Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 11:2 - ಕನ್ನಡ ಸತ್ಯವೇದವು C.L. Bible (BSI)

2 ಆದರೆ ಅರಸ ಯೆಹೋರಾಮನ ಮಗಳೂ ಅಹಜ್ಯನ ತಂಗಿಯೂ ಆದ ಯೆಹೋಷೆಬ ಎಂಬಾಕೆ, ಯಾರಿಗೂ ತಿಳಿಯದಂತೆ ತನ್ನ ಅಣ್ಣನ ಮಗ ಯೆಹೋವಾಷನನ್ನು, ಹತವಾಗುವುದಕ್ಕಿದ್ದ ರಾಜಪುತ್ರರ ಮಧ್ಯೆಯಿಂದ, ಅವನ ದಾದಿಯೊಡನೆ ತೆಗೆದುಕೊಂಡು ಹೋಗಿ, ಮಲಗುವ ಕೋಣೆಯಲ್ಲಿ ಅಡಗಿಸಿಬಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆದರೆ ಅರಸನಾದ ಯೆಹೋರಾಮನ ಮಗಳೂ, ಅಹಜ್ಯನ ತಂಗಿಯೂ ಆದ ಯೆಹೋಷೆಬಳೆಂಬಾಕೆಯು ಯಾರಿಗೂ ತಿಳಿಯದಂತೆ ತನ್ನ ಅಣ್ಣನ ಮಗನಾದ ಯೆಹೋವಾಷನನ್ನು ಅತಲ್ಯಳಿಂದ ಹತರಾಗಿದ್ದ ರಾಜಪುತ್ರರ ಮಧ್ಯದಿಂದ ಅವನ ದಾದಿಯರೊಡನೆ ಅವನನ್ನು ತೆಗೆದುಕೊಂಡು ಹೋಗಿ, ಮಲಗುವ ಕೋಣೆಯಲ್ಲಿ ಅಡಗಿಸಿಟ್ಟಳು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆದರೆ ಅರಸನಾದ ಯೆಹೋರಾಮನ ಮಗಳೂ ಅಹಜ್ಯನ ತಂಗಿಯೂ ಆದ ಯೆಹೋಷೆಬಳೆಂಬಾಕೆಯು ಯಾರಿಗೂ ತಿಳಿಯದಂತೆ ತನ್ನ ಅಣ್ಣನ ಮಗನಾದ ಯೆಹೋವಾಷನನ್ನು ಹತವಾಗುವದಕ್ಕಿದ್ದ ರಾಜಪುತ್ರರ ಮಧ್ಯದಿಂದ ಅವನ ದಾದಿಯೊಡನೆ ತೆಗೆದುಕೊಂಡು ಹೋಗಿ ಮಲಗುವ ಕೋಣೆಯಲ್ಲಿ ಅಡಗಿಸಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋಷೆಬಳು ರಾಜನಾದ ಯೋರಾಮನ ಮಗಳಾಗಿದ್ದಳು ಮತ್ತು ಅಹಜ್ಯನ ಸೋದರಿಯಾಗಿದ್ದಳು. ಯೆಹೋವಾಷನು ರಾಜನ ಮಕ್ಕಳಲ್ಲಿ ಒಬ್ಬನಾಗಿದ್ದನು. ಅತಲ್ಯಳು ಇತರ ಮಕ್ಕಳನ್ನು ಕೊಲ್ಲುವಾಗ ಯೆಹೋಷೆಬಳು ಯೆಹೋವಾಷನನ್ನು ತೆಗೆದುಕೊಂಡು ಹೋದಳು. ಅವಳು ಯೆಹೋವಾಷನನ್ನು ಮತ್ತು ಅವನ ದಾದಿಯನ್ನು ತನ್ನ ಮಲಗುವ ಕೊಠಡಿಯಲ್ಲಿ ಅಡಗಿಸಿದಳು. ಯೆಹೋವಾಷನನ್ನು ಅವನ ದಾದಿಯು ಮತ್ತು ಯೆಹೋಷೆಬಳು ಅತಲ್ಯಳಿಂದ ತಪ್ಪಿಸಿ ಅಡಗಿಸಿಟ್ಟರು. ಈ ರೀತಿ ಯೆಹೋವಾಷನನ್ನು ಕೊಲ್ಲಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆದರೆ ಅರಸನಾದ ಯೆಹೋರಾಮನ ಮಗಳೂ ಅಹಜ್ಯನ ಸಹೋದರಿಯೂ ಆದ ಯೆಹೋಷೆಬಳು ಹತರಾಗುವುದಕ್ಕಿದ್ದ ಅರಸನ ಮಕ್ಕಳ ಮಧ್ಯದಿಂದ ಅಹಜ್ಯನ ಮಗನಾದ ಯೋವಾಷನನ್ನು ಕದ್ದುಕೊಂಡು ಹೋಗಿ ಅವನು ಹತನಾಗದ ಹಾಗೆ ಅವನನ್ನೂ ಅವನ ದಾದಿಯನ್ನೂ ಅತಲ್ಯಳಿಗೆ ಕಾಣದ ಹಾಗೆ ಮಲಗುವ ಕೋಣೆಯಲ್ಲಿ ಬಚ್ಚಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 11:2
24 ತಿಳಿವುಗಳ ಹೋಲಿಕೆ  

ಆಗ ಅವನು ನನಗೆ ದಕ್ಷಿಣಕ್ಕೆ ಅಭಿಮುಖವಾಗಿರುವ ಈ ಕೋಣೆ ದೇವಾಲಯ ಪಾರುಪತ್ಯವನ್ನು ನಡೆಸುವ ಯಾಜಕರಿಗೆ ನೇಮಕವಾಗಿದೆ.


“ನೀನು ರೇಕಾಬನ ಮನೆತನದವರ ಬಳಿಗೆ ಹೋಗಿ, ಅವರ ಸಂಗಡ ಮಾತಾಡು. ಅವರನ್ನು ಸರ್ವೇಶ್ವರನಾಲಯದ ಒಂದು ಕೋಣೆಯೊಳಕ್ಕೆ ಕರೆದು ದ್ರಾಕ್ಷಾರಸವನ್ನು ಕುಡಿಯುವುದಕ್ಕೆ ಕೊಡು.”


ಅಬ್ರಹಾಮ, ಇಸಾಕ, ಯಕೋಬ ಇವರ ಸಂತತಿಯನ್ನು ಆಳತಕ್ಕ ಒಡೆಯನನ್ನು ದಾಸ ದಾವೀದನ ವಂಶದಿಂದ ಆರಿಸದೆ ಆ ವಂಶವನ್ನು ನಿರಾಕರಿಸುತ್ತಿದ್ದೆ. ಆದರೆ ಈಗ ಗುಲಾಮಗಿರಿಯಿಂದ ಅವರನ್ನು ಬಿಡುಗಡೆಮಾಡುವೆನು. ಅವರಿಗೆ ಕರುಣೆಯನ್ನು ತೋರಿಸಿಯೇ ತೋರಿಸುವೆನು.”


ಆಗುವುದಾದರೆ ಮಾತ್ರ ನನ್ನ ದಾಸ ದಾವೀದನೊಂದಿಗೂ ನನ್ನ ಪರಿಚಾರಕರಾದ ಲೇವಿಕುಲದ ಯಾಜಕರೊಂದಿಗೂ ನಾನು ಮಾಡಿದ ಒಡಂಬಡಿಕೆ ನಿಂತುಹೋಗುವುದು ಮತ್ತು ದಾವೀದನ ಸಿಂಹಾಸನವನ್ನು ಏರಿ ಆಳತಕ್ಕ ಅವನ ಸಂತಾನದವನು ಒಬ್ಬನೂ ಇಲ್ಲವಾಗುವನು.


ಸರ್ವೇಶ್ವರನಾದ ನಾನು ಹೇಳುವುದೇನೆಂದರೆ: ದಾವೀದ ವಂಶವು ನಿಂತುಹೋಗದು. ಇಸ್ರಯೇಲರ ವಂಶದವರು ಆ ಸಿಂಹಾಸನದಲ್ಲಿ ಆಸೀನರಾಗುತ್ತಾ ಬರುವರು.


ನನಗಾಗಿಯೂ ನನ್ನ ದಾಸ ದಾವೀದನಿಗಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು - ಎಂದಿದ್ದಾರೆ,” ಎಂದು ಹೇಳಿದನು.


ಸರ್ವೇಶ್ವರನ ಮುಂದೆ ನಿಲ್ಲಬಲ್ಲ ಜ್ಞಾನವಿಲ್ಲ, ವಿವೇಚನೆಯಿಲ್ಲ, ಆಲೋಚನೆಯಿಲ್ಲ.


ಆದರೆ ರಾಜಪುತ್ರಿಯಾದ ಯೆಹೋಷಬತ್ ಎಂಬಾಕೆ, ಹತರಾಗುವುದಕ್ಕಿದ್ದ ರಾಜಪುತ್ರರ ಮಧ್ಯೆಯಿಂದ ಅಹಜ್ಯನ ಮಗ ಯೆಹೋವಾಷನನ್ನು, ಯಾರಿಗೂ ತಿಳಿಯದಂತೆ ಅವನ ದಾದಿಯೊಡನೆ ತೆಗೆದುಕೊಂಡು ಹೋಗಿ ಮಲಗುವ ಕೋಣೆಯಲ್ಲಿ ಅಡಗಿಸಿಟ್ಟಳು. ಅರಸ ಯೆಹೋರಾಮನ ಮಗಳೂ ಅಹಜ್ಯನ ಸಹೋದರಿಯೂ ಯಾಜಕ ಯೆಹೋಯಾದನ ಹೆಂಡತಿಯೂ ಆಗಿದ್ದ ಯೆಹೋಷಬತಳು ಹೀಗೆ ಅವನನ್ನು ಅತಲ್ಯಳಿಂದ ಹತನಾಗದಂತೆ ರಕ್ಷಿಸಿದಳು.


ಹೀಗೆ ಯೆಹೋವಾಷನು ಅರಸನಾದಾಗ ಅವನಿಗೆ ಏಳು ವರ್ಷ ವಯಸ್ಸು.


ಆದರೂ ಸರ್ವೇಶ್ವರ ಜುದೇಯದ ರಾಜ್ಯವನ್ನು ನಾಶಮಾಡಲಿಲ್ಲ. “ನಿನ್ನನ್ನು ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ,” ಎಂಬುದಾಗಿ ತಮ್ಮ ದಾಸ ದಾವೀದನಿಗೆ ಮಾಡಿದ ಪ್ರಮಾಣವನ್ನು ಸ್ಮರಿಸಿ ಅದನ್ನು ಉಳಿಸಿದರು.


ಅಹಾಬನ ಮಗನೂ ಇಸ್ರಯೇಲರ ಅರಸನೂ ಆದ ಯೋರಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ ಜುದೇಯದ ರಾಜನಾದ ಯೆಹೋಷಾಫಾಟನ ಮಗ ಯೆಹೋರಾಮನು ಆಳತೊಡಗಿದನು.


ಅವನು ದೇವಾಲಯದ ಸುತ್ತಲೂ ಒಂದರ ಮೇಲೊಂದು 2:2 ಮೀಟರುಗಳಂತೆ ಎತ್ತರವಾದ ಕೊಠಡಿಗಳನ್ನು ಕಟ್ಟಿಸಿದನು. ಇವು ದೇವದಾರಿನ ತೊಲೆಗಳಿಂದ ದೇವಾಲಯಕ್ಕೆ ಹೊಂದಿಕೊಂಡಿದ್ದವು.


ಕೆಳಗಿನ ಕೊಠಡಿಗಳಿಗೆ ಹೋಗುವ ಬಾಗಿಲು ಆಲಯದ ಬಲಪಾರ್ಶ್ವದಲ್ಲಿತ್ತು. ಅಲ್ಲಿಂದ ಮೊದಲನೆಯ ಅಂತಸ್ತಿಗೂ ಎರಡನೆಯ ಅಂತಸ್ತಿಗೂ ಹೋಗಬೇಕಾದರೆ ವಕ್ರಸೋಪಾನಗಳಿದ್ದವು.


ನೈಲ್ ನದಿಯಲ್ಲಿ ಕಪ್ಪೆಗಳು ತುಂಬಿಹೋಗುವುವು. ಅವು ಹೊರಟುಬಂದು ನಿನ್ನ ಅರಮನೆಯಲ್ಲೂ ಮಲಗುವ ಕೋಣೆಯಲ್ಲೂ ನಿನ್ನ ಹಾಸಿಗೆಯಲ್ಲೂ ನಿನ್ನ ಪರಿವಾರದವರ ಹಾಗು ಪ್ರಜೆಗಳ ಮನೆಗಳಲ್ಲೂ ಒಲೆಗಳಲ್ಲೂ ಹಿಟ್ಟುನಾದುವ ಹರಿವಾಣಗಳಲ್ಲೂ ಕಾಣಿಸಿಕೊಳ್ಳುವುವು.


ಒಫ್ರದಲ್ಲಿದ್ದ ತನ್ನ ತಂದೆಯಾದ ಯೆರುಬ್ಬಾಳನ ಮನೆಗೆ ಹೋಗಿ, ಅವನ ಎಪ್ಪತ್ತು ಮಂದಿ ಮಕ್ಕಳನ್ನು ಹಿಡಿದು ಒಂದೇ ಬಂಡೆಯ ಮೇಲೆ ಕೊಲ್ಲಿಸಿದನು. ಆದರೆ ಕಿರಿಯವನಾದ ಯೋತಾಮನು ಅವಿತುಕೊಂಡು ತನ್ನ ಜೀವವನ್ನು ಉಳಿಸಿಕೊಂಡನು.


ಹೀಗೆ ಅವನು ಅತಲ್ಯಳಿಂದ ಹತವಾಗದೆ ತಪ್ಪಿಸಿಕೊಂಡು, ಆರು ವರ್ಷಗಳವರೆಗೂ ಯೆಹೋಷೆಬಳೊಡನೆ ಗುಪ್ತವಾಗಿ ಸರ್ವೇಶ್ವರನ ಆಲಯದಲ್ಲಿದ್ದನು. ಈ ಆರು ವರ್ಷಗಳಲ್ಲಿ ಅತಲ್ಯಳೇ ನಾಡನ್ನು ಆಳುತ್ತಿದ್ದಳು.


ಯೆಹೋವಾಷನು ಯೇಹುವಿನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಅರಸನಾಗಿ ಜೆರುಸಲೇಮಿನಲ್ಲಿ ನಲವತ್ತು ವರ್ಷ ಆಳಿದನು. ಬೇರ್ಷೆಬದವಳಾದ ಚಿಬ್ಯಳು ಅವನ ತಾಯಿ.


ಆ ಸಮಯದಲ್ಲಿ ಬಾಲಕನಾದ ಹದದನು ತನ್ನ ತಂದೆಯ ಸೇವಕರಾದ ಕೆಲವು ಮಂದಿ ಎದೋಮ್ಯರ ಜೊತೆಯಲ್ಲಿ ಈಜಿಪ್ಟಿಗೆ ಓಡಿಹೋಗಬೇಕೆಂದು ಹೊರಟನು.


ಬದಲಿಗೆ ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗ ಸೆರಾಯ, ಅಬ್ದೆಯೇಲನ ಮಗ ಶಲೆಮ್ಯ, ಇವರಿಗೆ ಲೇಖಕನಾದ ಬಾರೂಕನನ್ನು ಮತ್ತು ಪ್ರವಾದಿ ಯೆರೆಮೀಯನನ್ನು ಸೆರೆಹಿಡಿಯಬೇಕೆಂದು ಆಜ್ಞಾಪಿಸಿದನು. ಆದರೆ ಸರ್ವೇಶ್ವರ ಅವರನ್ನು ಮರೆಯಲ್ಲಿಟ್ಟಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು