Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 11:8 - ಕನ್ನಡ ಸತ್ಯವೇದವು C.L. Bible (BSI)

8 ನೀವು ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು, ಅವನ ಸುತ್ತಲೂ ನಿಂತು, ನಿಮ್ಮ ಗುಂಪಿನಲ್ಲಿ ನುಗ್ಗುವಂಥವನನ್ನು ಸಂಹರಿಸಬೇಕು. ಅರಸನು ಹೊರಗೆ ಹೋಗಿ ಬರುವಾಗಲೆಲ್ಲಾ ನೀವು ಅವನ ಜೊತೆಯಲ್ಲೇ ಇರಬೇಕು; ಇದು ನನ್ನ ಅಪ್ಪಣೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನೀವು ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಅವನ ಸುತ್ತಲೂ ನಿಂತು, ಅವನ ಗುಂಪಿನಲ್ಲಿ ನುಗ್ಗುವಂತವನನ್ನು ಸಂಹರಿಸಬೇಕು. ಅರಸನು ಹೊರಗೆ ಹೋಗಿ ಬರುವಾಗಲೆಲ್ಲಾ ನೀವು ಅವನ ಜೊತೆಯಲ್ಲೇ ಇರಬೇಕು. ಇದೇ ನನ್ನ ಅಪ್ಪಣೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನೀವು ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಅವನ ಸುತ್ತಲೂ ನಿಂತು ನಿಮ್ಮ ಗುಂಪಿನಲ್ಲಿ ನುಗ್ಗುವಂಥವನನ್ನು ಸಂಹರಿಸಬೇಕು. ಅರಸನು ಹೊರಗೆ ಹೋಗಿ ಬರುವಾಗೆಲ್ಲಾ ನೀವು ಅವನ ಜೊತೆಯಲ್ಲೇ ಇರಬೇಕು, ಇದೇ ನನ್ನ ಅಪ್ಪಣೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ರಾಜನಾದ ಯೆಹೋವಾಷನು ಎಲ್ಲಿಗಾದರೂ ಯಾವಾಗಲಾದರೂ ಹೋದರೆ ಅವನೊಂದಿಗೆ ನೀವು ಇರಲೇಬೇಕು. ನೀವೆಲ್ಲರೂ ರಾಜನನ್ನು ಸುತ್ತುವರಿದಿರಬೇಕು. ಪ್ರತಿಯೊಬ್ಬ ಕಾವಲುಗಾರನೂ ಆಯುಧವನ್ನು ತನ್ನ ಕೈಯಲ್ಲಿ ಹಿಡಿದಿರಲೇಬೇಕು. ನಿಮ್ಮ ಸಮೀಪಕ್ಕೆ ಯಾರಾದರೂ ಬಂದರೆ ಅವರನ್ನು ಕೊಲ್ಲಬೇಕು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಿಮ್ಮಲ್ಲಿ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಅರಸನ ಸುತ್ತಲೂ ಇರಬೇಕು. ಯಾವನಾದರೂ ನಿಮ್ಮ ಸಾಲುಗಳಲ್ಲಿ ನುಗ್ಗುವಂಥವನನ್ನು ಸಂಹರಿಸಬೇಕು. ಆದರೆ ಅರಸನು ಹೊರಗೆ ಹೋಗುವಾಗಲೂ, ಒಳಗೆ ಬರುವಾಗಲೂ ನೀವು ಅವನ ಜೊತೆಯಲ್ಲಿಯೇ ಇರಬೇಕು,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 11:8
7 ತಿಳಿವುಗಳ ಹೋಲಿಕೆ  

ಲೇವಿಯರು ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಅರಸನ ಸುತ್ತಲೂ ನಿಂತು ಆಲಯದೊಳಕ್ಕೆ ನುಗ್ಗುವವರನ್ನು ಸಂಹರಿಸಬೇಕು. ಅರಸನು ಹೋಗಿ ಬರುವಾಗಲೆಲ್ಲಾ ಅವರು ಅವನ ಜೊತೆಯಲ್ಲೇ ಇರಬೇಕು,” ಎಂದು ಹೇಳಿದನು.


ಆಗ ಯಾಜಕನಾದ ಯೆಹೋಯಾದಾವನು ಸೇನಾನಿಗಳಾದ ಶತಾಧಿಪತಿಗಳಿಗೆ, “ಈಕೆಯನ್ನು ಸರ್ವೇಶ್ವರನ ಆಲಯದಲ್ಲಿ ಕೊಲ್ಲಬೇಡಿ; ಎರಡು ಸಾಲು ಸಿಪಾಯಿಗಳು ಈಕೆಯನ್ನು ನಡುವೆ ಮಾಡಿ, ಹೊರಗೆ ಕರೆದುಕೊಂಡು ಹೋಗಲಿ; ಮತ್ತು ಈಕೆಯನ್ನು ಹಿಂಬಾಲಿಸುವಂಥವರನ್ನು ಕತ್ತಿಯಿಂದ ಕೊಲ್ಲಿರಿ,” ಎಂದು ಆಜ್ಞಾಪಿಸಿದನು.


ಆದುದರಿಂದ ಅವರ ಕೆಲಸಕಾರ್ಯಗಳನ್ನು ನಿರ್ವಹಿಸುವುದಕ್ಕೂ ಅವರನ್ನು ಮುನ್ನಡೆಸುವುದಕ್ಕೂ ಹಿಂದಕ್ಕೆ ಕರೆದುತರುವುದಕ್ಕೂ ಒಬ್ಬ ನಾಯಕನನ್ನು ನೇಮಿಸಿ,” ಎಂದು ಮನವಿಮಾಡಿಕೊಂಡನು.


ಕೊಲ್ಲಬೇಕೆಂಬ ಉದ್ದೇಶದಿಂದಲೆ ಮತ್ತೊಬ್ಬನನ್ನು ಮೋಸದಿಂದ ಕೊಂದವನನ್ನು ನನ್ನ ಬಲಿಪೀಠದ ಬಳಿಯಿದ್ದರೂ ಎಳೆದು ಅವನಿಗೆ ಮರಣ ದಂಡನೆ ಕೊಡಬೇಕು.”


“ಸರ್ವೇಶ್ವರಾ, ಎಲ್ಲ ಪ್ರಾಣಿಗಳಿಗೆ ಜೀವದಾತ ದೇವರೇ, ನಿಮ್ಮವರಾದ ಈ ಸಮಾಜದವರು ಕುರುಬನಿಲ್ಲದ ಕುರಿಗಳಾಗಬಾರದು.


ಅದೂ ಅಲ್ಲದೆ, ಸಬ್ಬತ್ ದಿನದಲ್ಲಿ ಕಾಯುವುದಕ್ಕಾಗಿ ಬರುವ ನಿಮ್ಮ ಇಮ್ಮಡಿಯಾದ ಸೈನ್ಯವು ಸರ್ವೇಶ್ವರನ ಆಲಯದಲ್ಲಿ ಅರಸನನ್ನು ಕಾಯಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು