Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 12:5 - ಕನ್ನಡ ಸತ್ಯವೇದವು C.L. Bible (BSI)

5 ಪ್ರತಿಯೊಬ್ಬನೂ ತನ್ನ ತನ್ನ ಪರಿಚಿತರಿಂದಲೇ ಹಣ ತೆಗೆದುಕೊಳ್ಳಬೇಕು,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದೇವಾಲಯಕ್ಕೆ ಎಲ್ಲೆಲ್ಲಿ ದುರಸ್ತಿಯಾಗಬೇಕೆಂಬುದನ್ನು ನೋಡಿ ಅದನ್ನು ಸರಿಮಾಡುವುದಕ್ಕೋಸ್ಕರ ಉಪಯೋಗಿಸಿರಿ, ಪ್ರತಿಯೊಬ್ಬನೂ ತನ್ನ ತನ್ನ ಪರಿಚಿತರಿಂದಲೇ ಹಣವನ್ನು ತೆಗೆದುಕೊಳ್ಳಬೇಕು” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ದೇವಾಲಯವು ಎಲ್ಲೆಲ್ಲಿ ಶಿಥಿಲವಾಗಿರುತ್ತದೆಂದು ನೋಡಿ ಅದನ್ನು ಸರಿಮಾಡುವದಕ್ಕೋಸ್ಕರ ವಿನಿಯೋಗಿಸಿರಿ; ಪ್ರತಿಯೊಬ್ಬನೂ ತನ್ನ ತನ್ನ ಪರಿಚಿತರಿಂದಲೇ ಹಣ ತೆಗೆದುಕೊಳ್ಳಬೇಕು ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯಾಜಕರಲ್ಲಿ ಪ್ರತಿಯೊಬ್ಬನು ಖಜಾಂಚಿಯವರಿಂದ ಹಣವನ್ನು ತೆಗೆದುಕೊಂಡು ಆಲಯದಲ್ಲಿ ಕಂಡುಕೊಳ್ಳುವ ಒಡಕುಗಳನ್ನೆಲ್ಲಾ ದುರಸ್ತಿ ಮಾಡಿಸಲು ಉಪಯೋಗಿಸಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 12:5
14 ತಿಳಿವುಗಳ ಹೋಲಿಕೆ  

ಪುರಾತನಕಾಲದ ಪಾಳುಬಿದ್ದ ಮನೆಗಳನ್ನು ನಿಮ್ಮವರು ಮರಳಿ ಕಟ್ಟುವರು. ತಲತಲಾಂತರಗಳಿಂದ ಪಾಳುಬಿದ್ದಿರುವ ತಳಹದಿಗಳ ಮೇಲೆ ಕಟ್ಟಡಗಳನ್ನು ನೀವು ನಿರ್ಮಿಸುವಿರಿ. ‘ಬಿದ್ದ ಗೋಡೆಯನ್ನು ಎಬ್ಬಿಸಿದ ರಾಷ್ಟ್ರ’ ಎಂಬ ಬಿರುದು ನಿಮಗೆ ಬರುವುದು.”


ಯಾಜಕರನ್ನೂ ಲೇವಿಯರನ್ನೂ ಕೂಡಿಸಿ ಅವರಿಗೆ, “ನೀವು ಜುದೇಯದ ಪಟ್ಟಣಗಳಿಗೆ ಹೋಗಿ ನಿಮ್ಮ ದೇವರಾದ ಸರ್ವೇಶ್ವರನ ಆಲಯದ ವಾರ್ಷಿಕ ದುರಸ್ತಿಯ ಖರ್ಚಿಗಾಗಿ ಎಲ್ಲ ಇಸ್ರಯೇಲರಿಂದ ಹಣ ಕೂಡಿಸಿರಿ; ಈ ಕಾರ್ಯವನ್ನು ಶೀಘ್ರವಾಗಿ ನೆರವೇರಿಸಿರಿ,” ಎಂದು ಆಜ್ಞಾಪಿಸಿದನು.


ಮರ, ಕೆತ್ತಿದ ಕಲ್ಲು, ಇವುಗಳನ್ನು ಕೊಂಡುಕೊಳ್ಳುವುದಕ್ಕಾಗಿಯೂ ಉಪಯೋಗಿಸುತ್ತಿದ್ದರು.


ಅವನು ದಂಗೆಯೆದ್ದ ವಿವರಣೆ ಹೀಗಿದೆ : ಸೊಲೊಮೋನನು ಮಿಲ್ಲೋಕೋಟೆಯನ್ನು ಕಟ್ಟಿಸಿ ತನ್ನ ತಂದೆ ದಾವೀದನ ಪಟ್ಟಣದ ದುರ್ಬಲ ಸ್ಥಳವನ್ನು ಭದ್ರಪಡಿಸುತ್ತಿರುವಾಗ


ಅತಿದುಷ್ಟಳಾದ ಅತಲ್ಯಳ ಮನೆಯವರು ದೇವಾಲಯವನ್ನು ಹಾಳುಮಾಡಿ, ಸರ್ವೇಶ್ವರನ ಆಲಯದ ಪ್ರತಿಷ್ಠಿತ ವಸ್ತುಗಳನ್ನು ಬಾಳ್‍ದೇವತೆಗಳಿಗಾಗಿ ಕೊಟ್ಟುಬಿಟ್ಟಿದ್ದಾರಲ್ಲವೇ?,” ಎಂದು ಹೇಳಿದನು.


ಯೆಹೋವಾಷನು ಯಾಜಕರಿಗೆ, “ಸರ್ವೇಶ್ವರನ ಆಲಯಕ್ಕೆ ಸೇರುವ ಎಲ್ಲಾ ಪರಿಶುದ್ಧ ದ್ರವ್ಯವನ್ನು, ಅಂದರೆ ಜನಗಣತಿಯಲ್ಲಿ ಎಣಿಕೆಯಾದ ಪ್ರತಿಯೊಬ್ಬನು ತಂದುಕೊಡುವ ಹಣ, ದೇವರಿಗೆ ಪ್ರತಿಷ್ಟಿತನಾದ ವ್ಯಕ್ತಿ ತನ್ನ ಪ್ರಾಣವನನ್ನು ಬಿಡಿಸಿಕೊಳ್ಳುವುದಕ್ಕಾಗಿ ತೆರುವ ಹಣ, ಜನರು ಸರ್ವೇಶ್ವರನ ಆಲಯಕ್ಕೆ ಸ್ವೇಚ್ಛೆಯಿಂದ ತಂದು ಒಪ್ಪಿಸುವ ಹಣ, ಇವುಗಳನ್ನು ತೆಗೆದುಕೊಂಡು ದೇವಾಲಯವು ಎಲ್ಲೆಲ್ಲಿ ಶಿಥಿಲವಾಗಿ ಇರುತ್ತದೆ ಎಂದು ನೋಡಿ ಅದನ್ನು ಸರಿಮಾಡುವುದಕ್ಕಾಗಿ ವಿನಿಯೋಗಿಸಿರಿ.


ಯಾಜಕರು ಅರಸನಾದ ಯೆಹೋವಾಷನ ಆಳ್ವಿಕೆಯ ಇಪ್ಪತ್ತಮೂರನೆಯ ವರ್ಷದವರೆಗೂ ದೇವಾಲಯದ ದುರಸ್ತುಕಾರ್ಯವನ್ನು ಕೈಗೊಂಡಿರಲಿಲ್ಲ.


ಲೆಕ್ಕಿತರಾದವರಲ್ಲಿ ಪ್ರತಿಯೊಬ್ಬನು ನನಗೆ ಅರ್ಧ ಶೆಕೆಲ್‍ ನಾಣ್ಯದ ಮೇರೆಗೆ ತೆರಿಗೆ ಕಟ್ಟಬೇಕು. ದೇವರ ಸೇವೆಗೆ ನೇಮಕವಾದ ಇಪ್ಪತ್ತು ‘ಗೇರಾ’ ತೂಕದ ನಾಣ್ಯದ ಮೇರೆಗೆ ಅರ್ಧರ್ಧ ನಾಣ್ಯವನ್ನು ತೆರಿಗೆಯಾಗಿ ಕೊಡಬೇಕು.


“ಯಾರಾದರು ನರಮಾನವರ ಪ್ರಾಣವನ್ನು ಸರ್ವೇಶ್ವರನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ, ಅವುಗಳನ್ನು ಬಿಡಿಸುವುದಕ್ಕೆ ದೇವರ ಸೇವೆಗೆ ನೇಮಕವಾದ ಬೆಳ್ಳಿನಾಣ್ಯದ ಮೇರೆಗೆ ನೀವು ಅವರಿಂದ ಕೊಡಿಸಬೇಕಾದ ಈಡಿನ ವಿವರ ಹೀಗಿದೆ.


“ಮನುಷ್ಯರಲ್ಲೇ ಆಗಲಿ, ಪಶುಗಳಲ್ಲೇ ಆಗಲಿ, ಅವರು ನನಗೆ ಸಮರ್ಪಿಸುವ ಸಕಲ ಪ್ರಾಣಿಗಳಲ್ಲಿ ಚೊಚ್ಚಲಿನದು ನಿನಗೆ ಸಲ್ಲಬೇಕು. ಆದರೆ ಮನುಷ್ಯರ ಚೊಚ್ಚಲು ಮಕ್ಕಳಿಗೂ ಅಪವಿತ್ರವಾದ ಪಶುಗಳ ಮರಿಗಳಿಗೂ ಬದಲಾಗಿ ನೀನು ಈಡನ್ನು ತೆಗೆದುಕೊಂಡು ಅವುಗಳನ್ನು ಬಿಟ್ಟುಬಿಡಬೇಕು.


“ನೀನು ಪ್ರಧಾನ ಯಾಜಕ ಹಿಲ್ಕೀಯನ ಬಳಿಗೆ ಹೋಗಿ ಅವನಿಗೆ, ‘ದ್ವಾರಪಾಲಕರು ಸರ್ವೇಶ್ವರನ ಆಲಯಕ್ಕೆ ಬರುವ ಜನರಿಂದ ಸಂಗ್ರಹಿಸಿದ ಹಣವನ್ನು ಲೆಕ್ಕಮಾಡಿ ಆಲಯದ ಕೆಲಸ ಮಾಡಿಸುವ ಮೇಸ್ತ್ರಿಗಳಿಗೆ ಅದನ್ನು ಒಪ್ಪಿಸು,’ ಎಂದು ಹೇಳು.


ಇಸ್ರಯೇಲ್ ಗೋತ್ರ ಕುಟುಂಬಗಳ ಅಧ್ಯಕ್ಷರುಗಳು, ಸಹಸ್ರಾಧಿಪತಿಗಳು, ಶತಾಧಿಪತಿಗಳು, ಹಾಗೂ ಅರಸನ ಕೆಲಸದವರ ಮುಖ್ಯಸ್ಥರು ದೇವಾಲಯದ ಕೆಲಸಕ್ಕಾಗಿ ಸ್ವೇಚ್ಛೆಯಿಂದ


ಅವರು ಪೂರ್ಣಮನಸ್ಸಿನಿಂದ ಹಾಗೂ ಸ್ವೇಚ್ಛೆಯಿಂದ ಸರ್ವೇಶ್ವರನಿಗೆ ಕಾಣಿಕೆ ಕೊಟ್ಟಿದ್ದಕ್ಕಾಗಿ ಜನರೆಲ್ಲರೂ ಸಂತೋಷಪಟ್ಟರು. ಅರಸನಾದ ದಾವೀದನಿಗೂ ಬಹಳ ಸಂತೋಷ ಆಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು