Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 12:18 - ಕನ್ನಡ ಸತ್ಯವೇದವು C.L. Bible (BSI)

18 ಜುದೇಯದ ಅರಸ ಯೆಹೋವಾಷನು ಇದನ್ನು ಕೇಳಿ, ತಾನು ಮತ್ತು ತನ್ನ ಪೂರ್ವಿಕರಾದ ಯೆಹೋಷಾಫಾಟ್, ಯೆಹೋರಾಮ್, ಅಹಜ್ಯಾ ಎಂಬ ಯೆಹೂದರಾಜರು ದೇವಸ್ಥಾನಕ್ಕೆ ಕಾಣಿಕೆಯಾಗಿ ಕೊಟ್ಟ ಒಡವೆಗಳನ್ನು ಹಾಗು ಸರ್ವೇಶ್ವರನ ಆಲಯದ ಮತ್ತು ಅರಮನೆ ಭಂಡಾರಗಳಲ್ಲಿ ಇದ್ದ ಬಂಗಾರದ ವಸ್ತುಗಳನ್ನು ಸಿರಿಯಾದವರ ಅರಸನಾದ ಹಜಾಯೇಲನಿಗೆ ಕಳುಹಿಸಿದನು. ಆಗ ಅವನು ಜೆರುಸಲೇಮನ್ನು ಬಿಟ್ಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೆಹೂದದ ಅರಸನಾದ ಯೆಹೋವಾಷನು ಇದನ್ನು ಕೇಳಿ ತಾನೂ ತನ್ನ ಪೂರ್ವಿಕರಾದ ಯೆಹೋಷಾಫಾಟನೂ, ಯೆಹೋರಾಮನೂ, ಅಹಜ್ಯನೂ, ಯೆಹೂದ ರಾಜರೂ ದೇವಸ್ಥಾನಕ್ಕೆ ಕಾಣಿಕೆಯಾಗಿ ಕೊಟ್ಟ ಒಡವೆಗಳು, ಯೆಹೋವನ ಆಲಯದ ಪ್ರತಿಷ್ಠೆಗಾಗಿ ಅರಮನೆಯ ಭಂಡಾರಗಳಲ್ಲಿದ್ದ ಬಂಗಾರ ಇವುಗಳನ್ನು ತೆಗೆದುಕೊಂಡು ಅರಾಮ್ಯರ ಅರಸನಾದ ಹಜಾಯೇಲನಿಗೆ ಕಳುಹಿಸಿದನು. ಆಗ ಅವನು ಯೆರೂಸಲೇಮನ್ನು ಬಿಟ್ಟು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಯೆಹೂದದ ಅರಸನಾದ ಯೆಹೋವಾಷನು ಇದನ್ನು ಕೇಳಿ ತಾನೂ ತನ್ನ ಪೂರ್ವಿಕರಾದ ಯೆಹೋಷಾಫಾಟ್, ಯೆಹೋರಾಮ್, ಅಹಜ್ಯ ಎಂಬ ಯೆಹೂದರಾಜರೂ ದೇವಸ್ಥಾನಕ್ಕೆ ಕಾಣಿಕೆಯಾಗಿ ಕೊಟ್ಟ ಒಡವೆಗಳು, ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿದ್ದ ಬಂಗಾರ ಇವುಗಳನ್ನು ತೆಗೆದುಕೊಂಡು ಅರಾಮ್ಯರ ಅರಸನಾದ ಹಜಾಯೇಲನಿಗೆ ಕಳುಹಿಸಿದನು. ಆಗ ಅವನು ಯೆರೂಸಲೇಮನ್ನು ಬಿಟ್ಟು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೆಹೋಷಾಫಾಟ್, ಯೆಹೋರಾಮ್ ಮತ್ತು ಅಹಜ್ಯರು ಯೆಹೂದದ ರಾಜರಾಗಿದ್ದರು. ಅವರೆಲ್ಲ ಯೆಹೋವಾಷನ ಪೂರ್ವಿಕರು. ಅವರು ಅನೇಕ ವಸ್ತುಗಳನ್ನು ಯೆಹೋವನಿಗೆ ಕೊಟ್ಟಿದ್ದರು. ಅವುಗಳನ್ನೆಲ್ಲ ಆಲಯದಲ್ಲಿ ಇಟ್ಟಿದ್ದರು. ಯೆಹೋವಾಷನೂ ಯೆಹೋವನಿಗೆ ಅನೇಕ ವಸ್ತುಗಳನ್ನು ಕೊಟ್ಟಿದ್ದನು. ಯೆಹೋವಾಷನು ಅವುಗಳ ಜೊತೆಗೆ, ಆಲಯದಲ್ಲಿದ್ದ ಮತ್ತು ತನ್ನ ಮನೆಯಲ್ಲಿದ್ದ ಬಂಗಾರವನ್ನೆಲ್ಲ ತೆಗೆದುಕೊಂಡನು. ನಂತರ ಯೆಹೋವಾಷನು ಆ ಬೆಲೆಬಾಳುವ ವಸ್ತುಗಳನ್ನೆಲ್ಲ ಅರಾಮ್ಯರ ರಾಜನಾದ ಹಜಾಯೇಲನಿಗೆ ಕಳುಹಿಸಿದನು. ಆದ್ದರಿಂದ ಹಜಾಯೇಲನು ಜೆರುಸಲೇಮಿನ ವಿರುದ್ಧ ಯುದ್ಧಮಾಡದೆ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ಯೆಹೂದದ ಅರಸನಾದ ಯೋವಾಷನು ತನ್ನ ಪೂರ್ವಜರಾದ ಯೆಹೋಷಾಫಾಟ, ಯೆಹೋರಾಮ್, ಅಹಜ್ಯ ಎಂಬ ಯೆಹೂದದ ಅರಸರು ಅರ್ಪಿಸಿದ ಸಮಸ್ತ ಪ್ರತಿಷ್ಠಿತವಾದವುಗಳನ್ನೂ ತಾನೇ ಸ್ವತಃ ಅರ್ಪಿಸಿದ ಪ್ರತಿಷ್ಠಿತವಾದವುಗಳನ್ನೂ ಯೆಹೋವ ದೇವರ ಆಲಯದ ಬೊಕ್ಕಸದಲ್ಲಿಯೂ, ಅರಸನ ಮನೆಯಲ್ಲಿಯೂ ಸಿಕ್ಕಿದ ಸಕಲ ಬಂಗಾರವನ್ನೂ ತೆಗೆದುಕೊಂಡು ಅರಾಮಿನ ಅರಸನಾದ ಹಜಾಯೇಲನಿಗೆ ಕಳುಹಿಸಿದನು. ಆಗ ಅವನು ಯೆರೂಸಲೇಮನ್ನು ಬಿಟ್ಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 12:18
11 ತಿಳಿವುಗಳ ಹೋಲಿಕೆ  

ಆಗ ಆಸನು ಸರ್ವೇಶ್ವರನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿ ಉಳಿದಿದ್ದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ಅದನ್ನು ದೂತರ ಮುಖಾಂತರ ದಮಸ್ಕದಲ್ಲಿದ್ದ ಸಿರಿಯಾದವರ ಅರಸನೂ ಹೆಜ್ಯೋನನ ಮೊಮ್ಮಗನೂ ಟಬ್ರಿಮ್ಮೋನನ ಮಗನೂ ಆದ ಬೆನ್ಹದದನಿಗೆ ಕೊಟ್ಟು ಕಳುಹಿಸಿದನು.


ಆಗ ಆಸನು ಸರ್ವೇಶ್ವರನಾಲಯದ ಮತ್ತು ಅರಮನೆಯ ಭಂಡಾರಗಳಿಂದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ದಮಸ್ಕದಲ್ಲಿದ್ದ ಸಿರಿಯಾದ ಅರಸ ಬೆನ್ಹದದನಿಗೆ ಕಳುಹಿಸಿ,


ಇದಲ್ಲದೆ ಆಹಾಜನು ಸರ್ವೇಶ್ವರನ ಆಲಯದಲ್ಲೂ ಅರಮನೆಯ ಭಂಡಾರದಲ್ಲೂ ಇದ್ದ ಬೆಳ್ಳಿ ಬಂಗಾರವನ್ನು ತೆಗೆದುಕೊಂಡು ಅಸ್ಸೀರಿಯಾದ ಅರಸನಿಗೆ ಕಪ್ಪವಾಗಿ ಕಳುಹಿಸಿದನು.


ಯೆಹೋವಾಷನು ಯಾಜಕರಿಗೆ, “ಸರ್ವೇಶ್ವರನ ಆಲಯಕ್ಕೆ ಸೇರುವ ಎಲ್ಲಾ ಪರಿಶುದ್ಧ ದ್ರವ್ಯವನ್ನು, ಅಂದರೆ ಜನಗಣತಿಯಲ್ಲಿ ಎಣಿಕೆಯಾದ ಪ್ರತಿಯೊಬ್ಬನು ತಂದುಕೊಡುವ ಹಣ, ದೇವರಿಗೆ ಪ್ರತಿಷ್ಟಿತನಾದ ವ್ಯಕ್ತಿ ತನ್ನ ಪ್ರಾಣವನನ್ನು ಬಿಡಿಸಿಕೊಳ್ಳುವುದಕ್ಕಾಗಿ ತೆರುವ ಹಣ, ಜನರು ಸರ್ವೇಶ್ವರನ ಆಲಯಕ್ಕೆ ಸ್ವೇಚ್ಛೆಯಿಂದ ತಂದು ಒಪ್ಪಿಸುವ ಹಣ, ಇವುಗಳನ್ನು ತೆಗೆದುಕೊಂಡು ದೇವಾಲಯವು ಎಲ್ಲೆಲ್ಲಿ ಶಿಥಿಲವಾಗಿ ಇರುತ್ತದೆ ಎಂದು ನೋಡಿ ಅದನ್ನು ಸರಿಮಾಡುವುದಕ್ಕಾಗಿ ವಿನಿಯೋಗಿಸಿರಿ.


ಸರ್ವೇಶ್ವರನ ಆಲಯದ ಮತ್ತು ಅರಮನೆಯ ಎಲ್ಲಾ ದ್ರವ್ಯವನ್ನು ಹಾಗು ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನು ದೋಚಿಕೊಂಡು ಹೋದನು.


ಯೆಹೋವಾಷನ ಉಳಿದ ಚರಿತ್ರೆ ಹಾಗು ಅವನ ಕಾರ್ಯಕಲಾಪಗಳು ಜುದೇಯ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿವೆ.


ಇದಲ್ಲದೆ, ಅವನು ಸರ್ವೇಶ್ವರನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿ ಸಿಕ್ಕಿದ ಎಲ್ಲಾ ಬೆಳ್ಳಿ ಬಂಗಾರವನ್ನೂ ಪಾತ್ರೆಗಳನ್ನೂ ತೆಗೆದುಕೊಂಡು, ಕೆಲವರನ್ನು ಒತ್ತೆಯಾಳುಗಳಾಗಿ ಸೆರೆಹಿಡಿದು, ಸಮಾರಿಯಕ್ಕೆ ಹಿಂದಿರುಗಿದನು.


ನನ್ನ ಬೆಳ್ಳಿಬಂಗಾರಗಳನ್ನು ಅತ್ಯಮೂಲ್ಯವಾದ ಬೊಕ್ಕಸಗಳನ್ನು ದೋಚಿಕೊಂಡು ನಿಮ್ಮ ದೇವಾಲಯಗಳಿಗೆ ಕೊಂಡೊಯ್ದಿದ್ದೀರಿ.


ಹಜಾಯೇಲನು, “ನನ್ನೊಡೆಯಾ, ಏಕೆ ಅಳುತ್ತೀರಿ?” ಎಂದು ಕೇಳಿದನು. ಅದಕ್ಕೆ ಅವನು, “ನೀನು ಇಸ್ರಯೇಲರಿಗೆ ಎಷ್ಟು ಕೇಡು ಮಾಡುವೆಯೆಂಬುದು ನನಗೆ ಪ್ರಕಟವಾಯಿತು. ನೀನು ಅವರ ಕೋಣೆಗಳಿಗೆ ಬೆಂಕಿ ಹೊತ್ತಿಸುವೆ; ಯೌವನಸ್ಥರನ್ನು ಕತ್ತಿಯಿಂದ ಸಂಹರಿಸುವೆ; ಮಕ್ಕಳನ್ನು ಬಂಡೆಗೆ ಅಪ್ಪಳಿಸುವೆ; ಗರ್ಭಿಣಿಯರ ಹೊಟ್ಟೆಯನ್ನು ಸೀಳುವೆ,” ಎಂದು ಉತ್ತರಕೊಟ್ಟನು.


ಯೆಹೋಯಾದನು ಮೃತನಾದ ಮೇಲೆ, ಜುದೇಯದ ಪದಾಧಿಕಾರಿಗಳು ಅರಸ ಯೆಹೋವಾಷನ ಬಳಿಗೆ ಬಂದು, ಅವನಿಗೆ ಅಡ್ಡಬಿದ್ದು ಅವನನ್ನು ಒಲಿಸಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು