗಳೊಡನೆ ಬಂದು ಗೆದಲ್ಯನನ್ನು, ಅವನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರನ್ನು ಹಾಗು ಬಾಬಿಲೋನಿಯಾದವರನ್ನು ಸಂಹರಿಸಿದನು.


ಜ್ಯೋತಿಷಿಗಳಿಂದ ತಾನು ವಂಚಿತನಾದೆ ಎಂದು ಅರಿತ ಹೆರೋದನು ರೋಷಾವೇಶಗೊಂಡನು. ಬೆತ್ಲೆಹೇಮಿಗೂ ಅದರ ಸುತ್ತಮುತ್ತಲಿಗೂ ಆಳುಗಳನ್ನು ಕಳುಹಿಸಿದನು. ತಾನು ಜ್ಯೋತಿಷಿಗಳಿಂದ ತಿಳಿದುಕೊಂಡಿದ್ದ ಕಾಲದ ಆಧಾರದ ಮೇಲೆ ಅಲ್ಲಿದ್ದ, ಎರಡು ವರ್ಷಗಳಿಗೆ ಮೀರದ, ಎಲ್ಲಾ ಗಂಡುಮಕ್ಕಳನ್ನು ಕೊಂದುಹಾಕಿಸಿದನು.


ಅತಿದುಷ್ಟಳಾದ ಅತಲ್ಯಳ ಮನೆಯವರು ದೇವಾಲಯವನ್ನು ಹಾಳುಮಾಡಿ, ಸರ್ವೇಶ್ವರನ ಆಲಯದ ಪ್ರತಿಷ್ಠಿತ ವಸ್ತುಗಳನ್ನು ಬಾಳ್‍ದೇವತೆಗಳಿಗಾಗಿ ಕೊಟ್ಟುಬಿಟ್ಟಿದ್ದಾರಲ್ಲವೇ?,” ಎಂದು ಹೇಳಿದನು.


ಜುದೇಯದ ಅರಸನಾದ ಅಹಜ್ಯನು ಇದನ್ನೆಲ್ಲಾ ಕಂಡು ಬೇತ್‍ಹಗ್ಗನಿನ ಮಾರ್ಗವಾಗಿ ಓಡಿಹೋದನು. ಯೇಹುವು ಅವನನ್ನು ಹಿಂದಟ್ಟಿ, “ಅವನನ್ನೂ ರಥದಲ್ಲಿಯೇ ಹೊಡೆಯಿರಿ,” ಎಂದು ಕೂಗಲು ಅವನ ಜನರು ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್ ಗಟ್ಟದ ಮೇಲೆ ಅವನನ್ನು ಗಾಯಪಡಿಸಿದರು. ಅಹಜ್ಯನು ಮೆಗಿದ್ದೋವಿಗೆ ಓಡಿಹೋಗಿ ಅಲ್ಲಿ ಸತ್ತನು.


ಇವನು ಪಟ್ಟಕ್ಕೆ ಬಂದಾಗ ಇಪ್ಪತ್ತೆರಡು ವರ್ಷದ ವಯಸ್ಸಿನವನಾಗಿದ್ದನು. ಜೆರುಸಲೇಮಿನಲ್ಲಿ ಒಂದು ವರ್ಷ ಆಳಿದನು. ಇಸ್ರಯೇಲರ ಅರಸನಾದ ಒಮ್ರಿಯನ ಮೊಮ್ಮಗಳಾದ ಅತಲ್ಯ ಎಂಬಾಕೆ ಇವನ ತಾಯಿ.


ಜ್ಯೋತಿಷಿಗಳು ಹೊರಟುಹೋದ ಮೇಲೆ ದೇವದೂತನು ಜೋಸೆಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ಏಳು, ಹೆರೋದನು ಮಗುವನ್ನು ಕೊಂದುಹಾಕಲು ಹವಣಿಸುತ್ತಿದ್ದಾನೆ. ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಈಜಿಪ್ಟ್ ದೇಶಕ್ಕೆ ಓಡಿಹೋಗು. ನಾನು ಪುನಃ ಹೇಳುವ ತನಕ ಅಲ್ಲೇ ಇರು,” ಎಂದನು.


ಒಫ್ರದಲ್ಲಿದ್ದ ತನ್ನ ತಂದೆಯಾದ ಯೆರುಬ್ಬಾಳನ ಮನೆಗೆ ಹೋಗಿ, ಅವನ ಎಪ್ಪತ್ತು ಮಂದಿ ಮಕ್ಕಳನ್ನು ಹಿಡಿದು ಒಂದೇ ಬಂಡೆಯ ಮೇಲೆ ಕೊಲ್ಲಿಸಿದನು. ಆದರೆ ಕಿರಿಯವನಾದ ಯೋತಾಮನು ಅವಿತುಕೊಂಡು ತನ್ನ ಜೀವವನ್ನು ಉಳಿಸಿಕೊಂಡನು.


ಇದಲ್ಲದೆ, ಅರಸನು ಅವನಿಗೆ, “ನೀನು ನನ್ನ ತಂದೆ ದಾವೀದನಿಗೆ ವಿರುದ್ಧ ಮಾಡಿದ ಪಾಪಕ್ಕೆ ಮನವೇ ಸಾಕ್ಷಿ; ಸರ್ವೇಶ್ವರ ಅದರ ಫಲವನ್ನು ನಿನ್ನ ತಲೆಯ ಮೇಲೆ ಬರಮಾಡುವರು.


ಪ್ರಧಾನಪುರುಷರು ಪತ್ರವನ್ನು ಓದಿದೊಡನೆ ಆ ಎಪ್ಪತ್ತು ಮಂದಿಯನ್ನು ಹಿಡಿದುಕೊಂಡು ಅವರ ತಲೆಗಳನ್ನು ಪುಟ್ಟಿಗಳಲ್ಲಿ ಹಾಕಿ ಜೆಸ್ರೀಲಿನಲ್ಲಿದ್ದ ಯೇಹುವಿಗೆ ಕಳುಹಿಸಿದರು.


ಯೇಹುವು ಸಮಾರಿಯ ಪಟ್ಟಣದಲ್ಲಿದ್ದುಕೊಂಡು ಇಸ್ರಯೇಲರನ್ನು ಆಳಿದ್ದು ಇಪ್ಪತ್ತೆಂಟು ವರ್ಷ.


ನಿಮ್ಮ ರಕ್ತಸುರಿಸಿ ಪ್ರಾಣತೆಗೆಯುವವರೆಗೆ ಮುಯ್ಯಿತೀರಿಸುವೆನು - ಮೃಗವಾಗಿದ್ದರೆ ಅದಕ್ಕೂ, ಮನುಷ್ಯನಾಗಿದ್ದರೆ, ಹತನಾದವನು ಅವನ ಸಹೋದರನಾದುದರಿಂದ ಅವನಿಗೂ ಮುಯ್ಯಿತೀರಿಸುವೆನು.


"ನಿರ್ಮಿಸಿಹರು ದೇವರು ತಮ್ಮ ಸ್ವರೂಪದಲ್ಲಿ ನರನನ್ನು ಎಂತಲೆ ನರನನ್ನು ಕೊಲ್ಲುವವನು ನರನಿಂದಲೇ ಹತನಾಗುವನು.


ಈಗ ನಿನ್ನ ಮತ್ತು ನಿನ್ನ ಮಗ ಸೊಲೊಮೋನನ ಜೀವವನ್ನು ಉಳಿಸಿಕೊಳ್ಳಬೇಕಾದರೆ ನನ್ನ ಆಲೋಚನೆಯನ್ನು ಕೇಳು;


ಯೆಹೋವಾಷನು ಯೇಹುವಿನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಅರಸನಾಗಿ ಜೆರುಸಲೇಮಿನಲ್ಲಿ ನಲವತ್ತು ವರ್ಷ ಆಳಿದನು. ಬೇರ್ಷೆಬದವಳಾದ ಚಿಬ್ಯಳು ಅವನ ತಾಯಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು